Homeಕರ್ನಾಟಕಎನ್‌ಇಪಿ, ಪರಿಷ್ಕೃತ ಪಠ್ಯ ರದ್ದಾಗಲಿ: ನೂತನ ಸರ್ಕಾರಕ್ಕೆ ದಸಂಸ ಆಗ್ರಹ

ಎನ್‌ಇಪಿ, ಪರಿಷ್ಕೃತ ಪಠ್ಯ ರದ್ದಾಗಲಿ: ನೂತನ ಸರ್ಕಾರಕ್ಕೆ ದಸಂಸ ಆಗ್ರಹ

- Advertisement -
- Advertisement -

ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್‌ ಸರ್ಕಾರ ಅವೈಜ್ಞಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ) ರದ್ದುಗೊಳಿಸಬೇಕು, ಕೋಮುವಾದಿಕರಣಗೊಂಡ ಪಠ್ಯಪುಸ್ತಕಗಳನ್ನು ರದ್ದುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ.

ಈ ಕುರಿತಂತೆ ಪತ್ರ ಬರೆದಿರುವ ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌, “ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಜನರು ನಿರೀಕ್ಷೆಗೂ ಮೀರಿ ಬೆಂಬಲಿಸಿದ್ದಾರೆ. ಆದ್ದರಿಂದ, ತನ್ನ ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್‌ ತಾನು ನೀಡಿರುವ ಪ್ರಮುಖ ಭರವಸೆಗಳನ್ನು (ಕಾಂಗ್ರೆಸ್‌ ಗ್ಯಾರಂಟಿಗಳು) ಜಾರಿಗೆ ತರಬೇಕು. ದಲಿತ ಹಾಗೂ ದಮನಿತ ಸಮುದಾಯದ ಮಕ್ಕಳಿಗೆ ಮಾರಕವಾಗಿರುವ ಅವೈಜ್ಞಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ) ರದ್ದು ಮಾಡಬೇಕು. ದ್ವೇಷ ತುಂಬಿದ ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟು, ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯವನ್ನೇ ಮುಂದುವರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಹೈಸ್ಕೂಲ್‌ ಮಕ್ಕಳಿಗೆ ಈ ವರ್ಷದಿಂದ ಬೈಸಿಕಲ್ ವಿತರಣೆ ಜತೆಗೆ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೂ ಬಿಡುಗಡೆ ಮಾಡಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯಲ್ಲಿನ 7(ಡಿ) ಕಲಂ ತೆಗೆದು, ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಬಿಜೆಪಿ ತನ್ನ ದ್ವೇಷ ರಾಜಕಾರಣದಿಂದ ರದ್ದು ಮಾಡಿದ್ದ ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿ, ಪರಿಶಿಷ್ಟ ಸಮುದಾಯದ ಎಲ್ಲ ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆದ್ಯತೆ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಅವಧಿಯ ದುರಾಡಳಿತವನ್ನು ಮೆಲುಕು ಹಾಕಿರುವ ಅವರು, “ಕೇಂದ್ರದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಹಾಗೂ ಅನೈತಿಕ ಆಪರೇಷನ್‌ ಕಮಲದ ಮೂಲಕ ಕಳೆದ ಮೂರೂವರೆ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಜನಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಒಂದು ಕಡೆಯಾದರೆ, ಅವರ ಹಿಂದಿ ಹೇರಿಕೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಹ ಹಲವಾರು ನಿರ್ಧಾರಗಳು ಕನ್ನಡಿಗರನ್ನು ಇನ್ನಿಲ್ಲದಂತೆ ಹೈರಾಣಾಗಿಸಿದೆ. ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನಡೆಗಳಿಗೆ ಮಂಡಿಯೂರುತ್ತಾ, ಬಿಜೆಪಿ ಹೈಕಮಾಂಡ್ ತಾಳಕ್ಕೆ ತಕ್ಕಂತೆ ಕುಣಿದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕನ್ನಡಿಗರ ಹಿತ ಕಾಯುವಲ್ಲಿ ವಿಫಲರಾದರು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಗ್ಯಾಸ್ ಸೇರಿದಂತೆ ಹಲವು ದಿನಬಳಕೆ ವಸ್ತುಗಳು ರಾಜ್ಯದ ಬಡಜನರ ಕೈ ಸಡುತ್ತಿದ್ದರೆ, ಮತ್ತೊಂದು ಕಡೆ ಆಜಾನ್, ಹಲಾಲ್, ಬುರ್ಕಾ ಹಾಗೂ ಮುಸ್ಲಿಂ ಸಮುದಾಯದ ವ್ಯಾಪಾರಕ್ಕೆ ಜಾತ್ರೆ-ದೇವಾಲಯಗಳಲ್ಲಿ ಹೇರಿದ್ದ ನಿಷೇಧವನ್ನು ಸಮರ್ಥಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಹೇಳಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನವನ್ನು ಕಳೆದಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

“ಬಿಜೆಪಿಯ ಇಂಥ ಹಲವು ಅತಿರೇಕದ ವರ್ತನೆಗಳಿಗೆ ಹಾಗೂ ಸಂವಿಧಾನ ವಿರೋಧಿ ನಿಲುವುಗಳಿಗೆ ಕನ್ನಡಿಗರು ತಕ್ಕ ಪಾಠ ಕಲಿಸಿದ್ದಾರೆ. 2023ರ ಮೇ13ರಂದು ಹೊರಬಿದ್ದ ಕರ್ನಾಟ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಬಹುಮತ ಪಡೆದಿದ್ದು, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಮಣ್ಣುಮುಕ್ಕಿದೆ” ಎಂದು ತಿಳಿಸಿದ್ದಾರೆ.

“ಕರ್ನಾಟಕದ ಪ್ರಜ್ಞಾವಂತ ಮತದಾರರು ಸಂವಿಧಾನ ವಿರೋಧಿಗಳನ್ನು ತಿರಸ್ಕರಿಸಿ, ಸಾಮಾಜಿಕ ನ್ಯಾಯ ಕಲ್ಪಿಸಿ, ರಾಜ್ಯದಲ್ಲಿ ಶಾಂತಿ ಕಾಪಾಡುತ್ತಾರೆ ಎಂಬ ಭರವಸೆ ಮೇಲೆ ಕಾಂಗ್ರೆಸ್‌ ಕೈ ಹಿಡಿದು ಇಡೀ ದೇಶಕ್ಕೆ ಒಂದು ಬಲವಾದ ಸಂದೇಶ ರವಾನಿಸಿದ್ದಾರೆ. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಕೂಡ ರಾಜ್ಯದಾದ್ಯಂತ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ, ಮತ ಚಲಾಯಿಸಲು ಪ್ರೋತ್ಸಾಹಿಸುವಂತೆ ಕರೆ ನೀಡಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿ, ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ ಎಲ್ಲ ದಲಿತ ಚಳವಳಿಯ ಒಡನಾಡಿಗಳಿಗೆ ಹಾಗೂ ಕಾರ್ಯಕರ್ತರಿಗೆ ಭೀಮ ನಮಗಳು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...