Homeಕರ್ನಾಟಕಎನ್‌ಇಪಿ, ಪರಿಷ್ಕೃತ ಪಠ್ಯ ರದ್ದಾಗಲಿ: ನೂತನ ಸರ್ಕಾರಕ್ಕೆ ದಸಂಸ ಆಗ್ರಹ

ಎನ್‌ಇಪಿ, ಪರಿಷ್ಕೃತ ಪಠ್ಯ ರದ್ದಾಗಲಿ: ನೂತನ ಸರ್ಕಾರಕ್ಕೆ ದಸಂಸ ಆಗ್ರಹ

- Advertisement -
- Advertisement -

ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್‌ ಸರ್ಕಾರ ಅವೈಜ್ಞಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ) ರದ್ದುಗೊಳಿಸಬೇಕು, ಕೋಮುವಾದಿಕರಣಗೊಂಡ ಪಠ್ಯಪುಸ್ತಕಗಳನ್ನು ರದ್ದುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ.

ಈ ಕುರಿತಂತೆ ಪತ್ರ ಬರೆದಿರುವ ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌, “ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಜನರು ನಿರೀಕ್ಷೆಗೂ ಮೀರಿ ಬೆಂಬಲಿಸಿದ್ದಾರೆ. ಆದ್ದರಿಂದ, ತನ್ನ ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್‌ ತಾನು ನೀಡಿರುವ ಪ್ರಮುಖ ಭರವಸೆಗಳನ್ನು (ಕಾಂಗ್ರೆಸ್‌ ಗ್ಯಾರಂಟಿಗಳು) ಜಾರಿಗೆ ತರಬೇಕು. ದಲಿತ ಹಾಗೂ ದಮನಿತ ಸಮುದಾಯದ ಮಕ್ಕಳಿಗೆ ಮಾರಕವಾಗಿರುವ ಅವೈಜ್ಞಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ) ರದ್ದು ಮಾಡಬೇಕು. ದ್ವೇಷ ತುಂಬಿದ ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟು, ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯವನ್ನೇ ಮುಂದುವರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಹೈಸ್ಕೂಲ್‌ ಮಕ್ಕಳಿಗೆ ಈ ವರ್ಷದಿಂದ ಬೈಸಿಕಲ್ ವಿತರಣೆ ಜತೆಗೆ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೂ ಬಿಡುಗಡೆ ಮಾಡಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯಲ್ಲಿನ 7(ಡಿ) ಕಲಂ ತೆಗೆದು, ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಬಿಜೆಪಿ ತನ್ನ ದ್ವೇಷ ರಾಜಕಾರಣದಿಂದ ರದ್ದು ಮಾಡಿದ್ದ ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿ, ಪರಿಶಿಷ್ಟ ಸಮುದಾಯದ ಎಲ್ಲ ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆದ್ಯತೆ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಅವಧಿಯ ದುರಾಡಳಿತವನ್ನು ಮೆಲುಕು ಹಾಕಿರುವ ಅವರು, “ಕೇಂದ್ರದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಹಾಗೂ ಅನೈತಿಕ ಆಪರೇಷನ್‌ ಕಮಲದ ಮೂಲಕ ಕಳೆದ ಮೂರೂವರೆ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಜನಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಒಂದು ಕಡೆಯಾದರೆ, ಅವರ ಹಿಂದಿ ಹೇರಿಕೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಹ ಹಲವಾರು ನಿರ್ಧಾರಗಳು ಕನ್ನಡಿಗರನ್ನು ಇನ್ನಿಲ್ಲದಂತೆ ಹೈರಾಣಾಗಿಸಿದೆ. ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನಡೆಗಳಿಗೆ ಮಂಡಿಯೂರುತ್ತಾ, ಬಿಜೆಪಿ ಹೈಕಮಾಂಡ್ ತಾಳಕ್ಕೆ ತಕ್ಕಂತೆ ಕುಣಿದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕನ್ನಡಿಗರ ಹಿತ ಕಾಯುವಲ್ಲಿ ವಿಫಲರಾದರು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಗ್ಯಾಸ್ ಸೇರಿದಂತೆ ಹಲವು ದಿನಬಳಕೆ ವಸ್ತುಗಳು ರಾಜ್ಯದ ಬಡಜನರ ಕೈ ಸಡುತ್ತಿದ್ದರೆ, ಮತ್ತೊಂದು ಕಡೆ ಆಜಾನ್, ಹಲಾಲ್, ಬುರ್ಕಾ ಹಾಗೂ ಮುಸ್ಲಿಂ ಸಮುದಾಯದ ವ್ಯಾಪಾರಕ್ಕೆ ಜಾತ್ರೆ-ದೇವಾಲಯಗಳಲ್ಲಿ ಹೇರಿದ್ದ ನಿಷೇಧವನ್ನು ಸಮರ್ಥಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಹೇಳಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನವನ್ನು ಕಳೆದಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

“ಬಿಜೆಪಿಯ ಇಂಥ ಹಲವು ಅತಿರೇಕದ ವರ್ತನೆಗಳಿಗೆ ಹಾಗೂ ಸಂವಿಧಾನ ವಿರೋಧಿ ನಿಲುವುಗಳಿಗೆ ಕನ್ನಡಿಗರು ತಕ್ಕ ಪಾಠ ಕಲಿಸಿದ್ದಾರೆ. 2023ರ ಮೇ13ರಂದು ಹೊರಬಿದ್ದ ಕರ್ನಾಟ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಬಹುಮತ ಪಡೆದಿದ್ದು, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಮಣ್ಣುಮುಕ್ಕಿದೆ” ಎಂದು ತಿಳಿಸಿದ್ದಾರೆ.

“ಕರ್ನಾಟಕದ ಪ್ರಜ್ಞಾವಂತ ಮತದಾರರು ಸಂವಿಧಾನ ವಿರೋಧಿಗಳನ್ನು ತಿರಸ್ಕರಿಸಿ, ಸಾಮಾಜಿಕ ನ್ಯಾಯ ಕಲ್ಪಿಸಿ, ರಾಜ್ಯದಲ್ಲಿ ಶಾಂತಿ ಕಾಪಾಡುತ್ತಾರೆ ಎಂಬ ಭರವಸೆ ಮೇಲೆ ಕಾಂಗ್ರೆಸ್‌ ಕೈ ಹಿಡಿದು ಇಡೀ ದೇಶಕ್ಕೆ ಒಂದು ಬಲವಾದ ಸಂದೇಶ ರವಾನಿಸಿದ್ದಾರೆ. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಕೂಡ ರಾಜ್ಯದಾದ್ಯಂತ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ, ಮತ ಚಲಾಯಿಸಲು ಪ್ರೋತ್ಸಾಹಿಸುವಂತೆ ಕರೆ ನೀಡಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿ, ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ ಎಲ್ಲ ದಲಿತ ಚಳವಳಿಯ ಒಡನಾಡಿಗಳಿಗೆ ಹಾಗೂ ಕಾರ್ಯಕರ್ತರಿಗೆ ಭೀಮ ನಮಗಳು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...