Homeಕರ್ನಾಟಕಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ...

ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರಿಂದ ಪತ್ರ

- Advertisement -
- Advertisement -

ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಭಾರಿ ವಿವಾದಕ್ಕೆ ಕಾರಣವಾಗಿತ್ತು.  ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು ಮತ್ತು ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆಯು ಒತ್ತಾಯಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ ಅವರು, ”ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು (ಎನ್‌ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ‘ರಾಜ್ಯ ಶಿಕ್ಷಣ ನೀತಿ’ ರೂಪಿಸಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

”ಈ ಮೊದಲು ಆಡಳಿತ ನಡೆಸಿದ್ದ ಬಿಜೆಪಿ ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕಾಗಿ ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಆಗುವವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಪರಿಷ್ಕೃತ ಪಠ್ಯವನ್ನು ಕೈಬಿಟ್ಟು, 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನು ಮುಂದುವರೆಸಬೇಕು, ಮತ್ತು ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ತ ಮತ್ತು ಸಮಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

”ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಅಸಂವಿಧಾನಿಕವಾಗಿದ್ದು, ವಿಧಾನಸಭೆಯಲ್ಲಿ ನಡೆಯುವ ಮೊದಲ ಅಧಿವೇಶನದಲ್ಲೇ ಇದನ್ನು ತಿರಸ್ಕರಿಸಬೇಕು. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ತರಲು ಹೊಸ ಶಿಕ್ಷಣ ನೀತಿ ರೂಪಿಸಬೇಕು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ಈಗಾಗಲೇ ಕನ್ನಡ ಮತ್ತು ಇತಿಹಾಸ ಪುಸ್ತಕಗಳು ಮುದ್ರಣಗೊಂಡಿದ್ದು ಅವುಗಳನ್ನು ಸ್ಥಗಿತಗೊಳಿಸಬೇಕು. ಸರಿಯಾದ ಆದೇಶ ಕೂಡ ಇಲ್ಲದೆ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಪಠ್ಯಪರಿಷ್ಕರಣೆ ಹೆಸರಿನಲ್ಲಿ ರಾಜ್ಯದ ಖಜಾನೆಗೆ ಕೋಟ್ಯಂತರ ನಷ್ಟ ಉಂಟು ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಆ ಹಣವನ್ನು ವಸೂಲು ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ರಾಜ್ಯದಲ್ಲಿ 15 ಸಾವಿರ ಶಿಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು, ಜೂನ್ 15ರ ಒಳಗಾಗಿ ಅತಿಥಿ ಶಿಕ್ಷರನ್ನು ನೇಮಿಸಬೇಕು. ವಿದ್ಯಾರ್ಥಿಗಳ ಪಠ್ಯಪುಸ್ತಕ, ಶೂ, ಸಮವಸ್ತ್ರ ಬಸ್ ಪಾಸ್‌ಗಳನ್ನು ಸರಿಯಾದ ಸಮಯಕ್ಕೆ ಸಿಗುವಂತೆ ಕ್ರಮ ತೆಗೆದುಕೊಳ್ಳಬೇಕು ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಶೇ.20 ರಷ್ಟು ಮೀಸಲಿಡಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...