Homeಕರ್ನಾಟಕಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್ 7D ರದ್ದು, 4,079 ಕೋಟಿ ರೂ ಹೆಚ್ಚುವರಿ ಅನುದಾನ: ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಎಸ್‌ಪಿ, ಟಿಎಸ್‌ಪಿ (ಪರಿಶಿಷ್ಟ ಜಾತಿ ಉಪಯೋಜನೆ/ ಪರಿಶಿಷ್ಟ ಪಂಗಡ ಉಪಯೋಜನೆ) ಯೋಜನೆಯ ಸೆಕ್ಷನ್ 7D ಯನ್ನು ತೆಗೆದುಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ದಲಿತರ ಜನಸಂಖ್ಯೆಯನ್ನು ಆಧರಿಸಿ ಅನುದಾನ ನೀಡುವುದಕ್ಕಾಗಿ ಈ ಉಪ ಹಂಚಿಕೆ ಅಧಿನಿಯಮ 2013 ಅನ್ನು ಜಾರಿಗೆ ತಂದ ಶ್ರೇಯ ನಮ್ಮದು. ಇದರ ಅನ್ವಯ ಎಲ್ಲಾ ಇಲಾಖೆಗಳಲ್ಲಿ 24.1% ರಷ್ಟು ಹಣವನ್ನು ಪ.ಜಾ ಮತ್ತು ಪ. ಪಂಗಡದ ಜನರ ಕಲ್ಯಾಣಕ್ಕೆ ಮೀಸಲಿಡಬೇಕು. ಆರಂಭದಲ್ಲಿ 8,908 ಕೋಟಿ ರೂ ಇದ್ದ ಹಂಚಿಕೆ 23ರ ಫೆಬ್ರವರಿಯಲ್ಲಿ ಅಂದರೆ ಹಿಂದಿನ ಸರ್ಕಾರದ ಬಜೆಟ್‌ ನಲ್ಲಿ 30,215 ಕೋಟಿ ರೂ ಹಂಚಿಕೆ ಮಾಡಿತ್ತು.

ನಮ್ಮ ಈ ಆಯವ್ಯಯದಲ್ಲಿ ಪ.ಜಾತಿಗಳಿಗೆ 24,333 ಹಾಗೂ ಪ.ಪಂಗಡಗಳಿಗೆ 9,960 ಕೋಟಿ ರೂ ಮೀಸಲಿಡುತ್ತಿದ್ದೇವೆ. ಹಾಗಾಗಿ ಒಟ್ಟು 34,294 ಕೋಟಿ ರೂ ಅನುದಾನ ಮೀಸಲಿಟ್ಟಿದ್ದು ನಮ್ಮ ಸರ್ಕಾರ 4,079 ಕೋಟಿ ರೂ ಹೆಚ್ಚುವರಿ ಅನುದಾನ ಒದಗಿಸುತ್ತೇನೆ. ದಲಿತರ ಅಭ್ಯುದಯಕ್ಕೆ ಇದು ನಮ್ಮ ಆದ್ಯತೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಎಸ್‌ಸಿಪಿ, ಟಿಎಸ್‌ಪಿ ಅನುದಾಯ ದಲಿತ ಸಮುದಾಯದ ಒಳಿತಿಗೆ ಬಳಕೆಯಾಗಬೇಕು. ಆದರೆ 7ಡಿ ಹೆಸರಲ್ಲಿ ದುರುಪಯೋಗವಾಗುತ್ತಿದೆ ಎಂದು ದಲಿತ ಸಂಘಟನೆಗಳು ಮತ್ತು ಚಿಂತಕರ ಒತ್ತಾಯದ ಅನ್ವಯ ಸೆಕ್ಷನ್ 7 ಡಿಯನ್ನು ಕೈಬಿಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಏನಿದು 7ಡಿ?

ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನು ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳಿಗೆ ಮಾತ್ರ ಬಳಸಬೇಕು ಎಂದು ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಹೇಳುತ್ತದೆ. ಆದರೆ ಅದೇ ಕಾಯ್ದೆಯಲ್ಲಿನ ಸೆಕ್ಷನ್‌‌ 7(ಡಿ) ಅಂದರೆ ಡೀಮ್ಡ್ ಎಕ್ಸ್‌ಪೆಂಡೆಚರ್ ಎಂದು ಅನುದಾನವನ್ನು ಸಬ್ ಅಲೋಕೇಷನ್ ಮಾಡುವುದಾಗಿದೆ. ಅದರ ಅಡಿಯಲ್ಲಿ ಬೇರೆ ಉದ್ದೇಶಗಳಿಗೆ ಹಣ ದುರ್ಬಳಕೆಯಾಗುತ್ತಿರುವುದು ಹೆಚ್ಚುತ್ತಿದೆ. ರಸ್ತೆ, ನೀರಾವರಿಯಂತಹ ಯೋಜನೆಗಳಿಗೆ ಅನುದಾನವನ್ನು ಬಳಸಿ ಆ ರಸ್ತೆಗಳನ್ನು ದಲಿತರು ಸಹ ಬಳಸುತ್ತಾರೆ ಎಂದು ಸಮಜಾಯಿಸಿ ಕೊಡಲಾಗುತ್ತಿತ್ತು. ಹಾಗಾಗಿ ಈ ಸೆಕ್ಷನ್ 7ಡಿಯನ್ನು ತೆಗೆದುಹಾಕಬೇಕೆಂದು ದಲಿತ ಸಂಘಟನೆಗಳು ಒತ್ತಾಯಿಸುತ್ತಿದ್ದರು.

ಇದನ್ನೂ ಓದಿ: ’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...