Homeಮುಖಪುಟರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

ರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

- Advertisement -
- Advertisement -

ರಾಜ್ಯಸಭಾ ಅಭ್ಯರ್ಥಿಗಳ ಪೈಕಿ 36% ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದು, ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವಿಶ್ಲೇಷಿಸಲಾಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯು ಬಹಿರಂಗಪಡಿಸಿದೆ.

ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ 15 ರಾಜ್ಯಗಳ 56 ಸ್ಥಾನಗಳಿಗೆ ಕಣದಲ್ಲಿರುವ 59 ಅಭ್ಯರ್ಥಿಗಳ ಪೈಕಿ 58 ಮಂದಿ ಅಫಿಡವಿತ್‌ಗಳನ್ನು ವಿಶ್ಲೇಷಿಸಿದೆ. ರಾಜ್ಯಸಭಾ ಚುನಾವಣೆ ಫೆಬ್ರವರಿ 27ಕ್ಕೆ ನಿಗದಿಯಾಗಿದೆ. 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಅವರು ವಿಶ್ಲೇಷಣೆಯಿಂದ ಹೊರಗುಳಿದಿದ್ದಾರೆ. 36% ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ವಿಶ್ಲೇಷಣೆಯ ವೇಳೆ ಕಂಡು ಹಿಡಿಯಲಾಗಿದೆ.

ಹೆಚ್ಚುವರಿಯಾಗಿ 17%ದಷ್ಟು ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಒಬ್ಬ ಅಭ್ಯರ್ಥಿಯು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ವಿಶ್ಲೇಷಣೆಯ ಪ್ರಕಾರ, 30 ಬಿಜೆಪಿ ಅಭ್ಯರ್ಥಿಗಳಲ್ಲಿ ಎಂಟು (27%), ಒಂಬತ್ತು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಆರು ಮಂದಿ, ನಾಲ್ಕು ಟಿಎಂಸಿ ಅಭ್ಯರ್ಥಿಗಳಲ್ಲಿ ಒಬ್ಬರು (25%), ಮೂರು ಎಸ್‌ಪಿ ಅಭ್ಯರ್ಥಿಗಳಲ್ಲಿ ಇಬ್ಬರು,  ಮೂವರು YSRCP ಅಭ್ಯರ್ಥಿಗಳಲ್ಲಿ ಒಬ್ಬರು, ಇಬ್ಬರು RJD ನಾಮನಿರ್ದೇಶಿತರಲ್ಲಿ ಒಬ್ಬರು, ಇಬ್ಬರು BJD ಅಭ್ಯರ್ಥಿಗಳಲ್ಲಿ ಒಬ್ಬರು  ಮತ್ತು ಓರ್ವ BRS ಅಭ್ಯರ್ಥಿ ತಮ್ಮ ಅಫಿಡವಿತ್‌ನಲ್ಲಿ ಕ್ರಿಮಿನಲ್ ಮೊಕದ್ದಮೆಗಳು ಇರುವುದನ್ನು ಘೋಷಿಸಿದ್ದಾರೆ.

ಸರಿಸುಮಾರು 21% ಅಭ್ಯರ್ಥಿಗಳು ಶತಕೋಟ್ಯಾಧಿಪತಿಗಳಾಗಿದ್ದು, 100 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವರದಿಯು ತಿಳಿಸಿದೆ.

ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಒಟ್ಟು 1,872 ಕೋಟಿ ಆಸ್ತಿಯನ್ನು ಹೊಂದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಅಮಿತಾಬ್ ಬಚ್ಚನ್ 1,578 ಕೋಟಿ ಮತ್ತು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ 871 ಕೋಟಿ ಆಸ್ತಿ ಹೊಂದಿದ್ದಾರೆ. ಇವರು ರಾಜ್ಯಸಭಗೆ ಸ್ಪರ್ಧಿಸುತ್ತಿರುವ ಮೂವರು ಅತಿ ಶ್ರೀಮಂತ ಅಭ್ಯರ್ಥಿಗಳೆಂದು ವರದಿಯು ಉಲ್ಲೇಖಿಸಿದೆ.

ಬಡ ಅಭ್ಯರ್ಥಿಗಳ ಪೈಕಿ ಬಿಜೆಪಿಯ ಮಧ್ಯಪ್ರದೇಶದ ಅಭ್ಯರ್ಥಿ ಬಾಲಯೋಗಿ ಉಮೇಶ್ ನಾಥ್ 47 ಲಕ್ಷ  ಆಸ್ತಿ ಹೊಂದಿದ್ದಾರೆ, ಬಿಜೆಪಿಯ ಪಶ್ಚಿಮ ಬಂಗಾಳದ ಅಭ್ಯರ್ಥಿ ಸಮಿಕ್ ಭಟ್ಟಾಚಾರ್ಯ 1 ಕೋಟಿ ಆಸ್ತಿ ಮತ್ತು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ ಸಂಗೀತಾ  1 ಕೋಟಿ ಆಸ್ತಿ ಹೊಂದಿದ್ದಾರೆ.

17% ಅಭ್ಯರ್ಥಿಗಳು 5ನೇ ಉತ್ತೀರ್ಣದಿಂದ 12ನೇ ತೇರ್ಗಡೆಯವರೆಗಿನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿದ್ದರೆ, ಗಮನಾರ್ಹ 79% ಪದವಿ ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಬಹುಪಾಲು (76%) ಅಭ್ಯರ್ಥಿಗಳು 51-70 ವಯಸ್ಸಿನ ಗುಂಪಿನಲ್ಲಿ ಬರುತ್ತಾರೆ ಮತ್ತು 31-50 ವಯಸ್ಸಿನ ಗುಂಪಿನಲ್ಲಿ ಸಣ್ಣ ಪ್ರಮಾಣ ಅಂದರೆ 16% ಹೊಂದಿದ್ದಾರೆ. 19% ಮಹಿಳಾ ಅಭ್ಯರ್ಥಿಗಳು ರಾಜ್ಯಸಭಾ ಕಣದಲ್ಲಿದ್ದಾರೆ ಎಂದು ವರದಿಯು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...