Homeಮುಖಪುಟರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

ರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

- Advertisement -
- Advertisement -

ರಾಜ್ಯಸಭಾ ಅಭ್ಯರ್ಥಿಗಳ ಪೈಕಿ 36% ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದು, ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವಿಶ್ಲೇಷಿಸಲಾಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯು ಬಹಿರಂಗಪಡಿಸಿದೆ.

ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ 15 ರಾಜ್ಯಗಳ 56 ಸ್ಥಾನಗಳಿಗೆ ಕಣದಲ್ಲಿರುವ 59 ಅಭ್ಯರ್ಥಿಗಳ ಪೈಕಿ 58 ಮಂದಿ ಅಫಿಡವಿತ್‌ಗಳನ್ನು ವಿಶ್ಲೇಷಿಸಿದೆ. ರಾಜ್ಯಸಭಾ ಚುನಾವಣೆ ಫೆಬ್ರವರಿ 27ಕ್ಕೆ ನಿಗದಿಯಾಗಿದೆ. 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಅವರು ವಿಶ್ಲೇಷಣೆಯಿಂದ ಹೊರಗುಳಿದಿದ್ದಾರೆ. 36% ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ವಿಶ್ಲೇಷಣೆಯ ವೇಳೆ ಕಂಡು ಹಿಡಿಯಲಾಗಿದೆ.

ಹೆಚ್ಚುವರಿಯಾಗಿ 17%ದಷ್ಟು ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಒಬ್ಬ ಅಭ್ಯರ್ಥಿಯು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ವಿಶ್ಲೇಷಣೆಯ ಪ್ರಕಾರ, 30 ಬಿಜೆಪಿ ಅಭ್ಯರ್ಥಿಗಳಲ್ಲಿ ಎಂಟು (27%), ಒಂಬತ್ತು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಆರು ಮಂದಿ, ನಾಲ್ಕು ಟಿಎಂಸಿ ಅಭ್ಯರ್ಥಿಗಳಲ್ಲಿ ಒಬ್ಬರು (25%), ಮೂರು ಎಸ್‌ಪಿ ಅಭ್ಯರ್ಥಿಗಳಲ್ಲಿ ಇಬ್ಬರು,  ಮೂವರು YSRCP ಅಭ್ಯರ್ಥಿಗಳಲ್ಲಿ ಒಬ್ಬರು, ಇಬ್ಬರು RJD ನಾಮನಿರ್ದೇಶಿತರಲ್ಲಿ ಒಬ್ಬರು, ಇಬ್ಬರು BJD ಅಭ್ಯರ್ಥಿಗಳಲ್ಲಿ ಒಬ್ಬರು  ಮತ್ತು ಓರ್ವ BRS ಅಭ್ಯರ್ಥಿ ತಮ್ಮ ಅಫಿಡವಿತ್‌ನಲ್ಲಿ ಕ್ರಿಮಿನಲ್ ಮೊಕದ್ದಮೆಗಳು ಇರುವುದನ್ನು ಘೋಷಿಸಿದ್ದಾರೆ.

ಸರಿಸುಮಾರು 21% ಅಭ್ಯರ್ಥಿಗಳು ಶತಕೋಟ್ಯಾಧಿಪತಿಗಳಾಗಿದ್ದು, 100 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವರದಿಯು ತಿಳಿಸಿದೆ.

ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಒಟ್ಟು 1,872 ಕೋಟಿ ಆಸ್ತಿಯನ್ನು ಹೊಂದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಅಮಿತಾಬ್ ಬಚ್ಚನ್ 1,578 ಕೋಟಿ ಮತ್ತು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ 871 ಕೋಟಿ ಆಸ್ತಿ ಹೊಂದಿದ್ದಾರೆ. ಇವರು ರಾಜ್ಯಸಭಗೆ ಸ್ಪರ್ಧಿಸುತ್ತಿರುವ ಮೂವರು ಅತಿ ಶ್ರೀಮಂತ ಅಭ್ಯರ್ಥಿಗಳೆಂದು ವರದಿಯು ಉಲ್ಲೇಖಿಸಿದೆ.

ಬಡ ಅಭ್ಯರ್ಥಿಗಳ ಪೈಕಿ ಬಿಜೆಪಿಯ ಮಧ್ಯಪ್ರದೇಶದ ಅಭ್ಯರ್ಥಿ ಬಾಲಯೋಗಿ ಉಮೇಶ್ ನಾಥ್ 47 ಲಕ್ಷ  ಆಸ್ತಿ ಹೊಂದಿದ್ದಾರೆ, ಬಿಜೆಪಿಯ ಪಶ್ಚಿಮ ಬಂಗಾಳದ ಅಭ್ಯರ್ಥಿ ಸಮಿಕ್ ಭಟ್ಟಾಚಾರ್ಯ 1 ಕೋಟಿ ಆಸ್ತಿ ಮತ್ತು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ ಸಂಗೀತಾ  1 ಕೋಟಿ ಆಸ್ತಿ ಹೊಂದಿದ್ದಾರೆ.

17% ಅಭ್ಯರ್ಥಿಗಳು 5ನೇ ಉತ್ತೀರ್ಣದಿಂದ 12ನೇ ತೇರ್ಗಡೆಯವರೆಗಿನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿದ್ದರೆ, ಗಮನಾರ್ಹ 79% ಪದವಿ ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಬಹುಪಾಲು (76%) ಅಭ್ಯರ್ಥಿಗಳು 51-70 ವಯಸ್ಸಿನ ಗುಂಪಿನಲ್ಲಿ ಬರುತ್ತಾರೆ ಮತ್ತು 31-50 ವಯಸ್ಸಿನ ಗುಂಪಿನಲ್ಲಿ ಸಣ್ಣ ಪ್ರಮಾಣ ಅಂದರೆ 16% ಹೊಂದಿದ್ದಾರೆ. 19% ಮಹಿಳಾ ಅಭ್ಯರ್ಥಿಗಳು ರಾಜ್ಯಸಭಾ ಕಣದಲ್ಲಿದ್ದಾರೆ ಎಂದು ವರದಿಯು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...