Homeಮುಖಪುಟರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

ರಾಜ್ಯಸಭಾ ಚುನಾವಣೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 36% ಅಭ್ಯರ್ಥಿಗಳು!

- Advertisement -
- Advertisement -

ರಾಜ್ಯಸಭಾ ಅಭ್ಯರ್ಥಿಗಳ ಪೈಕಿ 36% ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದು, ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವಿಶ್ಲೇಷಿಸಲಾಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯು ಬಹಿರಂಗಪಡಿಸಿದೆ.

ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ 15 ರಾಜ್ಯಗಳ 56 ಸ್ಥಾನಗಳಿಗೆ ಕಣದಲ್ಲಿರುವ 59 ಅಭ್ಯರ್ಥಿಗಳ ಪೈಕಿ 58 ಮಂದಿ ಅಫಿಡವಿತ್‌ಗಳನ್ನು ವಿಶ್ಲೇಷಿಸಿದೆ. ರಾಜ್ಯಸಭಾ ಚುನಾವಣೆ ಫೆಬ್ರವರಿ 27ಕ್ಕೆ ನಿಗದಿಯಾಗಿದೆ. 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಅವರು ವಿಶ್ಲೇಷಣೆಯಿಂದ ಹೊರಗುಳಿದಿದ್ದಾರೆ. 36% ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ ಎಂದು ವಿಶ್ಲೇಷಣೆಯ ವೇಳೆ ಕಂಡು ಹಿಡಿಯಲಾಗಿದೆ.

ಹೆಚ್ಚುವರಿಯಾಗಿ 17%ದಷ್ಟು ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಒಬ್ಬ ಅಭ್ಯರ್ಥಿಯು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ವಿಶ್ಲೇಷಣೆಯ ಪ್ರಕಾರ, 30 ಬಿಜೆಪಿ ಅಭ್ಯರ್ಥಿಗಳಲ್ಲಿ ಎಂಟು (27%), ಒಂಬತ್ತು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಆರು ಮಂದಿ, ನಾಲ್ಕು ಟಿಎಂಸಿ ಅಭ್ಯರ್ಥಿಗಳಲ್ಲಿ ಒಬ್ಬರು (25%), ಮೂರು ಎಸ್‌ಪಿ ಅಭ್ಯರ್ಥಿಗಳಲ್ಲಿ ಇಬ್ಬರು,  ಮೂವರು YSRCP ಅಭ್ಯರ್ಥಿಗಳಲ್ಲಿ ಒಬ್ಬರು, ಇಬ್ಬರು RJD ನಾಮನಿರ್ದೇಶಿತರಲ್ಲಿ ಒಬ್ಬರು, ಇಬ್ಬರು BJD ಅಭ್ಯರ್ಥಿಗಳಲ್ಲಿ ಒಬ್ಬರು  ಮತ್ತು ಓರ್ವ BRS ಅಭ್ಯರ್ಥಿ ತಮ್ಮ ಅಫಿಡವಿತ್‌ನಲ್ಲಿ ಕ್ರಿಮಿನಲ್ ಮೊಕದ್ದಮೆಗಳು ಇರುವುದನ್ನು ಘೋಷಿಸಿದ್ದಾರೆ.

ಸರಿಸುಮಾರು 21% ಅಭ್ಯರ್ಥಿಗಳು ಶತಕೋಟ್ಯಾಧಿಪತಿಗಳಾಗಿದ್ದು, 100 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ಎಂದು ವರದಿಯು ತಿಳಿಸಿದೆ.

ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಒಟ್ಟು 1,872 ಕೋಟಿ ಆಸ್ತಿಯನ್ನು ಹೊಂದಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯ ಅಮಿತಾಬ್ ಬಚ್ಚನ್ 1,578 ಕೋಟಿ ಮತ್ತು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ 871 ಕೋಟಿ ಆಸ್ತಿ ಹೊಂದಿದ್ದಾರೆ. ಇವರು ರಾಜ್ಯಸಭಗೆ ಸ್ಪರ್ಧಿಸುತ್ತಿರುವ ಮೂವರು ಅತಿ ಶ್ರೀಮಂತ ಅಭ್ಯರ್ಥಿಗಳೆಂದು ವರದಿಯು ಉಲ್ಲೇಖಿಸಿದೆ.

ಬಡ ಅಭ್ಯರ್ಥಿಗಳ ಪೈಕಿ ಬಿಜೆಪಿಯ ಮಧ್ಯಪ್ರದೇಶದ ಅಭ್ಯರ್ಥಿ ಬಾಲಯೋಗಿ ಉಮೇಶ್ ನಾಥ್ 47 ಲಕ್ಷ  ಆಸ್ತಿ ಹೊಂದಿದ್ದಾರೆ, ಬಿಜೆಪಿಯ ಪಶ್ಚಿಮ ಬಂಗಾಳದ ಅಭ್ಯರ್ಥಿ ಸಮಿಕ್ ಭಟ್ಟಾಚಾರ್ಯ 1 ಕೋಟಿ ಆಸ್ತಿ ಮತ್ತು ಉತ್ತರ ಪ್ರದೇಶದ ಬಿಜೆಪಿ ಅಭ್ಯರ್ಥಿ ಸಂಗೀತಾ  1 ಕೋಟಿ ಆಸ್ತಿ ಹೊಂದಿದ್ದಾರೆ.

17% ಅಭ್ಯರ್ಥಿಗಳು 5ನೇ ಉತ್ತೀರ್ಣದಿಂದ 12ನೇ ತೇರ್ಗಡೆಯವರೆಗಿನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿದ್ದರೆ, ಗಮನಾರ್ಹ 79% ಪದವಿ ಅಥವಾ ಉನ್ನತ ಪದವಿಗಳನ್ನು ಹೊಂದಿದ್ದಾರೆ. ಬಹುಪಾಲು (76%) ಅಭ್ಯರ್ಥಿಗಳು 51-70 ವಯಸ್ಸಿನ ಗುಂಪಿನಲ್ಲಿ ಬರುತ್ತಾರೆ ಮತ್ತು 31-50 ವಯಸ್ಸಿನ ಗುಂಪಿನಲ್ಲಿ ಸಣ್ಣ ಪ್ರಮಾಣ ಅಂದರೆ 16% ಹೊಂದಿದ್ದಾರೆ. 19% ಮಹಿಳಾ ಅಭ್ಯರ್ಥಿಗಳು ರಾಜ್ಯಸಭಾ ಕಣದಲ್ಲಿದ್ದಾರೆ ಎಂದು ವರದಿಯು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...