Homeಮುಖಪುಟದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

- Advertisement -
- Advertisement -

ಗುಜರಾತ್ ರಾಜಧಾನಿ ಅಹಮದಾಬಾದ್ ನಗರದಲ್ಲಿ ಹಲವಾರು ನಿವಾಸಿಗಳು ಕೊರೊನ ಲಾಕ್ ಡೌನ್ ಸಂಕಷ್ಟದಿಂದ ಊಟವನ್ನು ಕಡಿಮೆ ಮಾಡಿರುವ ಆತಂಕಕಾರಿ ಅಂಶ ಐಐಎಂಎ ನಡೆಸಿರುವ ಸರ್ವೇಯೊಂದರಿಂದ ಹೊರ ಬಿದ್ದಿದೆ.

ಇಂಡಿಯನ್ ಇನ್ಸ್ಟಿಟೂಟ್ ಆಫ್ ಮ್ಯಾನೇಜ್ಮೆಂಟ್ ಅಹಮದಾಬಾದ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಏಪ್ರಿಲ್ 23 ರಿಂದ ಮೇ 2ರವರೆಗೆ 130 ನಿವಾಸಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸರ್ವೇ ನಡೆಸಿದ್ದು ಶೇಕಡ 60ರಷ್ಟು ನಿವಾಸಿಳಿಗೆ ಆಹಾರ ಪೂರೈಕೆ ಸಮರ್ಪಕವಾಗಿ ಆಗಿಲ್ಲ ಎಂದು ಸರ್ವೇ ಹೇಳಿದೆ.

ಸ್ಯಾಂಪಲ್‌ ಸರ್ವೇಯಲ್ಲಿ ಪಾಲ್ಗೊಂಡ 130 ಜನರಲ್ಲಿ ಶೇಕಡ 54ರಷ್ಟು ನಿವಾಸಿಗಳು ಎರಡು ಹೊತ್ತು ಊಟವನ್ನು ಬಿಡಬೇಕಾಗಿ ಬಂದಿದೆ. ಒಂದು ದಿನದಲ್ಲಿ ಒಂದು ಹೊತ್ತು ಅದು ಮಧ್ಯಾಹ್ನದ ವೇಳೆ ಮಾತ್ರ ಊಟ ಮಾಡುತ್ತಿರುವುದಾಗಿ ಸರ್ವೇಯಲ್ಲಿ ಬಹಿರಂಗವಾಗಿದೆ.

ನಗರದಲ್ಲಿ ಶೇಕಡ 90ರಷ್ಟು ಜನರ ತಿಂಗಳ ಆದಾಯ 19,500 ರೂ ಒಳಗಿದೆ. ಶೇಕಡ 85ರಷ್ಟು ನಿವಾಸಿಗಳಿಗೆ ನಿರಂತರ ಗಳಿಕೆಯೂ ಇಲ್ಲ. ನಿರಂತರ ಆದಾಯವೂ ಇಲ್ಲ. ಅವರ ತಿಂಗಳ ಆದಾಯ 10 ಸಾವಿರ, 15 ಸಾವಿರ ಇದೆ ಎಂದು ವರದಿ ಹೇಳಿದೆ.

ಬಹುತೇಕ ನಿವಾಸಿಗಳು ಬಾಡಿಗೆ, ಶಾಲಾ ಶುಲ್ಕ, ದೂರವಾಣಿ ಶುಲ್ಕ ಮತ್ತು ವಿದ್ಯುತ್ ಶುಲ್ಕ ಪಾವತಿಸುವುದು ಕಷ್ಟವಾಗಿದೆ. ಅಷ್ಟೇ ಅಲ್ಲ ಆಹಾರ ಪದಾರ್ಥಗಳು, ಹಾಲು ತರಕಾರಿ ಸಂಗ್ರಹವೂ ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ವೇ ತಿಳಿಸಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಶೇಕಡ 64ರಷ್ಟು ಆಹಾರ ಧಾನ್ಯಗಳ ಪೂರೈಕೆಯಾಗಿದ್ದರೂ ಅವರೂ ಕೂಡ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ನೆರವಿಗೆ ಯಾರೂ ಬಂದಿಲ್ಲ ಎಂಬುದನ್ನು ಸರ್ವೆ ಬೆಟ್ಟು ಮಾಡಿ ತೋರಿಸಿದೆ.

ಕಳೆದ 8 ವರ್ಷಗಳ ಹಿಂದೆ ಇಡೀ ದೇಶ ಗುಜರಾತ್ ಮಾದರಿ ಅನುಸರಿಸಬೇಕು. ಅಭಿವೃದ್ಧಿಯಲ್ಲಿ ಗುಜರಾತ್ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಬಿಂಬಿಸಲಾಗಿತ್ತು. ಆಗ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಈಗ ಗುಜರಾತ್ ರಾಜಧಾನಿಯಲ್ಲೇ ಸಮಸ್ಯೆಗಳು ಇರುವುದನ್ನು ಸರ್ವೇ ಬಹಿರಂಗಪಡಿಸಿದೆ.


ಇದನ್ನೂ ಓದಿ: ಹಸಿವು, ನೋವಿನಿಂದ ಬಳಲಿದ ಬಿಟ್ಟು ಎಂಬ ಬಾಲಕ ಕೊನೆಗೂ ಮನೆ ಸೇರಿದ ಕತೆ


ಇಂಗ್ಲಿಷ್ ವೆಬ್ಸೈಟ್ ಓದಲು ಇಲ್ಲಿ ಭೇಟಿ ನೀಡಿ

https://gaurilankeshnews.com/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...