Homeಅಂಕಣಗಳುಹಿರಿಯೂರಿನಲ್ಲಿ ಮೇ 25, 26ರಂದು ಸಹಜ ಕೃಷಿಯ ಕುರಿತು ಕಾರ್ಯಾಗಾರ

ಹಿರಿಯೂರಿನಲ್ಲಿ ಮೇ 25, 26ರಂದು ಸಹಜ ಕೃಷಿಯ ಕುರಿತು ಕಾರ್ಯಾಗಾರ

ಸಹಜ ಕೃಷಿ ತಜ್ಞ ಅವಿನಾಶ್ ರಿಂದ ತರಬೇತಿ

- Advertisement -
- Advertisement -

2019 ಮೇ 25 ಮತ್ತು 26ನೇ ತಾರೀಖಿನಂದು ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೋಕಿನ, ಐಮಂಗಲ ಹೋಬಳಿಯ ವದ್ದಿಕೆರೆಯಲ್ಲಿ, ಬೆಳಕಿನ ಬೇಸಾಯ ಅಥವಾ ನೈಸರ್ಗಿಕ ಕೃಷಿ ಕಾರ್ಯಾಗಾರ ನಡೆಯಲಿದೆ. ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಪರಿಣಿತಿಯನ್ನು ಪಡೆದಿರುವ ಅವಿನಾಶ್.ಟಿ.ಜಿ.ಎಸ್ ಅದನ್ನು ನಡೆಸಿಕೊಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಕೃಷಿ ಪದ್ಧತಿಯ ಕೆಲವು ಸಂಗತಿಗಳ ಕುರಿತು ಸ್ವತಃ ಅವಿನಾಶ್ ಅವರೇ ಇಲ್ಲಿ ಬರೆದಿದ್ದಾರೆ. ಓದಿ ಮತ್ತು ತರಬೇತಿಯ ಕುರಿತು ಆಸಕ್ತಿ ಇದ್ದವರು, ಲೇಖನದ ಕೊನೆಯಲ್ಲಿರುವ ಫೋನ್ ನಂಬರ್‍ಗಳನ್ನು ಸಂಪರ್ಕಿಸಿ.

ಅವಿನಾಶ್ ಟಿ.ಜಿ.ಎಸ್

ನೈಸರ್ಗಿಕ ಕೃಷಿ ವಿಜ್ಞಾನ, ಬಿದ್ದ ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನ, ಸಸ್ಯಗಳ ಬೆಳವಣಿಗೆಯಲ್ಲಿ ಬೆಳಕಿನ ಮಹತ್ವವನ್ನು ತಿಳಿಸುವುದರ ಜೊತೆಗೆ ಹ್ಯೂಮಸ್ ಮತ್ತು ಸಾವಯವ ಇಂಗಾಲದ ಮಹತ್ವವನ್ನು ತಿಳಿಸುತ್ತಾ ನಮ್ಮ ಭೂಮಿಯಲ್ಲಿ ಸಹಜವಾಗಿ ಹೇಗೆ ಉತ್ಪತ್ತಿ ಮಾಡುವುದು ಎನ್ನುವುದರ ಮಾಹಿತಿಯನ್ನು ತಿಳಿಸಿಕೊಡಲಾಗುವುದು.

ನೈಸರ್ಗಿಕ ಕೃಷಿ ಪದ್ದತಿ ಪ್ರಚಾರಕ್ಕೆ ಬಂದ ಮೇಲೆ ಬಹುತೇಕ ಎಲ್ಲಾ ರೈತರದು ಒಂದೆ ಪ್ರಶ್ನೆ. ಏನೆಂದರೆ – ನಮ್ಮಲ್ಲಿ ಮಳೆ ಕಡಿಮೆ, ಅಂತರ್ಜಲ ಬತ್ತಿ ಹೋಗಿದೆ, ಭೂಮಿಗೆ ಬಿದ್ದ ಬೀಜ ಭಸ್ಮವಾಗುತ್ತಿದೆ. ಹೀಗಿರುವಾಗ ಏನನ್ನು ತಿಳಿದುಕೊಂಡು ತಾನೇ ಏನು ಪ್ರಯೋಜನ?. ಈ ಮಾತು ಅಲ್ಲಲ್ಲಿ ಕೇಳಿ ಬರುತ್ತಿದೆ.

ಸಮಸ್ಯೆ ಹೇಗೆ ಸೃಷ್ಟಿಯಾಯಿತು ಎಂದು ತಿಳಿದುಕೊಂಡರೆ, ಪರಿಹಾರವೂ ತಿಳಿಯುತ್ತದೆ ಮತ್ತು ನೈಸರ್ಗಿಕ ಕೃಷಿಯೇ ಏಕೆ ಪರಿಹಾರ ಎಂಬುದೂ ಅರಿವಾಗುತ್ತದೆ. ಕೆಲವೇ ವರ್ಷಗಳ ಹಿಂದೆ ಈ ರೀತಿಯ ಮಾತುಗಳು ಇರಲಿಲ್ಲ. ಆಗ ಅಂತರ್ಜಲ ಭೂಮಿಯ ಹತ್ತಿರ ಇತ್ತು. ಭೂಮಿ ತಂಪಾಗಿತ್ತು. ಮಳೆಯು ಸಾಕಷ್ಟು ಬೀಳುತ್ತಿತ್ತು. ಹಾಗಾದರೆ ಈಗ ಏನಾಯಿತು…?

ನಾವು ಪರಿಸರಕ್ಕೆ ಮಾಡಿದ ಹಾನಿ, ಅಂದರೆ ಮರಗಿಡಗಳನ್ನು ಕಡಿದು ಮಳೆ ನೀರು ಹಿಂಗದಂತೆ ಭೂಮಿಯನ್ನು ನಿರ್ಜಲ ಮಾಡಿದ್ದು, ವ್ಯವಸಾಯಕ್ಕೆ ರಾಸಾಯನಿಕಗಳನ್ನು ಬಳಸಿ ಭೂಮಿಯನ್ನು ಕಣ್ಣು ಮುಚ್ಚುವಂತೆ ಮಾಡಿರುವುದು, ವಿವೇಚನೆ ಇಲ್ಲದ ಏಕಬೆಳೆ ಪದ್ಧತಿ, ಟ್ರಾಕ್ಟರ್ ಉಪಯೋಗಿಸಿ ನೆಲವನ್ನು ರಸ್ತೆಯಂತೆ ಗಟ್ಟಿಮಾಡಿ ಜೀವಾಣುಗಳನ್ನು ಕೊಲೆಮಾಡಿರುವುದು ಇತ್ಯಾದಿ ಇತ್ಯಾದಿಗಳು ಭೂಮಿ ನೀರನ್ನು ಕುಡಿಯದಂತೆ ಮಾಡಿಬಿಟ್ಟಿದ್ದು – ಇವೆಲ್ಲವೂ ಬೀಜ ಹಾಕಿದರೆ ಭಸ್ಮವಾಗುವುದಕ್ಕೆ ಕಾರಣವಲ್ಲವೇ? ಇಂತಹ ಬೇಸಾಯವನ್ನು ಉತ್ತೇಜಿಸಿದ ಸರ್ಕಾರ ಹಾಗೂ ನಾವೂ ಕೂಡಾ ಇದಕ್ಕೆಲ್ಲಾ ಕಾರಣವಲ್ಲವೇ? ಇದು ಸ್ವಯಂಕೃತ ಅಪರಾಧವಲ್ಲದೆ ಮತ್ತೇನು?

ಇಂದು ಭೂಮಿಗೂ ಮನುಷ್ಯನಿಗೂ ಇರುವ ಅವಿನಾಭಾವ ಸಂಬಂಧದ ಎಳೆ ತಪ್ಪಿದೆ. ಅಂತ:ಕರಣ ಕಳೆದುಕೊಂಡಿರುವ ಮನುಷ್ಯ ಭೂಮಿಯನ್ನು ಧ್ವಂಸಿಸುತ್ತ ಭೂಮಿಯನ್ನು ಅಸ್ಥಿಪಂಜರವಾಗಿಸಿಬಿಟ್ಟಿದ್ದಾನೆ. ಮನುಷ್ಯ ತಾನು ಪ್ರಕೃತಿಗಿಂತ ಬೇರೆ ಅಂದುಕೊಂಡಿರುವುದೇ ಈ ಎಲ್ಲಾ ದುರತಂಕ್ಕೆ ಕಾರಣವಾಗಿದೆ. ಇಂತಹ ಪರಿಸ್ಧಿತಿಯಲ್ಲಿ ನಾವು ಮಾಡಬೇಕಾಗಿರುವುದು ಏನು? ಈ ಜ್ವಲಂತ ಸಮಸ್ಯೆಗೆ ಬೆಳಕಿನ ಬೇಸಾಯ ಕೃಷಿ ಪದ್ಧತಿ (ಸಹಜ ಕೃಷಿ) ನಮಗೆ ಒಂದು ದಾರಿ ದೀಪವಾಗಿ ಕಾಣುತ್ತದೆ. ಭೂಮಿಯನ್ನು ಬದುಕಿಸಿ ತನ್ಮೂಲಕ ನಾವು ಬದುಕುವ ದಾರಿ ಕಾಣಿಸತೊಡಗಿದೆ ಎನ್ನಿಸುತ್ತದೆ.

ಕಾರ್ಯಗಾರವೊಂದರಲ್ಲಿ

ಇಂದು ಬಹು ಮುಖ್ಯವಾಗಿ ತಿಳಿಯಬೇಕಾಗಿರುವ ಅಂಶವೆಂದರೆ:
ಸಾವಯವ ಇಂಗಾಲ – ಇದನ್ನು ಭೂಮಿಯ ಫಲವತ್ತತೆಯನ್ನು ಅಳೆಯುವ ಮಾಪನ ಎನ್ನಬಹುದು. ಭೂಮಿಯಲ್ಲಿ ಸಾವಯವ ಇಂಗಾಲ ಸಾಕಷ್ಟು ಪ್ರಮಾಣದಲ್ಲಿದ್ದು, ಹ್ಯೂಮಸ್ ಉಂಟಾದರೆ ಗಿಡಮರಗಳಿಗೆ ಬೇಕಾಗಿರುವ ಪೌಷ್ಟಿಕಾಂಶಗಳನ್ನು, ಪೌಷ್ಠಿಕ ಪದಾರ್ಥಗಳನ್ನು ನಿಸರ್ಗದತ್ತವಾಗಿಯೇ ಬೆಳೆಗಳಿಗೆ ಒದಗುವಂತೆ ಮಾಡುತ್ತದೆ. ಸಾವಯವ ಇಂಗಾಲ ಹೆಚ್ಚಿರುವ ಭೂಮಿಯ ಮಣ್ಣು ಸ್ಪಂಜಿನಂತಾಗಿಬಿಡುವುದರಿಂದ ಆ ಭೂಮಿಯ ಮೇಲೆ ಬಿದ್ದ ಹನಿ ಹನಿ ನೀರು ಹಾಗು ಬೆಳಗಿನ ಇಬ್ಬನಿ ಕೂಡಾ ಹಿಂಗುತ್ತದೆ. ಹಾಗೆಯೇ ಹ್ಯೂಮಸ್‍ಗೆ ವಾತಾವರಣದಿಂದ ನೀರನ್ನು ಹೀರಿಕೊಂಡು ಹಿಡಿದಿಟ್ಟುಕೊಳ್ಳುವ ಅದ್ಭುತ ಶಕ್ತಿ ಸಾಮಥ್ರ್ಯವೂ ಇದೆ. ಇಂತಹ ವಾತಾವರಣದಲ್ಲಿ ಬೆಳೆಗಳಿಗೆ ಕಡಿಮೆ ಪ್ರಮಾಣದ ನೀರೇ ಸಾಕಾಗುತ್ತದೆ. ಭೂಮಿ ತಂಪಾಗುವುದರಿಂದ ಸಸಿಗಳು ನೀರಿನ ಕೊರತೆಯಲ್ಲೂ ಬದುಕುಳಿಯುತ್ತವೆ. ಹಾಗೂ ಸೂಕ್ಷ್ಮ ಜೀವಾಣುಗಳಿಗೆ ಬೇಕಾದ ಸೂಕ್ಷ್ಮವಾತಾವರಣವನ್ನು ಒದಗಿಸುವಲ್ಲಿ ಹ್ಯೂಮಸ್ ಸಹಕರಿಸುತ್ತದೆ. ಇದರಿಂದ ಭೂಮಿ ಜೀವಂತವಾಗುತ್ತದೆ, ಬಿತ್ತಿದ ಬೀಜ ಬೆಳೆಯುತ್ತದೆ.

ಬೆಳಕಿನ ಸಂಯೋಜನೆ – ಸಸ್ಯಗಳ ಬೆಳವಣಿಗೆಗೆ ಅವಶ್ಯವಿರುವ ಪೌಷ್ಟಿಕಾಂಶಗಳನ್ನು ಶೇ.98%ರಷ್ಟು ವಾತಾವರಣದಿಂದ ದೊರಕುತ್ತವೆ. ಇನ್ನುಳಿದ ಶೇ.2%ರಷ್ಟು ಭೂಮಿಯಿಂದ ದೊರಕುತ್ತವೆ. ನಾವು ಸಹಜವಾಗಿ ಭೂಮಿಯನ್ನು ಬಲಗೊಳಿಸಿ ಅಂದರೆ ಹ್ಯೂಮಸ್ ಮತ್ತು ಸಾವಯವ ಇಂಗಾಲವನ್ನು ವೃದ್ಧಿಮಾಡಿದರೆ ಭೂಮಿಯಲ್ಲಿರುವ ಪೌಷ್ಟಿಕಾಂಶಗಳನ್ನು ನಿಸರ್ಗದತ್ತವಾಗಿ ಬೆಳೆಗಳಿಗೆ ಒದಗುತ್ತದೆ. ಶೇ.98%ರಷ್ಟು ಸಸ್ಯಗಳ ಬೆಳವಣಿಗೆಗೆ ಅವಶ್ಯವಿರುವ ವಾತಾವರಣಕ್ಕೆ ಹೆಚ್ಚಿನ ಒತ್ತು ಕೊಡುವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರ ಕಡೆ ಗಮನ ಹರಿಸುವುದು ಪ್ರಸ್ತುತ ಬಹುಮುಖ್ಯ.

ಇದನ್ನು ಓದಿ: ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

ಇದಕ್ಕಿರುವ ಮುಖ್ಯ ಕಾರಣ ಬೆಳಕು (Foot Candle / Light Intensity)
ದ್ಯುತಿ ಸಂಶ್ಲೇಷಣಾ ಕ್ರಿಯೆಯಲ್ಲಿ, ಸಸ್ಯಗಳು ಭೂಮಿಯಲ್ಲಿ ದೊರೆಯುವ ಪೌಷ್ಟಿಕಾಂಶಗಳನ್ನುಗಳನ್ನು ಮತ್ತು ವಾತಾವರಣದಲ್ಲಿ ದೊರೆಯುವ ಪೌಷ್ಟಿಕಾಂಶಗಳನ್ನು ತನ್ನ ಅಡುಗೆ ಮನೆಯಾದ ಎಲೆಗಳಲ್ಲಿರುವ ಪತ್ರಹರಿತ್ತು ರಂಧ್ರಗಳು ಸ್ವೀಕರಿಸುತ್ತವೆ. ಈ ಎಲೆಗಳಿಗೆ ಸರಿ ಪ್ರಮಾಣದ ಬೆಳಕು (ಎಲ್ಲ ಬೆಳೆಗಳಿಗೂ ಒಂದೇ ತೀವ್ರತೆಯಿಂದ ಕೂಡಿದ ಬೆಳಕು ಅವಶ್ಯವಿರುವುದಿಲ್ಲ) ತಾಗಿದಾಗ ಮಾತ್ರ (ಅಂದರೆ ಆಯಾ ಬೆಳಗಳ ಶಕ್ತಿಗನುಗುಣವಾಗಿ ಬೆಳಕಿನ ತೀವ್ರತೆಯನ್ನು ಒದಗಿಸಿದರೆ) ಈ ಎಲ್ಲಾ ಪೌಷ್ಟಿಕಾಂಶಗಳು ಸಕ್ಕರೆ ಅಂಶವಾಗಿ ಪರಿವರ್ತನೆಗೊಳ್ಳುತ್ತವೆ. ಈ ಸಕ್ಕರೆ ಅಂಶ ಸಸ್ಯಗಳ ಆಹಾರ. ಆದರೆ ಇಂದು ಹಲವಾರು ಕಾರಣಗಳಿಂದ ಬೆಳಕಿನ ತೀವ್ರತೆ ಹೆಚ್ಚಾಗುತ್ತಿದೆ. ಇನ್ನೊಂದು ಕಡೆ ಮರಗಿಡಗಳಿಂದ ಕೂಡಿದ ಕೃಷಿ ಪದ್ಧತಿಯನ್ನು ಮರೆತಿದ್ದೇವೆ. ಹಾಗಾಗಿ ಹೆಚ್ಚಿನ ತೀವ್ರತೆಯಿಂದ ಕೂಡಿದ ಬೆಳಕು ಬೆಳೆಗಳಿಗೆ ತಗುಲುತ್ತಿರುವುದರಿಂದ ದ್ಯುತಿ ಸಂಶ್ಲೇಷಣಾ ಕ್ರಿಯೆಯ ಕಾರ್ಯಕ್ಷಮತೆ ಕ್ಷಿಣಿಸುತ್ತಿದ್ದು ಬೆಳೆಗಳ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ.
ಈ ಕಾರಣದಿಂದ ನಾವು ಇಂದು ನಮ್ಮ ವ್ಯವಸಾಯ ಪದ್ಧತಿಯನ್ನು ಉಲ್ಟಾಪಲ್ಟಾ ಮಾಡಬೇಕಾಗಿದೆ. ಅಂದರೆ ಮಣ್ಣನ್ನು ಸಹಜವಾಗಿ ಬಲಗೊಳಿಸಿ ಶೇ.98%ರಷ್ಟು ಆಹಾರೋತ್ಪಾದನೆಗೆ ಕಾರಣವಾಗುವ ವಾತಾವರಣಕ್ಕೆ ಪರಿಸರಕ್ಕೆ ಹೆಚ್ಚು ಗಮನ ಕೊಡಬೇಕಾಗಿದೆ. ಅಂದರೆ ಸೂಕ್ತ ಬೆಳೆಗಳ ಆಯ್ಕೆ, ಆ ಬೆಳೆಗಳ ಪರಸ್ಪರ ಪೂರಕ ಬೆಳೆಗಳನ್ನು ಅರಿತುಕೊಂಡು ವಿವಿಧ ಬೆಳೆಗಳನ್ನು ಆಯೋಜಿಸಿ, ಗಿಡಗಳ ಅಗತ್ಯಕ್ಕೆ ತಕ್ಕಂತೆ ಬೆಳಕು ಸಿಗುವಂತೆ ವಾತಾವರಣ ಉಂಟುಮಾಡಿ ಇಡೀ ಕೃಷಿಗೆ ಜೀವ ಕೊಡಬೇಕಾಗಿದೆ.

ಹೋರಾಟಗಾರರ ಜೊತೆಗೆ

ಈ ಕಾರ್ಯಾಗಾರದಲ್ಲಿ ಹ್ಯೂಮಸ್ ಎಂದರೆ ಏನು, ಉತ್ಪತ್ತಿ ಮಾಡುವುದು ಹೇಗೆ, ಸಾವಯವ ಇಂಗಾಲವನ್ನು ಪ್ರಸ್ತುತ ಇರುವ ಶೇ.0.03ರಿಂದ ಶೇ.3ರಷ್ಟಕ್ಕೆ ಹೆಚ್ಚಿಸುವುದು ಹೇಗೆ, ಬಿದ್ದ ಮಳೆಗಾಲದ ನೀರನ್ನು ನಮ್ಮದೆ ಭೂಮಿಯಲ್ಲಿ ಹಿಡಿದಿಟ್ಟುಕೊಳ್ಳುವ ವಿಧಾನ, ದ್ವಿದಳ ಧಾನ್ಯಗಳ ಮಹತ್ವ, ಸಹಜ ಎರೆಹುಳುಗಳ ಮಹತ್ವ, ಸೂಕ್ಷ ಜೀವಾಣುಗಳು ಹೇಗೆ ಗಿಡ ಮರಗಳ ಬೆಳವಣಿಗೆಯಲ್ಲಿ ಸಹಕರಿಸುತ್ತವೆ, ನಾಟಿ ಬೀಜಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ ಮತ್ತು ಆ ಬೀಜಗಳನ್ನು ಸಹಜವಾಗಿ ಸಂರಕ್ಷಿಸಿಕೊಳ್ಳುವ ವಿಧಾನಗಳನ್ನು ಸವಿವರವಾಗಿ ತಿಳಿಸಿಕೊಡುವ ಪ್ರಯತ್ನವೇ ಈ ಕಾರ್ಯಾಗಾರದ ಉದ್ದೇಶ. ತಿಳಿಯೋಣ ಬನ್ನಿ ಜೊತೆ ಜೊತೆಗೆ…

ಬರ ಮುಕ್ತ ನಾಡಿಗಾಗಿ ಒಂದು ದೃಢ ಹೆಜ್ಜೆ: ನಮ್ಮ ವ್ಯವಸಾಯ ಭೂಮಿಯನ್ನು ಫುಡ್ ಪಾರೆಸ್ಟ್ ಆಗಿ ಬದಲಾಯುಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 09916030272, 09900003891, 08197705157

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...