Homeಅಂಕಣಗಳುಭಾಜಪದ ಪ್ರಣಾಳಿಕೆ ನೋಡಿದರೆ ಮ್ಯಾಜಿಕ್ ಸ್ಲೇಟ್ ನೆನಪಾಗುತ್ತೆ.

ಭಾಜಪದ ಪ್ರಣಾಳಿಕೆ ನೋಡಿದರೆ ಮ್ಯಾಜಿಕ್ ಸ್ಲೇಟ್ ನೆನಪಾಗುತ್ತೆ.

- Advertisement -
- Advertisement -

| ಕೆ.ಪಿ ಸುರೇಶ್ |

ಭಾಜಪದ ಪ್ರಣಾಳಿಕೆ ನೋಡಿದರೆ ಮ್ಯಾಜಿಕ್ ಸ್ಲೇಟ್ ನೆನಪಾಗುತ್ತೆ. ಬರೆದಿದ್ದು ನೋಡಿ ಶೀಟ್ ಎತ್ತಿದರೆ ಖಾಲಿ ಶೀಟ್!!

ಈ ದೇಶದ ಯಾವ ಸಮಸ್ಯೆಯನ್ನೂ ಬಿಡದೇ ಅದರ ಪರಿಹಾರಕ್ಕೆ ತನ್ನಲ್ಲಿ ಮೂಲಿಕೆ ಇದೆ ಎಂಬಂತೆ ಪ್ರಣಾಳಿಕೆಯ ಆರಂಭದಲ್ಲಿ ಹೇಳಲಾಗಿದೆ. ಕೆಲವು ವಿವರ ನೋಡಿ:
ರಕ್ಷಣಾ ವಿಷಯದಲ್ಲಿ ಸ್ವಾವಲಂಬಿ ಆಗಲು ಎಕೆ 203ನ್ನು ನಮ್ಮ ದೇಶದಲ್ಲೇ ತಯಾರು ಮಾಡುತ್ತಿದ್ದೇವೆ ಎಂಬ ಹೇಳಿಕೆ ಇದೆ. ಇದರ ಹಿಂದೆ ರಾಫೇಲ್ ಯವಾರದ ವ್ಯಂಗ್ಯ ಹಲ್ಲು ಕಿರಿದರೆ ಮೋದಿಯ ತಪ್ಪೆಂದು ಹೇಳಬೇಡಿ!! ಮಾತು ವೈಯ್ಯಾರವಾಗುವುದು ಹೀಗೆ.
ರೈತರಿಗೆ ಒಂದು ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಎನ್ನಲಾಗಿದೆ. ಅದರ ಜೊತೆಗೆ ‘ಅಸಲು ಕಟ್ಟಿದರೆ’ ಎಂಬ ಕುಂಟು ಪಂಕ್ತಿ..

2022ರ ಒಳಗೆ ಎಲ್ಲರಿಗೂ ಮನೆ, 2024ರ ಒಳಗೆ ಎಲ್ಲರಿಗೂ ನಲ್ಲಿ ನೀರು ಎಂಬ ಆಶ್ವಾಸನೆ ಇದೆ. ಇದೇ ಮೋದಿ ಸರ್ಕಾರ ಕುಡಿಯುವ ನೀರಿನ ಅನುದಾನಕ್ಕೆ ಕತ್ತರಿ ಹಾಕಿದ್ದು ಈ ಪ್ರಣಾಳಿಕೆಯಲ್ಲಿ ಇಲ್ಲ! ಮನೆ ಕಟ್ಟಿಸುವ ಪ್ರಗತಿ ಉತ್ತರದ ಭಾರತದ ರಾಜ್ಯಗಳಲ್ಲಿ ಶೇ.10ರಷ್ಟೂ ಪ್ರಗತಿಯಾಗಿಲ್ಲ ಎಂಬ ವರದಿ ಇತ್ತೀಚೆಗೆ ಬಂದಿತ್ತು. ಅದು ಈ ಪ್ರಣಾಳಿಕೆಯಲ್ಲಿ ಇಲ್ಲ!!

ಸಾವಯವ ಕೃಷಿಗೆ ಒತ್ತು ಎಂಬಲ್ಲಿ ಇಕೋ ಟೂರಿಸಂ ಮೂಲಕ ರೈತರ ಆದಾಯ ವೃದ್ಧಿಗೆ ಕ್ರಮ ಎಂಬ ವಾಕ್ಯ ಇದೆ. ಮಜಾ ಎಂದರೆ ಇದು ಹತ್ತು ವರ್ಷ ಹಿಂದಿನ ಕಾರ್ಯಕ್ರಮ. ಕರ್ನಾಟಕದ ಸಾವಯವ ಮಿಷನ್ ಮೂಲಕ ಇದನ್ನು ಜಾರಿ ಮಾಡುವ ಯತ್ನ ನಡೆದಿತ್ತು. ಮೋದಿ ಮತ್ತೆ ಯುಪಿಎ ಕಾರ್ಯಕ್ರಮವನ್ನು ಕದ್ದು ಹೆಸರು ಅಳಿಸಿ ಮಾರುವ ಯತ್ನ ಮುಂದುವರೆಸಿರುವುದಕ್ಕೆ ಇದು ಒಂದು ಉದಾಹರಣೆ.

ಪ್ರಣಾಳಿಕೆಯ ಆಷಾಡಭೂತಿತನ ಮುಖಕ್ಕೆ ರಾಚುವುದು ‘ಪಾರದರ್ಶಕ ಆರ್ಥಿಕತೆ ‘ ಎಂಬ ಸೆಕ್ಷನ್ನಿನಲ್ಲಿ. ಬೇನಾಮಿ ಆಸ್ತಿ ಮೇಲೆ ಪ್ರಹಾರ ಮಾಡುತ್ತೇವೆ, ಓಡಿ ಹೋಗಿರುವ ಆರ್ಥಿಕ ಅಪರಾಧಿಗಳನ್ನು ವಾಪಾಸು ತರಿಸುತ್ತೇವೆ’ ಎಂಬ ಆಶ್ವಾಸನೆ ಬೇರೆ ಇದೆ. ನೋಟು ರದ್ಧತಿ ಆದಾಗಲೇ ಐನೂರು ಕೋಟಿ ವೆಚ್ಚ ಮಾಡಿದ ರೆಡ್ಡಿಯಂಥವರು ದೇಶ ಬಿಟ್ಟು ಓಡಿ ಹೊಗುವ ಅಗತ್ಯವೇ ಇಲ್ಲದಷ್ಟು ನಿರಾಮಯವಾಗಿದ್ದಾರೆ. ಸಾಕಲ್ಲ!!

ಮುಖ್ಯತಃ ಗ್ರಾಮೀಣ, ಆದಿವಾಸಿ ಬದುಕು ಹಸನು ಮಾಡುವ ಕಾರ್ಯಕ್ರಮಗಳೆಲ್ಲಾ ಕೇವಲ ಹೇಳಿಕೆಯ ಮಟ್ಟದಲ್ಲಿವೆ. ತೋರಿಸಿರುವ ಗುರಿಯೂ ಪುಗಸಟ್ಟೆ ಕಿವಿಗೆ ಹೂವು.

ಅದೇ ಮೂಲ ಸಂರಚನೆ ಅಭಿವೃದ್ಧಿಗೆ 100 ಲಕ್ಷ ಕೋಟಿ ಮುಂದಿನ ವರ್ಷಗಳಲ್ಲಿ ಮೀಸಲಿಡಲಾಗುವುದು ಎನ್ನುತ್ತದೆ ಈ ಪ್ರಣಾಳಿಕೆ. ಕೋಟಿ ಕೋಟಿಗೆ ಎಷ್ಟು ಸೊನ್ನೆ ಅಂತ ಸ್ವತಃ ಮೋದಿಯವರಲ್ಲಿ ಕೇಳಬೇಕೇನೋ. ಭಾರತ ಸರ್ಕಾರದ ಆದಾಯ 25 ಲಕ್ಷ ಕೋಟಿ. ಅದರಲ್ಲೂ ಒಂದು ಭಾಗ ಸಾಲ!! ಅಂಥಾದ್ದರಲ್ಲಿ 100 ಲಕ್ಷ ಕೋಟಿ ಅಂತ ಹೇಳಲು ಯಮಗುಂಡಿಗೆ ಬೇಕು.

1.5 ಲಕ್ಷ ಆರೊಗ್ಯ ಕೇಂದ್ರಗಳನ್ನು ಮುಂದಿನ ಐದು ವರ್ಷಗಳಲ್ಲಿ ಸ್ಥಾಪಿಸಲಾಗುವುದು ಎನ್ನುವ ಈ ಪ್ರಣಾಳಿಕೆ ಈ ವರೆಗೆ ಕೇವಲ 17 ಸಾವಿರ ಇಂಥಾ ಕೇಂದ್ರಗಳನ್ನು ಸ್ಥಾಪಿಸಿರುವುದನ್ನೂ ದಾಖಲಿಸಿದೆ. ಅಂದರೆ ಈ ಟ್ರಾಕ್ ರೆಕಾರ್ಡ್ ಹೊಂದಿರುವ ಸರ್ಕಾರ ಇನ್ನು ಮುಂದೆ ಪ್ರತಿ ವರ್ಷ 30 ಸಾವಿರ ಇಂಥಾ ಕೇಂದ್ರ ಸ್ಥಾಪಿಸುವ ಭರವಸೆಯನ್ನು ನಾವು ನಂಬಬೇಕು.

ಭಾರತದಲ್ಲಿ ವರ್ಷಕ್ಕೆ 25 ಲಕ್ಷ ಜನ ಕ್ಷಯ ರೋಗಕ್ಕೆ ತುತ್ತಾಗಿ 3 ಲಕ್ಷ ಮಂದಿ ಸಾವನ್ನಪ್ಪುತ್ತಾರೆ. ಜಗತ್ತಿನಲ್ಲೇ ಇದು ಅತ್ಯಂತ ಹೆಚ್ಚು. ಈಗ ಪ್ರಣಾಳಿಕೆ 2015ರ ಒಳಗೆ ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದಾಗಿ ಹೇಳಿದೆ. ಹೇಗೆಂದು ಕೇಳುವಂತಿಲ್ಲ!!

ಯುಪಿಎ ಕಾರ್ಯಕ್ರಮವನ್ನು ಕಾಪಿಚೀಟಿ ಮಾಡುವ ಚಾಳಿ ಎಷ್ಟರ ಮಟ್ಟಿಗೆ ಎಂದರೆ ಶಿಕ್ಷಣದಲ್ಲಿ ಜ್ಞಾನ ಪ್ರಸರಣಕ್ಕೆ ಅನುವಾದ ಮಿಷನ್ ಒಂದನ್ನು ಸ್ಥಾಪಿಸಲಾಗುವುದು ಎಂದು ಈ ಪ್ರಣಾಳಿಕೆ ಹೇಳಿದೆ. ಮೂಲತಃ ಏನನ್ನೂ ಈ ಭಾಜಪ ಮಂದಿ ಓದಿರುವ ದಾಖಲೆ ಇಲ್ಲದ ಕಾರಣ ಇದು ಸ್ವಾಗತಾರ್ಹ. ಆದರೆ ಈ ಮಿಷನ್ ಈಗಾಗಲೇ ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನದ ಮಾರ್ಗದರ್ಶನದಲ್ಲಿ ಕೆಲಸ ಆರಂಭಿಸಿ ವರ್ಷಗಳೇ ಕಳೆದಿವೆ.

ಉದ್ಯೋಗ ಸೃಷ್ಟಿ ಬಗ್ಗೆ ಎರಡೇ ವಾಕ್ಯದಲ್ಲಿ ಕೌಶಲ್ಯ ವೃದ್ಧಿ ಬಗ್ಗೆ ನಿವಾಳಿಸಿ ಉದ್ಯಮಪತಿಗಳಿಗೆ ಸಾಲ ಯೋಜನೆ ವಿಸ್ತರಿಸಲಾಗುವುದು ಎನ್ನುತ್ತೆ ಈ ಪ್ರಣಾಳಿಕೆ. ಅದಕ್ಕೆ ಅಡಿಗೆರೆಯಾಗಿ ಮುದ್ರಾ ಯೋಜನೆಯಲ್ಲಿ 17 ಕೋಟಿ ಮಂದಿ ಸಾಲ ಪಡೆದಿದ್ದಾರೆ ಎನ್ನುತ್ತೆ. ಇದೇ ರೀತಿ ಮುಂದುವರಿದರೆ ಇನ್ನೈದು ವರ್ಷದಲ್ಲಿ ನೂರು ಕೋಟಿ ಮಂದಿ ಉದ್ಯಮಪತಿಗಳಾಗುವುದು ಖಚಿತ. ಅಲ್ಲಿಗೆ ಬಡತನ ನಿರ್ಮೂಲನವಾದಂತೆ.

ಜನಕಲ್ಯಾಣದ ಕಾಳಜಿ ಕುರಿತಂತೆ ಮೋದಿಯ ಅಸೀಮ ಉಡಾಫೆ ಕಾಣಿಸುವುದು ಅಪೌಷ್ಟಿಕತೆಯ ನಿವಾರಣೆಯ ಘೋಷಣೆಯಲ್ಲಿ. ಈ ದೇಶದ ಅರ್ಧಕ್ಕರ್ಧ ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಕಾಲಕಾಲದ ಅಧ್ಯಯನಗಳು ಹೇಳುತ್ತಲೇ ಬಂದಿವೆ. ಈ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಇರ ಪ್ರಮಾಣವನ್ನು ಶೇ.10ರಷ್ಟು ಇಳಿಸಲಾಗುವುದು ಎಂಬ ಬರೋಬ್ಬರಿ ಹೇಳಿಕೆ ಇದೆ. ಇದರಿಂದಾಚೆ ಮಾತಾಡಲು ಏನೂ ಇಲ್ಲ!!

ರಾಮಮಂದಿರದಿಂದ ಹಿಡಿದು ನೂರಾರು ‘ಕಟ್ಟುವ ಮಾಡುವ’ ಮಾತುಗಳಿವೆ. ಇದನ್ನೆಲ್ಲಾ ಗಂಭೀರವಾಗಿ ತೆಗೆದುಕೊಳ್ಳುವ ಪ್ರಮೇಯ ಇಲ್ಲ ಅನ್ನಿಸುತ್ತೆ . ಯಾಕೆಂದರೆ ಸ್ವತಃ ಭಾಜಪಕ್ಕೇ ಈ ಬಗ್ಗೆ ನಂಬಿಕೆ ಇದ್ದಂತಿಲ್ಲ!!
ಇಡೀ ಪ್ರಣಾಳಿಕೆಯ ಕಳಶಪ್ರಾಯ ವಾಕ್ಯವೆಂದರೆ ಭ್ರಷ್ಟಾಚಾರ ಮುಕ್ತ ಭಾರತ ಎಂಬ ವಾಕ್ಯ!! ಕರ್ನಾಟಕದ ಆಪರೇಷನ್ ಕಮಲ, ಪಂಕಜಾ ಮುಂದೆಯವರ ಹಗರಣಗಳೆಲ್ಲಾ ಇದರಡಿ ಬರುವುದಿಲ್ಲ!!

ಗಮನಿಸಬೇಕಾದ್ದು ಈ ಪ್ರಣಾಳಿಕೆಯ ಒಳ ವಿವರಗಳನ್ನಲ್ಲ. ಪ್ರಣಾಲಿಕೆಯ ಮುಖ ಪುಟವನ್ನು ಗಮನಿಸಿದರೆ ಭಾಜಪ ತಲುಪಿರುವ ರಸಾತಳ ಗೊತ್ತಾಗುತ್ತದೆ. ಗಡದ್ದಾಗಿ ಪೋಸು ಕೊಟ್ಟಿರುವ ಮೋದಿ ಬಿಟ್ಟರೆ ಇನ್ನೇನು ಇಲ್ಲ! ಕಾಮ್ ಚೋರ್ ಪಕ್ಷವೊಂದು ಢಾಳಾಗಿ ಸಾಧನೆಯ ಸುಳ್ಳುಗಳನ್ನು ಕಣ್ಣು ಕೋರೈಸುವಂತೆ ಬಿತ್ತರಿಸುತ್ತಾ ಇರುವುದೇ ತನ್ನ ಕುಸಿದ ಆತ್ಮವಿಶ್ವಾಸದ ಕುರುಹು. ಈ ಪ್ರಣಾಳಿಕೆ ಅದರ ತಪ್ಪೊಪ್ಪಿಗೆಯಂತೆ ಇದೆ.

ಈ ಪ್ರಣಾಳಿಕೆಯನ್ನು ಹಾಳೆಯ ಎರಡೂ ಬದಿ ಮುದ್ರಿಸಿರುವ ಬಗ್ಗೆ ನನ್ನ ಆಕ್ಷೇಪ ಇದೆ. ಒಂದೇ ಪುಟ ಮುದ್ರಿಸಿದ್ದರೆ ನೋಟ್ ಬುಕ್ಕಾಗಿ ಬಳಸಬಹುದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...