Homeಅಂಕಣಗಳುಭಾಜಪದ ಪ್ರಣಾಳಿಕೆ ನೋಡಿದರೆ ಮ್ಯಾಜಿಕ್ ಸ್ಲೇಟ್ ನೆನಪಾಗುತ್ತೆ.

ಭಾಜಪದ ಪ್ರಣಾಳಿಕೆ ನೋಡಿದರೆ ಮ್ಯಾಜಿಕ್ ಸ್ಲೇಟ್ ನೆನಪಾಗುತ್ತೆ.

- Advertisement -
- Advertisement -

| ಕೆ.ಪಿ ಸುರೇಶ್ |

ಭಾಜಪದ ಪ್ರಣಾಳಿಕೆ ನೋಡಿದರೆ ಮ್ಯಾಜಿಕ್ ಸ್ಲೇಟ್ ನೆನಪಾಗುತ್ತೆ. ಬರೆದಿದ್ದು ನೋಡಿ ಶೀಟ್ ಎತ್ತಿದರೆ ಖಾಲಿ ಶೀಟ್!!

ಈ ದೇಶದ ಯಾವ ಸಮಸ್ಯೆಯನ್ನೂ ಬಿಡದೇ ಅದರ ಪರಿಹಾರಕ್ಕೆ ತನ್ನಲ್ಲಿ ಮೂಲಿಕೆ ಇದೆ ಎಂಬಂತೆ ಪ್ರಣಾಳಿಕೆಯ ಆರಂಭದಲ್ಲಿ ಹೇಳಲಾಗಿದೆ. ಕೆಲವು ವಿವರ ನೋಡಿ:
ರಕ್ಷಣಾ ವಿಷಯದಲ್ಲಿ ಸ್ವಾವಲಂಬಿ ಆಗಲು ಎಕೆ 203ನ್ನು ನಮ್ಮ ದೇಶದಲ್ಲೇ ತಯಾರು ಮಾಡುತ್ತಿದ್ದೇವೆ ಎಂಬ ಹೇಳಿಕೆ ಇದೆ. ಇದರ ಹಿಂದೆ ರಾಫೇಲ್ ಯವಾರದ ವ್ಯಂಗ್ಯ ಹಲ್ಲು ಕಿರಿದರೆ ಮೋದಿಯ ತಪ್ಪೆಂದು ಹೇಳಬೇಡಿ!! ಮಾತು ವೈಯ್ಯಾರವಾಗುವುದು ಹೀಗೆ.
ರೈತರಿಗೆ ಒಂದು ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಎನ್ನಲಾಗಿದೆ. ಅದರ ಜೊತೆಗೆ ‘ಅಸಲು ಕಟ್ಟಿದರೆ’ ಎಂಬ ಕುಂಟು ಪಂಕ್ತಿ..

2022ರ ಒಳಗೆ ಎಲ್ಲರಿಗೂ ಮನೆ, 2024ರ ಒಳಗೆ ಎಲ್ಲರಿಗೂ ನಲ್ಲಿ ನೀರು ಎಂಬ ಆಶ್ವಾಸನೆ ಇದೆ. ಇದೇ ಮೋದಿ ಸರ್ಕಾರ ಕುಡಿಯುವ ನೀರಿನ ಅನುದಾನಕ್ಕೆ ಕತ್ತರಿ ಹಾಕಿದ್ದು ಈ ಪ್ರಣಾಳಿಕೆಯಲ್ಲಿ ಇಲ್ಲ! ಮನೆ ಕಟ್ಟಿಸುವ ಪ್ರಗತಿ ಉತ್ತರದ ಭಾರತದ ರಾಜ್ಯಗಳಲ್ಲಿ ಶೇ.10ರಷ್ಟೂ ಪ್ರಗತಿಯಾಗಿಲ್ಲ ಎಂಬ ವರದಿ ಇತ್ತೀಚೆಗೆ ಬಂದಿತ್ತು. ಅದು ಈ ಪ್ರಣಾಳಿಕೆಯಲ್ಲಿ ಇಲ್ಲ!!

ಸಾವಯವ ಕೃಷಿಗೆ ಒತ್ತು ಎಂಬಲ್ಲಿ ಇಕೋ ಟೂರಿಸಂ ಮೂಲಕ ರೈತರ ಆದಾಯ ವೃದ್ಧಿಗೆ ಕ್ರಮ ಎಂಬ ವಾಕ್ಯ ಇದೆ. ಮಜಾ ಎಂದರೆ ಇದು ಹತ್ತು ವರ್ಷ ಹಿಂದಿನ ಕಾರ್ಯಕ್ರಮ. ಕರ್ನಾಟಕದ ಸಾವಯವ ಮಿಷನ್ ಮೂಲಕ ಇದನ್ನು ಜಾರಿ ಮಾಡುವ ಯತ್ನ ನಡೆದಿತ್ತು. ಮೋದಿ ಮತ್ತೆ ಯುಪಿಎ ಕಾರ್ಯಕ್ರಮವನ್ನು ಕದ್ದು ಹೆಸರು ಅಳಿಸಿ ಮಾರುವ ಯತ್ನ ಮುಂದುವರೆಸಿರುವುದಕ್ಕೆ ಇದು ಒಂದು ಉದಾಹರಣೆ.

ಪ್ರಣಾಳಿಕೆಯ ಆಷಾಡಭೂತಿತನ ಮುಖಕ್ಕೆ ರಾಚುವುದು ‘ಪಾರದರ್ಶಕ ಆರ್ಥಿಕತೆ ‘ ಎಂಬ ಸೆಕ್ಷನ್ನಿನಲ್ಲಿ. ಬೇನಾಮಿ ಆಸ್ತಿ ಮೇಲೆ ಪ್ರಹಾರ ಮಾಡುತ್ತೇವೆ, ಓಡಿ ಹೋಗಿರುವ ಆರ್ಥಿಕ ಅಪರಾಧಿಗಳನ್ನು ವಾಪಾಸು ತರಿಸುತ್ತೇವೆ’ ಎಂಬ ಆಶ್ವಾಸನೆ ಬೇರೆ ಇದೆ. ನೋಟು ರದ್ಧತಿ ಆದಾಗಲೇ ಐನೂರು ಕೋಟಿ ವೆಚ್ಚ ಮಾಡಿದ ರೆಡ್ಡಿಯಂಥವರು ದೇಶ ಬಿಟ್ಟು ಓಡಿ ಹೊಗುವ ಅಗತ್ಯವೇ ಇಲ್ಲದಷ್ಟು ನಿರಾಮಯವಾಗಿದ್ದಾರೆ. ಸಾಕಲ್ಲ!!

ಮುಖ್ಯತಃ ಗ್ರಾಮೀಣ, ಆದಿವಾಸಿ ಬದುಕು ಹಸನು ಮಾಡುವ ಕಾರ್ಯಕ್ರಮಗಳೆಲ್ಲಾ ಕೇವಲ ಹೇಳಿಕೆಯ ಮಟ್ಟದಲ್ಲಿವೆ. ತೋರಿಸಿರುವ ಗುರಿಯೂ ಪುಗಸಟ್ಟೆ ಕಿವಿಗೆ ಹೂವು.

ಅದೇ ಮೂಲ ಸಂರಚನೆ ಅಭಿವೃದ್ಧಿಗೆ 100 ಲಕ್ಷ ಕೋಟಿ ಮುಂದಿನ ವರ್ಷಗಳಲ್ಲಿ ಮೀಸಲಿಡಲಾಗುವುದು ಎನ್ನುತ್ತದೆ ಈ ಪ್ರಣಾಳಿಕೆ. ಕೋಟಿ ಕೋಟಿಗೆ ಎಷ್ಟು ಸೊನ್ನೆ ಅಂತ ಸ್ವತಃ ಮೋದಿಯವರಲ್ಲಿ ಕೇಳಬೇಕೇನೋ. ಭಾರತ ಸರ್ಕಾರದ ಆದಾಯ 25 ಲಕ್ಷ ಕೋಟಿ. ಅದರಲ್ಲೂ ಒಂದು ಭಾಗ ಸಾಲ!! ಅಂಥಾದ್ದರಲ್ಲಿ 100 ಲಕ್ಷ ಕೋಟಿ ಅಂತ ಹೇಳಲು ಯಮಗುಂಡಿಗೆ ಬೇಕು.

1.5 ಲಕ್ಷ ಆರೊಗ್ಯ ಕೇಂದ್ರಗಳನ್ನು ಮುಂದಿನ ಐದು ವರ್ಷಗಳಲ್ಲಿ ಸ್ಥಾಪಿಸಲಾಗುವುದು ಎನ್ನುವ ಈ ಪ್ರಣಾಳಿಕೆ ಈ ವರೆಗೆ ಕೇವಲ 17 ಸಾವಿರ ಇಂಥಾ ಕೇಂದ್ರಗಳನ್ನು ಸ್ಥಾಪಿಸಿರುವುದನ್ನೂ ದಾಖಲಿಸಿದೆ. ಅಂದರೆ ಈ ಟ್ರಾಕ್ ರೆಕಾರ್ಡ್ ಹೊಂದಿರುವ ಸರ್ಕಾರ ಇನ್ನು ಮುಂದೆ ಪ್ರತಿ ವರ್ಷ 30 ಸಾವಿರ ಇಂಥಾ ಕೇಂದ್ರ ಸ್ಥಾಪಿಸುವ ಭರವಸೆಯನ್ನು ನಾವು ನಂಬಬೇಕು.

ಭಾರತದಲ್ಲಿ ವರ್ಷಕ್ಕೆ 25 ಲಕ್ಷ ಜನ ಕ್ಷಯ ರೋಗಕ್ಕೆ ತುತ್ತಾಗಿ 3 ಲಕ್ಷ ಮಂದಿ ಸಾವನ್ನಪ್ಪುತ್ತಾರೆ. ಜಗತ್ತಿನಲ್ಲೇ ಇದು ಅತ್ಯಂತ ಹೆಚ್ಚು. ಈಗ ಪ್ರಣಾಳಿಕೆ 2015ರ ಒಳಗೆ ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದಾಗಿ ಹೇಳಿದೆ. ಹೇಗೆಂದು ಕೇಳುವಂತಿಲ್ಲ!!

ಯುಪಿಎ ಕಾರ್ಯಕ್ರಮವನ್ನು ಕಾಪಿಚೀಟಿ ಮಾಡುವ ಚಾಳಿ ಎಷ್ಟರ ಮಟ್ಟಿಗೆ ಎಂದರೆ ಶಿಕ್ಷಣದಲ್ಲಿ ಜ್ಞಾನ ಪ್ರಸರಣಕ್ಕೆ ಅನುವಾದ ಮಿಷನ್ ಒಂದನ್ನು ಸ್ಥಾಪಿಸಲಾಗುವುದು ಎಂದು ಈ ಪ್ರಣಾಳಿಕೆ ಹೇಳಿದೆ. ಮೂಲತಃ ಏನನ್ನೂ ಈ ಭಾಜಪ ಮಂದಿ ಓದಿರುವ ದಾಖಲೆ ಇಲ್ಲದ ಕಾರಣ ಇದು ಸ್ವಾಗತಾರ್ಹ. ಆದರೆ ಈ ಮಿಷನ್ ಈಗಾಗಲೇ ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನದ ಮಾರ್ಗದರ್ಶನದಲ್ಲಿ ಕೆಲಸ ಆರಂಭಿಸಿ ವರ್ಷಗಳೇ ಕಳೆದಿವೆ.

ಉದ್ಯೋಗ ಸೃಷ್ಟಿ ಬಗ್ಗೆ ಎರಡೇ ವಾಕ್ಯದಲ್ಲಿ ಕೌಶಲ್ಯ ವೃದ್ಧಿ ಬಗ್ಗೆ ನಿವಾಳಿಸಿ ಉದ್ಯಮಪತಿಗಳಿಗೆ ಸಾಲ ಯೋಜನೆ ವಿಸ್ತರಿಸಲಾಗುವುದು ಎನ್ನುತ್ತೆ ಈ ಪ್ರಣಾಳಿಕೆ. ಅದಕ್ಕೆ ಅಡಿಗೆರೆಯಾಗಿ ಮುದ್ರಾ ಯೋಜನೆಯಲ್ಲಿ 17 ಕೋಟಿ ಮಂದಿ ಸಾಲ ಪಡೆದಿದ್ದಾರೆ ಎನ್ನುತ್ತೆ. ಇದೇ ರೀತಿ ಮುಂದುವರಿದರೆ ಇನ್ನೈದು ವರ್ಷದಲ್ಲಿ ನೂರು ಕೋಟಿ ಮಂದಿ ಉದ್ಯಮಪತಿಗಳಾಗುವುದು ಖಚಿತ. ಅಲ್ಲಿಗೆ ಬಡತನ ನಿರ್ಮೂಲನವಾದಂತೆ.

ಜನಕಲ್ಯಾಣದ ಕಾಳಜಿ ಕುರಿತಂತೆ ಮೋದಿಯ ಅಸೀಮ ಉಡಾಫೆ ಕಾಣಿಸುವುದು ಅಪೌಷ್ಟಿಕತೆಯ ನಿವಾರಣೆಯ ಘೋಷಣೆಯಲ್ಲಿ. ಈ ದೇಶದ ಅರ್ಧಕ್ಕರ್ಧ ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಕಾಲಕಾಲದ ಅಧ್ಯಯನಗಳು ಹೇಳುತ್ತಲೇ ಬಂದಿವೆ. ಈ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಇರ ಪ್ರಮಾಣವನ್ನು ಶೇ.10ರಷ್ಟು ಇಳಿಸಲಾಗುವುದು ಎಂಬ ಬರೋಬ್ಬರಿ ಹೇಳಿಕೆ ಇದೆ. ಇದರಿಂದಾಚೆ ಮಾತಾಡಲು ಏನೂ ಇಲ್ಲ!!

ರಾಮಮಂದಿರದಿಂದ ಹಿಡಿದು ನೂರಾರು ‘ಕಟ್ಟುವ ಮಾಡುವ’ ಮಾತುಗಳಿವೆ. ಇದನ್ನೆಲ್ಲಾ ಗಂಭೀರವಾಗಿ ತೆಗೆದುಕೊಳ್ಳುವ ಪ್ರಮೇಯ ಇಲ್ಲ ಅನ್ನಿಸುತ್ತೆ . ಯಾಕೆಂದರೆ ಸ್ವತಃ ಭಾಜಪಕ್ಕೇ ಈ ಬಗ್ಗೆ ನಂಬಿಕೆ ಇದ್ದಂತಿಲ್ಲ!!
ಇಡೀ ಪ್ರಣಾಳಿಕೆಯ ಕಳಶಪ್ರಾಯ ವಾಕ್ಯವೆಂದರೆ ಭ್ರಷ್ಟಾಚಾರ ಮುಕ್ತ ಭಾರತ ಎಂಬ ವಾಕ್ಯ!! ಕರ್ನಾಟಕದ ಆಪರೇಷನ್ ಕಮಲ, ಪಂಕಜಾ ಮುಂದೆಯವರ ಹಗರಣಗಳೆಲ್ಲಾ ಇದರಡಿ ಬರುವುದಿಲ್ಲ!!

ಗಮನಿಸಬೇಕಾದ್ದು ಈ ಪ್ರಣಾಳಿಕೆಯ ಒಳ ವಿವರಗಳನ್ನಲ್ಲ. ಪ್ರಣಾಲಿಕೆಯ ಮುಖ ಪುಟವನ್ನು ಗಮನಿಸಿದರೆ ಭಾಜಪ ತಲುಪಿರುವ ರಸಾತಳ ಗೊತ್ತಾಗುತ್ತದೆ. ಗಡದ್ದಾಗಿ ಪೋಸು ಕೊಟ್ಟಿರುವ ಮೋದಿ ಬಿಟ್ಟರೆ ಇನ್ನೇನು ಇಲ್ಲ! ಕಾಮ್ ಚೋರ್ ಪಕ್ಷವೊಂದು ಢಾಳಾಗಿ ಸಾಧನೆಯ ಸುಳ್ಳುಗಳನ್ನು ಕಣ್ಣು ಕೋರೈಸುವಂತೆ ಬಿತ್ತರಿಸುತ್ತಾ ಇರುವುದೇ ತನ್ನ ಕುಸಿದ ಆತ್ಮವಿಶ್ವಾಸದ ಕುರುಹು. ಈ ಪ್ರಣಾಳಿಕೆ ಅದರ ತಪ್ಪೊಪ್ಪಿಗೆಯಂತೆ ಇದೆ.

ಈ ಪ್ರಣಾಳಿಕೆಯನ್ನು ಹಾಳೆಯ ಎರಡೂ ಬದಿ ಮುದ್ರಿಸಿರುವ ಬಗ್ಗೆ ನನ್ನ ಆಕ್ಷೇಪ ಇದೆ. ಒಂದೇ ಪುಟ ಮುದ್ರಿಸಿದ್ದರೆ ನೋಟ್ ಬುಕ್ಕಾಗಿ ಬಳಸಬಹುದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...