Homeಮುಖಪುಟಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯಾನ್

ಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್

- Advertisement -
- Advertisement -

ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ-2010 (ಎಫ್‌ಸಿಆರ್‌ಎ) ಯನ್ನು ‘ಆಯುಧ’ವನ್ನಾಗಿ ಮಾಡುತ್ತಿರುವ ಬಗ್ಗೆ, ಮಣಿಪುರದ ಜನರು ನಿರ್ಲಕ್ಷಕ್ಕೆ ಒಳಗಾಗುತ್ತಿರುವುದು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ನರೇಂದ್ರ ಮೋದಿ ಸರ್ಕಾರಕ್ಕೆ ‘ಕಠಿಣ ಪ್ರಶ್ನೆಗಳನ್ನು’ ಕೇಳಬೇಕು ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಶುಕ್ರವಾರ ಹೇಳಿದ್ದಾರೆ.  ಕ್ರಿಶ್ಚಿಯನ್ನರ ಬಗ್ಗೆ

ದೆಹಲಿಯಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ಕೆಲವು ದಿನಗಳ ನಂತರ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಶುಕ್ರವಾರದ ಬ್ಲಾಗ್ ಪೋಸ್ಟ್‌ನಲ್ಲಿ, ಓ’ಬ್ರಿಯಾನ್ ಅವರು ಕ್ರಿಶ್ಚಿಯನ್ ಸಮುದಾಯವು ಕೇಂದ್ರ ಸರ್ಕಾರದ ಜೊತೆಗೆ ತಮ್ಮ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ನರ ಬಗ್ಗೆ

“ಇವು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಬೇಕಾದ ಕಠಿಣ ಪ್ರಶ್ನೆಗಳಾಗಿವೆ. ಅನೇಕ ಕ್ರಿಸ್‌ಮಸ್‌ಗಳು ಕಳೆದಿವೆ, ಈಗ ಉತ್ತರಗಳನ್ನು ಕೇಳಬೇಕಾಗಿದೆ” ಎಂದು ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರೂ ಆಗಿರುವ ಓ`ಬ್ರಿಯಾನ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಕ್ರಿಸ್‌ಮಸ್ ದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಮಾಡಲು ಏಕೆ ಪ್ರಯತ್ನಿಸಿದ್ದೀರಿ? ನೀವು ನಿರ್ದಿಷ್ಟವಾಗಿ ಕ್ರಿಶ್ಚಿಯನ್ ಸಮುದಾಯದಿಂದ ನಡೆಸಲ್ಪಡುವ ಸಂಸ್ಥೆಗಳನ್ನು ಗುರಿಯಾಗಿಸಲು ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ (ಎಫ್‌ಸಿಆರ್‌ಎ) ಅನ್ನು ಏಕೆ ಅಸ್ತ್ರಗೊಳಿಸುತ್ತಿದ್ದೀರಿ?,” ಎಂದು ಅವರು ಕೇಳಿದ್ದಾರೆ.

“ನೀವು ಮಣಿಪುರದ ಜನರನ್ನು ಏಕೆ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದೀರಿ? ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ , ಮಧ್ಯಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಉತ್ತರಾಖಂಡ, ರಾಜಸ್ಥಾನಗಳಲ್ಲಿ ಸಂವಿಧಾನದ 14, 15 ಮತ್ತು 25 ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಮತಾಂತರ ವಿರೋಧಿ ಕಾನೂನುಗಳನ್ನು ನೀವು ಏಕೆ ಪ್ರೋತ್ಸಾಹಿಸುತ್ತಿದ್ದೀರಿ?” ಎಂದು ಅವರು ಕೇಳಿದ್ದಾರೆ.

ಸರ್ಕಾರವು ವಕ್ಫ್ ಮಸೂದೆಯನ್ನು ಮುಂದಕ್ಕೆ ತರುತ್ತಿದ್ದು, ವಿಶೇಷವಾಗಿ ಕೇರಳದಲ್ಲಿ ‘ಅಲ್ಪಸಂಖ್ಯಾತ ವರ್ಸಸ್ ಅಲ್ಪಸಂಖ್ಯಾತ ಎಂದು ಆಟವಾಡುತ್ತಿದೆ ಎಂದು ಅವರು ಕೇಳಿದ್ದಾರೆ. “ದ್ವೇಷ ಭಾಷಣಗಳು ಮತ್ತು ಕಟ್ಟಾ ಕೋಮು ದೂಷಣೆಗಳನ್ನು ಖಂಡಿಸುವ ಒಂದು ಪದವನ್ನು ನೀವು ಏಕೆ ಹೇಳುವುದಿಲ್ಲ?” ಅವರು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರು ನಡೆಸುವ ಸಂಸ್ಥೆಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಅವರು ಆರೋಪಿಸಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದ ಘಟನೆಗಳು ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.  “ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು 2014 ರಿಂದ ಎರಡು ಬಾರಿ ವಿಶ್ವಸಂಸ್ಥೆಯ ಮಾನ್ಯತೆಯನ್ನು ಏಕೆ ಕಳೆದುಕೊಂಡಿತು? ನಿಮಗೆ ಫಾದರ್ ಸ್ಟಾನ್ ಸ್ವಾಮಿ ನೆನಪಿದೆಯೇ? ಸಿಪ್ಪರ್? ಸ್ಟ್ರಾ? ಸಾವು?” ಅವರು ಕೇಳಿದ್ದಾರೆ.

84 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಆಗಿದ್ದ ಸ್ಟಾನ್ ಸ್ವಾಮಿ ಅವರು ಜೈಲಿನಲ್ಲೆ ಕೊರೊನಾ ಸೋಂಕಿಗೆ ಒಳಗಾಗಿ ಹೃದಯ ಸ್ತಂಭನದಿಂದ ಜುಲೈ 2021 ರಲ್ಲಿ ನಿಧನರಾಗಿದ್ದರು. ಅವರನ್ನು ಅಕ್ಟೋಬರ್ 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು ಮತ್ತು ಅವರು ಎಂಟು ತಿಂಗಳುಗಳನ್ನು ಮುಂಬೈ ಜೈಲಿನಲ್ಲಿ ಕಳೆದಿದ್ದರು. ಈ ವೇಳೆ ಅವರಿಗೆ ವೈದ್ಯಕೀಯ ಕಾರಣಕ್ಕೂ ಕೂಡಾ ಹಲವು ಬಾರಿ ಜಾಮೀನು ನಿರಾಕರಿಸಲಾಗಿತ್ತು. ಕೈಕಾಲು ನಡುಗುವ ರೋಗವಾದ ಪಾರ್ಕಿಸನ್ ಕಾರಣಕ್ಕೆ ಅವರಿಗೆ ಕೈಯ್ಯಲ್ಲಿ ಆಹಾರ ಸೇವಿಸಲು ಕಷ್ಟವಾಗಿತ್ತು. ಹಾಗಾಗಿ ಅವರಿಗೆ ಆಹಾರ ಸೇವಿಸಲು ಸ್ಟ್ರಾ ನೀಡಲು ಕೂಡಾ ಅನುಮತಿಯನ್ನು ನಿರಾಕರಿಸಲಾಗಿತ್ತು.

“ಸಂವಿಧಾನವನ್ನು ರಕ್ಷಿಸದವರನ್ನು ಎತ್ತಿತೋರಿಸುವ ಬಗ್ಗೆ ಕ್ರಿಶ್ಚಿಯನ್ ನಾಯಕತ್ವವು ನಿಲುವು ತೆಗೆದುಕೊಳ್ಳಬೇಕು” ಎಂದು ಡೆರೆಕ್ ಒ`ಬ್ರಿಯಾನ್ ಹೇಳಿದ್ದಾರೆ. ಕ್ರಿಸ್‌ಮಸ್‌ಗೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಸಿಬಿಸಿಐ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಮೋದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...