Homeಮುಖಪುಟಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯಾನ್

ಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್

- Advertisement -
- Advertisement -

ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ-2010 (ಎಫ್‌ಸಿಆರ್‌ಎ) ಯನ್ನು ‘ಆಯುಧ’ವನ್ನಾಗಿ ಮಾಡುತ್ತಿರುವ ಬಗ್ಗೆ, ಮಣಿಪುರದ ಜನರು ನಿರ್ಲಕ್ಷಕ್ಕೆ ಒಳಗಾಗುತ್ತಿರುವುದು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ನರೇಂದ್ರ ಮೋದಿ ಸರ್ಕಾರಕ್ಕೆ ‘ಕಠಿಣ ಪ್ರಶ್ನೆಗಳನ್ನು’ ಕೇಳಬೇಕು ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಶುಕ್ರವಾರ ಹೇಳಿದ್ದಾರೆ.  ಕ್ರಿಶ್ಚಿಯನ್ನರ ಬಗ್ಗೆ

ದೆಹಲಿಯಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ಕೆಲವು ದಿನಗಳ ನಂತರ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಶುಕ್ರವಾರದ ಬ್ಲಾಗ್ ಪೋಸ್ಟ್‌ನಲ್ಲಿ, ಓ’ಬ್ರಿಯಾನ್ ಅವರು ಕ್ರಿಶ್ಚಿಯನ್ ಸಮುದಾಯವು ಕೇಂದ್ರ ಸರ್ಕಾರದ ಜೊತೆಗೆ ತಮ್ಮ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ನರ ಬಗ್ಗೆ

“ಇವು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಬೇಕಾದ ಕಠಿಣ ಪ್ರಶ್ನೆಗಳಾಗಿವೆ. ಅನೇಕ ಕ್ರಿಸ್‌ಮಸ್‌ಗಳು ಕಳೆದಿವೆ, ಈಗ ಉತ್ತರಗಳನ್ನು ಕೇಳಬೇಕಾಗಿದೆ” ಎಂದು ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರೂ ಆಗಿರುವ ಓ`ಬ್ರಿಯಾನ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಕ್ರಿಸ್‌ಮಸ್ ದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಮಾಡಲು ಏಕೆ ಪ್ರಯತ್ನಿಸಿದ್ದೀರಿ? ನೀವು ನಿರ್ದಿಷ್ಟವಾಗಿ ಕ್ರಿಶ್ಚಿಯನ್ ಸಮುದಾಯದಿಂದ ನಡೆಸಲ್ಪಡುವ ಸಂಸ್ಥೆಗಳನ್ನು ಗುರಿಯಾಗಿಸಲು ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ (ಎಫ್‌ಸಿಆರ್‌ಎ) ಅನ್ನು ಏಕೆ ಅಸ್ತ್ರಗೊಳಿಸುತ್ತಿದ್ದೀರಿ?,” ಎಂದು ಅವರು ಕೇಳಿದ್ದಾರೆ.

“ನೀವು ಮಣಿಪುರದ ಜನರನ್ನು ಏಕೆ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದೀರಿ? ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ , ಮಧ್ಯಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಉತ್ತರಾಖಂಡ, ರಾಜಸ್ಥಾನಗಳಲ್ಲಿ ಸಂವಿಧಾನದ 14, 15 ಮತ್ತು 25 ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಮತಾಂತರ ವಿರೋಧಿ ಕಾನೂನುಗಳನ್ನು ನೀವು ಏಕೆ ಪ್ರೋತ್ಸಾಹಿಸುತ್ತಿದ್ದೀರಿ?” ಎಂದು ಅವರು ಕೇಳಿದ್ದಾರೆ.

ಸರ್ಕಾರವು ವಕ್ಫ್ ಮಸೂದೆಯನ್ನು ಮುಂದಕ್ಕೆ ತರುತ್ತಿದ್ದು, ವಿಶೇಷವಾಗಿ ಕೇರಳದಲ್ಲಿ ‘ಅಲ್ಪಸಂಖ್ಯಾತ ವರ್ಸಸ್ ಅಲ್ಪಸಂಖ್ಯಾತ ಎಂದು ಆಟವಾಡುತ್ತಿದೆ ಎಂದು ಅವರು ಕೇಳಿದ್ದಾರೆ. “ದ್ವೇಷ ಭಾಷಣಗಳು ಮತ್ತು ಕಟ್ಟಾ ಕೋಮು ದೂಷಣೆಗಳನ್ನು ಖಂಡಿಸುವ ಒಂದು ಪದವನ್ನು ನೀವು ಏಕೆ ಹೇಳುವುದಿಲ್ಲ?” ಅವರು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರು ನಡೆಸುವ ಸಂಸ್ಥೆಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಅವರು ಆರೋಪಿಸಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದ ಘಟನೆಗಳು ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.  “ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು 2014 ರಿಂದ ಎರಡು ಬಾರಿ ವಿಶ್ವಸಂಸ್ಥೆಯ ಮಾನ್ಯತೆಯನ್ನು ಏಕೆ ಕಳೆದುಕೊಂಡಿತು? ನಿಮಗೆ ಫಾದರ್ ಸ್ಟಾನ್ ಸ್ವಾಮಿ ನೆನಪಿದೆಯೇ? ಸಿಪ್ಪರ್? ಸ್ಟ್ರಾ? ಸಾವು?” ಅವರು ಕೇಳಿದ್ದಾರೆ.

84 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಆಗಿದ್ದ ಸ್ಟಾನ್ ಸ್ವಾಮಿ ಅವರು ಜೈಲಿನಲ್ಲೆ ಕೊರೊನಾ ಸೋಂಕಿಗೆ ಒಳಗಾಗಿ ಹೃದಯ ಸ್ತಂಭನದಿಂದ ಜುಲೈ 2021 ರಲ್ಲಿ ನಿಧನರಾಗಿದ್ದರು. ಅವರನ್ನು ಅಕ್ಟೋಬರ್ 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು ಮತ್ತು ಅವರು ಎಂಟು ತಿಂಗಳುಗಳನ್ನು ಮುಂಬೈ ಜೈಲಿನಲ್ಲಿ ಕಳೆದಿದ್ದರು. ಈ ವೇಳೆ ಅವರಿಗೆ ವೈದ್ಯಕೀಯ ಕಾರಣಕ್ಕೂ ಕೂಡಾ ಹಲವು ಬಾರಿ ಜಾಮೀನು ನಿರಾಕರಿಸಲಾಗಿತ್ತು. ಕೈಕಾಲು ನಡುಗುವ ರೋಗವಾದ ಪಾರ್ಕಿಸನ್ ಕಾರಣಕ್ಕೆ ಅವರಿಗೆ ಕೈಯ್ಯಲ್ಲಿ ಆಹಾರ ಸೇವಿಸಲು ಕಷ್ಟವಾಗಿತ್ತು. ಹಾಗಾಗಿ ಅವರಿಗೆ ಆಹಾರ ಸೇವಿಸಲು ಸ್ಟ್ರಾ ನೀಡಲು ಕೂಡಾ ಅನುಮತಿಯನ್ನು ನಿರಾಕರಿಸಲಾಗಿತ್ತು.

“ಸಂವಿಧಾನವನ್ನು ರಕ್ಷಿಸದವರನ್ನು ಎತ್ತಿತೋರಿಸುವ ಬಗ್ಗೆ ಕ್ರಿಶ್ಚಿಯನ್ ನಾಯಕತ್ವವು ನಿಲುವು ತೆಗೆದುಕೊಳ್ಳಬೇಕು” ಎಂದು ಡೆರೆಕ್ ಒ`ಬ್ರಿಯಾನ್ ಹೇಳಿದ್ದಾರೆ. ಕ್ರಿಸ್‌ಮಸ್‌ಗೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಸಿಬಿಸಿಐ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಮೋದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...