Homeಮುಖಪುಟಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯಾನ್

ಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್

- Advertisement -
- Advertisement -

ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ-2010 (ಎಫ್‌ಸಿಆರ್‌ಎ) ಯನ್ನು ‘ಆಯುಧ’ವನ್ನಾಗಿ ಮಾಡುತ್ತಿರುವ ಬಗ್ಗೆ, ಮಣಿಪುರದ ಜನರು ನಿರ್ಲಕ್ಷಕ್ಕೆ ಒಳಗಾಗುತ್ತಿರುವುದು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ನರೇಂದ್ರ ಮೋದಿ ಸರ್ಕಾರಕ್ಕೆ ‘ಕಠಿಣ ಪ್ರಶ್ನೆಗಳನ್ನು’ ಕೇಳಬೇಕು ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಶುಕ್ರವಾರ ಹೇಳಿದ್ದಾರೆ.  ಕ್ರಿಶ್ಚಿಯನ್ನರ ಬಗ್ಗೆ

ದೆಹಲಿಯಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ಕೆಲವು ದಿನಗಳ ನಂತರ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಶುಕ್ರವಾರದ ಬ್ಲಾಗ್ ಪೋಸ್ಟ್‌ನಲ್ಲಿ, ಓ’ಬ್ರಿಯಾನ್ ಅವರು ಕ್ರಿಶ್ಚಿಯನ್ ಸಮುದಾಯವು ಕೇಂದ್ರ ಸರ್ಕಾರದ ಜೊತೆಗೆ ತಮ್ಮ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ನರ ಬಗ್ಗೆ

“ಇವು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಬೇಕಾದ ಕಠಿಣ ಪ್ರಶ್ನೆಗಳಾಗಿವೆ. ಅನೇಕ ಕ್ರಿಸ್‌ಮಸ್‌ಗಳು ಕಳೆದಿವೆ, ಈಗ ಉತ್ತರಗಳನ್ನು ಕೇಳಬೇಕಾಗಿದೆ” ಎಂದು ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರೂ ಆಗಿರುವ ಓ`ಬ್ರಿಯಾನ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಕ್ರಿಸ್‌ಮಸ್ ದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಮಾಡಲು ಏಕೆ ಪ್ರಯತ್ನಿಸಿದ್ದೀರಿ? ನೀವು ನಿರ್ದಿಷ್ಟವಾಗಿ ಕ್ರಿಶ್ಚಿಯನ್ ಸಮುದಾಯದಿಂದ ನಡೆಸಲ್ಪಡುವ ಸಂಸ್ಥೆಗಳನ್ನು ಗುರಿಯಾಗಿಸಲು ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ (ಎಫ್‌ಸಿಆರ್‌ಎ) ಅನ್ನು ಏಕೆ ಅಸ್ತ್ರಗೊಳಿಸುತ್ತಿದ್ದೀರಿ?,” ಎಂದು ಅವರು ಕೇಳಿದ್ದಾರೆ.

“ನೀವು ಮಣಿಪುರದ ಜನರನ್ನು ಏಕೆ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದೀರಿ? ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ , ಮಧ್ಯಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಉತ್ತರಾಖಂಡ, ರಾಜಸ್ಥಾನಗಳಲ್ಲಿ ಸಂವಿಧಾನದ 14, 15 ಮತ್ತು 25 ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಮತಾಂತರ ವಿರೋಧಿ ಕಾನೂನುಗಳನ್ನು ನೀವು ಏಕೆ ಪ್ರೋತ್ಸಾಹಿಸುತ್ತಿದ್ದೀರಿ?” ಎಂದು ಅವರು ಕೇಳಿದ್ದಾರೆ.

ಸರ್ಕಾರವು ವಕ್ಫ್ ಮಸೂದೆಯನ್ನು ಮುಂದಕ್ಕೆ ತರುತ್ತಿದ್ದು, ವಿಶೇಷವಾಗಿ ಕೇರಳದಲ್ಲಿ ‘ಅಲ್ಪಸಂಖ್ಯಾತ ವರ್ಸಸ್ ಅಲ್ಪಸಂಖ್ಯಾತ ಎಂದು ಆಟವಾಡುತ್ತಿದೆ ಎಂದು ಅವರು ಕೇಳಿದ್ದಾರೆ. “ದ್ವೇಷ ಭಾಷಣಗಳು ಮತ್ತು ಕಟ್ಟಾ ಕೋಮು ದೂಷಣೆಗಳನ್ನು ಖಂಡಿಸುವ ಒಂದು ಪದವನ್ನು ನೀವು ಏಕೆ ಹೇಳುವುದಿಲ್ಲ?” ಅವರು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರು ನಡೆಸುವ ಸಂಸ್ಥೆಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಅವರು ಆರೋಪಿಸಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದ ಘಟನೆಗಳು ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.  “ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು 2014 ರಿಂದ ಎರಡು ಬಾರಿ ವಿಶ್ವಸಂಸ್ಥೆಯ ಮಾನ್ಯತೆಯನ್ನು ಏಕೆ ಕಳೆದುಕೊಂಡಿತು? ನಿಮಗೆ ಫಾದರ್ ಸ್ಟಾನ್ ಸ್ವಾಮಿ ನೆನಪಿದೆಯೇ? ಸಿಪ್ಪರ್? ಸ್ಟ್ರಾ? ಸಾವು?” ಅವರು ಕೇಳಿದ್ದಾರೆ.

84 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಆಗಿದ್ದ ಸ್ಟಾನ್ ಸ್ವಾಮಿ ಅವರು ಜೈಲಿನಲ್ಲೆ ಕೊರೊನಾ ಸೋಂಕಿಗೆ ಒಳಗಾಗಿ ಹೃದಯ ಸ್ತಂಭನದಿಂದ ಜುಲೈ 2021 ರಲ್ಲಿ ನಿಧನರಾಗಿದ್ದರು. ಅವರನ್ನು ಅಕ್ಟೋಬರ್ 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು ಮತ್ತು ಅವರು ಎಂಟು ತಿಂಗಳುಗಳನ್ನು ಮುಂಬೈ ಜೈಲಿನಲ್ಲಿ ಕಳೆದಿದ್ದರು. ಈ ವೇಳೆ ಅವರಿಗೆ ವೈದ್ಯಕೀಯ ಕಾರಣಕ್ಕೂ ಕೂಡಾ ಹಲವು ಬಾರಿ ಜಾಮೀನು ನಿರಾಕರಿಸಲಾಗಿತ್ತು. ಕೈಕಾಲು ನಡುಗುವ ರೋಗವಾದ ಪಾರ್ಕಿಸನ್ ಕಾರಣಕ್ಕೆ ಅವರಿಗೆ ಕೈಯ್ಯಲ್ಲಿ ಆಹಾರ ಸೇವಿಸಲು ಕಷ್ಟವಾಗಿತ್ತು. ಹಾಗಾಗಿ ಅವರಿಗೆ ಆಹಾರ ಸೇವಿಸಲು ಸ್ಟ್ರಾ ನೀಡಲು ಕೂಡಾ ಅನುಮತಿಯನ್ನು ನಿರಾಕರಿಸಲಾಗಿತ್ತು.

“ಸಂವಿಧಾನವನ್ನು ರಕ್ಷಿಸದವರನ್ನು ಎತ್ತಿತೋರಿಸುವ ಬಗ್ಗೆ ಕ್ರಿಶ್ಚಿಯನ್ ನಾಯಕತ್ವವು ನಿಲುವು ತೆಗೆದುಕೊಳ್ಳಬೇಕು” ಎಂದು ಡೆರೆಕ್ ಒ`ಬ್ರಿಯಾನ್ ಹೇಳಿದ್ದಾರೆ. ಕ್ರಿಸ್‌ಮಸ್‌ಗೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಸಿಬಿಸಿಐ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಮೋದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...