Homeಕರ್ನಾಟಕಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

- Advertisement -
- Advertisement -

ಸಚಿವ ಸಿ.ಪಿ. ಯೋಗೇಶ್ವರ್‌ ಅವರು ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಕಾಲು ಹಿಡಿದು, ಕಣ್ಣೀರಿಟ್ಟು ಗೋಗರೆದು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೇಳಿದ್ದಾರೆ.

“ಸಚಿವ ಸಿ.ಪಿ. ಯೋಗೇಶ್ವರ್‌ ಅವರು ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಕಾಲು ಹಿಡಿದು, ಕಣ್ಣೀರಿಟ್ಟು ಗೋಗರೆದು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಅವರು ಮೆಗಾ ಸಿಟಿ ಹಗರಣದಲ್ಲಿ ಎಷ್ಟೆಲ್ಲಾ ಹಗರಣ ಮಾಡಿದ್ದಾರೆ ಎಂದು ನನಗೆ ಗೊತ್ತಿಗೆ. ಹಾಗಾಗಿ ಯೋಗೇಶ್ವರ್‌ ಅವರನ್ನು ಮೊದಲು ಬಂಧಿಸಬೇಕು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ” ಎಂದು ರೇಣುಕಾಚಾರ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

“ಸಿ.ಪಿ. ಯೋಗೇಶ್ವರನ್ನು ಖಡಾ ಖಂಡಿತವಾಗಿ ಬಿಜೆಪಿ ಸಚಿವ ಎಂದು ನಾನು ಒಪ್ಪಿಕೊಳ್ಳೋದಿಲ್ಲ. ಎಲ್ಲಾ ಪಕ್ಷ ಸುತ್ತಾಡಿ ಬಂದಂತವನು ಅವನು. ಸಿಪಿ ಯೋಗೀಶ್ವರ್ ಮೆಗಾ ಸಿಟಿ ಹಗರಣದ 420 ಕಳ್ಳ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಲ್ಲಿ ನಾನು ನಿಷ್ಟಾವಂತ ಕಾರ್ಯಕರ್ತ. ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಅವನ್ಯಾರ್ ರೀ.. ನನ್ನ ಬಗ್ಗೆ ಮಾತನಾಡೋಕೆ.. ಅವನೇನ್ ಬಿಜೆಪಿ ಲೀಡರ್ ಆ..? ತಾಕತ್ತಿದ್ದರೇ ಬರಲಿ.. ನನ್ನ ಮುಂದೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಪಿ. ಯೊಗೇಶ್ವರ್‌‌ ಹಿಂಭಾಗಿಲಿನಿಂದ ಬಂದು ಸಚಿವ ಆಗಿರುವವರು. ಕೊರೊನಾ ಸೋಂಕಿನ ಸಂದರ್ಭದಲ್ಲಿ ನಾನು ಜನರ ಸೇವೆ ಮಾಡುತ್ತಿದ್ದೇನೆ. ಅವರು ಜನರ ಸೇವೆ ಮಾಡೋದು ಬಿಡ್ಡು ರಾಜಕೀಯ ಮಾಡುತ್ತಾ ಇದ್ದಾರೆ. ಅವನ ಹಾಗೇ ಬಿಟ್ಟಿಯಾಗಿ ನಾನು ಮಂತ್ರಿಯಾಗಿಲ್ಲ ಎಂದು ಯೋಗೇಶ್ವರ್‌ ವಿರುದ್ದ ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ: ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...