Homeಮುಖಪುಟಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯ: ಚುನಾವಣಾ ಆಯೋಗ

ಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯ: ಚುನಾವಣಾ ಆಯೋಗ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣಾ ಆಯೋಗದ ಸದಸ್ಯರಾಗಿದ್ದ ಅಶೋಕ್ ಲಾವಾಸರವರು ಮೋದಿ ಮತ್ತು ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಕ್ಲಿನ್ ಚಿಟ್ ನೀಡುವುದಕ್ಕೆ ಭಿನ್ನಾಭಿಪ್ರಾಯ ದಾಖಲಿಸಿದ್ದುದು ನಿಮಗೆ ಗೊತ್ತಿಗೆ. ಮೂರು ಜನರ ಸಮಿತಿಯಲ್ಲಿ ಒಬ್ಬರಾಗಿದ್ದ ಅವರು ಮೋದಿ-ಶಾರವರ ಸುಮಾರು 11 ಪ್ರಕರಣಗಳಿಗೆ ಕ್ಲಿನ್ ಚಿಟ್ ನೀಡುವುದಕ್ಕೆ ತಮ್ಮ ವಿರೋಧ ದಾಖಲಿಸಿ ನೋಟ್ ಬರೆದಿದ್ದರು.

ಆ ದಾಖಲೆಗಳನ್ನು ಮಾಹಿತಿ ಹಕ್ಕಿನಡಿ ನೀಡುವಂತೆ ಪುಣೆ ಮೂಲಕ ವಿಹಾರ್ ದೃವೆ ಎಂಬ ಆರ್.ಟಿ.ಐ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದೆ. ಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯವಿದೆ ಎಂದು ಚುನಾವಣಾ ಆಯೋಗ ಸ್ಪಷ್ಟೀಕರಣ ಸಹ ನೀಡಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮತ್ತು ಸದಸ್ಯರಾದ ಲವಾಸಾ ಮತ್ತು ಸುಶೀಲ್ ಚಂದ್ರರನ್ನು ಒಳಗೊಂಡ ಸಮಿತಿಯ ‘ಪೂರ್ಣ ಆಯೋಗ’ ವಿವಾದಾಸ್ಪದ ವಿಷಯಗಳ ಬಗ್ಗೆ ಚರ್ಚಿಸಿತ್ತು. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿದ್ದ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದರು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮಾತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ,`ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಮೋದಿಯವರು ಮಾಡಿದ ಭಾಷಣಗಳಿಗೆ ಸಂಬಂಧಿಸಿದ ಲಾವಸಾ ಅವರ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಕೋರಿರುವ ಪುಣೆ ಮೂಲದ ಆರ್‌ಟಿಐ ಕಾರ್ಯಕರ್ತ ವಿಹಾರ್ ದೃವೆಗೆ ನಿರಾಕರಿಸಿದೆ. ಮತ್ತು “ಯಾವುದೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಕಾನೂನು ಜಾರಿ ಅಥವಾ ಭದ್ರತಾ ಉದ್ದೇಶಗಳಿಗಾಗಿ ವಿಶ್ವಾಸದಿಂದ ನೀಡಲಾದ ಮಾಹಿತಿ ಅಥವಾ ಸಹಾಯದ ಮೂಲವನ್ನು ಗುರುತಿಸುವಂತಹ ಮಾಹಿತಿಯನ್ನು ಬಹಿರಂಗಪಡಿಸುವುದನ್ನು ವಿನಾಯಿತಿ ನೀಡುವ” ಆರ್‌ಟಿಐ ಕಾಯ್ದೆಯ ಒಂದು ವಿಭಾಗವನ್ನು ಚುನಾವಣಾ ಆಯೋಗ ಉಲ್ಲೇಖಿಸಿದೆ.

ಈ ಕುರಿತು ಪತ್ರಕರ್ತ ರವಿ ನಾಯರ್ ರವರು “ಚುನಾವಣಾ ಆಯೋಗ ಹೇಳುತ್ತಿರುವುದುನ್ನು ಸರಳೀಕರಿಸುವುದಾರೆ, ಮೋದಿ ಮತ್ತು ಷಾ ಅವರ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳಗೆ ಆಯೋಗ ಕೊಟ್ಟ ವೈಟ್‌ವಾಶ್ ಕುರಿತು ಲವಾಸಾ ಅವರ ಭಿನ್ನಾಭಿಪ್ರಾಯದ ಟಿಪ್ಪಣಿ ಪ್ರಕಟವಾದರೆ, ಸಂಬಂಧಪಟ್ಟ ಪಕ್ಷಗಳು ಅವನ ಜೀವಕ್ಕೆ ಅಪಾಯವನ್ನುಂಟು ಮಾಡಬಹುದು. ವಾವ್ ಎಂದು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಓಹ್! ವಿಷಯ ಹೀಗಿದೆ. ತಮ್ಮ ಜೀವಗಳಿಗೆ ಅಪಾಯ ಆಡಬಹುದು ಎಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ. ಭಲೆ ಭಲೆ.‌ಇಂಥಹ ಮಹನೀಯರು ಆಯುಕ್ತರಾಗಿ ನೇಮಕವಾಗಿದ್ದು ಯಾರ ಯಶಸ್ಸಿಗೆ ಎಂದು ಈಗ ಅರ್ಥ ಆಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...