Homeಮುಖಪುಟಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯ: ಚುನಾವಣಾ ಆಯೋಗ

ಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯ: ಚುನಾವಣಾ ಆಯೋಗ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚುನಾವಣಾ ಆಯೋಗದ ಸದಸ್ಯರಾಗಿದ್ದ ಅಶೋಕ್ ಲಾವಾಸರವರು ಮೋದಿ ಮತ್ತು ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಕ್ಲಿನ್ ಚಿಟ್ ನೀಡುವುದಕ್ಕೆ ಭಿನ್ನಾಭಿಪ್ರಾಯ ದಾಖಲಿಸಿದ್ದುದು ನಿಮಗೆ ಗೊತ್ತಿಗೆ. ಮೂರು ಜನರ ಸಮಿತಿಯಲ್ಲಿ ಒಬ್ಬರಾಗಿದ್ದ ಅವರು ಮೋದಿ-ಶಾರವರ ಸುಮಾರು 11 ಪ್ರಕರಣಗಳಿಗೆ ಕ್ಲಿನ್ ಚಿಟ್ ನೀಡುವುದಕ್ಕೆ ತಮ್ಮ ವಿರೋಧ ದಾಖಲಿಸಿ ನೋಟ್ ಬರೆದಿದ್ದರು.

ಆ ದಾಖಲೆಗಳನ್ನು ಮಾಹಿತಿ ಹಕ್ಕಿನಡಿ ನೀಡುವಂತೆ ಪುಣೆ ಮೂಲಕ ವಿಹಾರ್ ದೃವೆ ಎಂಬ ಆರ್.ಟಿ.ಐ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿಗೆ ಮಾಹಿತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದೆ. ಅಶೋಕ್ ಲಾವಾಸರವರ ಭಿನ್ನಾಭಿಪ್ರಾಯನ್ನು ಬಹಿರಂಗಪಡಿಸುವುದರಿಂದ ಅವರ ಜೀವಕ್ಕೆ ಅಪಾಯವಿದೆ ಎಂದು ಚುನಾವಣಾ ಆಯೋಗ ಸ್ಪಷ್ಟೀಕರಣ ಸಹ ನೀಡಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮತ್ತು ಸದಸ್ಯರಾದ ಲವಾಸಾ ಮತ್ತು ಸುಶೀಲ್ ಚಂದ್ರರನ್ನು ಒಳಗೊಂಡ ಸಮಿತಿಯ ‘ಪೂರ್ಣ ಆಯೋಗ’ ವಿವಾದಾಸ್ಪದ ವಿಷಯಗಳ ಬಗ್ಗೆ ಚರ್ಚಿಸಿತ್ತು. ಯಾವುದೇ ದೂರಿನ ಬಗ್ಗೆ ಇಲ್ಲಿ ಚರ್ಚೆ ನಡೆದು ಒಮ್ಮತದ ಆದೇಶವನ್ನು ಸಾರ್ವಜನಿಕವಾಗಿ ಹೊರಹಾಕಲಾಗುವುದು. ಹಾಗೊಮ್ಮೆ ಒಮ್ಮತದ ತೀರ್ಮಾನಕ್ಕೆ ಬರಲಾಗದಿದ್ದರೆ, 2:1 ಅನುಪಾತದಲ್ಲಿ ಬಹುಮತದ ತೀರ್ಪನ್ನು ಅಂತಿಮ ಆದೇಶವಾಗಿ ಪರಿಗಣಿಸಲಾಗುತ್ತದೆ.

ಮೋದಿ ಮತ್ತು ಅಮಿತ್ ಶಾ ವಿರುದ್ಧ ಕೇಳಿ ಬಂದ ನೀತಿ ಸಂಹಿತೆ ಉಲ್ಲಂಘನೆಯ ಎಲ್ಲಾ ದೂರುಗಳ ವಿಚಾರಣೆಗಳ ಸಂದರ್ಭದಲ್ಲಿ ಅಶೋಕ್ ಲಾವಸಾ ಅವರು ಕ್ಲೀನ್ ಚಿಟ್ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ವಾದ ಮಂಡಿಸಿದ್ದರು ಎನ್ನಲಾಗಿದೆ. ಆ ವಾದವನ್ನು ಅಂತಿಮ ಆದೇಶದಲ್ಲಿ ಉಲ್ಲೇಖಿಸಿರಲಿಲ್ಲ. ಅದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ಪತ್ರ ಬರೆದಿದ್ದ ಲಾವಾಸಾ “ತನ್ನ `ಅಲ್ಪಮತ’ ಅಭಿಪ್ರಾಯವನ್ನು ಆಯೋಗದ ಅಂತಿಮ ತೀರ್ಪಿನಲ್ಲಿ ಉಲ್ಲೇಖಿಸಲಾಗುತ್ತಿಲ್ಲವಾದ್ದರಿಂದ, ನಾನು ಅನಿವಾರ್ಯವಾಗಿ ಪೂರ್ಣ ಆಯೋಗದ ಸಭೆಗಳಿಂದ ದೂರ ಉಳಿಯಬೇಕಾಗಿದೆ” ಎಂದು ತಮ್ಮ ಅಸಮಾಧಾನ ಹೊರಹಾಕಿದ್ದರು.

ಏಪ್ರಿಲ್ 21ರಂದು ಗುಜರಾತ್‍ನ ಪಟಣ್‍ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ ಮೋದಿಯವರು “ನಮ್ಮ ಸರ್ಕಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರಿಂದಲೇ ಅದು ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು” ಎಂದು ಹೇಳುವ ಮೂಲಕ ಸೇನೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಚುನಾವಣಾ ಆಯೋಗ ಮೇ 4ರಂದು ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

ಅದು, ಹೀಗೆ ಮೋದಿಯವರಿಗೆ ಕೊಟ್ಟ ಆರನೇ ಕ್ಲಿನ್‍ಚಿಟ್ ಆಗಿತ್ತು. ಇದಕ್ಕೂ ಮೊದಲು ಅವರು ನಾಂದೇಡ್‍ನಲ್ಲಿ ಮಾಡಿದ್ದ ಭಾಷಣದಲ್ಲಿ “ಕಾಂಗ್ರೆಸ್ ಒಂದು ಮುಳುಗುತ್ತಿರುವ ಟೈಟಾನಿಕ್” ಎಂದು ಉಲ್ಲೇಖಿಸಿದ್ದು ಸಹಾ ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದು ಆಯೋಗ ಅಭಿಪ್ರಾಯ ಪಟ್ಟಿತ್ತು. ಏಪ್ರಿಲ್ 1ನೇ ತಾರೀಕು ವಾದ್ರಾದಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಅಲ್ಪಸಂಖ್ಯಾತರು (ಮುಸ್ಲಿಂ) ಹೆಚ್ಚಾಗಿರುವ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದನ್ನು ಮೋದಿ ಧಾರ್ಮಿಕ ತುಲನೆಯಲ್ಲಿ ಮಾತಾಡಿದ್ದಕ್ಕೂ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಜೊತೆಗೆ,`ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ತಮ್ಮ ಮೊದಲ ಮತವನ್ನು ಪುಲ್ವಾಮಾದಲ್ಲಿ ಹುತಾತ್ಮರಾದವರಿಗೆ ಸಲ್ಲಿಸಲಾರರೆ?’ ಎಂದು ಮಾಡಿದ್ದ ಮೋದಿ ಭಾಷಣಕ್ಕೂ ಕ್ಲೀನ್‍ಚಿಟ್ ಪ್ರಾಪ್ತವಾಗಿತ್ತು.

ಮೋದಿಯವರು ಮಾಡಿದ ಭಾಷಣಗಳಿಗೆ ಸಂಬಂಧಿಸಿದ ಲಾವಸಾ ಅವರ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಕೋರಿರುವ ಪುಣೆ ಮೂಲದ ಆರ್‌ಟಿಐ ಕಾರ್ಯಕರ್ತ ವಿಹಾರ್ ದೃವೆಗೆ ನಿರಾಕರಿಸಿದೆ. ಮತ್ತು “ಯಾವುದೇ ವ್ಯಕ್ತಿಯ ಜೀವ ಅಥವಾ ದೈಹಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಕಾನೂನು ಜಾರಿ ಅಥವಾ ಭದ್ರತಾ ಉದ್ದೇಶಗಳಿಗಾಗಿ ವಿಶ್ವಾಸದಿಂದ ನೀಡಲಾದ ಮಾಹಿತಿ ಅಥವಾ ಸಹಾಯದ ಮೂಲವನ್ನು ಗುರುತಿಸುವಂತಹ ಮಾಹಿತಿಯನ್ನು ಬಹಿರಂಗಪಡಿಸುವುದನ್ನು ವಿನಾಯಿತಿ ನೀಡುವ” ಆರ್‌ಟಿಐ ಕಾಯ್ದೆಯ ಒಂದು ವಿಭಾಗವನ್ನು ಚುನಾವಣಾ ಆಯೋಗ ಉಲ್ಲೇಖಿಸಿದೆ.

ಈ ಕುರಿತು ಪತ್ರಕರ್ತ ರವಿ ನಾಯರ್ ರವರು “ಚುನಾವಣಾ ಆಯೋಗ ಹೇಳುತ್ತಿರುವುದುನ್ನು ಸರಳೀಕರಿಸುವುದಾರೆ, ಮೋದಿ ಮತ್ತು ಷಾ ಅವರ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳಗೆ ಆಯೋಗ ಕೊಟ್ಟ ವೈಟ್‌ವಾಶ್ ಕುರಿತು ಲವಾಸಾ ಅವರ ಭಿನ್ನಾಭಿಪ್ರಾಯದ ಟಿಪ್ಪಣಿ ಪ್ರಕಟವಾದರೆ, ಸಂಬಂಧಪಟ್ಟ ಪಕ್ಷಗಳು ಅವನ ಜೀವಕ್ಕೆ ಅಪಾಯವನ್ನುಂಟು ಮಾಡಬಹುದು. ವಾವ್ ಎಂದು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಓಹ್! ವಿಷಯ ಹೀಗಿದೆ. ತಮ್ಮ ಜೀವಗಳಿಗೆ ಅಪಾಯ ಆಡಬಹುದು ಎಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ. ಭಲೆ ಭಲೆ.‌ಇಂಥಹ ಮಹನೀಯರು ಆಯುಕ್ತರಾಗಿ ನೇಮಕವಾಗಿದ್ದು ಯಾರ ಯಶಸ್ಸಿಗೆ ಎಂದು ಈಗ ಅರ್ಥ ಆಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...