Homeಕರ್ನಾಟಕಲೋಕಸಭೆ ಚುನಾವಣಾ ಫಲಿತಾಂಶದ ಅಚ್ಚರಿಗಳು/ಆಘಾತಗಳು

ಲೋಕಸಭೆ ಚುನಾವಣಾ ಫಲಿತಾಂಶದ ಅಚ್ಚರಿಗಳು/ಆಘಾತಗಳು

ನಂಬಲು ಕಷ್ಟ ಆದರೆ ಇದು ನಿಜಸಂಗತಿ. ಒಮ್ಮೆ ಓದಿಬಿಡಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಈ ಚುನಾವಣೆಯಲ್ಲಿ 22 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ.

ರಾಜಸ್ಥಾನ(25/25), ಗುಜರಾತ್(26/26), ಹರಿಯಾಣ (10/10) ದೆಹಲಿ(07/07), ಹಿಮಾಚಲಪ್ರದೇಶ(04/04) ಮತ್ತು ಅರುಣಚಲಪ್ರದೇಶ(02/02) ಗಳಲ್ಲಿ ಬಿಜೆಪಿ ಕ್ಲೀನ್‍ಸ್ವೀಪ್ ಸಾಧನೆ ಮಾಡಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಬಿಜೆಪಿ 25 ಎಂಪಿ ಕ್ಷೇತ್ರಗಳನ್ನು ಗೆಲ್ಲುವ ಮಹಾನ್ ಸಾಧನೆ ಮಾಡಿದೆ. ಕಳೆದ ಬಾರಿ 17 ಕ್ಷೇತ್ರಗಳನ್ನು ಗೆದ್ದಿದ್ದು ಇದುವರೆಗಿನ ಸಾಧನೆಯಾಗಿತ್ತು.

ಕರ್ನಾಟಕದಲ್ಲಿ ಕಾಂಗ್ರೆಸ್ 1, ಜೆಡಿಎಸ್ 1 ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದಿದ್ದಾರೆ.

ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ಸಮರ್ಥಿಸುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದ ಪ್ರಗ್ಯಾ ಸಿಂಗ್, ನಳೀನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಅಮೇಥಿಯಲ್ಲಿ ರಾಹುಲ್ ಗಾಂಧಿ ಹಿನ್ನಡೆ ಅನುಭವಿಸಿದರೆ, ಸ್ಮೃತಿ ಇರಾನಿ ಮುನ್ನಡೆ ಕಾಯ್ದುಕೊಂಡಿದ್ದಾರೆ

ಕೇರಳದ ವಯನಾಡ್‍ನಲ್ಲಿ ರಾಹುಲ್ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಕೂಟ 20ರಲ್ಲಿ 18 ಕ್ಷೇತ್ರಗಳನ್ನು ಗೆದ್ದಿದೆ.

ತಮಿಳುನಾಡಿನಲ್ಲಿ ಡಿಎಂಕೆ ಭರ್ಜರಿ ಜಯಭೇರಿ ಬಾರಿಸಿದೆ.

ಆಂಧ್ರದಲ್ಲಿ ಜಗನ್ ಮೋಹನ್ ರೆಡ್ಡಿ ಸ್ವೀಪ್ ಸಾಧನೆ ಮಾಡಿದ್ದಾರೆ. ಅವರ ವೈಎಸ್‍ಆರ್‍ಸಿಪಿ 25ಕ್ಕೆ 25ನ್ನು ಗೆದ್ದರೆ ಟಿಡಿಪಿಯ ಚಂದ್ರಬಾಬು ನಾಯ್ಡು ಸೊನ್ನೆ ಸುತ್ತಿದ್ದಾರೆ.

ಆಂಧ್ರ ಅಸೆಂಬ್ಲಿ ಚುನಾವಣೆಯಲ್ಲಿಯೂ ಸಹ ಟಿಡಿಪಿಗೆ ಸೋಲಾಗಿದ್ದು ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 30ಕ್ಕೆ ಜಗನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ ಐಎಸ್‍ಆರ್‍ಸಿಪಿ 147, ಟಿಡಿಪಿ 27 ಮತ್ತು ಜನಸೇನಾ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಮತಾ ಬ್ಯಾನರ್ಜಿಯವರು ತೃಣಮೂಲ ಕಾಂಗ್ರೆಸ್‍ನ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಲಗ್ಗೆ ಇಟ್ಟಿರುವ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೆಡ್ಡು ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...