Homeಕರ್ನಾಟಕಆಹಾರ ಪರಂಪರೆ ಮತ್ತು ವಚನ ಚಳುವಳಿ: ಆಹಾರ ಸಂಸ್ಕೃತಿ ಏನಿತ್ತು? ಅದನ್ನು ನಿರ್ಬಂಧಿಸುತ್ತಿದ್ದದ್ದು ಯಾರು? -...

ಆಹಾರ ಪರಂಪರೆ ಮತ್ತು ವಚನ ಚಳುವಳಿ: ಆಹಾರ ಸಂಸ್ಕೃತಿ ಏನಿತ್ತು? ಅದನ್ನು ನಿರ್ಬಂಧಿಸುತ್ತಿದ್ದದ್ದು ಯಾರು? – ರಂಜಾನ್ ದರ್ಗಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು. ಜೊತೆಗೆ ಆಹಾರದ ವಿಚಾರದಲ್ಲಿ ನಮ್ಮದೇ ಇತಿಹಾಸದ ಕೆಲವು ವಾಸ್ತವಗಳನ್ನು ತಿಳಿಸುವ ರಂಜಾನ್ ದರ್ಗಾ ಅವರ ಲೇಖನವೊಂದರ ಆಯ್ದ ಭಾಗವೂ ಇದರೊಂದಿಗಿದೆ.

ಚರ್ಮಣ್ವತಿ: ಹಿಂದೆ ರಾಜರು ಯಜ್ಞಗಳನ್ನು ವರ್ಷಗಟ್ಟಲೆ ಮಾಡುತ್ತಿದ್ದರು. ವೈದಿಕರು ವರ್ಷಗಟ್ಟಲೆ ಅಲ್ಲೇ ಉಳಿದು ದಕ್ಷಿಣೆ ಪಡೆಯುತ್ತ, ಮಾಂಸದೂಟ ಸವಿಯುತ್ತ ಕೂಡುತ್ತಿದ್ದರು. ಇಂಥ ಒಂದು ಪ್ರಸಂಗ ಕಾಳೀದಾಸನ ಮೇಘದೂತ ಖಂಡಕಾವ್ಯದಲ್ಲಿ ಬರುತ್ತದೆ. ರಂತಿದೇವ ಎಂಬ ರಾಜನ ಯಜ್ಞಕ್ಕಾಗಿ ವೈದಿಕರು ಪ್ರತಿದಿನ ಪಶುಗಳನ್ನು ಕೊಂದು ಅವುಗಳ ಚರ್ಮವನ್ನು ರಾಶಿ ಹಾಕುತ್ತಿದ್ದರು. ವರ್ಷಗಟ್ಟಲೆ ನಡೆದ ಈ ಯಜ್ಞದ ಕೊನೆಯ ದಿನದ ಕೊನೆಯ ಗಳಿಗೆಯಲ್ಲಿ ಬಹು ದೂರದಿಂದ ವೈದಿಕರ ಗುಂಪೊಂದು ಬಂದಿತು. ಆಗ ಮಾಂಸದ ತುಂಡುಗಳು ಖಾಲಿಯಾಗಿ ಬರಿ ಸೂಪ್ (ಸಂಸ್ಕೃತದ ಈ ಸೂಪ್ ಇಂಗ್ಲಿಷ್ ಭಾಷೆ ಸೇರಿದೆ) ಮಾತ್ರ ಉಳಿದಿತ್ತು. ಇದರಿಂದ ಕೆಂಡಾಮಂಡಲವಾದ ವೈದಿಕರು ರಂತಿದೇವನಿಗೆ ಶಾಪ ಕೊಡಲು ಮುಂದಾದರು. ಆಗ ಭಯಭೀತನಾದ ರಂತಿದೇವ ‘ತಾವು ತಡಮಾಡಿ ಬಂದಿದ್ದೀರಿ. ಈ ದೀರ್ಘಕಾಲದ ಯಜ್ಞದಲ್ಲಿ ಅದೆಷ್ಟು ಪಶುಗಳ ಬಲಿ ಕೊಡಲಾಗಿದೆ ಎಂಬುದಕ್ಕೆ ಈ ಚರ್ಮಗಳ ರಾಶಿಯನ್ನು ನೋಡಿರಿ. ಇವುಗಳ ರಕ್ತದಿಂದಲೇ ಹರಿಯುತ್ತಿರುವ ನದಿಯನ್ನು ನೋಡಿರಿ. ಇದು ಚರ್ಮಣ್ವತಿ ನದಿ ಎಂದು ಹೆಸರು ಪಡೆದಿದೆ’ ಎಂದು ಮನವಿ ಮಾಡಿದ. (ಆ ಚರ್ಮಣ್ವತಿ ನದಿಯೇ ಇಂದಿನ ಚಂಬಲ್ ನದಿ)

ದನವೇ ಧನ: ಈ ರಾಜರು ಇಷ್ಟೊಂದು ಪಶುಗಳನ್ನು ಎಲ್ಲಿಂದ ತರುತ್ತಿದ್ದರು ಎಂಬುದಕ್ಕೆ ಧರ್ಮಾನಂದ ಕೋಸಂಬಿಯವರ ‘ಭಗವಾನ ಬುದ್ಧ’ ಗ್ರಂಥದಲ್ಲಿ ಮಾಹಿತಿ ದೊರೆಯುತ್ತದೆ. ರಾಜರು, ಶ್ರೀಮಂತರು ಮತ್ತು ವೈದಿಕರು ಯಜ್ಞಕ್ಕಾಗಿ ರೈತರ ಸಾಕುಪ್ರಾಣಿಗಳನ್ನು ಯಾವುದೇ ಹಣ ಕೊಡದೆ ತರುತ್ತಿದ್ದರು. ರೈತಾಪಿ ಜನರಿಗೆ ದನವೇ ಧನವಾಗಿತ್ತು. (ದನ ಎಂಬುದು ಧನದಿಂದ ಬಂದಿದೆ. ದನವೇ ಧನ. ಇಂಗ್ಲಿಷ್‍ನಲ್ಲಿ ಕ್ಯಾಟಲ್‍ನಿಂದ ಕ್ಯಾಪಿಟಲ್ ಬಂದಿದೆ.) ಆದ್ದರಿಂದ ರಾಜ ಮುಂತಾದ ಬಲಾಢ್ಯರು ಮಹಾಯಜ್ಞ ಆರಂಭಿಸಿದರೆ ರೈತಾಪಿ ಜನ ಒಬ್ಬರಿಗೊಬ್ಬರು ತಬ್ಬಿಕೊಂಡು ಅಳುತ್ತಿದ್ದರು. ರೈತರು ತಮ್ಮ ದನಗಳನ್ನು ಯಜ್ಞಕ್ಕೆ ಬಲಿಪಶುಗಳಾಗಿ ಕೊಡದಿದ್ದಾಗ ಅವರ ಮೇಲೆ ಹಲ್ಲೆ ಮಾಡಿ ತೆಗೆದುಕೊಂಡು ಹೋಗುತ್ತಿದ್ದರು! ದೀರ್ಘ ಕಾಲದ ಆ ಮಹಾಯಜ್ಞಕ್ಕೆ ಬೇಕಾದ ಬಲಿಪಶುಗಳನ್ನು ಸೈನಿಕರು ಬಂದು ಕಂಡ ಕಂಡ ರೈತರ ಮನೆಗಳ ಮುಂದೆ ಕಟ್ಟಿದ ಪಶುಗಳನ್ನು ಹೊಡೆದುಕೊಂಡು ಹೋಗುತ್ತಿದ್ದರು. ಹಾಗೆ ದನಗಳನ್ನು ಹೊಡೆದುಕೊಂಡು ಹೋಗುವುದನ್ನು ಬುದ್ಧ ಗಮನಿಸಿದ್ದರಿಂದಲೇ ಯಜ್ಞಹಿಂಸೆಯನ್ನು ತಡೆಯಲು ನಿರ್ಧರಿಸಿದ. ದೊಡ್ಡವರ ಯಜ್ಞಕ್ಕಾಗಿ ತಮ್ಮ ದನಕರುಗಳನ್ನು ಪುಕ್ಕಟೆ ಕೊಡಬೇಕಾಗಿ ಬಂದದ್ದರಿಂದಲೇ ಬಡವರು ಮತ್ತು ರೈತಾಪಿ ಜನರು ಸಹಜವಾಗಿಯೇ ಯಜ್ಞವಿರೋಧಿಯಾಗಿದ್ದರು. ಜನ ಬೆಂಬಲವಿದ್ದ ಕಾರಣದಿಂದಲೇ ಬುದ್ಧನ ಯಜ್ಞವಿರೋಧಿ ನಿಲವಿಗೆ ಮಾನ್ಯತೆ ದೊರೆಯಿತು.

ಮಹಾ ಮೇಧಾವಿ ಧರ್ಮಾನಂದ ಕೋಸಂಬೀ ಅವರು ಮರಾಠಿಯಲ್ಲಿ ರಚಿಸಿದ ಭಗವಾನ್ ಬುದ್ಧ ಗ್ರಂಥವನ್ನು ಆದ್ಯ ರಂಗಾಚಾರ್ಯ (ಶ್ರೀರಂಗ)ರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಈ ಅನುವಾದ ಗ್ರಂಥವನ್ನು 1956 ರಲ್ಲಿ ಪ್ರಕಟಿಸಿದೆ. ಆ ಗ್ರಂಥದ ಯಜ್ಞಯಾಗ ಅಧ್ಯಾಯದಲ್ಲಿನ ‘ಜನರಿಗೆ ಗೋ ಹಿಂಸೆ ಬೇಕಿದ್ದಿಲ್ಲ’ ಎಂಬ ಉಪಶೀರ್ಷಿಕೆಯಲ್ಲಿ ಕೆಳಗಿನ ವಿಚಾರ ವ್ಯಕ್ತವಾಗಿದೆ.
‘ಈ ದಾಸ, ದೂತ ಮತ್ತು ಆಳುಗಳು ಯಜ್ಞದ ಕೆಲಸಗಳನ್ನು ಅಳುತ್ತ ಅಳುತ್ತ ಯಾಕೆ ಮಾಡುತ್ತಿರಬಹುದಾಗಿದೆ? ಯಾಕೆಂದರೆ ಈ ಯಜ್ಞದಲ್ಲಿ ದನಗಳನ್ನು ಕೊಲ್ಲಲಾಗುತ್ತಿತ್ತು. ಅದನ್ನು ಬಡ ರೈತರಿಂದ ಕಸಿದುಕೊಳ್ಳಲಾಗುತ್ತಿತ್ತು. ಅದಕ್ಕಾಗಿ ರೈತರಿಗೆ ಬಹಳ ಕೆಡುಕೆನಿಸುತ್ತಿತ್ತು.. .. ..
ರಾಜರು ಮತ್ತು ಶ್ರೀಮಂತ ಜನರು ಸ್ವಂತ ತಮ್ಮ ಹಸುಗಳನ್ನೆ ಕೊಲ್ಲುತ್ತಿದ್ದರೆ ದಾಸರೂ ಆಳುಗಳೂ ಅಳುವ ಪ್ರಸಂಗಗಳು ಕಡಿಮೆ ಪ್ರಮಾಣದಲ್ಲಿ ಬರಬಹುದಾಗಿತ್ತು. ಆದರೆ ಈ ದನಗಳನ್ನು ತಮ್ಮಂತಹ ಬಡ ರೈತರ ಮೇಲೆ ಒತ್ತಾಯ ಮಾಡಿ ಕಸಿದುಕೊಳ್ಳುತ್ತಿದ್ದುದಕ್ಕಾಗಿ ಅವರಿಗೆ ಹೇಳದಷ್ಟು ದುಃಖವಾಗುವುದು ಸಹಜವಾಗಿದೆ.

‘ಹಿಂದೂ ಧರ್ಮಶಾಸ್ತ್ರಕ್ಕೆ ಬುನಾದಿಯಾಗಿರುವ ಮನುಸ್ಮøತಿಯ ವಸ್ತುನಿಷ್ಠ ಸಮಗ್ರ ಅನುವಾದ’ ಎಂದು ಹೇಳಿಕೊಂಡ ದಿವಂಗತ ಶೇಷ ನವರತ್ನ ಅವರು ಮನುಸ್ಮೃತಿಯ ಅನುವಾದವನ್ನು ನಿಜವಾಗಿಯೂ ನಿಷ್ಪಕ್ಷಪಾತಿಯಾಗಿ ಮಾಡಿದ್ದಾರೆ. ಮನು ಎಷ್ಟೊಂದು ಪಕ್ಷಪಾತಿ ಎಂಬುದಕ್ಕೆ ಆತನ ಮನುಸ್ಮೃತಿ ಗ್ರಂಥ ಸಾಕ್ಷಿಯಾಗಿದೆ.

ಮೇಲಿನ ಮೂರೂ ವರ್ಣದವರು ಮಾತ್ರ ಶುದ್ಧ ಮಾಂಸ ಭಕ್ಷಣೆ ಮಾಡಬೇಕು; ಶೂದ್ರರು ಮತ್ತು ಅತಿಶೂದ್ರರಿಗೆ ಇಂಥ ಮಾಂಸಾಹಾರ ಸೇವನೆಗೆ ಅವಕಾಶವಿರಬಾರದು ಎಂಬ ಕುತಂತ್ರದಿಂದ ಮನು ಅನೇಕ ಶ್ಲೋಕಗಳನ್ನು ರಚಿಸಿದ್ದಾನೆ. ‘ಯಜ್ಞಹಿಂಸೆ ಎಂಬುದು ಹಿಂಸೆ ಅಲ್ಲ’ ಎಂಬುದು ಅವನ ವಾದವಾಗಿದೆ. ಆದರೆ ‘ಶೂದ್ರರು ಪ್ರಾಣಿಹಿಂಸೆ ಮಾಡಬಾರದು’ ಎಂದು ಉಪದೇಶಿಸುತ್ತಾನೆ. ವೈದಿಕರು ಪ್ರಾಣಿಗಳನ್ನು ಯಜ್ಞದಲ್ಲಿ ಕೊಲ್ಲುವುದು ಧರ್ಮಸಮ್ಮತ. ಆದರೆ ಶೂದ್ರರು ಪ್ರಾಣಿವಧೆ ಮಾಡುವುದು ಧರ್ಮಬಾಹಿರ ಎಂದು ಎಚ್ಚರಿಸುತ್ತಾನೆ.
ಆಹಾರ ಸಂಸ್ಕೃತಿಯ ಮೇಲೆ ಪ್ರತಿಬಂಧ ಹೇರುವ ಕೆಳಗಿನ ಶ್ಲೋಕಗಳು ಮನುವಿನ ವರ್ಣಭೇದ ನೀತಿಗೆ ಕನ್ನಡಿ ಹಿಡಿಯುತ್ತವೆ.
ಮಧುಪರ್ಕೇ ಚ ಯಜ್ಞೇ ಚ ಪಿತೃದೈವತ ಕರ್ಮಣಿ |

ಅತ್ರೈವ ಪಶವೋ ಹಿಂಸ್ಯಾ ನಾನ್ಯತ್ರೇತ್ಯಬ್ರ ವೀನ್ಮನುಃ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 41)
(ಮಧುಪರ್ಕದಲ್ಲಿ, ಯಜ್ಞದಲ್ಲಿ, ದೇವ-ಪಿತೃ ಕರ್ಮಗಳಲ್ಲಿ ಮಾತ್ರ ಪಶುಗಳನ್ನು ಕೊಲ್ಲಬೇಕೇ ಹೊರತಾಗಿ ಬೇರೆ ಸಂದರ್ಭಗಳಲ್ಲಿ ಪಶುಹಿಂಸೆ ಸಲ್ಲದು ಎಂದು ಮನುವು ಹೇಳಿದ್ದಾನೆ.)

ಏಷ್ವರ್ಧೇಷು ಪಶೂನ್ ಹಿಂಸನ್ ವೇದತತ್ತ್ವಾರ್ಥವಿದ್ದ್ವಿಜಃ |
ಆತ್ಮಾನಂ ಚ ಪಶುಂ ಚೈವ ಗಮಯತ್ಯುತ್ತಮಾಂ ಗತಿಂ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 42)
(ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಮುಂತಾದ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ ಬ್ರಾಹ್ಮಣನು ಪಶುವನ್ನು ಕೊಂದರೆ ತನ್ನ ಜೊತೆಗೆ ಆ ಪಶುವಿಗೂ ಉತ್ತಮ ಗತಿಯನ್ನುಂಟುಮಾಡುತ್ತಾನೆ.)

ಯಾ ವೇದ ವಿಹಿತಾ ಹಿಂಸಾ ನಿಯತಾಸ್ಮಿಂಶ್ಚರಾಚರೇ |
ಅಹಿಂಸಾಮೇವ ತಾಂ ವಿದ್ಯಾದ್ವೇದಾದ್ಧರ್ಮೋ ಹಿ ನಿರ್ಬಭೌ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 44)
(ವೇದವಿಹತವಾದ ಎಂದರೆ ವೇದಗಳಲ್ಲಿ [ಯಜ್ಞಗಳಲ್ಲಿ] ಹೇಳಿದ ಹಿಂಸೆಯು ಶಾಸ್ತ್ರನಿಯಮ ರೀತ್ಯಾ ನಡೆಯುವುದರಿಂದ ಅದನ್ನು ಅಹಿಂಸೆಯಂದೇ ಪರಿಗಣಿಸಬೇಕು. ಏಕೆಂದರೆ ವೇದಗಳಿಂದಲೇ ಧರ್ಮ ಹುಟ್ಟಿದೆ.)

ಯಜ್ಞಾಯ ಜಗ್ಧಿರ್ಮಾಂಸಸ್ಯೇತ್ಯೇಷ ದೈವೋ ವಿಧಿಃ ಸ್ಮೃತಃ |
ಅತೋ ನ್ಯಥಾ ಪ್ರವೃತ್ತಿಸ್ತು ರಾಕ್ಷಸೋ ವಿಧಿರುಚ್ಯತೇ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 31)
(ಯಜ್ಞಕ್ಕಾಗಿ ಪಶುವನ್ನು ಕೊಂದು ಮಾಡಿದ ಮಾಂಸಭಕ್ಷಣವು ‘ದೈವಿಕರೀತಿ’ ಎಂದು ಹೇಳಲ್ಪಟ್ಟಿದೆ. ಇದಕ್ಕೆ ವಿರುದ್ಧವಾಗಿ ಅನ್ಯಸಂದರ್ಭಗಳಲ್ಲಿ ಮಾಡುವ ಅಕಾರಣ ಪಶುವಧೆ ಮತ್ತು ಮಾಂಸಭಕ್ಷಣವು ‘ರಾಕ್ಷಸರೀತಿ’ ಎಂದು ಹೇಳಲ್ಪಟ್ಟಿದೆ.)

ವೇದ ಪ್ರಮಾಣವಾದ ಮನುಸ್ಮೃತಿಯ ಪ್ರಕಾರ ಶೂದ್ರರಿಗೆ ಯಜ್ಞ ಮಾಡುವ ಹಕ್ಕಿಲ್ಲ. ಆದ್ದರಿಂದ ಅವರು ಪ್ರಾಣಿಹಿಂಸೆ ಮಾಡುವ ಹಾಗಿಲ್ಲ. (ಏನಿದ್ದರೂ ಅವರು ಸತ್ತದ್ದನ್ನೇ ತಿನ್ನಬೇಕು.) ಶೂದ್ರರು ಆಹಾರಕ್ಕಾಗಿ ಪ್ರಾಣಿವಧೆ ಮಾಡಿದರೆ ಅದು ರಾಕ್ಷಸೀ ಕೃತ್ಯ. ಸವರ್ಣೀಯರು ಯಜ್ಞದಲ್ಲಿ ಪ್ರಾಣಿಗಳನ್ನು ಕೊಂದು ತಿಂದರೆ ಅದು ದೈವಿಕರೀತಿ. ದೇವಮಾರ್ಗದಲ್ಲಿ ಪ್ರಾಣಿಗಳನ್ನು ಕೊಲ್ಲುವ ಹಕ್ಕು ವೈದಿಕರಿಗೆ ಮಾತ್ರ ಇದೆ. ಶೂದ್ರರಿಗೆ ಪ್ರಾಣಿಗಳನ್ನು ಆಹಾರವಾಗಿಸುವ ಹಕ್ಕಿಲ್ಲ. ಹೇಗಿದೆ ಮನುಧರ್ಮ ನ್ಯಾಯ?
(ರಂಜಾನ್ ದರ್ಗಾ ಅವರ “ಮೂರ್ತ ಮತ್ತು ಅಮೂರ್ತ” 2017 ಪುಸಕ್ತದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಜಾನ ಧರ್ಗಾರವರ ಲೇಖನ ಅರ್ಥಪೂರ್ಣ,ಇಂದು ಕೂಡ ದನಗಳಿಂದ ಉತ್ತಿಯಾದ ಹಾಲು ತುಪ್ಪಗಳನ್ನು ಸಾಂಕೇತಿಕವಾಗಿ ಯಜ್ಞ ಗಳಲ್ಲಿ ಬಳಸುತ್ತಿರುವರು.,ಇದು ಮನುವಿನ ಮುಂದುವರಿದ ಭಾಗವೇ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...