Homeಕರ್ನಾಟಕಆಹಾರ ಪರಂಪರೆ ಮತ್ತು ವಚನ ಚಳುವಳಿ: ಆಹಾರ ಸಂಸ್ಕೃತಿ ಏನಿತ್ತು? ಅದನ್ನು ನಿರ್ಬಂಧಿಸುತ್ತಿದ್ದದ್ದು ಯಾರು? -...

ಆಹಾರ ಪರಂಪರೆ ಮತ್ತು ವಚನ ಚಳುವಳಿ: ಆಹಾರ ಸಂಸ್ಕೃತಿ ಏನಿತ್ತು? ಅದನ್ನು ನಿರ್ಬಂಧಿಸುತ್ತಿದ್ದದ್ದು ಯಾರು? – ರಂಜಾನ್ ದರ್ಗಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು. ಜೊತೆಗೆ ಆಹಾರದ ವಿಚಾರದಲ್ಲಿ ನಮ್ಮದೇ ಇತಿಹಾಸದ ಕೆಲವು ವಾಸ್ತವಗಳನ್ನು ತಿಳಿಸುವ ರಂಜಾನ್ ದರ್ಗಾ ಅವರ ಲೇಖನವೊಂದರ ಆಯ್ದ ಭಾಗವೂ ಇದರೊಂದಿಗಿದೆ.

ಚರ್ಮಣ್ವತಿ: ಹಿಂದೆ ರಾಜರು ಯಜ್ಞಗಳನ್ನು ವರ್ಷಗಟ್ಟಲೆ ಮಾಡುತ್ತಿದ್ದರು. ವೈದಿಕರು ವರ್ಷಗಟ್ಟಲೆ ಅಲ್ಲೇ ಉಳಿದು ದಕ್ಷಿಣೆ ಪಡೆಯುತ್ತ, ಮಾಂಸದೂಟ ಸವಿಯುತ್ತ ಕೂಡುತ್ತಿದ್ದರು. ಇಂಥ ಒಂದು ಪ್ರಸಂಗ ಕಾಳೀದಾಸನ ಮೇಘದೂತ ಖಂಡಕಾವ್ಯದಲ್ಲಿ ಬರುತ್ತದೆ. ರಂತಿದೇವ ಎಂಬ ರಾಜನ ಯಜ್ಞಕ್ಕಾಗಿ ವೈದಿಕರು ಪ್ರತಿದಿನ ಪಶುಗಳನ್ನು ಕೊಂದು ಅವುಗಳ ಚರ್ಮವನ್ನು ರಾಶಿ ಹಾಕುತ್ತಿದ್ದರು. ವರ್ಷಗಟ್ಟಲೆ ನಡೆದ ಈ ಯಜ್ಞದ ಕೊನೆಯ ದಿನದ ಕೊನೆಯ ಗಳಿಗೆಯಲ್ಲಿ ಬಹು ದೂರದಿಂದ ವೈದಿಕರ ಗುಂಪೊಂದು ಬಂದಿತು. ಆಗ ಮಾಂಸದ ತುಂಡುಗಳು ಖಾಲಿಯಾಗಿ ಬರಿ ಸೂಪ್ (ಸಂಸ್ಕೃತದ ಈ ಸೂಪ್ ಇಂಗ್ಲಿಷ್ ಭಾಷೆ ಸೇರಿದೆ) ಮಾತ್ರ ಉಳಿದಿತ್ತು. ಇದರಿಂದ ಕೆಂಡಾಮಂಡಲವಾದ ವೈದಿಕರು ರಂತಿದೇವನಿಗೆ ಶಾಪ ಕೊಡಲು ಮುಂದಾದರು. ಆಗ ಭಯಭೀತನಾದ ರಂತಿದೇವ ‘ತಾವು ತಡಮಾಡಿ ಬಂದಿದ್ದೀರಿ. ಈ ದೀರ್ಘಕಾಲದ ಯಜ್ಞದಲ್ಲಿ ಅದೆಷ್ಟು ಪಶುಗಳ ಬಲಿ ಕೊಡಲಾಗಿದೆ ಎಂಬುದಕ್ಕೆ ಈ ಚರ್ಮಗಳ ರಾಶಿಯನ್ನು ನೋಡಿರಿ. ಇವುಗಳ ರಕ್ತದಿಂದಲೇ ಹರಿಯುತ್ತಿರುವ ನದಿಯನ್ನು ನೋಡಿರಿ. ಇದು ಚರ್ಮಣ್ವತಿ ನದಿ ಎಂದು ಹೆಸರು ಪಡೆದಿದೆ’ ಎಂದು ಮನವಿ ಮಾಡಿದ. (ಆ ಚರ್ಮಣ್ವತಿ ನದಿಯೇ ಇಂದಿನ ಚಂಬಲ್ ನದಿ)

ದನವೇ ಧನ: ಈ ರಾಜರು ಇಷ್ಟೊಂದು ಪಶುಗಳನ್ನು ಎಲ್ಲಿಂದ ತರುತ್ತಿದ್ದರು ಎಂಬುದಕ್ಕೆ ಧರ್ಮಾನಂದ ಕೋಸಂಬಿಯವರ ‘ಭಗವಾನ ಬುದ್ಧ’ ಗ್ರಂಥದಲ್ಲಿ ಮಾಹಿತಿ ದೊರೆಯುತ್ತದೆ. ರಾಜರು, ಶ್ರೀಮಂತರು ಮತ್ತು ವೈದಿಕರು ಯಜ್ಞಕ್ಕಾಗಿ ರೈತರ ಸಾಕುಪ್ರಾಣಿಗಳನ್ನು ಯಾವುದೇ ಹಣ ಕೊಡದೆ ತರುತ್ತಿದ್ದರು. ರೈತಾಪಿ ಜನರಿಗೆ ದನವೇ ಧನವಾಗಿತ್ತು. (ದನ ಎಂಬುದು ಧನದಿಂದ ಬಂದಿದೆ. ದನವೇ ಧನ. ಇಂಗ್ಲಿಷ್‍ನಲ್ಲಿ ಕ್ಯಾಟಲ್‍ನಿಂದ ಕ್ಯಾಪಿಟಲ್ ಬಂದಿದೆ.) ಆದ್ದರಿಂದ ರಾಜ ಮುಂತಾದ ಬಲಾಢ್ಯರು ಮಹಾಯಜ್ಞ ಆರಂಭಿಸಿದರೆ ರೈತಾಪಿ ಜನ ಒಬ್ಬರಿಗೊಬ್ಬರು ತಬ್ಬಿಕೊಂಡು ಅಳುತ್ತಿದ್ದರು. ರೈತರು ತಮ್ಮ ದನಗಳನ್ನು ಯಜ್ಞಕ್ಕೆ ಬಲಿಪಶುಗಳಾಗಿ ಕೊಡದಿದ್ದಾಗ ಅವರ ಮೇಲೆ ಹಲ್ಲೆ ಮಾಡಿ ತೆಗೆದುಕೊಂಡು ಹೋಗುತ್ತಿದ್ದರು! ದೀರ್ಘ ಕಾಲದ ಆ ಮಹಾಯಜ್ಞಕ್ಕೆ ಬೇಕಾದ ಬಲಿಪಶುಗಳನ್ನು ಸೈನಿಕರು ಬಂದು ಕಂಡ ಕಂಡ ರೈತರ ಮನೆಗಳ ಮುಂದೆ ಕಟ್ಟಿದ ಪಶುಗಳನ್ನು ಹೊಡೆದುಕೊಂಡು ಹೋಗುತ್ತಿದ್ದರು. ಹಾಗೆ ದನಗಳನ್ನು ಹೊಡೆದುಕೊಂಡು ಹೋಗುವುದನ್ನು ಬುದ್ಧ ಗಮನಿಸಿದ್ದರಿಂದಲೇ ಯಜ್ಞಹಿಂಸೆಯನ್ನು ತಡೆಯಲು ನಿರ್ಧರಿಸಿದ. ದೊಡ್ಡವರ ಯಜ್ಞಕ್ಕಾಗಿ ತಮ್ಮ ದನಕರುಗಳನ್ನು ಪುಕ್ಕಟೆ ಕೊಡಬೇಕಾಗಿ ಬಂದದ್ದರಿಂದಲೇ ಬಡವರು ಮತ್ತು ರೈತಾಪಿ ಜನರು ಸಹಜವಾಗಿಯೇ ಯಜ್ಞವಿರೋಧಿಯಾಗಿದ್ದರು. ಜನ ಬೆಂಬಲವಿದ್ದ ಕಾರಣದಿಂದಲೇ ಬುದ್ಧನ ಯಜ್ಞವಿರೋಧಿ ನಿಲವಿಗೆ ಮಾನ್ಯತೆ ದೊರೆಯಿತು.

ಮಹಾ ಮೇಧಾವಿ ಧರ್ಮಾನಂದ ಕೋಸಂಬೀ ಅವರು ಮರಾಠಿಯಲ್ಲಿ ರಚಿಸಿದ ಭಗವಾನ್ ಬುದ್ಧ ಗ್ರಂಥವನ್ನು ಆದ್ಯ ರಂಗಾಚಾರ್ಯ (ಶ್ರೀರಂಗ)ರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಈ ಅನುವಾದ ಗ್ರಂಥವನ್ನು 1956 ರಲ್ಲಿ ಪ್ರಕಟಿಸಿದೆ. ಆ ಗ್ರಂಥದ ಯಜ್ಞಯಾಗ ಅಧ್ಯಾಯದಲ್ಲಿನ ‘ಜನರಿಗೆ ಗೋ ಹಿಂಸೆ ಬೇಕಿದ್ದಿಲ್ಲ’ ಎಂಬ ಉಪಶೀರ್ಷಿಕೆಯಲ್ಲಿ ಕೆಳಗಿನ ವಿಚಾರ ವ್ಯಕ್ತವಾಗಿದೆ.
‘ಈ ದಾಸ, ದೂತ ಮತ್ತು ಆಳುಗಳು ಯಜ್ಞದ ಕೆಲಸಗಳನ್ನು ಅಳುತ್ತ ಅಳುತ್ತ ಯಾಕೆ ಮಾಡುತ್ತಿರಬಹುದಾಗಿದೆ? ಯಾಕೆಂದರೆ ಈ ಯಜ್ಞದಲ್ಲಿ ದನಗಳನ್ನು ಕೊಲ್ಲಲಾಗುತ್ತಿತ್ತು. ಅದನ್ನು ಬಡ ರೈತರಿಂದ ಕಸಿದುಕೊಳ್ಳಲಾಗುತ್ತಿತ್ತು. ಅದಕ್ಕಾಗಿ ರೈತರಿಗೆ ಬಹಳ ಕೆಡುಕೆನಿಸುತ್ತಿತ್ತು.. .. ..
ರಾಜರು ಮತ್ತು ಶ್ರೀಮಂತ ಜನರು ಸ್ವಂತ ತಮ್ಮ ಹಸುಗಳನ್ನೆ ಕೊಲ್ಲುತ್ತಿದ್ದರೆ ದಾಸರೂ ಆಳುಗಳೂ ಅಳುವ ಪ್ರಸಂಗಗಳು ಕಡಿಮೆ ಪ್ರಮಾಣದಲ್ಲಿ ಬರಬಹುದಾಗಿತ್ತು. ಆದರೆ ಈ ದನಗಳನ್ನು ತಮ್ಮಂತಹ ಬಡ ರೈತರ ಮೇಲೆ ಒತ್ತಾಯ ಮಾಡಿ ಕಸಿದುಕೊಳ್ಳುತ್ತಿದ್ದುದಕ್ಕಾಗಿ ಅವರಿಗೆ ಹೇಳದಷ್ಟು ದುಃಖವಾಗುವುದು ಸಹಜವಾಗಿದೆ.

‘ಹಿಂದೂ ಧರ್ಮಶಾಸ್ತ್ರಕ್ಕೆ ಬುನಾದಿಯಾಗಿರುವ ಮನುಸ್ಮøತಿಯ ವಸ್ತುನಿಷ್ಠ ಸಮಗ್ರ ಅನುವಾದ’ ಎಂದು ಹೇಳಿಕೊಂಡ ದಿವಂಗತ ಶೇಷ ನವರತ್ನ ಅವರು ಮನುಸ್ಮೃತಿಯ ಅನುವಾದವನ್ನು ನಿಜವಾಗಿಯೂ ನಿಷ್ಪಕ್ಷಪಾತಿಯಾಗಿ ಮಾಡಿದ್ದಾರೆ. ಮನು ಎಷ್ಟೊಂದು ಪಕ್ಷಪಾತಿ ಎಂಬುದಕ್ಕೆ ಆತನ ಮನುಸ್ಮೃತಿ ಗ್ರಂಥ ಸಾಕ್ಷಿಯಾಗಿದೆ.

ಮೇಲಿನ ಮೂರೂ ವರ್ಣದವರು ಮಾತ್ರ ಶುದ್ಧ ಮಾಂಸ ಭಕ್ಷಣೆ ಮಾಡಬೇಕು; ಶೂದ್ರರು ಮತ್ತು ಅತಿಶೂದ್ರರಿಗೆ ಇಂಥ ಮಾಂಸಾಹಾರ ಸೇವನೆಗೆ ಅವಕಾಶವಿರಬಾರದು ಎಂಬ ಕುತಂತ್ರದಿಂದ ಮನು ಅನೇಕ ಶ್ಲೋಕಗಳನ್ನು ರಚಿಸಿದ್ದಾನೆ. ‘ಯಜ್ಞಹಿಂಸೆ ಎಂಬುದು ಹಿಂಸೆ ಅಲ್ಲ’ ಎಂಬುದು ಅವನ ವಾದವಾಗಿದೆ. ಆದರೆ ‘ಶೂದ್ರರು ಪ್ರಾಣಿಹಿಂಸೆ ಮಾಡಬಾರದು’ ಎಂದು ಉಪದೇಶಿಸುತ್ತಾನೆ. ವೈದಿಕರು ಪ್ರಾಣಿಗಳನ್ನು ಯಜ್ಞದಲ್ಲಿ ಕೊಲ್ಲುವುದು ಧರ್ಮಸಮ್ಮತ. ಆದರೆ ಶೂದ್ರರು ಪ್ರಾಣಿವಧೆ ಮಾಡುವುದು ಧರ್ಮಬಾಹಿರ ಎಂದು ಎಚ್ಚರಿಸುತ್ತಾನೆ.
ಆಹಾರ ಸಂಸ್ಕೃತಿಯ ಮೇಲೆ ಪ್ರತಿಬಂಧ ಹೇರುವ ಕೆಳಗಿನ ಶ್ಲೋಕಗಳು ಮನುವಿನ ವರ್ಣಭೇದ ನೀತಿಗೆ ಕನ್ನಡಿ ಹಿಡಿಯುತ್ತವೆ.
ಮಧುಪರ್ಕೇ ಚ ಯಜ್ಞೇ ಚ ಪಿತೃದೈವತ ಕರ್ಮಣಿ |

ಅತ್ರೈವ ಪಶವೋ ಹಿಂಸ್ಯಾ ನಾನ್ಯತ್ರೇತ್ಯಬ್ರ ವೀನ್ಮನುಃ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 41)
(ಮಧುಪರ್ಕದಲ್ಲಿ, ಯಜ್ಞದಲ್ಲಿ, ದೇವ-ಪಿತೃ ಕರ್ಮಗಳಲ್ಲಿ ಮಾತ್ರ ಪಶುಗಳನ್ನು ಕೊಲ್ಲಬೇಕೇ ಹೊರತಾಗಿ ಬೇರೆ ಸಂದರ್ಭಗಳಲ್ಲಿ ಪಶುಹಿಂಸೆ ಸಲ್ಲದು ಎಂದು ಮನುವು ಹೇಳಿದ್ದಾನೆ.)

ಏಷ್ವರ್ಧೇಷು ಪಶೂನ್ ಹಿಂಸನ್ ವೇದತತ್ತ್ವಾರ್ಥವಿದ್ದ್ವಿಜಃ |
ಆತ್ಮಾನಂ ಚ ಪಶುಂ ಚೈವ ಗಮಯತ್ಯುತ್ತಮಾಂ ಗತಿಂ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 42)
(ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಮುಂತಾದ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ ಬ್ರಾಹ್ಮಣನು ಪಶುವನ್ನು ಕೊಂದರೆ ತನ್ನ ಜೊತೆಗೆ ಆ ಪಶುವಿಗೂ ಉತ್ತಮ ಗತಿಯನ್ನುಂಟುಮಾಡುತ್ತಾನೆ.)

ಯಾ ವೇದ ವಿಹಿತಾ ಹಿಂಸಾ ನಿಯತಾಸ್ಮಿಂಶ್ಚರಾಚರೇ |
ಅಹಿಂಸಾಮೇವ ತಾಂ ವಿದ್ಯಾದ್ವೇದಾದ್ಧರ್ಮೋ ಹಿ ನಿರ್ಬಭೌ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 44)
(ವೇದವಿಹತವಾದ ಎಂದರೆ ವೇದಗಳಲ್ಲಿ [ಯಜ್ಞಗಳಲ್ಲಿ] ಹೇಳಿದ ಹಿಂಸೆಯು ಶಾಸ್ತ್ರನಿಯಮ ರೀತ್ಯಾ ನಡೆಯುವುದರಿಂದ ಅದನ್ನು ಅಹಿಂಸೆಯಂದೇ ಪರಿಗಣಿಸಬೇಕು. ಏಕೆಂದರೆ ವೇದಗಳಿಂದಲೇ ಧರ್ಮ ಹುಟ್ಟಿದೆ.)

ಯಜ್ಞಾಯ ಜಗ್ಧಿರ್ಮಾಂಸಸ್ಯೇತ್ಯೇಷ ದೈವೋ ವಿಧಿಃ ಸ್ಮೃತಃ |
ಅತೋ ನ್ಯಥಾ ಪ್ರವೃತ್ತಿಸ್ತು ರಾಕ್ಷಸೋ ವಿಧಿರುಚ್ಯತೇ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 31)
(ಯಜ್ಞಕ್ಕಾಗಿ ಪಶುವನ್ನು ಕೊಂದು ಮಾಡಿದ ಮಾಂಸಭಕ್ಷಣವು ‘ದೈವಿಕರೀತಿ’ ಎಂದು ಹೇಳಲ್ಪಟ್ಟಿದೆ. ಇದಕ್ಕೆ ವಿರುದ್ಧವಾಗಿ ಅನ್ಯಸಂದರ್ಭಗಳಲ್ಲಿ ಮಾಡುವ ಅಕಾರಣ ಪಶುವಧೆ ಮತ್ತು ಮಾಂಸಭಕ್ಷಣವು ‘ರಾಕ್ಷಸರೀತಿ’ ಎಂದು ಹೇಳಲ್ಪಟ್ಟಿದೆ.)

ವೇದ ಪ್ರಮಾಣವಾದ ಮನುಸ್ಮೃತಿಯ ಪ್ರಕಾರ ಶೂದ್ರರಿಗೆ ಯಜ್ಞ ಮಾಡುವ ಹಕ್ಕಿಲ್ಲ. ಆದ್ದರಿಂದ ಅವರು ಪ್ರಾಣಿಹಿಂಸೆ ಮಾಡುವ ಹಾಗಿಲ್ಲ. (ಏನಿದ್ದರೂ ಅವರು ಸತ್ತದ್ದನ್ನೇ ತಿನ್ನಬೇಕು.) ಶೂದ್ರರು ಆಹಾರಕ್ಕಾಗಿ ಪ್ರಾಣಿವಧೆ ಮಾಡಿದರೆ ಅದು ರಾಕ್ಷಸೀ ಕೃತ್ಯ. ಸವರ್ಣೀಯರು ಯಜ್ಞದಲ್ಲಿ ಪ್ರಾಣಿಗಳನ್ನು ಕೊಂದು ತಿಂದರೆ ಅದು ದೈವಿಕರೀತಿ. ದೇವಮಾರ್ಗದಲ್ಲಿ ಪ್ರಾಣಿಗಳನ್ನು ಕೊಲ್ಲುವ ಹಕ್ಕು ವೈದಿಕರಿಗೆ ಮಾತ್ರ ಇದೆ. ಶೂದ್ರರಿಗೆ ಪ್ರಾಣಿಗಳನ್ನು ಆಹಾರವಾಗಿಸುವ ಹಕ್ಕಿಲ್ಲ. ಹೇಗಿದೆ ಮನುಧರ್ಮ ನ್ಯಾಯ?
(ರಂಜಾನ್ ದರ್ಗಾ ಅವರ “ಮೂರ್ತ ಮತ್ತು ಅಮೂರ್ತ” 2017 ಪುಸಕ್ತದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಜಾನ ಧರ್ಗಾರವರ ಲೇಖನ ಅರ್ಥಪೂರ್ಣ,ಇಂದು ಕೂಡ ದನಗಳಿಂದ ಉತ್ತಿಯಾದ ಹಾಲು ತುಪ್ಪಗಳನ್ನು ಸಾಂಕೇತಿಕವಾಗಿ ಯಜ್ಞ ಗಳಲ್ಲಿ ಬಳಸುತ್ತಿರುವರು.,ಇದು ಮನುವಿನ ಮುಂದುವರಿದ ಭಾಗವೇ.

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...