Homeಕರ್ನಾಟಕಆಹಾರ ಪರಂಪರೆ ಮತ್ತು ವಚನ ಚಳುವಳಿ: ಆಹಾರ ಸಂಸ್ಕೃತಿ ಏನಿತ್ತು? ಅದನ್ನು ನಿರ್ಬಂಧಿಸುತ್ತಿದ್ದದ್ದು ಯಾರು? -...

ಆಹಾರ ಪರಂಪರೆ ಮತ್ತು ವಚನ ಚಳುವಳಿ: ಆಹಾರ ಸಂಸ್ಕೃತಿ ಏನಿತ್ತು? ಅದನ್ನು ನಿರ್ಬಂಧಿಸುತ್ತಿದ್ದದ್ದು ಯಾರು? – ರಂಜಾನ್ ದರ್ಗಾ

- Advertisement -
- Advertisement -

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು. ಜೊತೆಗೆ ಆಹಾರದ ವಿಚಾರದಲ್ಲಿ ನಮ್ಮದೇ ಇತಿಹಾಸದ ಕೆಲವು ವಾಸ್ತವಗಳನ್ನು ತಿಳಿಸುವ ರಂಜಾನ್ ದರ್ಗಾ ಅವರ ಲೇಖನವೊಂದರ ಆಯ್ದ ಭಾಗವೂ ಇದರೊಂದಿಗಿದೆ.

ಚರ್ಮಣ್ವತಿ: ಹಿಂದೆ ರಾಜರು ಯಜ್ಞಗಳನ್ನು ವರ್ಷಗಟ್ಟಲೆ ಮಾಡುತ್ತಿದ್ದರು. ವೈದಿಕರು ವರ್ಷಗಟ್ಟಲೆ ಅಲ್ಲೇ ಉಳಿದು ದಕ್ಷಿಣೆ ಪಡೆಯುತ್ತ, ಮಾಂಸದೂಟ ಸವಿಯುತ್ತ ಕೂಡುತ್ತಿದ್ದರು. ಇಂಥ ಒಂದು ಪ್ರಸಂಗ ಕಾಳೀದಾಸನ ಮೇಘದೂತ ಖಂಡಕಾವ್ಯದಲ್ಲಿ ಬರುತ್ತದೆ. ರಂತಿದೇವ ಎಂಬ ರಾಜನ ಯಜ್ಞಕ್ಕಾಗಿ ವೈದಿಕರು ಪ್ರತಿದಿನ ಪಶುಗಳನ್ನು ಕೊಂದು ಅವುಗಳ ಚರ್ಮವನ್ನು ರಾಶಿ ಹಾಕುತ್ತಿದ್ದರು. ವರ್ಷಗಟ್ಟಲೆ ನಡೆದ ಈ ಯಜ್ಞದ ಕೊನೆಯ ದಿನದ ಕೊನೆಯ ಗಳಿಗೆಯಲ್ಲಿ ಬಹು ದೂರದಿಂದ ವೈದಿಕರ ಗುಂಪೊಂದು ಬಂದಿತು. ಆಗ ಮಾಂಸದ ತುಂಡುಗಳು ಖಾಲಿಯಾಗಿ ಬರಿ ಸೂಪ್ (ಸಂಸ್ಕೃತದ ಈ ಸೂಪ್ ಇಂಗ್ಲಿಷ್ ಭಾಷೆ ಸೇರಿದೆ) ಮಾತ್ರ ಉಳಿದಿತ್ತು. ಇದರಿಂದ ಕೆಂಡಾಮಂಡಲವಾದ ವೈದಿಕರು ರಂತಿದೇವನಿಗೆ ಶಾಪ ಕೊಡಲು ಮುಂದಾದರು. ಆಗ ಭಯಭೀತನಾದ ರಂತಿದೇವ ‘ತಾವು ತಡಮಾಡಿ ಬಂದಿದ್ದೀರಿ. ಈ ದೀರ್ಘಕಾಲದ ಯಜ್ಞದಲ್ಲಿ ಅದೆಷ್ಟು ಪಶುಗಳ ಬಲಿ ಕೊಡಲಾಗಿದೆ ಎಂಬುದಕ್ಕೆ ಈ ಚರ್ಮಗಳ ರಾಶಿಯನ್ನು ನೋಡಿರಿ. ಇವುಗಳ ರಕ್ತದಿಂದಲೇ ಹರಿಯುತ್ತಿರುವ ನದಿಯನ್ನು ನೋಡಿರಿ. ಇದು ಚರ್ಮಣ್ವತಿ ನದಿ ಎಂದು ಹೆಸರು ಪಡೆದಿದೆ’ ಎಂದು ಮನವಿ ಮಾಡಿದ. (ಆ ಚರ್ಮಣ್ವತಿ ನದಿಯೇ ಇಂದಿನ ಚಂಬಲ್ ನದಿ)

ದನವೇ ಧನ: ಈ ರಾಜರು ಇಷ್ಟೊಂದು ಪಶುಗಳನ್ನು ಎಲ್ಲಿಂದ ತರುತ್ತಿದ್ದರು ಎಂಬುದಕ್ಕೆ ಧರ್ಮಾನಂದ ಕೋಸಂಬಿಯವರ ‘ಭಗವಾನ ಬುದ್ಧ’ ಗ್ರಂಥದಲ್ಲಿ ಮಾಹಿತಿ ದೊರೆಯುತ್ತದೆ. ರಾಜರು, ಶ್ರೀಮಂತರು ಮತ್ತು ವೈದಿಕರು ಯಜ್ಞಕ್ಕಾಗಿ ರೈತರ ಸಾಕುಪ್ರಾಣಿಗಳನ್ನು ಯಾವುದೇ ಹಣ ಕೊಡದೆ ತರುತ್ತಿದ್ದರು. ರೈತಾಪಿ ಜನರಿಗೆ ದನವೇ ಧನವಾಗಿತ್ತು. (ದನ ಎಂಬುದು ಧನದಿಂದ ಬಂದಿದೆ. ದನವೇ ಧನ. ಇಂಗ್ಲಿಷ್‍ನಲ್ಲಿ ಕ್ಯಾಟಲ್‍ನಿಂದ ಕ್ಯಾಪಿಟಲ್ ಬಂದಿದೆ.) ಆದ್ದರಿಂದ ರಾಜ ಮುಂತಾದ ಬಲಾಢ್ಯರು ಮಹಾಯಜ್ಞ ಆರಂಭಿಸಿದರೆ ರೈತಾಪಿ ಜನ ಒಬ್ಬರಿಗೊಬ್ಬರು ತಬ್ಬಿಕೊಂಡು ಅಳುತ್ತಿದ್ದರು. ರೈತರು ತಮ್ಮ ದನಗಳನ್ನು ಯಜ್ಞಕ್ಕೆ ಬಲಿಪಶುಗಳಾಗಿ ಕೊಡದಿದ್ದಾಗ ಅವರ ಮೇಲೆ ಹಲ್ಲೆ ಮಾಡಿ ತೆಗೆದುಕೊಂಡು ಹೋಗುತ್ತಿದ್ದರು! ದೀರ್ಘ ಕಾಲದ ಆ ಮಹಾಯಜ್ಞಕ್ಕೆ ಬೇಕಾದ ಬಲಿಪಶುಗಳನ್ನು ಸೈನಿಕರು ಬಂದು ಕಂಡ ಕಂಡ ರೈತರ ಮನೆಗಳ ಮುಂದೆ ಕಟ್ಟಿದ ಪಶುಗಳನ್ನು ಹೊಡೆದುಕೊಂಡು ಹೋಗುತ್ತಿದ್ದರು. ಹಾಗೆ ದನಗಳನ್ನು ಹೊಡೆದುಕೊಂಡು ಹೋಗುವುದನ್ನು ಬುದ್ಧ ಗಮನಿಸಿದ್ದರಿಂದಲೇ ಯಜ್ಞಹಿಂಸೆಯನ್ನು ತಡೆಯಲು ನಿರ್ಧರಿಸಿದ. ದೊಡ್ಡವರ ಯಜ್ಞಕ್ಕಾಗಿ ತಮ್ಮ ದನಕರುಗಳನ್ನು ಪುಕ್ಕಟೆ ಕೊಡಬೇಕಾಗಿ ಬಂದದ್ದರಿಂದಲೇ ಬಡವರು ಮತ್ತು ರೈತಾಪಿ ಜನರು ಸಹಜವಾಗಿಯೇ ಯಜ್ಞವಿರೋಧಿಯಾಗಿದ್ದರು. ಜನ ಬೆಂಬಲವಿದ್ದ ಕಾರಣದಿಂದಲೇ ಬುದ್ಧನ ಯಜ್ಞವಿರೋಧಿ ನಿಲವಿಗೆ ಮಾನ್ಯತೆ ದೊರೆಯಿತು.

ಮಹಾ ಮೇಧಾವಿ ಧರ್ಮಾನಂದ ಕೋಸಂಬೀ ಅವರು ಮರಾಠಿಯಲ್ಲಿ ರಚಿಸಿದ ಭಗವಾನ್ ಬುದ್ಧ ಗ್ರಂಥವನ್ನು ಆದ್ಯ ರಂಗಾಚಾರ್ಯ (ಶ್ರೀರಂಗ)ರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಈ ಅನುವಾದ ಗ್ರಂಥವನ್ನು 1956 ರಲ್ಲಿ ಪ್ರಕಟಿಸಿದೆ. ಆ ಗ್ರಂಥದ ಯಜ್ಞಯಾಗ ಅಧ್ಯಾಯದಲ್ಲಿನ ‘ಜನರಿಗೆ ಗೋ ಹಿಂಸೆ ಬೇಕಿದ್ದಿಲ್ಲ’ ಎಂಬ ಉಪಶೀರ್ಷಿಕೆಯಲ್ಲಿ ಕೆಳಗಿನ ವಿಚಾರ ವ್ಯಕ್ತವಾಗಿದೆ.
‘ಈ ದಾಸ, ದೂತ ಮತ್ತು ಆಳುಗಳು ಯಜ್ಞದ ಕೆಲಸಗಳನ್ನು ಅಳುತ್ತ ಅಳುತ್ತ ಯಾಕೆ ಮಾಡುತ್ತಿರಬಹುದಾಗಿದೆ? ಯಾಕೆಂದರೆ ಈ ಯಜ್ಞದಲ್ಲಿ ದನಗಳನ್ನು ಕೊಲ್ಲಲಾಗುತ್ತಿತ್ತು. ಅದನ್ನು ಬಡ ರೈತರಿಂದ ಕಸಿದುಕೊಳ್ಳಲಾಗುತ್ತಿತ್ತು. ಅದಕ್ಕಾಗಿ ರೈತರಿಗೆ ಬಹಳ ಕೆಡುಕೆನಿಸುತ್ತಿತ್ತು.. .. ..
ರಾಜರು ಮತ್ತು ಶ್ರೀಮಂತ ಜನರು ಸ್ವಂತ ತಮ್ಮ ಹಸುಗಳನ್ನೆ ಕೊಲ್ಲುತ್ತಿದ್ದರೆ ದಾಸರೂ ಆಳುಗಳೂ ಅಳುವ ಪ್ರಸಂಗಗಳು ಕಡಿಮೆ ಪ್ರಮಾಣದಲ್ಲಿ ಬರಬಹುದಾಗಿತ್ತು. ಆದರೆ ಈ ದನಗಳನ್ನು ತಮ್ಮಂತಹ ಬಡ ರೈತರ ಮೇಲೆ ಒತ್ತಾಯ ಮಾಡಿ ಕಸಿದುಕೊಳ್ಳುತ್ತಿದ್ದುದಕ್ಕಾಗಿ ಅವರಿಗೆ ಹೇಳದಷ್ಟು ದುಃಖವಾಗುವುದು ಸಹಜವಾಗಿದೆ.

‘ಹಿಂದೂ ಧರ್ಮಶಾಸ್ತ್ರಕ್ಕೆ ಬುನಾದಿಯಾಗಿರುವ ಮನುಸ್ಮøತಿಯ ವಸ್ತುನಿಷ್ಠ ಸಮಗ್ರ ಅನುವಾದ’ ಎಂದು ಹೇಳಿಕೊಂಡ ದಿವಂಗತ ಶೇಷ ನವರತ್ನ ಅವರು ಮನುಸ್ಮೃತಿಯ ಅನುವಾದವನ್ನು ನಿಜವಾಗಿಯೂ ನಿಷ್ಪಕ್ಷಪಾತಿಯಾಗಿ ಮಾಡಿದ್ದಾರೆ. ಮನು ಎಷ್ಟೊಂದು ಪಕ್ಷಪಾತಿ ಎಂಬುದಕ್ಕೆ ಆತನ ಮನುಸ್ಮೃತಿ ಗ್ರಂಥ ಸಾಕ್ಷಿಯಾಗಿದೆ.

ಮೇಲಿನ ಮೂರೂ ವರ್ಣದವರು ಮಾತ್ರ ಶುದ್ಧ ಮಾಂಸ ಭಕ್ಷಣೆ ಮಾಡಬೇಕು; ಶೂದ್ರರು ಮತ್ತು ಅತಿಶೂದ್ರರಿಗೆ ಇಂಥ ಮಾಂಸಾಹಾರ ಸೇವನೆಗೆ ಅವಕಾಶವಿರಬಾರದು ಎಂಬ ಕುತಂತ್ರದಿಂದ ಮನು ಅನೇಕ ಶ್ಲೋಕಗಳನ್ನು ರಚಿಸಿದ್ದಾನೆ. ‘ಯಜ್ಞಹಿಂಸೆ ಎಂಬುದು ಹಿಂಸೆ ಅಲ್ಲ’ ಎಂಬುದು ಅವನ ವಾದವಾಗಿದೆ. ಆದರೆ ‘ಶೂದ್ರರು ಪ್ರಾಣಿಹಿಂಸೆ ಮಾಡಬಾರದು’ ಎಂದು ಉಪದೇಶಿಸುತ್ತಾನೆ. ವೈದಿಕರು ಪ್ರಾಣಿಗಳನ್ನು ಯಜ್ಞದಲ್ಲಿ ಕೊಲ್ಲುವುದು ಧರ್ಮಸಮ್ಮತ. ಆದರೆ ಶೂದ್ರರು ಪ್ರಾಣಿವಧೆ ಮಾಡುವುದು ಧರ್ಮಬಾಹಿರ ಎಂದು ಎಚ್ಚರಿಸುತ್ತಾನೆ.
ಆಹಾರ ಸಂಸ್ಕೃತಿಯ ಮೇಲೆ ಪ್ರತಿಬಂಧ ಹೇರುವ ಕೆಳಗಿನ ಶ್ಲೋಕಗಳು ಮನುವಿನ ವರ್ಣಭೇದ ನೀತಿಗೆ ಕನ್ನಡಿ ಹಿಡಿಯುತ್ತವೆ.
ಮಧುಪರ್ಕೇ ಚ ಯಜ್ಞೇ ಚ ಪಿತೃದೈವತ ಕರ್ಮಣಿ |

ಅತ್ರೈವ ಪಶವೋ ಹಿಂಸ್ಯಾ ನಾನ್ಯತ್ರೇತ್ಯಬ್ರ ವೀನ್ಮನುಃ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 41)
(ಮಧುಪರ್ಕದಲ್ಲಿ, ಯಜ್ಞದಲ್ಲಿ, ದೇವ-ಪಿತೃ ಕರ್ಮಗಳಲ್ಲಿ ಮಾತ್ರ ಪಶುಗಳನ್ನು ಕೊಲ್ಲಬೇಕೇ ಹೊರತಾಗಿ ಬೇರೆ ಸಂದರ್ಭಗಳಲ್ಲಿ ಪಶುಹಿಂಸೆ ಸಲ್ಲದು ಎಂದು ಮನುವು ಹೇಳಿದ್ದಾನೆ.)

ಏಷ್ವರ್ಧೇಷು ಪಶೂನ್ ಹಿಂಸನ್ ವೇದತತ್ತ್ವಾರ್ಥವಿದ್ದ್ವಿಜಃ |
ಆತ್ಮಾನಂ ಚ ಪಶುಂ ಚೈವ ಗಮಯತ್ಯುತ್ತಮಾಂ ಗತಿಂ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 42)
(ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಮುಂತಾದ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ ಬ್ರಾಹ್ಮಣನು ಪಶುವನ್ನು ಕೊಂದರೆ ತನ್ನ ಜೊತೆಗೆ ಆ ಪಶುವಿಗೂ ಉತ್ತಮ ಗತಿಯನ್ನುಂಟುಮಾಡುತ್ತಾನೆ.)

ಯಾ ವೇದ ವಿಹಿತಾ ಹಿಂಸಾ ನಿಯತಾಸ್ಮಿಂಶ್ಚರಾಚರೇ |
ಅಹಿಂಸಾಮೇವ ತಾಂ ವಿದ್ಯಾದ್ವೇದಾದ್ಧರ್ಮೋ ಹಿ ನಿರ್ಬಭೌ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 44)
(ವೇದವಿಹತವಾದ ಎಂದರೆ ವೇದಗಳಲ್ಲಿ [ಯಜ್ಞಗಳಲ್ಲಿ] ಹೇಳಿದ ಹಿಂಸೆಯು ಶಾಸ್ತ್ರನಿಯಮ ರೀತ್ಯಾ ನಡೆಯುವುದರಿಂದ ಅದನ್ನು ಅಹಿಂಸೆಯಂದೇ ಪರಿಗಣಿಸಬೇಕು. ಏಕೆಂದರೆ ವೇದಗಳಿಂದಲೇ ಧರ್ಮ ಹುಟ್ಟಿದೆ.)

ಯಜ್ಞಾಯ ಜಗ್ಧಿರ್ಮಾಂಸಸ್ಯೇತ್ಯೇಷ ದೈವೋ ವಿಧಿಃ ಸ್ಮೃತಃ |
ಅತೋ ನ್ಯಥಾ ಪ್ರವೃತ್ತಿಸ್ತು ರಾಕ್ಷಸೋ ವಿಧಿರುಚ್ಯತೇ ||
( ಮನುಸ್ಮೃತಿ ಅಧ್ಯಾಯ 5 ಶ್ಲೋಕ 31)
(ಯಜ್ಞಕ್ಕಾಗಿ ಪಶುವನ್ನು ಕೊಂದು ಮಾಡಿದ ಮಾಂಸಭಕ್ಷಣವು ‘ದೈವಿಕರೀತಿ’ ಎಂದು ಹೇಳಲ್ಪಟ್ಟಿದೆ. ಇದಕ್ಕೆ ವಿರುದ್ಧವಾಗಿ ಅನ್ಯಸಂದರ್ಭಗಳಲ್ಲಿ ಮಾಡುವ ಅಕಾರಣ ಪಶುವಧೆ ಮತ್ತು ಮಾಂಸಭಕ್ಷಣವು ‘ರಾಕ್ಷಸರೀತಿ’ ಎಂದು ಹೇಳಲ್ಪಟ್ಟಿದೆ.)

ವೇದ ಪ್ರಮಾಣವಾದ ಮನುಸ್ಮೃತಿಯ ಪ್ರಕಾರ ಶೂದ್ರರಿಗೆ ಯಜ್ಞ ಮಾಡುವ ಹಕ್ಕಿಲ್ಲ. ಆದ್ದರಿಂದ ಅವರು ಪ್ರಾಣಿಹಿಂಸೆ ಮಾಡುವ ಹಾಗಿಲ್ಲ. (ಏನಿದ್ದರೂ ಅವರು ಸತ್ತದ್ದನ್ನೇ ತಿನ್ನಬೇಕು.) ಶೂದ್ರರು ಆಹಾರಕ್ಕಾಗಿ ಪ್ರಾಣಿವಧೆ ಮಾಡಿದರೆ ಅದು ರಾಕ್ಷಸೀ ಕೃತ್ಯ. ಸವರ್ಣೀಯರು ಯಜ್ಞದಲ್ಲಿ ಪ್ರಾಣಿಗಳನ್ನು ಕೊಂದು ತಿಂದರೆ ಅದು ದೈವಿಕರೀತಿ. ದೇವಮಾರ್ಗದಲ್ಲಿ ಪ್ರಾಣಿಗಳನ್ನು ಕೊಲ್ಲುವ ಹಕ್ಕು ವೈದಿಕರಿಗೆ ಮಾತ್ರ ಇದೆ. ಶೂದ್ರರಿಗೆ ಪ್ರಾಣಿಗಳನ್ನು ಆಹಾರವಾಗಿಸುವ ಹಕ್ಕಿಲ್ಲ. ಹೇಗಿದೆ ಮನುಧರ್ಮ ನ್ಯಾಯ?
(ರಂಜಾನ್ ದರ್ಗಾ ಅವರ “ಮೂರ್ತ ಮತ್ತು ಅಮೂರ್ತ” 2017 ಪುಸಕ್ತದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಜಾನ ಧರ್ಗಾರವರ ಲೇಖನ ಅರ್ಥಪೂರ್ಣ,ಇಂದು ಕೂಡ ದನಗಳಿಂದ ಉತ್ತಿಯಾದ ಹಾಲು ತುಪ್ಪಗಳನ್ನು ಸಾಂಕೇತಿಕವಾಗಿ ಯಜ್ಞ ಗಳಲ್ಲಿ ಬಳಸುತ್ತಿರುವರು.,ಇದು ಮನುವಿನ ಮುಂದುವರಿದ ಭಾಗವೇ.

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...