Homeಕರ್ನಾಟಕಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು.

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮೆಲ್ಲರ ಸಾಕ್ಷಿ ಪ್ರಜ್ಞೆಯಾದ ಗಿರೀಶ್ ಕಾರ್ನಾಡರು ನಮ್ಮಿಂದ ಇಂದು ಅಗಲಿ ಹೋಗಿದ್ದಾರೆ. ಆದರೆ ಅವರು ಕಟ್ಟಿಕೊಟ್ಟ, ಬಿತ್ತಿ ಹೋದ ಬೀಜಗಳು ನಮ್ಮೆಲ್ಲರ ಅಂತರಂಗದಲ್ಲಿ ಮೊಳಕೆ ಒಡೆದಿವೆ. ಅವರ ವಿಚಾರಧಾರೆಯ ಎಳೆ ಹಿಡಿದು ಹೊರಟ ಎಷ್ಟೋ ಕನಸಿನ ಹೂಗಳು ಈಗಾಗಲೆ ಮಿಡಿಯಾಗಿ, ಕಾಯಾಗಿ , ಹಣ್ಣಾಗಿ ನಮ್ಮ ಕಣ್ಣ ಮುಂದೆಯೆ ನಳನಳಿಸುತ್ತಿವೆ. ಗಿರೀಶ್ ಕರ್ನಾಡರು ತಲೆದಂಡ ಬರೆದಾಗ ಅವರ ಬಗೆಗೆ ಕೆಲವು ಆಕ್ಷೇಪಗಳು ಇದ್ದವು. ಅವನ್ನು ಹೊರತು ಪಡಿಸಿ ಅವರೊಬ್ಬ ಗಟ್ಟಿಯಾದ ನಿಲುವುಗಳು ಹೊಂದಿದ ಬರಹಗಾರರಾಗಿದ್ದರು. ನಿರ್ದೇಶಕರಾಗಿದ್ದರು. ಅತ್ಯುತ್ತಮ ನಟರೂ ಆಗಿದ್ದರು.

ಇದಷ್ಟೇ ಅಲ್ಲದೆ ಕಲಾವಿದ, ಬರಹಗಾರ, ನಾಟಕಕಾರ ಕೇವಲ ತನ್ನ ಲೋಕದಲ್ಲಿ ಮುಳುಗಿ ಹೋಗದೆ ವಾಸ್ತವಿಕ ಜಗತ್ತಿನಲ್ಲೂ ತನ್ನ ಪಾತ್ರವನ್ನು ಅವಕಾಶ ಸಿಕ್ಕಾಗಲೆಲ್ಲ ತೋರ್ಪಡಿಸುತ್ತಿದ್ದರು. ಪಿ.ಲಂಕೇಶ್ ಅವರೊಂದಿಗೆ ಬೆಳೆದ ಸಖ್ಯ, ಗೌರಿ ಲಂಕೇಶ್ ವರೆಗೂ ಹಾಗೆ ಮುಂದುವರೆಯಿತು. ರಾಷ್ಟ್ರದಲ್ಲಿ ಹಿಂದೂ ಭಕ್ತಿಯ ಹೆಸರಿನ ಮೇಲೆ ನಡೆದ ನಂಗಾನಾಚ ವಿರುದ್ಧ ಧ್ವನಿ ಎತ್ತಿದವರಲ್ಲಿ ಕಾರ್ನಾಡರೂ ಒಬ್ಬರಾಗಿದ್ದರು. ದನದ ಸೆಗಣಿ, ಗಂಜಳಕ್ಕಿಂತಲೂ ಮನುಷ್ಯತ್ವ ಶ್ರೇಷ್ಠ ಎಂಬುದು ಅವರ ಚಿಂತನೆಯ ಒಟ್ಟು ಧ್ವನಿಯಾಗಿತ್ತು.

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು. ತಮ್ಮ ಗಟ್ಟಿಯಾದ ಅಷ್ಟೇ ದಿಟ್ಟವಾದ ಹೆಜ್ಜೆಗಳನ್ನು ಇಡುವ ಮೂಲಕ ಕನಸುಗಳನ್ನೂ ಕಟ್ಟಿಕೊಟ್ಟರು. ಇಡೀ ನಾಡಿನ ತುಂಬ ತಮ್ಮ ಚಟುವಟಿಕೆಗಳ ಮೂಲಕ ಎಲ್ಲರ ಹೆಗ್ಗಳಿಕೆ ಪಾತ್ರರಾದರು. ಜ್ಞಾನಪೀಠ ಪ್ರಶಸ್ತಿಯ ಪುರಸ್ಕಾರವೂ ಅವರ ಮಡಿಲಿಗೆ ಏರಿತು.

ಆದರೆ ಬಹಳಷ್ಟು ಜನ ಸಾಹಿತಿಗಳು ಕಲಾವಿದರು ಪ್ರಶಸ್ತಿ ಫಲಗಳು, ಸ್ಥಾನ ಮಾನಗಳು ದೊರೆತಾದ ಮೇಲೆ ಎಲ್ಲರ ಜೊತೆ ಅಂದರೆ ಸಾಮಾನ್ಯರ ಜೊತೆ ಸಾಮಾನ್ಯರಾಗಿ ಬೆರೆಯುವುದು ಕಮ್ಮಿ. ತಮ್ಮ ಎಂದಿನ ಪ್ರಶಸ್ತಿಯ ಗುಂಗಿನಿಂದ ಹೊರಗಡೆ ಬಂದಿರುವುದಿಲ್ಲ. ಆ ಪ್ರಶಸ್ತಿ ಹಾರ ತುರಾಯಿಗಳಲ್ಲಿಯೇ ಕೊಳೆತು ಹೋಗಿರುತ್ತಾರೆ. ಈ ಮಾತಿಗೆ ಕಾರ್ನಾಡರು ಅಪವಾದವಾಗಿದ್ದರು. ತಾವು ನಂಬಿದ ತತ್ವ ಸಿದ್ಧಾಂತಗಳು ತಮ್ಮ ಕಣ್ಣ ಮುಂದೆಯೆ ನಗೆಪಾಟಲಿಗೆ ಈಡಾಗುತ್ತಿದ್ದರೆ ತಕ್ಷಣವೆ ಅದಕ್ಕೆ ಸ್ಪಂದಿಸುತ್ತಿದ್ದರು. ಬೆಂಗಳೂರಿನ ಟೌನ ಹಾಲ್ ಮುಂದೆ ನಡೆಯುವ ಏನೆಲ್ಲ ಪ್ರತಿಭಟನೆಯಲ್ಲಿಯೂ ಅವರ ಹಾಜರಿ ಇರುತ್ತಿತ್ತು.

ಪ್ರಜ್ಞಾವಂತ ನಡಾವಳಿಯ ಬರಹಗಾರರನ್ನು ಕಂಡರೆ ಗುಲಾಮರಿಗೆ ಉರಿ ಉರಿ. ಕಾರ್ನಾಡರ ಬಗೆಗೂ ಸಂಘಿಗಳು ಕಿಡಿಕಾರಿದವು. ನಾನೂ ನಗರ ನಕ್ಸಲ್ ವಾದಿ ಎಂದು ಬರಹವೊಂದನ್ನು ಕೊರಳಲ್ಲಿ ಹಾಕಿಕೊಂಡು ಪ್ರತಿಭಟನೆಗೆ ಇಳಿದಾಗ ಬಹಳಷ್ಟು ಜನ ಕುಹಕದ ಮಾತನಾಡಿದರು. ಆಗಲೂ ಅವರ ಮಾತನ್ನು ಕಾರ್ನಾಡ ನಗು ನಗುತ್ತಾ ಸ್ವೀಕರಿಸಿದರು. ಏಕೆಂದರೆ ಅವರಿಗೆ ಸತ್ಯ ಗೊತ್ತಿತ್ತು. ಸನಾತನವಾದಿಗಳು ವಿಚಾರವಾದವನ್ನು ಒಪ್ಪಲಾರರು. ಧರ್ಮವನ್ನು ಅಫೀಮನ್ನಾಗಿ ಜನಗಳಿಗೆ ನೀಡುವವರು ಧರ್ಮವೊಂದು ದಯಯ ತಳಹದಿ ಎಂದು ಅರಿಯಲಾರರು ಎಂದು.

‘ನನ್ನ ರಾಜ್ಯದಲ್ಲಿ ಪ್ರತಿಯೊಂದು ಕಾರ್ಯವೂ ಪ್ರಾರ್ಥನೆಯಾಗಬೇಕು. ಪ್ರತಿಯೊಂದು ಪ್ರಾರ್ಥನೆಯೂ ನಮ್ಮನ್ನು ದೇವರೆಡೆಗೆ ಒಯ್ಯುವ ಮೆಟ್ಟಿಲಾಗಬೇಕು. ಆದರೆ ಇಲ್ಲಿ ಪ್ರಾರ್ಥನೆಗೂ ರಾಜಕಾರಣದ ಸೋಂಕು ಬಡಿದಿದೆ’ ಎಂದು ತುಘಲಕ್ ನಾಟಕದಲ್ಲಿ ಬರೆಯುವ ಮೂಲಕ ನಮ್ಮ ಇಂದಿನ ರಾಜಕೀಯ ವಸ್ತು ಸ್ಥಿತಿಯನ್ನು ಬಿಚ್ಚಿಟ್ಟರು.

ಒಬ್ಬ ಅಗಸ ತೊಳೆದಷ್ಟು ಕೊಳೆಯನ್ನು ಜಗತ್ತಿನ ಯಾವ ಧರ್ಮ ಗುರುವು ತೊಳೆದಿಲ್ಲ! ಎಂಬುದು ಅವರಿಗೆ ಖಚಿತವಾಗಿತ್ತು. ಆದರೂ ಅವರು ತಮ್ಮ ಮಾನವೀಯ ನಡಾವಳಿಕೆಗಳ ಮೂಲಕ ಸಮಾಜಕ್ಕೆ ಅಂಟಿದ ಕೊಳೆಯನ್ನು ತೊಳೆಯಲು ಮುಂದಾಗುತ್ತಿದ್ದರು. ಆಗ ರಾಕ್ಷಸಿ ಪ್ರವೃತಿಯನ್ನು ರೂಢಿಸಿಕೊಂಡ ಕೆಲವು ಮನಸ್ಸುಗಳು ಈಗ ಸಂತೋಷ ವ್ಯಕ್ತ ಪಡಿಸುತ್ತಿವೆ. ಸಾವನ್ನು ಮರಣವೇ ಮಹನವಮಿ ಎಂದು ಸ್ವೀಕರಿಸುವ ಛಲ ಕಾರ್ನಾಡರಿಗೆ ಇತ್ತು. ಆದ್ದರಿಂದಲೆ ತಮ್ಮ ಜೀವವಿಲ್ಲದ ದೇಹಕ್ಕೆ ಸರಕಾರಿ ಸಕಲ ಗೌರವ ಎಂಬ ನಾಟಕ ಗೀಟಕ ಬೇಡ ಎಂದು ತಮ್ಮ ಕುಟುಂಬದ ಸದಸ್ಯರಲ್ಲಿ ಹೇಳಿಕೊಂಡಿದ್ದಾರೆ. ಅವರ ಶರೀರವೂ ಸಹ ಯಾವುದೆ ಧಾರ್ಮಿಕ ವಿಧಿ ವಿಧಾನ ಇಲ್ಲದೆ ನೆರವೇರಿಸಬೇಕೆಂದೂ ತಿಳಿಸಿದ್ದಾರೆ. ಈ ಮೂಲಕ ಅವರು ಅನಂತದೆಡೆಗೆ ಪಯಣಿಸಿದ್ದಾರೆ.

ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು
ಬಯಲು ಬಯಲಾಯಿತ್ತಯ್ಯಾ
ಬಯಲ ಜೀವನ ಬಯಲ ಭಾವನೆ
ಬಯಲು ಬಯಲಾಗಿ ಬಯಲಾಯಿತ್ತಯ್ಯಾ
ನಿಮ್ಮ ಪೂಜಿಸಿದವರು ಮುನ್ನವೆ ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರಾ

ಎಂಬ ಅಲ್ಲಮಪ್ರಭುವಿನ ವಚನದಂತೆ ಬಯಲು ಬಯಲನ್ನು ಬಿತ್ತಿ ಬಯಲು ಬಯಲನ್ನೆ ಬೆಳೆದು ಬಯಲು ಬಯಲಾದರು ಕರ್ನಾಡರು. ಅವರ ಬಯಲ ಜೀವನ ಬಯಲ ಭಾವನೆ ನಮ್ಮೆಲ್ಲರೊಳಗೆ ಬಯಲು ಬಯಲಾಯಿತ್ತು. ಸಮಾಜವನ್ನು ಪ್ರೀತಿಸಿದ ಗೌರವಿಸಿದ ಸಮಾಜದೊಂದಿಗೆ ಜೀವಂತವಾಗಿ ಸ್ಪಂದಿಸಿ ಜೀವಂತ ಬದುಕಿದ ಕಾರ್ನಾಡ ಸತ್ಯವನ್ನು ನಂಬಿ ಬಯಲಾಗಿದ್ದಾರೆ. ಅಂದರೆ ನಮ್ಮೆಲ್ಲರೊಳಗೆ ಬೆರೆತು ಹೋಗಿದ್ದಾರೆ. ಕಾರ್ನಾಡರಿಗೆ ಸಾವು ಇಲ್ಲ. ಅರಿತವರು ಸಾಯುವುದೂ ಇಲ್ಲ. ಅರಿತುಕೊಂಡಿದ್ದ ಕಾರ್ನಾಡರು ನಮ್ಮೆಲ್ಲರೊಳಗೆ ಪ್ರಜ್ಞೆಯಾಗಿ ಜೀವಂತವಾಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...