Homeಕರ್ನಾಟಕಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು.

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮೆಲ್ಲರ ಸಾಕ್ಷಿ ಪ್ರಜ್ಞೆಯಾದ ಗಿರೀಶ್ ಕಾರ್ನಾಡರು ನಮ್ಮಿಂದ ಇಂದು ಅಗಲಿ ಹೋಗಿದ್ದಾರೆ. ಆದರೆ ಅವರು ಕಟ್ಟಿಕೊಟ್ಟ, ಬಿತ್ತಿ ಹೋದ ಬೀಜಗಳು ನಮ್ಮೆಲ್ಲರ ಅಂತರಂಗದಲ್ಲಿ ಮೊಳಕೆ ಒಡೆದಿವೆ. ಅವರ ವಿಚಾರಧಾರೆಯ ಎಳೆ ಹಿಡಿದು ಹೊರಟ ಎಷ್ಟೋ ಕನಸಿನ ಹೂಗಳು ಈಗಾಗಲೆ ಮಿಡಿಯಾಗಿ, ಕಾಯಾಗಿ , ಹಣ್ಣಾಗಿ ನಮ್ಮ ಕಣ್ಣ ಮುಂದೆಯೆ ನಳನಳಿಸುತ್ತಿವೆ. ಗಿರೀಶ್ ಕರ್ನಾಡರು ತಲೆದಂಡ ಬರೆದಾಗ ಅವರ ಬಗೆಗೆ ಕೆಲವು ಆಕ್ಷೇಪಗಳು ಇದ್ದವು. ಅವನ್ನು ಹೊರತು ಪಡಿಸಿ ಅವರೊಬ್ಬ ಗಟ್ಟಿಯಾದ ನಿಲುವುಗಳು ಹೊಂದಿದ ಬರಹಗಾರರಾಗಿದ್ದರು. ನಿರ್ದೇಶಕರಾಗಿದ್ದರು. ಅತ್ಯುತ್ತಮ ನಟರೂ ಆಗಿದ್ದರು.

ಇದಷ್ಟೇ ಅಲ್ಲದೆ ಕಲಾವಿದ, ಬರಹಗಾರ, ನಾಟಕಕಾರ ಕೇವಲ ತನ್ನ ಲೋಕದಲ್ಲಿ ಮುಳುಗಿ ಹೋಗದೆ ವಾಸ್ತವಿಕ ಜಗತ್ತಿನಲ್ಲೂ ತನ್ನ ಪಾತ್ರವನ್ನು ಅವಕಾಶ ಸಿಕ್ಕಾಗಲೆಲ್ಲ ತೋರ್ಪಡಿಸುತ್ತಿದ್ದರು. ಪಿ.ಲಂಕೇಶ್ ಅವರೊಂದಿಗೆ ಬೆಳೆದ ಸಖ್ಯ, ಗೌರಿ ಲಂಕೇಶ್ ವರೆಗೂ ಹಾಗೆ ಮುಂದುವರೆಯಿತು. ರಾಷ್ಟ್ರದಲ್ಲಿ ಹಿಂದೂ ಭಕ್ತಿಯ ಹೆಸರಿನ ಮೇಲೆ ನಡೆದ ನಂಗಾನಾಚ ವಿರುದ್ಧ ಧ್ವನಿ ಎತ್ತಿದವರಲ್ಲಿ ಕಾರ್ನಾಡರೂ ಒಬ್ಬರಾಗಿದ್ದರು. ದನದ ಸೆಗಣಿ, ಗಂಜಳಕ್ಕಿಂತಲೂ ಮನುಷ್ಯತ್ವ ಶ್ರೇಷ್ಠ ಎಂಬುದು ಅವರ ಚಿಂತನೆಯ ಒಟ್ಟು ಧ್ವನಿಯಾಗಿತ್ತು.

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು. ತಮ್ಮ ಗಟ್ಟಿಯಾದ ಅಷ್ಟೇ ದಿಟ್ಟವಾದ ಹೆಜ್ಜೆಗಳನ್ನು ಇಡುವ ಮೂಲಕ ಕನಸುಗಳನ್ನೂ ಕಟ್ಟಿಕೊಟ್ಟರು. ಇಡೀ ನಾಡಿನ ತುಂಬ ತಮ್ಮ ಚಟುವಟಿಕೆಗಳ ಮೂಲಕ ಎಲ್ಲರ ಹೆಗ್ಗಳಿಕೆ ಪಾತ್ರರಾದರು. ಜ್ಞಾನಪೀಠ ಪ್ರಶಸ್ತಿಯ ಪುರಸ್ಕಾರವೂ ಅವರ ಮಡಿಲಿಗೆ ಏರಿತು.

ಆದರೆ ಬಹಳಷ್ಟು ಜನ ಸಾಹಿತಿಗಳು ಕಲಾವಿದರು ಪ್ರಶಸ್ತಿ ಫಲಗಳು, ಸ್ಥಾನ ಮಾನಗಳು ದೊರೆತಾದ ಮೇಲೆ ಎಲ್ಲರ ಜೊತೆ ಅಂದರೆ ಸಾಮಾನ್ಯರ ಜೊತೆ ಸಾಮಾನ್ಯರಾಗಿ ಬೆರೆಯುವುದು ಕಮ್ಮಿ. ತಮ್ಮ ಎಂದಿನ ಪ್ರಶಸ್ತಿಯ ಗುಂಗಿನಿಂದ ಹೊರಗಡೆ ಬಂದಿರುವುದಿಲ್ಲ. ಆ ಪ್ರಶಸ್ತಿ ಹಾರ ತುರಾಯಿಗಳಲ್ಲಿಯೇ ಕೊಳೆತು ಹೋಗಿರುತ್ತಾರೆ. ಈ ಮಾತಿಗೆ ಕಾರ್ನಾಡರು ಅಪವಾದವಾಗಿದ್ದರು. ತಾವು ನಂಬಿದ ತತ್ವ ಸಿದ್ಧಾಂತಗಳು ತಮ್ಮ ಕಣ್ಣ ಮುಂದೆಯೆ ನಗೆಪಾಟಲಿಗೆ ಈಡಾಗುತ್ತಿದ್ದರೆ ತಕ್ಷಣವೆ ಅದಕ್ಕೆ ಸ್ಪಂದಿಸುತ್ತಿದ್ದರು. ಬೆಂಗಳೂರಿನ ಟೌನ ಹಾಲ್ ಮುಂದೆ ನಡೆಯುವ ಏನೆಲ್ಲ ಪ್ರತಿಭಟನೆಯಲ್ಲಿಯೂ ಅವರ ಹಾಜರಿ ಇರುತ್ತಿತ್ತು.

ಪ್ರಜ್ಞಾವಂತ ನಡಾವಳಿಯ ಬರಹಗಾರರನ್ನು ಕಂಡರೆ ಗುಲಾಮರಿಗೆ ಉರಿ ಉರಿ. ಕಾರ್ನಾಡರ ಬಗೆಗೂ ಸಂಘಿಗಳು ಕಿಡಿಕಾರಿದವು. ನಾನೂ ನಗರ ನಕ್ಸಲ್ ವಾದಿ ಎಂದು ಬರಹವೊಂದನ್ನು ಕೊರಳಲ್ಲಿ ಹಾಕಿಕೊಂಡು ಪ್ರತಿಭಟನೆಗೆ ಇಳಿದಾಗ ಬಹಳಷ್ಟು ಜನ ಕುಹಕದ ಮಾತನಾಡಿದರು. ಆಗಲೂ ಅವರ ಮಾತನ್ನು ಕಾರ್ನಾಡ ನಗು ನಗುತ್ತಾ ಸ್ವೀಕರಿಸಿದರು. ಏಕೆಂದರೆ ಅವರಿಗೆ ಸತ್ಯ ಗೊತ್ತಿತ್ತು. ಸನಾತನವಾದಿಗಳು ವಿಚಾರವಾದವನ್ನು ಒಪ್ಪಲಾರರು. ಧರ್ಮವನ್ನು ಅಫೀಮನ್ನಾಗಿ ಜನಗಳಿಗೆ ನೀಡುವವರು ಧರ್ಮವೊಂದು ದಯಯ ತಳಹದಿ ಎಂದು ಅರಿಯಲಾರರು ಎಂದು.

‘ನನ್ನ ರಾಜ್ಯದಲ್ಲಿ ಪ್ರತಿಯೊಂದು ಕಾರ್ಯವೂ ಪ್ರಾರ್ಥನೆಯಾಗಬೇಕು. ಪ್ರತಿಯೊಂದು ಪ್ರಾರ್ಥನೆಯೂ ನಮ್ಮನ್ನು ದೇವರೆಡೆಗೆ ಒಯ್ಯುವ ಮೆಟ್ಟಿಲಾಗಬೇಕು. ಆದರೆ ಇಲ್ಲಿ ಪ್ರಾರ್ಥನೆಗೂ ರಾಜಕಾರಣದ ಸೋಂಕು ಬಡಿದಿದೆ’ ಎಂದು ತುಘಲಕ್ ನಾಟಕದಲ್ಲಿ ಬರೆಯುವ ಮೂಲಕ ನಮ್ಮ ಇಂದಿನ ರಾಜಕೀಯ ವಸ್ತು ಸ್ಥಿತಿಯನ್ನು ಬಿಚ್ಚಿಟ್ಟರು.

ಒಬ್ಬ ಅಗಸ ತೊಳೆದಷ್ಟು ಕೊಳೆಯನ್ನು ಜಗತ್ತಿನ ಯಾವ ಧರ್ಮ ಗುರುವು ತೊಳೆದಿಲ್ಲ! ಎಂಬುದು ಅವರಿಗೆ ಖಚಿತವಾಗಿತ್ತು. ಆದರೂ ಅವರು ತಮ್ಮ ಮಾನವೀಯ ನಡಾವಳಿಕೆಗಳ ಮೂಲಕ ಸಮಾಜಕ್ಕೆ ಅಂಟಿದ ಕೊಳೆಯನ್ನು ತೊಳೆಯಲು ಮುಂದಾಗುತ್ತಿದ್ದರು. ಆಗ ರಾಕ್ಷಸಿ ಪ್ರವೃತಿಯನ್ನು ರೂಢಿಸಿಕೊಂಡ ಕೆಲವು ಮನಸ್ಸುಗಳು ಈಗ ಸಂತೋಷ ವ್ಯಕ್ತ ಪಡಿಸುತ್ತಿವೆ. ಸಾವನ್ನು ಮರಣವೇ ಮಹನವಮಿ ಎಂದು ಸ್ವೀಕರಿಸುವ ಛಲ ಕಾರ್ನಾಡರಿಗೆ ಇತ್ತು. ಆದ್ದರಿಂದಲೆ ತಮ್ಮ ಜೀವವಿಲ್ಲದ ದೇಹಕ್ಕೆ ಸರಕಾರಿ ಸಕಲ ಗೌರವ ಎಂಬ ನಾಟಕ ಗೀಟಕ ಬೇಡ ಎಂದು ತಮ್ಮ ಕುಟುಂಬದ ಸದಸ್ಯರಲ್ಲಿ ಹೇಳಿಕೊಂಡಿದ್ದಾರೆ. ಅವರ ಶರೀರವೂ ಸಹ ಯಾವುದೆ ಧಾರ್ಮಿಕ ವಿಧಿ ವಿಧಾನ ಇಲ್ಲದೆ ನೆರವೇರಿಸಬೇಕೆಂದೂ ತಿಳಿಸಿದ್ದಾರೆ. ಈ ಮೂಲಕ ಅವರು ಅನಂತದೆಡೆಗೆ ಪಯಣಿಸಿದ್ದಾರೆ.

ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು
ಬಯಲು ಬಯಲಾಯಿತ್ತಯ್ಯಾ
ಬಯಲ ಜೀವನ ಬಯಲ ಭಾವನೆ
ಬಯಲು ಬಯಲಾಗಿ ಬಯಲಾಯಿತ್ತಯ್ಯಾ
ನಿಮ್ಮ ಪೂಜಿಸಿದವರು ಮುನ್ನವೆ ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರಾ

ಎಂಬ ಅಲ್ಲಮಪ್ರಭುವಿನ ವಚನದಂತೆ ಬಯಲು ಬಯಲನ್ನು ಬಿತ್ತಿ ಬಯಲು ಬಯಲನ್ನೆ ಬೆಳೆದು ಬಯಲು ಬಯಲಾದರು ಕರ್ನಾಡರು. ಅವರ ಬಯಲ ಜೀವನ ಬಯಲ ಭಾವನೆ ನಮ್ಮೆಲ್ಲರೊಳಗೆ ಬಯಲು ಬಯಲಾಯಿತ್ತು. ಸಮಾಜವನ್ನು ಪ್ರೀತಿಸಿದ ಗೌರವಿಸಿದ ಸಮಾಜದೊಂದಿಗೆ ಜೀವಂತವಾಗಿ ಸ್ಪಂದಿಸಿ ಜೀವಂತ ಬದುಕಿದ ಕಾರ್ನಾಡ ಸತ್ಯವನ್ನು ನಂಬಿ ಬಯಲಾಗಿದ್ದಾರೆ. ಅಂದರೆ ನಮ್ಮೆಲ್ಲರೊಳಗೆ ಬೆರೆತು ಹೋಗಿದ್ದಾರೆ. ಕಾರ್ನಾಡರಿಗೆ ಸಾವು ಇಲ್ಲ. ಅರಿತವರು ಸಾಯುವುದೂ ಇಲ್ಲ. ಅರಿತುಕೊಂಡಿದ್ದ ಕಾರ್ನಾಡರು ನಮ್ಮೆಲ್ಲರೊಳಗೆ ಪ್ರಜ್ಞೆಯಾಗಿ ಜೀವಂತವಾಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...