Homeಕರ್ನಾಟಕಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು.

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮೆಲ್ಲರ ಸಾಕ್ಷಿ ಪ್ರಜ್ಞೆಯಾದ ಗಿರೀಶ್ ಕಾರ್ನಾಡರು ನಮ್ಮಿಂದ ಇಂದು ಅಗಲಿ ಹೋಗಿದ್ದಾರೆ. ಆದರೆ ಅವರು ಕಟ್ಟಿಕೊಟ್ಟ, ಬಿತ್ತಿ ಹೋದ ಬೀಜಗಳು ನಮ್ಮೆಲ್ಲರ ಅಂತರಂಗದಲ್ಲಿ ಮೊಳಕೆ ಒಡೆದಿವೆ. ಅವರ ವಿಚಾರಧಾರೆಯ ಎಳೆ ಹಿಡಿದು ಹೊರಟ ಎಷ್ಟೋ ಕನಸಿನ ಹೂಗಳು ಈಗಾಗಲೆ ಮಿಡಿಯಾಗಿ, ಕಾಯಾಗಿ , ಹಣ್ಣಾಗಿ ನಮ್ಮ ಕಣ್ಣ ಮುಂದೆಯೆ ನಳನಳಿಸುತ್ತಿವೆ. ಗಿರೀಶ್ ಕರ್ನಾಡರು ತಲೆದಂಡ ಬರೆದಾಗ ಅವರ ಬಗೆಗೆ ಕೆಲವು ಆಕ್ಷೇಪಗಳು ಇದ್ದವು. ಅವನ್ನು ಹೊರತು ಪಡಿಸಿ ಅವರೊಬ್ಬ ಗಟ್ಟಿಯಾದ ನಿಲುವುಗಳು ಹೊಂದಿದ ಬರಹಗಾರರಾಗಿದ್ದರು. ನಿರ್ದೇಶಕರಾಗಿದ್ದರು. ಅತ್ಯುತ್ತಮ ನಟರೂ ಆಗಿದ್ದರು.

ಇದಷ್ಟೇ ಅಲ್ಲದೆ ಕಲಾವಿದ, ಬರಹಗಾರ, ನಾಟಕಕಾರ ಕೇವಲ ತನ್ನ ಲೋಕದಲ್ಲಿ ಮುಳುಗಿ ಹೋಗದೆ ವಾಸ್ತವಿಕ ಜಗತ್ತಿನಲ್ಲೂ ತನ್ನ ಪಾತ್ರವನ್ನು ಅವಕಾಶ ಸಿಕ್ಕಾಗಲೆಲ್ಲ ತೋರ್ಪಡಿಸುತ್ತಿದ್ದರು. ಪಿ.ಲಂಕೇಶ್ ಅವರೊಂದಿಗೆ ಬೆಳೆದ ಸಖ್ಯ, ಗೌರಿ ಲಂಕೇಶ್ ವರೆಗೂ ಹಾಗೆ ಮುಂದುವರೆಯಿತು. ರಾಷ್ಟ್ರದಲ್ಲಿ ಹಿಂದೂ ಭಕ್ತಿಯ ಹೆಸರಿನ ಮೇಲೆ ನಡೆದ ನಂಗಾನಾಚ ವಿರುದ್ಧ ಧ್ವನಿ ಎತ್ತಿದವರಲ್ಲಿ ಕಾರ್ನಾಡರೂ ಒಬ್ಬರಾಗಿದ್ದರು. ದನದ ಸೆಗಣಿ, ಗಂಜಳಕ್ಕಿಂತಲೂ ಮನುಷ್ಯತ್ವ ಶ್ರೇಷ್ಠ ಎಂಬುದು ಅವರ ಚಿಂತನೆಯ ಒಟ್ಟು ಧ್ವನಿಯಾಗಿತ್ತು.

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು. ತಮ್ಮ ಗಟ್ಟಿಯಾದ ಅಷ್ಟೇ ದಿಟ್ಟವಾದ ಹೆಜ್ಜೆಗಳನ್ನು ಇಡುವ ಮೂಲಕ ಕನಸುಗಳನ್ನೂ ಕಟ್ಟಿಕೊಟ್ಟರು. ಇಡೀ ನಾಡಿನ ತುಂಬ ತಮ್ಮ ಚಟುವಟಿಕೆಗಳ ಮೂಲಕ ಎಲ್ಲರ ಹೆಗ್ಗಳಿಕೆ ಪಾತ್ರರಾದರು. ಜ್ಞಾನಪೀಠ ಪ್ರಶಸ್ತಿಯ ಪುರಸ್ಕಾರವೂ ಅವರ ಮಡಿಲಿಗೆ ಏರಿತು.

ಆದರೆ ಬಹಳಷ್ಟು ಜನ ಸಾಹಿತಿಗಳು ಕಲಾವಿದರು ಪ್ರಶಸ್ತಿ ಫಲಗಳು, ಸ್ಥಾನ ಮಾನಗಳು ದೊರೆತಾದ ಮೇಲೆ ಎಲ್ಲರ ಜೊತೆ ಅಂದರೆ ಸಾಮಾನ್ಯರ ಜೊತೆ ಸಾಮಾನ್ಯರಾಗಿ ಬೆರೆಯುವುದು ಕಮ್ಮಿ. ತಮ್ಮ ಎಂದಿನ ಪ್ರಶಸ್ತಿಯ ಗುಂಗಿನಿಂದ ಹೊರಗಡೆ ಬಂದಿರುವುದಿಲ್ಲ. ಆ ಪ್ರಶಸ್ತಿ ಹಾರ ತುರಾಯಿಗಳಲ್ಲಿಯೇ ಕೊಳೆತು ಹೋಗಿರುತ್ತಾರೆ. ಈ ಮಾತಿಗೆ ಕಾರ್ನಾಡರು ಅಪವಾದವಾಗಿದ್ದರು. ತಾವು ನಂಬಿದ ತತ್ವ ಸಿದ್ಧಾಂತಗಳು ತಮ್ಮ ಕಣ್ಣ ಮುಂದೆಯೆ ನಗೆಪಾಟಲಿಗೆ ಈಡಾಗುತ್ತಿದ್ದರೆ ತಕ್ಷಣವೆ ಅದಕ್ಕೆ ಸ್ಪಂದಿಸುತ್ತಿದ್ದರು. ಬೆಂಗಳೂರಿನ ಟೌನ ಹಾಲ್ ಮುಂದೆ ನಡೆಯುವ ಏನೆಲ್ಲ ಪ್ರತಿಭಟನೆಯಲ್ಲಿಯೂ ಅವರ ಹಾಜರಿ ಇರುತ್ತಿತ್ತು.

ಪ್ರಜ್ಞಾವಂತ ನಡಾವಳಿಯ ಬರಹಗಾರರನ್ನು ಕಂಡರೆ ಗುಲಾಮರಿಗೆ ಉರಿ ಉರಿ. ಕಾರ್ನಾಡರ ಬಗೆಗೂ ಸಂಘಿಗಳು ಕಿಡಿಕಾರಿದವು. ನಾನೂ ನಗರ ನಕ್ಸಲ್ ವಾದಿ ಎಂದು ಬರಹವೊಂದನ್ನು ಕೊರಳಲ್ಲಿ ಹಾಕಿಕೊಂಡು ಪ್ರತಿಭಟನೆಗೆ ಇಳಿದಾಗ ಬಹಳಷ್ಟು ಜನ ಕುಹಕದ ಮಾತನಾಡಿದರು. ಆಗಲೂ ಅವರ ಮಾತನ್ನು ಕಾರ್ನಾಡ ನಗು ನಗುತ್ತಾ ಸ್ವೀಕರಿಸಿದರು. ಏಕೆಂದರೆ ಅವರಿಗೆ ಸತ್ಯ ಗೊತ್ತಿತ್ತು. ಸನಾತನವಾದಿಗಳು ವಿಚಾರವಾದವನ್ನು ಒಪ್ಪಲಾರರು. ಧರ್ಮವನ್ನು ಅಫೀಮನ್ನಾಗಿ ಜನಗಳಿಗೆ ನೀಡುವವರು ಧರ್ಮವೊಂದು ದಯಯ ತಳಹದಿ ಎಂದು ಅರಿಯಲಾರರು ಎಂದು.

‘ನನ್ನ ರಾಜ್ಯದಲ್ಲಿ ಪ್ರತಿಯೊಂದು ಕಾರ್ಯವೂ ಪ್ರಾರ್ಥನೆಯಾಗಬೇಕು. ಪ್ರತಿಯೊಂದು ಪ್ರಾರ್ಥನೆಯೂ ನಮ್ಮನ್ನು ದೇವರೆಡೆಗೆ ಒಯ್ಯುವ ಮೆಟ್ಟಿಲಾಗಬೇಕು. ಆದರೆ ಇಲ್ಲಿ ಪ್ರಾರ್ಥನೆಗೂ ರಾಜಕಾರಣದ ಸೋಂಕು ಬಡಿದಿದೆ’ ಎಂದು ತುಘಲಕ್ ನಾಟಕದಲ್ಲಿ ಬರೆಯುವ ಮೂಲಕ ನಮ್ಮ ಇಂದಿನ ರಾಜಕೀಯ ವಸ್ತು ಸ್ಥಿತಿಯನ್ನು ಬಿಚ್ಚಿಟ್ಟರು.

ಒಬ್ಬ ಅಗಸ ತೊಳೆದಷ್ಟು ಕೊಳೆಯನ್ನು ಜಗತ್ತಿನ ಯಾವ ಧರ್ಮ ಗುರುವು ತೊಳೆದಿಲ್ಲ! ಎಂಬುದು ಅವರಿಗೆ ಖಚಿತವಾಗಿತ್ತು. ಆದರೂ ಅವರು ತಮ್ಮ ಮಾನವೀಯ ನಡಾವಳಿಕೆಗಳ ಮೂಲಕ ಸಮಾಜಕ್ಕೆ ಅಂಟಿದ ಕೊಳೆಯನ್ನು ತೊಳೆಯಲು ಮುಂದಾಗುತ್ತಿದ್ದರು. ಆಗ ರಾಕ್ಷಸಿ ಪ್ರವೃತಿಯನ್ನು ರೂಢಿಸಿಕೊಂಡ ಕೆಲವು ಮನಸ್ಸುಗಳು ಈಗ ಸಂತೋಷ ವ್ಯಕ್ತ ಪಡಿಸುತ್ತಿವೆ. ಸಾವನ್ನು ಮರಣವೇ ಮಹನವಮಿ ಎಂದು ಸ್ವೀಕರಿಸುವ ಛಲ ಕಾರ್ನಾಡರಿಗೆ ಇತ್ತು. ಆದ್ದರಿಂದಲೆ ತಮ್ಮ ಜೀವವಿಲ್ಲದ ದೇಹಕ್ಕೆ ಸರಕಾರಿ ಸಕಲ ಗೌರವ ಎಂಬ ನಾಟಕ ಗೀಟಕ ಬೇಡ ಎಂದು ತಮ್ಮ ಕುಟುಂಬದ ಸದಸ್ಯರಲ್ಲಿ ಹೇಳಿಕೊಂಡಿದ್ದಾರೆ. ಅವರ ಶರೀರವೂ ಸಹ ಯಾವುದೆ ಧಾರ್ಮಿಕ ವಿಧಿ ವಿಧಾನ ಇಲ್ಲದೆ ನೆರವೇರಿಸಬೇಕೆಂದೂ ತಿಳಿಸಿದ್ದಾರೆ. ಈ ಮೂಲಕ ಅವರು ಅನಂತದೆಡೆಗೆ ಪಯಣಿಸಿದ್ದಾರೆ.

ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು
ಬಯಲು ಬಯಲಾಯಿತ್ತಯ್ಯಾ
ಬಯಲ ಜೀವನ ಬಯಲ ಭಾವನೆ
ಬಯಲು ಬಯಲಾಗಿ ಬಯಲಾಯಿತ್ತಯ್ಯಾ
ನಿಮ್ಮ ಪೂಜಿಸಿದವರು ಮುನ್ನವೆ ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರಾ

ಎಂಬ ಅಲ್ಲಮಪ್ರಭುವಿನ ವಚನದಂತೆ ಬಯಲು ಬಯಲನ್ನು ಬಿತ್ತಿ ಬಯಲು ಬಯಲನ್ನೆ ಬೆಳೆದು ಬಯಲು ಬಯಲಾದರು ಕರ್ನಾಡರು. ಅವರ ಬಯಲ ಜೀವನ ಬಯಲ ಭಾವನೆ ನಮ್ಮೆಲ್ಲರೊಳಗೆ ಬಯಲು ಬಯಲಾಯಿತ್ತು. ಸಮಾಜವನ್ನು ಪ್ರೀತಿಸಿದ ಗೌರವಿಸಿದ ಸಮಾಜದೊಂದಿಗೆ ಜೀವಂತವಾಗಿ ಸ್ಪಂದಿಸಿ ಜೀವಂತ ಬದುಕಿದ ಕಾರ್ನಾಡ ಸತ್ಯವನ್ನು ನಂಬಿ ಬಯಲಾಗಿದ್ದಾರೆ. ಅಂದರೆ ನಮ್ಮೆಲ್ಲರೊಳಗೆ ಬೆರೆತು ಹೋಗಿದ್ದಾರೆ. ಕಾರ್ನಾಡರಿಗೆ ಸಾವು ಇಲ್ಲ. ಅರಿತವರು ಸಾಯುವುದೂ ಇಲ್ಲ. ಅರಿತುಕೊಂಡಿದ್ದ ಕಾರ್ನಾಡರು ನಮ್ಮೆಲ್ಲರೊಳಗೆ ಪ್ರಜ್ಞೆಯಾಗಿ ಜೀವಂತವಾಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...