Homeಕರ್ನಾಟಕಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬಯಲಲ್ಲಿ ಬಯಲಾದ ಬಯಲ ಜೀವ ಕಾರ್ನಾಡ್

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು.

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮೆಲ್ಲರ ಸಾಕ್ಷಿ ಪ್ರಜ್ಞೆಯಾದ ಗಿರೀಶ್ ಕಾರ್ನಾಡರು ನಮ್ಮಿಂದ ಇಂದು ಅಗಲಿ ಹೋಗಿದ್ದಾರೆ. ಆದರೆ ಅವರು ಕಟ್ಟಿಕೊಟ್ಟ, ಬಿತ್ತಿ ಹೋದ ಬೀಜಗಳು ನಮ್ಮೆಲ್ಲರ ಅಂತರಂಗದಲ್ಲಿ ಮೊಳಕೆ ಒಡೆದಿವೆ. ಅವರ ವಿಚಾರಧಾರೆಯ ಎಳೆ ಹಿಡಿದು ಹೊರಟ ಎಷ್ಟೋ ಕನಸಿನ ಹೂಗಳು ಈಗಾಗಲೆ ಮಿಡಿಯಾಗಿ, ಕಾಯಾಗಿ , ಹಣ್ಣಾಗಿ ನಮ್ಮ ಕಣ್ಣ ಮುಂದೆಯೆ ನಳನಳಿಸುತ್ತಿವೆ. ಗಿರೀಶ್ ಕರ್ನಾಡರು ತಲೆದಂಡ ಬರೆದಾಗ ಅವರ ಬಗೆಗೆ ಕೆಲವು ಆಕ್ಷೇಪಗಳು ಇದ್ದವು. ಅವನ್ನು ಹೊರತು ಪಡಿಸಿ ಅವರೊಬ್ಬ ಗಟ್ಟಿಯಾದ ನಿಲುವುಗಳು ಹೊಂದಿದ ಬರಹಗಾರರಾಗಿದ್ದರು. ನಿರ್ದೇಶಕರಾಗಿದ್ದರು. ಅತ್ಯುತ್ತಮ ನಟರೂ ಆಗಿದ್ದರು.

ಇದಷ್ಟೇ ಅಲ್ಲದೆ ಕಲಾವಿದ, ಬರಹಗಾರ, ನಾಟಕಕಾರ ಕೇವಲ ತನ್ನ ಲೋಕದಲ್ಲಿ ಮುಳುಗಿ ಹೋಗದೆ ವಾಸ್ತವಿಕ ಜಗತ್ತಿನಲ್ಲೂ ತನ್ನ ಪಾತ್ರವನ್ನು ಅವಕಾಶ ಸಿಕ್ಕಾಗಲೆಲ್ಲ ತೋರ್ಪಡಿಸುತ್ತಿದ್ದರು. ಪಿ.ಲಂಕೇಶ್ ಅವರೊಂದಿಗೆ ಬೆಳೆದ ಸಖ್ಯ, ಗೌರಿ ಲಂಕೇಶ್ ವರೆಗೂ ಹಾಗೆ ಮುಂದುವರೆಯಿತು. ರಾಷ್ಟ್ರದಲ್ಲಿ ಹಿಂದೂ ಭಕ್ತಿಯ ಹೆಸರಿನ ಮೇಲೆ ನಡೆದ ನಂಗಾನಾಚ ವಿರುದ್ಧ ಧ್ವನಿ ಎತ್ತಿದವರಲ್ಲಿ ಕಾರ್ನಾಡರೂ ಒಬ್ಬರಾಗಿದ್ದರು. ದನದ ಸೆಗಣಿ, ಗಂಜಳಕ್ಕಿಂತಲೂ ಮನುಷ್ಯತ್ವ ಶ್ರೇಷ್ಠ ಎಂಬುದು ಅವರ ಚಿಂತನೆಯ ಒಟ್ಟು ಧ್ವನಿಯಾಗಿತ್ತು.

ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು. ಕನಸಿಲ್ಲದ ದಾರಿಯಲ್ಲಿ ನಡೆಯುವುದು ಹೇಗೆ ? ಎಂಬುದು ಅವರ ಮಾರ್ಗವಾಗಿತ್ತು. ಹೀಗಾಗಿ ಅವರು ಬೆಳಕಿಲ್ಲದ ದಾರಿಯಲ್ಲಿ ನಡೆದು ಬೆಳಕು ಹೊತ್ತಿಸಿದರು. ತಮ್ಮ ಗಟ್ಟಿಯಾದ ಅಷ್ಟೇ ದಿಟ್ಟವಾದ ಹೆಜ್ಜೆಗಳನ್ನು ಇಡುವ ಮೂಲಕ ಕನಸುಗಳನ್ನೂ ಕಟ್ಟಿಕೊಟ್ಟರು. ಇಡೀ ನಾಡಿನ ತುಂಬ ತಮ್ಮ ಚಟುವಟಿಕೆಗಳ ಮೂಲಕ ಎಲ್ಲರ ಹೆಗ್ಗಳಿಕೆ ಪಾತ್ರರಾದರು. ಜ್ಞಾನಪೀಠ ಪ್ರಶಸ್ತಿಯ ಪುರಸ್ಕಾರವೂ ಅವರ ಮಡಿಲಿಗೆ ಏರಿತು.

ಆದರೆ ಬಹಳಷ್ಟು ಜನ ಸಾಹಿತಿಗಳು ಕಲಾವಿದರು ಪ್ರಶಸ್ತಿ ಫಲಗಳು, ಸ್ಥಾನ ಮಾನಗಳು ದೊರೆತಾದ ಮೇಲೆ ಎಲ್ಲರ ಜೊತೆ ಅಂದರೆ ಸಾಮಾನ್ಯರ ಜೊತೆ ಸಾಮಾನ್ಯರಾಗಿ ಬೆರೆಯುವುದು ಕಮ್ಮಿ. ತಮ್ಮ ಎಂದಿನ ಪ್ರಶಸ್ತಿಯ ಗುಂಗಿನಿಂದ ಹೊರಗಡೆ ಬಂದಿರುವುದಿಲ್ಲ. ಆ ಪ್ರಶಸ್ತಿ ಹಾರ ತುರಾಯಿಗಳಲ್ಲಿಯೇ ಕೊಳೆತು ಹೋಗಿರುತ್ತಾರೆ. ಈ ಮಾತಿಗೆ ಕಾರ್ನಾಡರು ಅಪವಾದವಾಗಿದ್ದರು. ತಾವು ನಂಬಿದ ತತ್ವ ಸಿದ್ಧಾಂತಗಳು ತಮ್ಮ ಕಣ್ಣ ಮುಂದೆಯೆ ನಗೆಪಾಟಲಿಗೆ ಈಡಾಗುತ್ತಿದ್ದರೆ ತಕ್ಷಣವೆ ಅದಕ್ಕೆ ಸ್ಪಂದಿಸುತ್ತಿದ್ದರು. ಬೆಂಗಳೂರಿನ ಟೌನ ಹಾಲ್ ಮುಂದೆ ನಡೆಯುವ ಏನೆಲ್ಲ ಪ್ರತಿಭಟನೆಯಲ್ಲಿಯೂ ಅವರ ಹಾಜರಿ ಇರುತ್ತಿತ್ತು.

ಪ್ರಜ್ಞಾವಂತ ನಡಾವಳಿಯ ಬರಹಗಾರರನ್ನು ಕಂಡರೆ ಗುಲಾಮರಿಗೆ ಉರಿ ಉರಿ. ಕಾರ್ನಾಡರ ಬಗೆಗೂ ಸಂಘಿಗಳು ಕಿಡಿಕಾರಿದವು. ನಾನೂ ನಗರ ನಕ್ಸಲ್ ವಾದಿ ಎಂದು ಬರಹವೊಂದನ್ನು ಕೊರಳಲ್ಲಿ ಹಾಕಿಕೊಂಡು ಪ್ರತಿಭಟನೆಗೆ ಇಳಿದಾಗ ಬಹಳಷ್ಟು ಜನ ಕುಹಕದ ಮಾತನಾಡಿದರು. ಆಗಲೂ ಅವರ ಮಾತನ್ನು ಕಾರ್ನಾಡ ನಗು ನಗುತ್ತಾ ಸ್ವೀಕರಿಸಿದರು. ಏಕೆಂದರೆ ಅವರಿಗೆ ಸತ್ಯ ಗೊತ್ತಿತ್ತು. ಸನಾತನವಾದಿಗಳು ವಿಚಾರವಾದವನ್ನು ಒಪ್ಪಲಾರರು. ಧರ್ಮವನ್ನು ಅಫೀಮನ್ನಾಗಿ ಜನಗಳಿಗೆ ನೀಡುವವರು ಧರ್ಮವೊಂದು ದಯಯ ತಳಹದಿ ಎಂದು ಅರಿಯಲಾರರು ಎಂದು.

‘ನನ್ನ ರಾಜ್ಯದಲ್ಲಿ ಪ್ರತಿಯೊಂದು ಕಾರ್ಯವೂ ಪ್ರಾರ್ಥನೆಯಾಗಬೇಕು. ಪ್ರತಿಯೊಂದು ಪ್ರಾರ್ಥನೆಯೂ ನಮ್ಮನ್ನು ದೇವರೆಡೆಗೆ ಒಯ್ಯುವ ಮೆಟ್ಟಿಲಾಗಬೇಕು. ಆದರೆ ಇಲ್ಲಿ ಪ್ರಾರ್ಥನೆಗೂ ರಾಜಕಾರಣದ ಸೋಂಕು ಬಡಿದಿದೆ’ ಎಂದು ತುಘಲಕ್ ನಾಟಕದಲ್ಲಿ ಬರೆಯುವ ಮೂಲಕ ನಮ್ಮ ಇಂದಿನ ರಾಜಕೀಯ ವಸ್ತು ಸ್ಥಿತಿಯನ್ನು ಬಿಚ್ಚಿಟ್ಟರು.

ಒಬ್ಬ ಅಗಸ ತೊಳೆದಷ್ಟು ಕೊಳೆಯನ್ನು ಜಗತ್ತಿನ ಯಾವ ಧರ್ಮ ಗುರುವು ತೊಳೆದಿಲ್ಲ! ಎಂಬುದು ಅವರಿಗೆ ಖಚಿತವಾಗಿತ್ತು. ಆದರೂ ಅವರು ತಮ್ಮ ಮಾನವೀಯ ನಡಾವಳಿಕೆಗಳ ಮೂಲಕ ಸಮಾಜಕ್ಕೆ ಅಂಟಿದ ಕೊಳೆಯನ್ನು ತೊಳೆಯಲು ಮುಂದಾಗುತ್ತಿದ್ದರು. ಆಗ ರಾಕ್ಷಸಿ ಪ್ರವೃತಿಯನ್ನು ರೂಢಿಸಿಕೊಂಡ ಕೆಲವು ಮನಸ್ಸುಗಳು ಈಗ ಸಂತೋಷ ವ್ಯಕ್ತ ಪಡಿಸುತ್ತಿವೆ. ಸಾವನ್ನು ಮರಣವೇ ಮಹನವಮಿ ಎಂದು ಸ್ವೀಕರಿಸುವ ಛಲ ಕಾರ್ನಾಡರಿಗೆ ಇತ್ತು. ಆದ್ದರಿಂದಲೆ ತಮ್ಮ ಜೀವವಿಲ್ಲದ ದೇಹಕ್ಕೆ ಸರಕಾರಿ ಸಕಲ ಗೌರವ ಎಂಬ ನಾಟಕ ಗೀಟಕ ಬೇಡ ಎಂದು ತಮ್ಮ ಕುಟುಂಬದ ಸದಸ್ಯರಲ್ಲಿ ಹೇಳಿಕೊಂಡಿದ್ದಾರೆ. ಅವರ ಶರೀರವೂ ಸಹ ಯಾವುದೆ ಧಾರ್ಮಿಕ ವಿಧಿ ವಿಧಾನ ಇಲ್ಲದೆ ನೆರವೇರಿಸಬೇಕೆಂದೂ ತಿಳಿಸಿದ್ದಾರೆ. ಈ ಮೂಲಕ ಅವರು ಅನಂತದೆಡೆಗೆ ಪಯಣಿಸಿದ್ದಾರೆ.

ಬಯಲು ಬಯಲನೆ ಬಿತ್ತಿ ಬಯಲು ಬಯಲನೆ ಬೆಳೆದು
ಬಯಲು ಬಯಲಾಯಿತ್ತಯ್ಯಾ
ಬಯಲ ಜೀವನ ಬಯಲ ಭಾವನೆ
ಬಯಲು ಬಯಲಾಗಿ ಬಯಲಾಯಿತ್ತಯ್ಯಾ
ನಿಮ್ಮ ಪೂಜಿಸಿದವರು ಮುನ್ನವೆ ಬಯಲಾದರು
ನಾ ನಿಮ್ಮ ನಂಬಿ ಬಯಲಾದೆ ಗುಹೇಶ್ವರಾ

ಎಂಬ ಅಲ್ಲಮಪ್ರಭುವಿನ ವಚನದಂತೆ ಬಯಲು ಬಯಲನ್ನು ಬಿತ್ತಿ ಬಯಲು ಬಯಲನ್ನೆ ಬೆಳೆದು ಬಯಲು ಬಯಲಾದರು ಕರ್ನಾಡರು. ಅವರ ಬಯಲ ಜೀವನ ಬಯಲ ಭಾವನೆ ನಮ್ಮೆಲ್ಲರೊಳಗೆ ಬಯಲು ಬಯಲಾಯಿತ್ತು. ಸಮಾಜವನ್ನು ಪ್ರೀತಿಸಿದ ಗೌರವಿಸಿದ ಸಮಾಜದೊಂದಿಗೆ ಜೀವಂತವಾಗಿ ಸ್ಪಂದಿಸಿ ಜೀವಂತ ಬದುಕಿದ ಕಾರ್ನಾಡ ಸತ್ಯವನ್ನು ನಂಬಿ ಬಯಲಾಗಿದ್ದಾರೆ. ಅಂದರೆ ನಮ್ಮೆಲ್ಲರೊಳಗೆ ಬೆರೆತು ಹೋಗಿದ್ದಾರೆ. ಕಾರ್ನಾಡರಿಗೆ ಸಾವು ಇಲ್ಲ. ಅರಿತವರು ಸಾಯುವುದೂ ಇಲ್ಲ. ಅರಿತುಕೊಂಡಿದ್ದ ಕಾರ್ನಾಡರು ನಮ್ಮೆಲ್ಲರೊಳಗೆ ಪ್ರಜ್ಞೆಯಾಗಿ ಜೀವಂತವಾಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....