Homeಮುಖಪುಟಬೀದಿಗೆ ಬಿದ್ದ ಜೆಟ್ ಏರ್‍ವೇಸ್ ಸಿಬ್ಬಂದಿ: ಕೆಲಸ ಕಳೆದುಕೊಳ್ಳುವ ಎಲ್ಲರ ಗೋಳೂ ಒಂದೇ(ನಾ)?

ಬೀದಿಗೆ ಬಿದ್ದ ಜೆಟ್ ಏರ್‍ವೇಸ್ ಸಿಬ್ಬಂದಿ: ಕೆಲಸ ಕಳೆದುಕೊಳ್ಳುವ ಎಲ್ಲರ ಗೋಳೂ ಒಂದೇ(ನಾ)?

- Advertisement -
- Advertisement -

| ಡಾ.ವಾಸು ಎಚ್.ವಿ |

ಕುಖ್ಯಾತ ಮಾಫಿಯಾ ಡಾನ್, ಭಯೋತ್ಪಾದಕ ಕೃತ್ಯಗಳ ಆರೋಪಿ ಕ್ರಿಮಿನಲ್ ದಾವೂದ್ ಇಬ್ರಾಹಿಂನ ಬೇನಾಮಿ ಒಡೆತನದ್ದೆಂದು ಹೇಳಲಾಗುತ್ತಿರುವ ಜೆಟ್ ಏರ್‍ವೇಸ್ ಸಂಸ್ಥೆ ಆರ್ಥಿಕವಾಗಿ ಕುಸಿದು ಕುಂತಿದೆ. ಅದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 16,000 ಸಿಬ್ಬಂದಿ ಬೀದಿಗೆ ಬಿದ್ದಿದ್ದಾರೆ. ಗಗನದಲ್ಲಿ ಓಡಾಡುತ್ತಿದ್ದ ಪೈಲಟ್‍ಗಳು, ಗಗನಸಖಿಯರು ಸೇರಿದಂತೆ ನೂರಾರು ಜನ ಅಕ್ಷರಶಃ ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡಿ, ‘ನಮ್ಮ ಗೋಳನ್ನು ಕೇಳಿ, ಉದ್ಯೋಗ ಉಳಿಸಿಕೊಡಿ’ ಎಂದು ಬೇಡಿಕೊಂಡಿದ್ದಾರೆ.

ಇದನ್ನೂ ಓದಿ: ದಾವೂದ್ ಬೇನಾಮಿ ಒಡೆತನದ ಜೆಟ್ ಏರ್ ವೇಸ್

ಕಳೆದ ಅಕ್ಟೋಬರ್‍ನಿಂದ ಕಡಿಮೆಯೆಂದರೂ 2,000 ಉದ್ಯೋಗಿಗಳು ಬಿಟ್ಟು ಹೋಗಿದ್ದಾರೆ. ಆ ನಂತರವೂ 1,500 ಪೈಲಟ್‍ಗಳು, 3,000 ಗಗನಸಖಿಯರನ್ನೊಳಗೊಂಡ ವಿಮಾನ ಸಿಬ್ಬಂದಿ, 5,000 ಭೂಕಾರ್ಯಾಚರಣಾ ಸಿಬ್ಬಂದಿ, 2,000 ತಾಂತ್ರಿಕ ಸಿಬ್ಬಂದಿ ಮತ್ತು 3,000 ಆಡಳಿತ ಅಧಿಕಾರಿಗಳು ಸೇರಿ 14,500 ಜನ ಸಿಬ್ಬಂದಿಗಳು ಉಳಿದುಕೊಂಡಿದ್ದರು. ಇತರ ವಿಮಾನಯಾನ ಕಂಪೆನಿಗಳಿಗೆ ಹೋಲಿಸಿದರೆ ಹೆಚ್ಚೇ ಸಂಬಳ ಕೊಡುತ್ತಿದ್ದ ಜೆಟ್ ಏರ್‍ವೇಸ್‍ನಲ್ಲಿದ್ದ ಇಷ್ಟು ಜನರು ಒಮ್ಮೆಗೇ ಕೆಲಸ ಕಳೆದುಕೊಳ್ಳುವುದೆಂದರೆ, ಅದು ಉಂಟು ಮಾಡುವ ತಲ್ಲಣವನ್ನು ಯಾರೂ ಊಹಿಸಬಹುದು.


ಇವೆಲ್ಲಾ ಸಂಖ್ಯೆಗಳು. ಆದರೆ, ಯಾವುದಾದರೂ ಒಂದು ಕಡೆ ಉದ್ಯೋಗವನ್ನು ನಂಬಿಕೊಂಡು ಕೆಲಸ ಮಾಡುವ ಉದ್ಯೋಗಿಗೆ ಆ ಉದ್ಯೋಗ ಇದ್ದಕ್ಕಿದ್ದಂತೆ ಇಲ್ಲವಾಗಿಬಿಟ್ಟರೆ ಅವರ ಮಟ್ಟಿಗೆ ಅದೊಂದು ಆಘಾತವೇ ಆಗಿರುತ್ತದೆ. ಉದ್ಯೋಗ ಮಾರುಕಟ್ಟೆಯಲ್ಲಿ ಅವರಿಗೆ ಇನ್ನೊಂದು ಕೆಲಸ ಸಲೀಸಾಗಿ ಸಿಗುವಂತಿದ್ದರೆ ಆ ಮಾತು ಬೇರೆ. ಈಗ ಸ್ಪೈಸ್‍ಜೆಟ್‍ನವರು, ಇಲ್ಲಿ ಕೆಲಸ ಕಳೆದುಕೊಂಡ 100 ಜನ ಪೈಲಟ್‍ಗಳು ಮತ್ತು 400 ಜನ ವಿಮಾನ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗೆ ತಮ್ಮಲ್ಲಿ ಉದ್ಯೋಗ ಕೊಟ್ಟಿದ್ದಾರೆ. ಜೆಟ್‍ನಲ್ಲಿ ಪಡೆಯುತ್ತಿದ್ದ ಸಂಬಳಕ್ಕೆ ಹೋಲಿಸಿದರೆ ಇಲ್ಲಿ ಶೇ.25ರಷ್ಟು ಸಂಬಳ ಮಾತ್ರ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಮತ್ತು ಪರಿಣಾಮವನ್ನು ಅಂದಾಜು ಮಾಡಬಹುದು.

ಜೆಟ್ ಏರ್‍ವೇಸ್‍ಅನ್ನು ಬೇರೆ ಯಾರಾದರೂ ಕೊಂಡುಕೊಳ್ಳಲಿ, ಎಸ್‍ಬಿಐ ಈ ಕಂಪೆನಿಗೆ ಸಾಲ ಕೊಡಲಿ, ಸರ್ಕಾರವು ತುರ್ತು ಪರಿಹಾರ ನಿಧಿಯನ್ನು ಕೊಟ್ಟು ಸಂಬಳದ ಬಾಕಿ (ಈಗಾಗಲೇ ಹಲವು ತಿಂಗಳುಗಳಿಂದ ಸಂಬಳ ಕೊಟ್ಟಿಲ್ಲ) ತೀರಿಸಲಿ ಹೀಗೆ ಹಲವು ಬೇಡಿಕೆಗಳನ್ನು ಸಿಬ್ಬಂದಿ ಮುಂದಿಟ್ಟಿದ್ದಾರೆ. ಹಣಕಾಸು ಸಚಿವ ಅರುಣ್ ಜೇಟ್ಲಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಎಲ್ಲರಿಗೂ ಅವರ ಬೇಡಿಕೆ ತಲುಪಿದೆ. ಇವುಗಳಲ್ಲಿ ಕೆಲವನ್ನು ಸರ್ಕಾರ, ಬ್ಯಾಂಕ್‍ಗಳು ಪರಿಶೀಲಿಸುತ್ತಲೂ ಇವೆ.

ಈ ರೀತಿಯ ಸಹಾಯವನ್ನು ಸರ್ಕಾರ ಮಾಡಬೇಕಾಗುತ್ತದೆ. ಈ ಸಿಬ್ಬಂದಿಯಲ್ಲಿ ಪೈಲಟ್‍ಗಳಿಗೆ ತಿಂಗಳಿಗೆ ನಾಲ್ಕು ಲಕ್ಷ ವೇತನವಿದ್ದರೆ, ಮೂರು ಲಕ್ಷಕ್ಕೂ ಹೆಚ್ಚು ತಿಂಗಳ ಕಂತು ಪಾವತಿ ಮಾಡುವಂತಹ ಸಾಲಗಳನ್ನು ಮಾಡಿಕೊಂಡಿರಬಹುದು. ಇನ್ನು ಕೆಳಹಂತದವರಿಗೆ 50 ಸಾವಿರ ಸಂಬಳವಿದ್ದರೆ, ಮನೆ ಸಾಲವೂ ಒಳಗೊಂಡಂತೆ ಹಲವು ಇಎಂಐಗಳನ್ನು ಪಾವತಿಸುವ ಕಷ್ಟ ಅವರಿಗಿರಬಹುದು. ಹಾಗಾಗಿ ಇದ್ದಕ್ಕಿದ್ದಂತೆ ನಾಲ್ಕೈದು ತಿಂಗಳ ವೇತನವೇ ಇಲ್ಲದಿದ್ದರೆ ಆಕಾಶವು ನೆಲಕ್ಕೆ ಮತ್ತು ಪಾತಾಳಕ್ಕೆ ಕುಸಿದಂತೆ ಆಗುವ ಎಲ್ಲಾ ಸಾಧ್ಯತೆ ಇದ್ದೇ ಇರುತ್ತದೆ. ಇವರಲ್ಲೇ ಕೆಲವರು ಮಕ್ಕಳ ಶಾಲಾ ಶುಲ್ಕವನ್ನೂ ಕಟ್ಟಲಾಗಿಲ್ಲ ಎಂದು ಗೋಳಾಡಿದ್ದನ್ನು ನೋಡಬಹುದು. ಇವರೆಲ್ಲರ ಕಷ್ಟಕ್ಕೆ ಮರುಗಬೇಕಿದೆ. ಈ ಕಂಪೆನಿ ದಾವೂದ್ ಇಬ್ರಾಹಿಂನ ಬೇನಾಮಿ ಎಂಬುದೂ ಒಂದು ಆರೋಪ (ಆರೋಪಕ್ಕೆ ಎಷ್ಟೇ ಗಟ್ಟಿ ಕಾರಣಗಳಿದ್ದರೂ, ಅದನ್ನು ಪ್ರತ್ಯೇಕವಾಗಿ ನಿಭಾಯಿಸಬೇಕು).

ಆದರೆ, ಇಲ್ಲಿ ಎರಡು ಪ್ರಶ್ನೆಗಳು ಏಳುತ್ತವೆ. ಒಂದು – ಯಾವುದೇ ಕಂಪೆನಿಯು ಇದ್ದಕ್ಕಿದ್ದಂತೆ ಕಾರ್ಯಾಚರಣೆ ನಿಲ್ಲಿಸಿ ಕೈ ಎತ್ತುವುದಾದರೆ ಅದಕ್ಕೆ ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲವೇ? ಲೇಆಫ್ ಕಾನೂನುಗಳು ಈಗ ಹೇಗೂ ಇವೆ. ಅಂತಹ ಸಂದರ್ಭದಲ್ಲಿ ಸಂಬಂಧಿಸಿದ ಮಾಲೀಕರ ಇತರ ಆಸ್ತಿಪಾಸ್ತಿಗಳನ್ನು ಬಳಸಿ ಸಿಬ್ಬಂದಿಗೆ ಪರಿಹಾರ ಕಲ್ಪಿಸಲು ಏಕೆ ಸಾಧ್ಯವಿಲ್ಲ? ಲಾಭ ಬಂದಾಗ ಮಾತ್ರ ಹೆಚ್ಚಿನ ಪಾಲು ಕಬಳಿಸಬೇಕು, ನಷ್ಟವಾದರೆ ಸಿಬ್ಬಂದಿ ಅಥವಾ ಸಾರ್ವಜನಿಕ ಬ್ಯಾಂಕು ಅಥವಾ ಸರ್ಕಾರ ಏಕೆ ಹೊರಬೇಕು? ಈ ವಿಚಾರ ಚರ್ಚೆಯಾಗುತ್ತಲೇ ಇಲ್ಲ. ವಿಜಯ್ ಮಲ್ಯನ ಕಿಂಗ್‍ಫಿಷರ್ ಏರ್‍ಲೈನ್ಸ್ ನಷ್ಟಕ್ಕೀಡಾದಾಗಲೂ ಆತ ಕೇಳಿದ್ದು, ‘ನನ್ನ ಐಷಾರಾಮಿ ಏರ್‍ಲೈನ್ಸ್ ನಷ್ಟಕ್ಕೀಡಾಗುತ್ತಿದೆ. ಸರ್ಕಾರ ಏನು ಮಾಡುತ್ತಿದೆ?’ ಎಂಬ ಧಮಕಿ! ಆತನ ಇನ್ನೂ ಎಷ್ಟೋ ಬೇರೆ ಬೇರೆ ಆಸ್ತಿಗಳು ಆಗಲೂ ಇದ್ದವು, ಈಗಲೂ ಇವೆ. ದಕ್ಷಿಣ ಆಫ್ರಿಕಾದಲ್ಲಿರುವ ಸ್ವಂತ ಕಾಡನ್ನೂ ಒಳಗೊಂಡು (ರೆಸಾರ್ಟ್ ಅಲ್ಲ, ಕಾಡು!!). ಹಾಗೆಯೇ ಜೆಟ್ ಏರ್‍ವೇಸ್‍ನ ನರೇಶ್ ಗೋಯೆಲ್‍ನ ಆಸ್ತಿಪಾಸ್ತಿಯ ವಿವರಗಳು ಸಾರ್ವಜನಿಕವಾಗಬೇಕು. ಉಳಿದ ವ್ಯವಹಾರಗಳೂ ಸಹಾ ಪಾರದರ್ಶಕವಾಗಿರಬೇಕು. ಸಾಧ್ಯವಾದಷ್ಟೂ ಅವುಗಳಿಂದಲೇ ಸಿಬ್ಬಂದಿ ಅಥವಾ ಸಿಬ್ಬಂದಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸಿದ ಸರ್ಕಾರ ಅಥವಾ ಬ್ಯಾಂಕಿಗೆ ಋಣ ಸಂದಾಯ ಆಗಬೇಕು.


ಎರಡು, ವಿಮಾನಯಾನ ಸಿಬ್ಬಂದಿಯ ಕುರಿತು ಮಾಧ್ಯಮಗಳು, ಸರ್ಕಾರ, ಬ್ಯಾಂಕು ಎಲ್ಲರೂ ಇಷ್ಟೊಂದು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ಖಾಸಗಿ ಕಂಪೆನಿಗಳ ಕಾರ್ಮಿಕರು, ದಿನನಿತ್ಯವೂ ಖಾಸಗಿ ಗುತ್ತಿಗೆ ಕಾರ್ಮಿಕರು ಮತ್ತು ಸರ್ಕಾರೀ ಗುತ್ತಿಗೆ ನೌಕರರು ಬೇಕಾಬಿಟ್ಟಿ ಕೆಲಸ ಕಳೆದುಕೊಳ್ಳುತ್ತಿದ್ದಾರಲ್ಲಾ, ಅವರ ಬಗ್ಗೆ ಈ ಥರದಲ್ಲಿ ಯಾರೂ ಕಣ್ಣೀರು ಮಿಡಿಯುವುದಿಲ್ಲವಲ್ಲಾ ಏಕೆ? ಅವರ ಜೀವನ ಕಡಿಮೆ ಬೆಲೆಯುಳ್ಳದ್ದಾ? ಅಪಘಾತ ಪರಿಹಾರ ಕೊಡುವಾಗಲೂ ಬೀದಿಯಲ್ಲಿ ಸತ್ತವರಿಗೊಂದು ಬೆಲೆ, ವಿಮಾನದಲ್ಲಿ ಸತ್ತವರಿಗೊಂದು ಪರಿಹಾರ ನಿಗದಿಯಾಗುತ್ತದಲ್ಲಾ ಹಾಗೇನಾ ಇದೂ?

ಇರಲಿ, ಪೈಲಟ್‍ಗೂ ಗುತ್ತಿಗೆ ಕಾರ್ಮಿಕರಿಗೂ ಒಂದೇ ಸಂಬಳ ಕೊಡಿ ಎಂಬುದೂ ಇಲ್ಲಿನ ಚರ್ಚೆಯಲ್ಲ. ಉದ್ಯೋಗ ಕಳೆದುಕೊಳ್ಳುವುದರ ವಿಚಾರದಲ್ಲಿ ಪೈಲಟ್‍ಗೆ ಇರುವ ಕಷ್ಟ ಹೇಗೆ ಕಷ್ಟವೋ, ಗುತ್ತಿಗೆ ನೌಕರರಿಗೂ ಅಂತಹುದೇ ಕಷ್ಟ ಇರುವುದಿಲ್ಲವಾ? ಇಲ್ಲಿ, ಪೈಲಟ್‍ಗಿದ್ದದ್ದು ಖಾಯಂ ಕೆಲಸ, ಗುತ್ತಿಗೆಯಲ್ಲಿ ಕೆಲಸ ಮಾಡುವವರಿಗೆ ಅಂತಹ ಗ್ಯಾರಂಟಿ ಇರುವುದಿಲ್ಲ ಎಂಬ ವಾದವನ್ನು ತರಬಾರದು. ಗುತ್ತಿಗೆ ನೌಕರಿ ಎನ್ನುವುದೇ ದೊಡ್ಡ ಬೋಗಸ್. ಖಾಯಂ ನೌಕರಿಯನ್ನು ತಪ್ಪಿಸಲು ಕಾನೂನಿಗೆ ವಿರುದ್ಧವಾಗಿ ಜಾರಿಗೆ ತಂದಿರುವ, ವರ್ಷಾನುಗಟ್ಟಲೇ ದುಡಿಸಿಕೊಳ್ಳುವ ಪದ್ಧತಿ ಗುತ್ತಿಗೆಯದ್ದಾಗಿದೆ.

ಅಂತಿಮವಾಗಿ ಇಷ್ಟು ಹೇಳಬಹುದು. ಜೆಟ್ ಏರ್‍ವೇಸ್‍ನ ಸಿಬ್ಬಂದಿಯ ನೆರವಿಗೆ ಸರ್ಕಾರವು ನಿಲ್ಲಲಿ, ಅವರ ತಲ್ಲಣವನ್ನು ಕೊನೆಗೊಳಿಸಲಿ. ಅದೇ ರೀತಿ ದೇಶದ ಎಲ್ಲೆಡೆ ಏಕಾಏಕಿ ಕೆಲಸ ಕಳೆದುಕೊಳ್ಳುವ ಎಲ್ಲರ ಪರವಾಗಿಯೂ ದುಡಿಸಿಕೊಳ್ಳುವ ಕಂಪೆನಿ, ಮಾಲೀಕರು, ಸರ್ಕಾರ ನಿಲ್ಲಬೇಕು.

(ಲೇಖಕರು, ಗುತ್ತಿಗೆ ನೌಕರರ ಸಂಘಟನೆಯ ಮುಂಚೂಣಿ ವ್ಯಕ್ತಿ.
ಲೇಖನದ ಅಭಿಪ್ರಾಯಗಳು ಲೇಖಕರವು. ಅವು ನಾನುಗೌರಿ.ಕಾಂ ವೆಬ್‍ತಂಡದ ಅಭಿಪ್ರಾಯಗಳು ಆಗಿರಲೇಬೇಕೆಂದಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...