Homeಮುಖಪುಟಬೀದಿಗೆ ಬಿದ್ದ ಜೆಟ್ ಏರ್‍ವೇಸ್ ಸಿಬ್ಬಂದಿ: ಕೆಲಸ ಕಳೆದುಕೊಳ್ಳುವ ಎಲ್ಲರ ಗೋಳೂ ಒಂದೇ(ನಾ)?

ಬೀದಿಗೆ ಬಿದ್ದ ಜೆಟ್ ಏರ್‍ವೇಸ್ ಸಿಬ್ಬಂದಿ: ಕೆಲಸ ಕಳೆದುಕೊಳ್ಳುವ ಎಲ್ಲರ ಗೋಳೂ ಒಂದೇ(ನಾ)?

- Advertisement -
- Advertisement -

| ಡಾ.ವಾಸು ಎಚ್.ವಿ |

ಕುಖ್ಯಾತ ಮಾಫಿಯಾ ಡಾನ್, ಭಯೋತ್ಪಾದಕ ಕೃತ್ಯಗಳ ಆರೋಪಿ ಕ್ರಿಮಿನಲ್ ದಾವೂದ್ ಇಬ್ರಾಹಿಂನ ಬೇನಾಮಿ ಒಡೆತನದ್ದೆಂದು ಹೇಳಲಾಗುತ್ತಿರುವ ಜೆಟ್ ಏರ್‍ವೇಸ್ ಸಂಸ್ಥೆ ಆರ್ಥಿಕವಾಗಿ ಕುಸಿದು ಕುಂತಿದೆ. ಅದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 16,000 ಸಿಬ್ಬಂದಿ ಬೀದಿಗೆ ಬಿದ್ದಿದ್ದಾರೆ. ಗಗನದಲ್ಲಿ ಓಡಾಡುತ್ತಿದ್ದ ಪೈಲಟ್‍ಗಳು, ಗಗನಸಖಿಯರು ಸೇರಿದಂತೆ ನೂರಾರು ಜನ ಅಕ್ಷರಶಃ ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡಿ, ‘ನಮ್ಮ ಗೋಳನ್ನು ಕೇಳಿ, ಉದ್ಯೋಗ ಉಳಿಸಿಕೊಡಿ’ ಎಂದು ಬೇಡಿಕೊಂಡಿದ್ದಾರೆ.

ಇದನ್ನೂ ಓದಿ: ದಾವೂದ್ ಬೇನಾಮಿ ಒಡೆತನದ ಜೆಟ್ ಏರ್ ವೇಸ್

ಕಳೆದ ಅಕ್ಟೋಬರ್‍ನಿಂದ ಕಡಿಮೆಯೆಂದರೂ 2,000 ಉದ್ಯೋಗಿಗಳು ಬಿಟ್ಟು ಹೋಗಿದ್ದಾರೆ. ಆ ನಂತರವೂ 1,500 ಪೈಲಟ್‍ಗಳು, 3,000 ಗಗನಸಖಿಯರನ್ನೊಳಗೊಂಡ ವಿಮಾನ ಸಿಬ್ಬಂದಿ, 5,000 ಭೂಕಾರ್ಯಾಚರಣಾ ಸಿಬ್ಬಂದಿ, 2,000 ತಾಂತ್ರಿಕ ಸಿಬ್ಬಂದಿ ಮತ್ತು 3,000 ಆಡಳಿತ ಅಧಿಕಾರಿಗಳು ಸೇರಿ 14,500 ಜನ ಸಿಬ್ಬಂದಿಗಳು ಉಳಿದುಕೊಂಡಿದ್ದರು. ಇತರ ವಿಮಾನಯಾನ ಕಂಪೆನಿಗಳಿಗೆ ಹೋಲಿಸಿದರೆ ಹೆಚ್ಚೇ ಸಂಬಳ ಕೊಡುತ್ತಿದ್ದ ಜೆಟ್ ಏರ್‍ವೇಸ್‍ನಲ್ಲಿದ್ದ ಇಷ್ಟು ಜನರು ಒಮ್ಮೆಗೇ ಕೆಲಸ ಕಳೆದುಕೊಳ್ಳುವುದೆಂದರೆ, ಅದು ಉಂಟು ಮಾಡುವ ತಲ್ಲಣವನ್ನು ಯಾರೂ ಊಹಿಸಬಹುದು.


ಇವೆಲ್ಲಾ ಸಂಖ್ಯೆಗಳು. ಆದರೆ, ಯಾವುದಾದರೂ ಒಂದು ಕಡೆ ಉದ್ಯೋಗವನ್ನು ನಂಬಿಕೊಂಡು ಕೆಲಸ ಮಾಡುವ ಉದ್ಯೋಗಿಗೆ ಆ ಉದ್ಯೋಗ ಇದ್ದಕ್ಕಿದ್ದಂತೆ ಇಲ್ಲವಾಗಿಬಿಟ್ಟರೆ ಅವರ ಮಟ್ಟಿಗೆ ಅದೊಂದು ಆಘಾತವೇ ಆಗಿರುತ್ತದೆ. ಉದ್ಯೋಗ ಮಾರುಕಟ್ಟೆಯಲ್ಲಿ ಅವರಿಗೆ ಇನ್ನೊಂದು ಕೆಲಸ ಸಲೀಸಾಗಿ ಸಿಗುವಂತಿದ್ದರೆ ಆ ಮಾತು ಬೇರೆ. ಈಗ ಸ್ಪೈಸ್‍ಜೆಟ್‍ನವರು, ಇಲ್ಲಿ ಕೆಲಸ ಕಳೆದುಕೊಂಡ 100 ಜನ ಪೈಲಟ್‍ಗಳು ಮತ್ತು 400 ಜನ ವಿಮಾನ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗೆ ತಮ್ಮಲ್ಲಿ ಉದ್ಯೋಗ ಕೊಟ್ಟಿದ್ದಾರೆ. ಜೆಟ್‍ನಲ್ಲಿ ಪಡೆಯುತ್ತಿದ್ದ ಸಂಬಳಕ್ಕೆ ಹೋಲಿಸಿದರೆ ಇಲ್ಲಿ ಶೇ.25ರಷ್ಟು ಸಂಬಳ ಮಾತ್ರ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಮತ್ತು ಪರಿಣಾಮವನ್ನು ಅಂದಾಜು ಮಾಡಬಹುದು.

ಜೆಟ್ ಏರ್‍ವೇಸ್‍ಅನ್ನು ಬೇರೆ ಯಾರಾದರೂ ಕೊಂಡುಕೊಳ್ಳಲಿ, ಎಸ್‍ಬಿಐ ಈ ಕಂಪೆನಿಗೆ ಸಾಲ ಕೊಡಲಿ, ಸರ್ಕಾರವು ತುರ್ತು ಪರಿಹಾರ ನಿಧಿಯನ್ನು ಕೊಟ್ಟು ಸಂಬಳದ ಬಾಕಿ (ಈಗಾಗಲೇ ಹಲವು ತಿಂಗಳುಗಳಿಂದ ಸಂಬಳ ಕೊಟ್ಟಿಲ್ಲ) ತೀರಿಸಲಿ ಹೀಗೆ ಹಲವು ಬೇಡಿಕೆಗಳನ್ನು ಸಿಬ್ಬಂದಿ ಮುಂದಿಟ್ಟಿದ್ದಾರೆ. ಹಣಕಾಸು ಸಚಿವ ಅರುಣ್ ಜೇಟ್ಲಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಎಲ್ಲರಿಗೂ ಅವರ ಬೇಡಿಕೆ ತಲುಪಿದೆ. ಇವುಗಳಲ್ಲಿ ಕೆಲವನ್ನು ಸರ್ಕಾರ, ಬ್ಯಾಂಕ್‍ಗಳು ಪರಿಶೀಲಿಸುತ್ತಲೂ ಇವೆ.

ಈ ರೀತಿಯ ಸಹಾಯವನ್ನು ಸರ್ಕಾರ ಮಾಡಬೇಕಾಗುತ್ತದೆ. ಈ ಸಿಬ್ಬಂದಿಯಲ್ಲಿ ಪೈಲಟ್‍ಗಳಿಗೆ ತಿಂಗಳಿಗೆ ನಾಲ್ಕು ಲಕ್ಷ ವೇತನವಿದ್ದರೆ, ಮೂರು ಲಕ್ಷಕ್ಕೂ ಹೆಚ್ಚು ತಿಂಗಳ ಕಂತು ಪಾವತಿ ಮಾಡುವಂತಹ ಸಾಲಗಳನ್ನು ಮಾಡಿಕೊಂಡಿರಬಹುದು. ಇನ್ನು ಕೆಳಹಂತದವರಿಗೆ 50 ಸಾವಿರ ಸಂಬಳವಿದ್ದರೆ, ಮನೆ ಸಾಲವೂ ಒಳಗೊಂಡಂತೆ ಹಲವು ಇಎಂಐಗಳನ್ನು ಪಾವತಿಸುವ ಕಷ್ಟ ಅವರಿಗಿರಬಹುದು. ಹಾಗಾಗಿ ಇದ್ದಕ್ಕಿದ್ದಂತೆ ನಾಲ್ಕೈದು ತಿಂಗಳ ವೇತನವೇ ಇಲ್ಲದಿದ್ದರೆ ಆಕಾಶವು ನೆಲಕ್ಕೆ ಮತ್ತು ಪಾತಾಳಕ್ಕೆ ಕುಸಿದಂತೆ ಆಗುವ ಎಲ್ಲಾ ಸಾಧ್ಯತೆ ಇದ್ದೇ ಇರುತ್ತದೆ. ಇವರಲ್ಲೇ ಕೆಲವರು ಮಕ್ಕಳ ಶಾಲಾ ಶುಲ್ಕವನ್ನೂ ಕಟ್ಟಲಾಗಿಲ್ಲ ಎಂದು ಗೋಳಾಡಿದ್ದನ್ನು ನೋಡಬಹುದು. ಇವರೆಲ್ಲರ ಕಷ್ಟಕ್ಕೆ ಮರುಗಬೇಕಿದೆ. ಈ ಕಂಪೆನಿ ದಾವೂದ್ ಇಬ್ರಾಹಿಂನ ಬೇನಾಮಿ ಎಂಬುದೂ ಒಂದು ಆರೋಪ (ಆರೋಪಕ್ಕೆ ಎಷ್ಟೇ ಗಟ್ಟಿ ಕಾರಣಗಳಿದ್ದರೂ, ಅದನ್ನು ಪ್ರತ್ಯೇಕವಾಗಿ ನಿಭಾಯಿಸಬೇಕು).

ಆದರೆ, ಇಲ್ಲಿ ಎರಡು ಪ್ರಶ್ನೆಗಳು ಏಳುತ್ತವೆ. ಒಂದು – ಯಾವುದೇ ಕಂಪೆನಿಯು ಇದ್ದಕ್ಕಿದ್ದಂತೆ ಕಾರ್ಯಾಚರಣೆ ನಿಲ್ಲಿಸಿ ಕೈ ಎತ್ತುವುದಾದರೆ ಅದಕ್ಕೆ ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲವೇ? ಲೇಆಫ್ ಕಾನೂನುಗಳು ಈಗ ಹೇಗೂ ಇವೆ. ಅಂತಹ ಸಂದರ್ಭದಲ್ಲಿ ಸಂಬಂಧಿಸಿದ ಮಾಲೀಕರ ಇತರ ಆಸ್ತಿಪಾಸ್ತಿಗಳನ್ನು ಬಳಸಿ ಸಿಬ್ಬಂದಿಗೆ ಪರಿಹಾರ ಕಲ್ಪಿಸಲು ಏಕೆ ಸಾಧ್ಯವಿಲ್ಲ? ಲಾಭ ಬಂದಾಗ ಮಾತ್ರ ಹೆಚ್ಚಿನ ಪಾಲು ಕಬಳಿಸಬೇಕು, ನಷ್ಟವಾದರೆ ಸಿಬ್ಬಂದಿ ಅಥವಾ ಸಾರ್ವಜನಿಕ ಬ್ಯಾಂಕು ಅಥವಾ ಸರ್ಕಾರ ಏಕೆ ಹೊರಬೇಕು? ಈ ವಿಚಾರ ಚರ್ಚೆಯಾಗುತ್ತಲೇ ಇಲ್ಲ. ವಿಜಯ್ ಮಲ್ಯನ ಕಿಂಗ್‍ಫಿಷರ್ ಏರ್‍ಲೈನ್ಸ್ ನಷ್ಟಕ್ಕೀಡಾದಾಗಲೂ ಆತ ಕೇಳಿದ್ದು, ‘ನನ್ನ ಐಷಾರಾಮಿ ಏರ್‍ಲೈನ್ಸ್ ನಷ್ಟಕ್ಕೀಡಾಗುತ್ತಿದೆ. ಸರ್ಕಾರ ಏನು ಮಾಡುತ್ತಿದೆ?’ ಎಂಬ ಧಮಕಿ! ಆತನ ಇನ್ನೂ ಎಷ್ಟೋ ಬೇರೆ ಬೇರೆ ಆಸ್ತಿಗಳು ಆಗಲೂ ಇದ್ದವು, ಈಗಲೂ ಇವೆ. ದಕ್ಷಿಣ ಆಫ್ರಿಕಾದಲ್ಲಿರುವ ಸ್ವಂತ ಕಾಡನ್ನೂ ಒಳಗೊಂಡು (ರೆಸಾರ್ಟ್ ಅಲ್ಲ, ಕಾಡು!!). ಹಾಗೆಯೇ ಜೆಟ್ ಏರ್‍ವೇಸ್‍ನ ನರೇಶ್ ಗೋಯೆಲ್‍ನ ಆಸ್ತಿಪಾಸ್ತಿಯ ವಿವರಗಳು ಸಾರ್ವಜನಿಕವಾಗಬೇಕು. ಉಳಿದ ವ್ಯವಹಾರಗಳೂ ಸಹಾ ಪಾರದರ್ಶಕವಾಗಿರಬೇಕು. ಸಾಧ್ಯವಾದಷ್ಟೂ ಅವುಗಳಿಂದಲೇ ಸಿಬ್ಬಂದಿ ಅಥವಾ ಸಿಬ್ಬಂದಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸಿದ ಸರ್ಕಾರ ಅಥವಾ ಬ್ಯಾಂಕಿಗೆ ಋಣ ಸಂದಾಯ ಆಗಬೇಕು.


ಎರಡು, ವಿಮಾನಯಾನ ಸಿಬ್ಬಂದಿಯ ಕುರಿತು ಮಾಧ್ಯಮಗಳು, ಸರ್ಕಾರ, ಬ್ಯಾಂಕು ಎಲ್ಲರೂ ಇಷ್ಟೊಂದು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ಖಾಸಗಿ ಕಂಪೆನಿಗಳ ಕಾರ್ಮಿಕರು, ದಿನನಿತ್ಯವೂ ಖಾಸಗಿ ಗುತ್ತಿಗೆ ಕಾರ್ಮಿಕರು ಮತ್ತು ಸರ್ಕಾರೀ ಗುತ್ತಿಗೆ ನೌಕರರು ಬೇಕಾಬಿಟ್ಟಿ ಕೆಲಸ ಕಳೆದುಕೊಳ್ಳುತ್ತಿದ್ದಾರಲ್ಲಾ, ಅವರ ಬಗ್ಗೆ ಈ ಥರದಲ್ಲಿ ಯಾರೂ ಕಣ್ಣೀರು ಮಿಡಿಯುವುದಿಲ್ಲವಲ್ಲಾ ಏಕೆ? ಅವರ ಜೀವನ ಕಡಿಮೆ ಬೆಲೆಯುಳ್ಳದ್ದಾ? ಅಪಘಾತ ಪರಿಹಾರ ಕೊಡುವಾಗಲೂ ಬೀದಿಯಲ್ಲಿ ಸತ್ತವರಿಗೊಂದು ಬೆಲೆ, ವಿಮಾನದಲ್ಲಿ ಸತ್ತವರಿಗೊಂದು ಪರಿಹಾರ ನಿಗದಿಯಾಗುತ್ತದಲ್ಲಾ ಹಾಗೇನಾ ಇದೂ?

ಇರಲಿ, ಪೈಲಟ್‍ಗೂ ಗುತ್ತಿಗೆ ಕಾರ್ಮಿಕರಿಗೂ ಒಂದೇ ಸಂಬಳ ಕೊಡಿ ಎಂಬುದೂ ಇಲ್ಲಿನ ಚರ್ಚೆಯಲ್ಲ. ಉದ್ಯೋಗ ಕಳೆದುಕೊಳ್ಳುವುದರ ವಿಚಾರದಲ್ಲಿ ಪೈಲಟ್‍ಗೆ ಇರುವ ಕಷ್ಟ ಹೇಗೆ ಕಷ್ಟವೋ, ಗುತ್ತಿಗೆ ನೌಕರರಿಗೂ ಅಂತಹುದೇ ಕಷ್ಟ ಇರುವುದಿಲ್ಲವಾ? ಇಲ್ಲಿ, ಪೈಲಟ್‍ಗಿದ್ದದ್ದು ಖಾಯಂ ಕೆಲಸ, ಗುತ್ತಿಗೆಯಲ್ಲಿ ಕೆಲಸ ಮಾಡುವವರಿಗೆ ಅಂತಹ ಗ್ಯಾರಂಟಿ ಇರುವುದಿಲ್ಲ ಎಂಬ ವಾದವನ್ನು ತರಬಾರದು. ಗುತ್ತಿಗೆ ನೌಕರಿ ಎನ್ನುವುದೇ ದೊಡ್ಡ ಬೋಗಸ್. ಖಾಯಂ ನೌಕರಿಯನ್ನು ತಪ್ಪಿಸಲು ಕಾನೂನಿಗೆ ವಿರುದ್ಧವಾಗಿ ಜಾರಿಗೆ ತಂದಿರುವ, ವರ್ಷಾನುಗಟ್ಟಲೇ ದುಡಿಸಿಕೊಳ್ಳುವ ಪದ್ಧತಿ ಗುತ್ತಿಗೆಯದ್ದಾಗಿದೆ.

ಅಂತಿಮವಾಗಿ ಇಷ್ಟು ಹೇಳಬಹುದು. ಜೆಟ್ ಏರ್‍ವೇಸ್‍ನ ಸಿಬ್ಬಂದಿಯ ನೆರವಿಗೆ ಸರ್ಕಾರವು ನಿಲ್ಲಲಿ, ಅವರ ತಲ್ಲಣವನ್ನು ಕೊನೆಗೊಳಿಸಲಿ. ಅದೇ ರೀತಿ ದೇಶದ ಎಲ್ಲೆಡೆ ಏಕಾಏಕಿ ಕೆಲಸ ಕಳೆದುಕೊಳ್ಳುವ ಎಲ್ಲರ ಪರವಾಗಿಯೂ ದುಡಿಸಿಕೊಳ್ಳುವ ಕಂಪೆನಿ, ಮಾಲೀಕರು, ಸರ್ಕಾರ ನಿಲ್ಲಬೇಕು.

(ಲೇಖಕರು, ಗುತ್ತಿಗೆ ನೌಕರರ ಸಂಘಟನೆಯ ಮುಂಚೂಣಿ ವ್ಯಕ್ತಿ.
ಲೇಖನದ ಅಭಿಪ್ರಾಯಗಳು ಲೇಖಕರವು. ಅವು ನಾನುಗೌರಿ.ಕಾಂ ವೆಬ್‍ತಂಡದ ಅಭಿಪ್ರಾಯಗಳು ಆಗಿರಲೇಬೇಕೆಂದಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...