Homeಮುಖಪುಟಬೀದಿಗೆ ಬಿದ್ದ ಜೆಟ್ ಏರ್‍ವೇಸ್ ಸಿಬ್ಬಂದಿ: ಕೆಲಸ ಕಳೆದುಕೊಳ್ಳುವ ಎಲ್ಲರ ಗೋಳೂ ಒಂದೇ(ನಾ)?

ಬೀದಿಗೆ ಬಿದ್ದ ಜೆಟ್ ಏರ್‍ವೇಸ್ ಸಿಬ್ಬಂದಿ: ಕೆಲಸ ಕಳೆದುಕೊಳ್ಳುವ ಎಲ್ಲರ ಗೋಳೂ ಒಂದೇ(ನಾ)?

- Advertisement -
- Advertisement -

| ಡಾ.ವಾಸು ಎಚ್.ವಿ |

ಕುಖ್ಯಾತ ಮಾಫಿಯಾ ಡಾನ್, ಭಯೋತ್ಪಾದಕ ಕೃತ್ಯಗಳ ಆರೋಪಿ ಕ್ರಿಮಿನಲ್ ದಾವೂದ್ ಇಬ್ರಾಹಿಂನ ಬೇನಾಮಿ ಒಡೆತನದ್ದೆಂದು ಹೇಳಲಾಗುತ್ತಿರುವ ಜೆಟ್ ಏರ್‍ವೇಸ್ ಸಂಸ್ಥೆ ಆರ್ಥಿಕವಾಗಿ ಕುಸಿದು ಕುಂತಿದೆ. ಅದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 16,000 ಸಿಬ್ಬಂದಿ ಬೀದಿಗೆ ಬಿದ್ದಿದ್ದಾರೆ. ಗಗನದಲ್ಲಿ ಓಡಾಡುತ್ತಿದ್ದ ಪೈಲಟ್‍ಗಳು, ಗಗನಸಖಿಯರು ಸೇರಿದಂತೆ ನೂರಾರು ಜನ ಅಕ್ಷರಶಃ ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡಿ, ‘ನಮ್ಮ ಗೋಳನ್ನು ಕೇಳಿ, ಉದ್ಯೋಗ ಉಳಿಸಿಕೊಡಿ’ ಎಂದು ಬೇಡಿಕೊಂಡಿದ್ದಾರೆ.

ಇದನ್ನೂ ಓದಿ: ದಾವೂದ್ ಬೇನಾಮಿ ಒಡೆತನದ ಜೆಟ್ ಏರ್ ವೇಸ್

ಕಳೆದ ಅಕ್ಟೋಬರ್‍ನಿಂದ ಕಡಿಮೆಯೆಂದರೂ 2,000 ಉದ್ಯೋಗಿಗಳು ಬಿಟ್ಟು ಹೋಗಿದ್ದಾರೆ. ಆ ನಂತರವೂ 1,500 ಪೈಲಟ್‍ಗಳು, 3,000 ಗಗನಸಖಿಯರನ್ನೊಳಗೊಂಡ ವಿಮಾನ ಸಿಬ್ಬಂದಿ, 5,000 ಭೂಕಾರ್ಯಾಚರಣಾ ಸಿಬ್ಬಂದಿ, 2,000 ತಾಂತ್ರಿಕ ಸಿಬ್ಬಂದಿ ಮತ್ತು 3,000 ಆಡಳಿತ ಅಧಿಕಾರಿಗಳು ಸೇರಿ 14,500 ಜನ ಸಿಬ್ಬಂದಿಗಳು ಉಳಿದುಕೊಂಡಿದ್ದರು. ಇತರ ವಿಮಾನಯಾನ ಕಂಪೆನಿಗಳಿಗೆ ಹೋಲಿಸಿದರೆ ಹೆಚ್ಚೇ ಸಂಬಳ ಕೊಡುತ್ತಿದ್ದ ಜೆಟ್ ಏರ್‍ವೇಸ್‍ನಲ್ಲಿದ್ದ ಇಷ್ಟು ಜನರು ಒಮ್ಮೆಗೇ ಕೆಲಸ ಕಳೆದುಕೊಳ್ಳುವುದೆಂದರೆ, ಅದು ಉಂಟು ಮಾಡುವ ತಲ್ಲಣವನ್ನು ಯಾರೂ ಊಹಿಸಬಹುದು.


ಇವೆಲ್ಲಾ ಸಂಖ್ಯೆಗಳು. ಆದರೆ, ಯಾವುದಾದರೂ ಒಂದು ಕಡೆ ಉದ್ಯೋಗವನ್ನು ನಂಬಿಕೊಂಡು ಕೆಲಸ ಮಾಡುವ ಉದ್ಯೋಗಿಗೆ ಆ ಉದ್ಯೋಗ ಇದ್ದಕ್ಕಿದ್ದಂತೆ ಇಲ್ಲವಾಗಿಬಿಟ್ಟರೆ ಅವರ ಮಟ್ಟಿಗೆ ಅದೊಂದು ಆಘಾತವೇ ಆಗಿರುತ್ತದೆ. ಉದ್ಯೋಗ ಮಾರುಕಟ್ಟೆಯಲ್ಲಿ ಅವರಿಗೆ ಇನ್ನೊಂದು ಕೆಲಸ ಸಲೀಸಾಗಿ ಸಿಗುವಂತಿದ್ದರೆ ಆ ಮಾತು ಬೇರೆ. ಈಗ ಸ್ಪೈಸ್‍ಜೆಟ್‍ನವರು, ಇಲ್ಲಿ ಕೆಲಸ ಕಳೆದುಕೊಂಡ 100 ಜನ ಪೈಲಟ್‍ಗಳು ಮತ್ತು 400 ಜನ ವಿಮಾನ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗೆ ತಮ್ಮಲ್ಲಿ ಉದ್ಯೋಗ ಕೊಟ್ಟಿದ್ದಾರೆ. ಜೆಟ್‍ನಲ್ಲಿ ಪಡೆಯುತ್ತಿದ್ದ ಸಂಬಳಕ್ಕೆ ಹೋಲಿಸಿದರೆ ಇಲ್ಲಿ ಶೇ.25ರಷ್ಟು ಸಂಬಳ ಮಾತ್ರ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಮತ್ತು ಪರಿಣಾಮವನ್ನು ಅಂದಾಜು ಮಾಡಬಹುದು.

ಜೆಟ್ ಏರ್‍ವೇಸ್‍ಅನ್ನು ಬೇರೆ ಯಾರಾದರೂ ಕೊಂಡುಕೊಳ್ಳಲಿ, ಎಸ್‍ಬಿಐ ಈ ಕಂಪೆನಿಗೆ ಸಾಲ ಕೊಡಲಿ, ಸರ್ಕಾರವು ತುರ್ತು ಪರಿಹಾರ ನಿಧಿಯನ್ನು ಕೊಟ್ಟು ಸಂಬಳದ ಬಾಕಿ (ಈಗಾಗಲೇ ಹಲವು ತಿಂಗಳುಗಳಿಂದ ಸಂಬಳ ಕೊಟ್ಟಿಲ್ಲ) ತೀರಿಸಲಿ ಹೀಗೆ ಹಲವು ಬೇಡಿಕೆಗಳನ್ನು ಸಿಬ್ಬಂದಿ ಮುಂದಿಟ್ಟಿದ್ದಾರೆ. ಹಣಕಾಸು ಸಚಿವ ಅರುಣ್ ಜೇಟ್ಲಿಯಿಂದ ಹಿಡಿದು ರಾಷ್ಟ್ರಪತಿಯವರೆಗೆ ಎಲ್ಲರಿಗೂ ಅವರ ಬೇಡಿಕೆ ತಲುಪಿದೆ. ಇವುಗಳಲ್ಲಿ ಕೆಲವನ್ನು ಸರ್ಕಾರ, ಬ್ಯಾಂಕ್‍ಗಳು ಪರಿಶೀಲಿಸುತ್ತಲೂ ಇವೆ.

ಈ ರೀತಿಯ ಸಹಾಯವನ್ನು ಸರ್ಕಾರ ಮಾಡಬೇಕಾಗುತ್ತದೆ. ಈ ಸಿಬ್ಬಂದಿಯಲ್ಲಿ ಪೈಲಟ್‍ಗಳಿಗೆ ತಿಂಗಳಿಗೆ ನಾಲ್ಕು ಲಕ್ಷ ವೇತನವಿದ್ದರೆ, ಮೂರು ಲಕ್ಷಕ್ಕೂ ಹೆಚ್ಚು ತಿಂಗಳ ಕಂತು ಪಾವತಿ ಮಾಡುವಂತಹ ಸಾಲಗಳನ್ನು ಮಾಡಿಕೊಂಡಿರಬಹುದು. ಇನ್ನು ಕೆಳಹಂತದವರಿಗೆ 50 ಸಾವಿರ ಸಂಬಳವಿದ್ದರೆ, ಮನೆ ಸಾಲವೂ ಒಳಗೊಂಡಂತೆ ಹಲವು ಇಎಂಐಗಳನ್ನು ಪಾವತಿಸುವ ಕಷ್ಟ ಅವರಿಗಿರಬಹುದು. ಹಾಗಾಗಿ ಇದ್ದಕ್ಕಿದ್ದಂತೆ ನಾಲ್ಕೈದು ತಿಂಗಳ ವೇತನವೇ ಇಲ್ಲದಿದ್ದರೆ ಆಕಾಶವು ನೆಲಕ್ಕೆ ಮತ್ತು ಪಾತಾಳಕ್ಕೆ ಕುಸಿದಂತೆ ಆಗುವ ಎಲ್ಲಾ ಸಾಧ್ಯತೆ ಇದ್ದೇ ಇರುತ್ತದೆ. ಇವರಲ್ಲೇ ಕೆಲವರು ಮಕ್ಕಳ ಶಾಲಾ ಶುಲ್ಕವನ್ನೂ ಕಟ್ಟಲಾಗಿಲ್ಲ ಎಂದು ಗೋಳಾಡಿದ್ದನ್ನು ನೋಡಬಹುದು. ಇವರೆಲ್ಲರ ಕಷ್ಟಕ್ಕೆ ಮರುಗಬೇಕಿದೆ. ಈ ಕಂಪೆನಿ ದಾವೂದ್ ಇಬ್ರಾಹಿಂನ ಬೇನಾಮಿ ಎಂಬುದೂ ಒಂದು ಆರೋಪ (ಆರೋಪಕ್ಕೆ ಎಷ್ಟೇ ಗಟ್ಟಿ ಕಾರಣಗಳಿದ್ದರೂ, ಅದನ್ನು ಪ್ರತ್ಯೇಕವಾಗಿ ನಿಭಾಯಿಸಬೇಕು).

ಆದರೆ, ಇಲ್ಲಿ ಎರಡು ಪ್ರಶ್ನೆಗಳು ಏಳುತ್ತವೆ. ಒಂದು – ಯಾವುದೇ ಕಂಪೆನಿಯು ಇದ್ದಕ್ಕಿದ್ದಂತೆ ಕಾರ್ಯಾಚರಣೆ ನಿಲ್ಲಿಸಿ ಕೈ ಎತ್ತುವುದಾದರೆ ಅದಕ್ಕೆ ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲವೇ? ಲೇಆಫ್ ಕಾನೂನುಗಳು ಈಗ ಹೇಗೂ ಇವೆ. ಅಂತಹ ಸಂದರ್ಭದಲ್ಲಿ ಸಂಬಂಧಿಸಿದ ಮಾಲೀಕರ ಇತರ ಆಸ್ತಿಪಾಸ್ತಿಗಳನ್ನು ಬಳಸಿ ಸಿಬ್ಬಂದಿಗೆ ಪರಿಹಾರ ಕಲ್ಪಿಸಲು ಏಕೆ ಸಾಧ್ಯವಿಲ್ಲ? ಲಾಭ ಬಂದಾಗ ಮಾತ್ರ ಹೆಚ್ಚಿನ ಪಾಲು ಕಬಳಿಸಬೇಕು, ನಷ್ಟವಾದರೆ ಸಿಬ್ಬಂದಿ ಅಥವಾ ಸಾರ್ವಜನಿಕ ಬ್ಯಾಂಕು ಅಥವಾ ಸರ್ಕಾರ ಏಕೆ ಹೊರಬೇಕು? ಈ ವಿಚಾರ ಚರ್ಚೆಯಾಗುತ್ತಲೇ ಇಲ್ಲ. ವಿಜಯ್ ಮಲ್ಯನ ಕಿಂಗ್‍ಫಿಷರ್ ಏರ್‍ಲೈನ್ಸ್ ನಷ್ಟಕ್ಕೀಡಾದಾಗಲೂ ಆತ ಕೇಳಿದ್ದು, ‘ನನ್ನ ಐಷಾರಾಮಿ ಏರ್‍ಲೈನ್ಸ್ ನಷ್ಟಕ್ಕೀಡಾಗುತ್ತಿದೆ. ಸರ್ಕಾರ ಏನು ಮಾಡುತ್ತಿದೆ?’ ಎಂಬ ಧಮಕಿ! ಆತನ ಇನ್ನೂ ಎಷ್ಟೋ ಬೇರೆ ಬೇರೆ ಆಸ್ತಿಗಳು ಆಗಲೂ ಇದ್ದವು, ಈಗಲೂ ಇವೆ. ದಕ್ಷಿಣ ಆಫ್ರಿಕಾದಲ್ಲಿರುವ ಸ್ವಂತ ಕಾಡನ್ನೂ ಒಳಗೊಂಡು (ರೆಸಾರ್ಟ್ ಅಲ್ಲ, ಕಾಡು!!). ಹಾಗೆಯೇ ಜೆಟ್ ಏರ್‍ವೇಸ್‍ನ ನರೇಶ್ ಗೋಯೆಲ್‍ನ ಆಸ್ತಿಪಾಸ್ತಿಯ ವಿವರಗಳು ಸಾರ್ವಜನಿಕವಾಗಬೇಕು. ಉಳಿದ ವ್ಯವಹಾರಗಳೂ ಸಹಾ ಪಾರದರ್ಶಕವಾಗಿರಬೇಕು. ಸಾಧ್ಯವಾದಷ್ಟೂ ಅವುಗಳಿಂದಲೇ ಸಿಬ್ಬಂದಿ ಅಥವಾ ಸಿಬ್ಬಂದಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸಿದ ಸರ್ಕಾರ ಅಥವಾ ಬ್ಯಾಂಕಿಗೆ ಋಣ ಸಂದಾಯ ಆಗಬೇಕು.


ಎರಡು, ವಿಮಾನಯಾನ ಸಿಬ್ಬಂದಿಯ ಕುರಿತು ಮಾಧ್ಯಮಗಳು, ಸರ್ಕಾರ, ಬ್ಯಾಂಕು ಎಲ್ಲರೂ ಇಷ್ಟೊಂದು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ಖಾಸಗಿ ಕಂಪೆನಿಗಳ ಕಾರ್ಮಿಕರು, ದಿನನಿತ್ಯವೂ ಖಾಸಗಿ ಗುತ್ತಿಗೆ ಕಾರ್ಮಿಕರು ಮತ್ತು ಸರ್ಕಾರೀ ಗುತ್ತಿಗೆ ನೌಕರರು ಬೇಕಾಬಿಟ್ಟಿ ಕೆಲಸ ಕಳೆದುಕೊಳ್ಳುತ್ತಿದ್ದಾರಲ್ಲಾ, ಅವರ ಬಗ್ಗೆ ಈ ಥರದಲ್ಲಿ ಯಾರೂ ಕಣ್ಣೀರು ಮಿಡಿಯುವುದಿಲ್ಲವಲ್ಲಾ ಏಕೆ? ಅವರ ಜೀವನ ಕಡಿಮೆ ಬೆಲೆಯುಳ್ಳದ್ದಾ? ಅಪಘಾತ ಪರಿಹಾರ ಕೊಡುವಾಗಲೂ ಬೀದಿಯಲ್ಲಿ ಸತ್ತವರಿಗೊಂದು ಬೆಲೆ, ವಿಮಾನದಲ್ಲಿ ಸತ್ತವರಿಗೊಂದು ಪರಿಹಾರ ನಿಗದಿಯಾಗುತ್ತದಲ್ಲಾ ಹಾಗೇನಾ ಇದೂ?

ಇರಲಿ, ಪೈಲಟ್‍ಗೂ ಗುತ್ತಿಗೆ ಕಾರ್ಮಿಕರಿಗೂ ಒಂದೇ ಸಂಬಳ ಕೊಡಿ ಎಂಬುದೂ ಇಲ್ಲಿನ ಚರ್ಚೆಯಲ್ಲ. ಉದ್ಯೋಗ ಕಳೆದುಕೊಳ್ಳುವುದರ ವಿಚಾರದಲ್ಲಿ ಪೈಲಟ್‍ಗೆ ಇರುವ ಕಷ್ಟ ಹೇಗೆ ಕಷ್ಟವೋ, ಗುತ್ತಿಗೆ ನೌಕರರಿಗೂ ಅಂತಹುದೇ ಕಷ್ಟ ಇರುವುದಿಲ್ಲವಾ? ಇಲ್ಲಿ, ಪೈಲಟ್‍ಗಿದ್ದದ್ದು ಖಾಯಂ ಕೆಲಸ, ಗುತ್ತಿಗೆಯಲ್ಲಿ ಕೆಲಸ ಮಾಡುವವರಿಗೆ ಅಂತಹ ಗ್ಯಾರಂಟಿ ಇರುವುದಿಲ್ಲ ಎಂಬ ವಾದವನ್ನು ತರಬಾರದು. ಗುತ್ತಿಗೆ ನೌಕರಿ ಎನ್ನುವುದೇ ದೊಡ್ಡ ಬೋಗಸ್. ಖಾಯಂ ನೌಕರಿಯನ್ನು ತಪ್ಪಿಸಲು ಕಾನೂನಿಗೆ ವಿರುದ್ಧವಾಗಿ ಜಾರಿಗೆ ತಂದಿರುವ, ವರ್ಷಾನುಗಟ್ಟಲೇ ದುಡಿಸಿಕೊಳ್ಳುವ ಪದ್ಧತಿ ಗುತ್ತಿಗೆಯದ್ದಾಗಿದೆ.

ಅಂತಿಮವಾಗಿ ಇಷ್ಟು ಹೇಳಬಹುದು. ಜೆಟ್ ಏರ್‍ವೇಸ್‍ನ ಸಿಬ್ಬಂದಿಯ ನೆರವಿಗೆ ಸರ್ಕಾರವು ನಿಲ್ಲಲಿ, ಅವರ ತಲ್ಲಣವನ್ನು ಕೊನೆಗೊಳಿಸಲಿ. ಅದೇ ರೀತಿ ದೇಶದ ಎಲ್ಲೆಡೆ ಏಕಾಏಕಿ ಕೆಲಸ ಕಳೆದುಕೊಳ್ಳುವ ಎಲ್ಲರ ಪರವಾಗಿಯೂ ದುಡಿಸಿಕೊಳ್ಳುವ ಕಂಪೆನಿ, ಮಾಲೀಕರು, ಸರ್ಕಾರ ನಿಲ್ಲಬೇಕು.

(ಲೇಖಕರು, ಗುತ್ತಿಗೆ ನೌಕರರ ಸಂಘಟನೆಯ ಮುಂಚೂಣಿ ವ್ಯಕ್ತಿ.
ಲೇಖನದ ಅಭಿಪ್ರಾಯಗಳು ಲೇಖಕರವು. ಅವು ನಾನುಗೌರಿ.ಕಾಂ ವೆಬ್‍ತಂಡದ ಅಭಿಪ್ರಾಯಗಳು ಆಗಿರಲೇಬೇಕೆಂದಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...