Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...