Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...