Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...