Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...