Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...