Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...