Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...