Homeಅಂತರಾಷ್ಟ್ರೀಯಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

ಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ, ಎರಡೂ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ನವೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಇಂತಹ ಸಂಭ್ರಮದ ವಿಷಯ ಈಗ ಟೀಕೆ, ಆರೋಪಗಳಿಗೆ ಗುರಿಯಾಗಿ ದೇಶಾದ್ಯಂತ ಸದ್ದು ಮಾಡುತ್ತಿದೆ.

ಯಾವುದು ಈ ಕರ್ತಾರ್ ಪುರ್‌ ಕಾರಿಡಾರ್

ಸಿಖ್ಖರ ಪವಿತ್ರ ಸ್ಥಳಗಳಲ್ಲೊಂದು “ಗುರುದ್ವಾರ್ ದರ್ಬಾರ್ ಸಾಹಿಬ್”. ಸಿಖ್‌ರ ಧರ್ಮಗುರು ಗುರುನಾನಕ್‌ರವರ ಸಮಾಧಿ ಇರುವ ಸ್ಥಳ. ಇದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ ಜಿಲ್ಲೆಯ ಕರ್ತಾರ್ ಪುರದಲ್ಲಿದೆ. ಸಿಖ್ಖರ ಜೀವಿತಾವಧಿಯಲ್ಲಿ ಈ ಸ್ಥಳವನ್ನು ಒಮ್ಮೆಯಾದರೂ ನೋಡಲೇಬೇಕೆಂಬುದು ಅವರ ನಂಬಿಕೆ. ಇಲ್ಲವಾದರೆ ಅದು ತಮ್ಮ ಪಾಪವೆಂದು ಅವರು ಭಾವಿಸುತ್ತಾರೆ. ಪಾಕಿಸ್ತಾನಕ್ಕೆ ಸೇರಿರುವ ಲಾಹೋರ್ ಪ್ರದೇಶದಲ್ಲಿ ಹಾಗೂ ಪಂಜಾಬ್‍ನಲ್ಲಿರುವ ಭಾರತದ ಗಡಿಯಿಂದ ಕೇವಲ 4.7 ಕಿ.ಮೀ ಸಮೀಪದಲ್ಲಿ ಈ ಸ್ಥಳವಿದೆ. ಆದರೆ ಈ ಸ್ಥಳಕ್ಕೆ ಭಾರತೀಯರು ಹೋಗಬೇಕಾದರೆ ಸುಮಾರು 125 ಕಿ.ಮೀ ಸುತ್ತಾಟದ ಪ್ರಯಾಣ ಬೆಳೆಸಬೇಕು. ಅಲ್ಲದೆ ಪಾಕಿಸ್ತಾನದಿಂದ ವೀಸಾ ಕೂಡ ಪಡೆದುಕೊಳ್ಳಬೇಕಾಗಿತ್ತು. ಇಷ್ಟೆಲ್ಲಾ ಕಸರತ್ತು ಮಾಡಲಾಗದ ಕೆಲವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಅಂತರಾಷ್ಟ್ರೀಯ ಗಡಿಯಲ್ಲಿ ನಿಂತು ಬೈನಾಕುಲರ್(ದೂರದರ್ಶಕ)ನ ಸಹಾಯದಿಂದ ನೋಡಿ ತೃಪ್ತಿ ಪಟ್ಟುಕೊಂಡು ಜೀವನದ ಸಾರ್ಥಕತೆಯೆಂದು ಭಾವಿಸುತ್ತಿದ್ದರು.

ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಸಮಾಧಿ ಇರುವ ಕರ್ತಾರ್ ಪುರವನ್ನು ಪವಿತ್ರ ಸ್ಥಳವೆಂದು ಸಿಖ್ಖರು ಪೂಜಿಸುವ ಈ ಪ್ರದೇಶಕ್ಕೆ ಭಾರತೀಯರಿಗೆ ಮುಕ್ತ ಅವಕಾಶ ಕಲ್ಪಿಸುವ ವಿಚಾರ ಹಲವಾರು ವರ್ಷಗಳಿಂದ ಚರ್ಚೆಯಲ್ಲಿದೆ. 1999ರಲ್ಲಿ ದೆಹಲಿ ಮತ್ತು ಲಾಹೋರ್ ನಡುವೆ ಬಸ್ ವ್ಯವಸ್ಥೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಈ ಚರ್ಚೆ ಪ್ರಾರಂಭವಾಗಿತ್ತು. ಅಂದಿನ ಭಾರತದ ಪ್ರಧಾನಿಯಾಗಿದ್ದ ಅ.ಬಿ.ವಾಜಪೇಯಿ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಫ್ ಕರ್ತಾರ್ ಪುರ್ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಆ ಪ್ರಸ್ಥಾಪ ಪ್ರಸ್ತಾಪವಾಗಿಯೇ ನೆನೆಗುದಿಗೆ ಬಿದ್ದಿತ್ತು.

2018ರಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದರು. ತಮ್ಮ ಪ್ರಮಾಣವಚನ ಸಂದರ್ಭದಲ್ಲಿ ಭಾರತದಿಂದ ಕರ್ತಾರ್‌ಪುರಕ್ಕೆ ರಸ್ತೆ ಸೌಲಭ್ಯ ಕಲ್ಪಿಸಿ ಮುಕ್ತ ಪ್ರವೇಶ ನೀಡುವುದಾಗಿ ಘೋಷಿಸಿದ್ದರು. ಅದಾದ ಮೂರು ತಿಂಗಳ ನಂತರ 2018ರ ನವೆಂಬರ್‌ನಲ್ಲಿ ಕರ್ತಾರ್ ಪುರ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದರು. ಕರ್ತಾರ್‌ಪುರದಿಂದ ಭಾರತದ ಗುರುದಾಸ್ ಪುರದ ದೇರೆ ಬಾಬ ನಾಸಿಕ್‍ಗೆ 4.7 ಕಿ.ಮೀ ಉದ್ದದ ಕಾರಿಡಾರ್ ಇದಾಗಿದೆ. 2019ರ ನವೆಂಬರ್‌ನಲ್ಲಿ ಗುರುನಾನಕ್ ಅವರ 550ನೇ ಜನ್ಮ ಜಯಂತಿಯಿದೆ. ಆ ವೇಳೆಗೆ ಕಾರಿಡಾರ್‌ನಲ್ಲಿ ಸಂಚಾರ ಆರಂಭಗೊಳಿಸುವುದಾಗಿ ಇಮ್ರಾನ್ ಖಾನ್ ತಿಳಿಸಿದ್ದರು. ಅಂತಯೇ ನವೆಂಬರ್ 1ರಂದು ಈ ಕಾರಿಡಾರ್ ಉದ್ಘಾಟನೆಗೊಳ್ಳುತ್ತಿದೆ. ಇನ್ನು ಮುಂದೆ ಭಾರತೀಯರ ಪ್ರವೇಶಕ್ಕೆ ಕರ್ತಾರ್‌ ಪುರ್ ತೆರೆದುಕೊಳ್ಳಲಿದೆ. ಭಾರತೀಯ ಸಿಖ್ ಯಾತ್ರಿಗಳು ತಮ್ಮ ಪುಣ್ಯ ಸ್ಥಳವನ್ನು ಮುಕ್ತ ಪ್ರವೇಶದೊಂದಿಗೆ ಕಣ್ತುಂಬಿಕೊಳ್ಳುವ ಅವಕಾಶವನ್ನು ಕಲ್ಪಸಿಕೊಡಲಾಗಿದೆ.

ಕಾರಿಡಾರ್ ಅನ್ನು ಬರ್ಲಿನ್ ಗೋಡೆಯ ಪತನಕ್ಕೆ ಹೋಲಿಸಿದ್ದ ಇಮ್ರಾನ್ ಖಾನ್

2018ರ ನವೆಂಬರ್ 28ರಂದು ಭಾರತ ಮತ್ತು ಪಾಕಿಸ್ತಾನಕ್ಕೆ ಮುಕ್ತ ಪ್ರವೇಶ ಕಲ್ಪಿಸುವ ಕರ್ತಾರ್ ಪುರ್ ಕಾರಿಡಾರ್‌ಗೆ ಚಾಲನೆ ನೀಡಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದರು. ತಮ್ಮ ಮಾತಿನಲ್ಲಿ ಈ ಯೋಜನೆಯನ್ನು ಜರ್ಮನಿಯ ಬರ್ಲಿನ್ ಗೋಡೆಗೆ ಹೋಲಿಸಿದ್ದರು. ಜರ್ಮನ್ ದೇಶವನ್ನು ಪೂರ್ವ ಜರ್ಮನ್ ಮತ್ತು ಪಶ್ಚಿಮ ಜರ್ಮನ್ ಎಂದು ಇಬ್ಬಾಗಿಸಿ ಬರ್ಲಿನ್‍ನಲ್ಲಿ ಗೋಡೆಯನ್ನು ಕಟ್ಟಲಾಗಿತ್ತು. 1990ರ ದಶಕದಲ್ಲಿ ಈ ಗೋಡೆಯನ್ನು ಕೆಡವಿ ಇಬ್ಬಾಗವಾಗಿದ್ದ ದೇಶಗಳ ಜನರನ್ನು ಒಂದುಗೂಡಿಸಿ ಒಂದೇ ದೇಶವೆಂದು ಘೋಷಿಸಲಾಗಿತ್ತು. ಅಂತೆಯೇ ಪಾಕಿಸ್ತಾನದ ಕರ್ತಾರ್‌ಪುರ್‌ಗೆ ಭಾರತೀಯರಿಗೆ ಮುಕ್ತ ಅವಕಾಶ ನೀಡಿರುವುದು ಶತ್ರುಗಳಂತೆ ಕಾದಾಡುತ್ತಿದ್ದ ದೇಶಗಳ ನಡುವೆ ಸಾಮರಸ್ಯ ಸಂಬಂಧವನ್ನು ತರಲಿದೆ ಎಂಬ ಭಾವ ಅವರ ಮಾತಿನಲ್ಲಿತ್ತು.

ಕಾರಿಡಾರ್ ನಿರ್ಮಾಣಕ್ಕೆ ಕಾರಣವಾಯ್ತಾ ಆ ಅಪ್ಪುಗೆ..

2018ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಂತ್ರಿಯೂ ಆಗಿದ್ದ ನವಜೋದ್ ಸಿಂಗ್ ಸಿಧು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಅವರನ್ನು ಸಿಧು ಅಪ್ಪಿಕೊಂಡಿದ್ದರು. ಈ ಅಪ್ಪುಗೆಯನ್ನು ಭಾರತೀಯರು ಕಟುವಾಗಿ ಟೀಕಿಸಿದ್ದರು. ಕೆಲವು ದಿನಗಳ ನಂತರ ಈ ಟೀಕೆಗೆ ಪ್ರತಿಕ್ರಿಯಿಸಿದ್ದ ಸಿಧು ಭಾರತ ಮತ್ತು ಕರ್ತಾರ್ ಪುರ್ ನಡುವೆ ಮುಕ್ತ ಸಂಪರ್ಕ ಕಲ್ಪಿಸುವ ಬಗ್ಗೆ ಪಾಕ್ ತೀರ್ಮಾನಿಸಿದೆ. ಅದಕ್ಕಾಗಿ ನಾನು ಅವರನ್ನು ಅಪ್ಪಿಕೊಂಡೆ ಎಂದು ಹೇಳಿದ್ದರು. ಈ ‍ಘಟನೆ ನಡೆದ ಮೂರು ತಿಂಗಳ ನಂತರ ಕಾರಿಡಾರ್ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ನಡೆಯಿತು. ಆ ದಿನವೂ ಸಿಧು ಭಾಗವಹಿಸಿದ್ದರು.

ಅಂತೂ ಸಿಖ್ ಯಾತ್ರಿಗಳಿಗೆ “ಗುರುದ್ವಾರ್ ದರ್ಬಾರ್ ಸಾಹಿಬ್‍ಗೆ ಮುಕ್ತ ಪ್ರವೇಶ ದೊರೆಯುಂತಾಗಿದೆ. ಈ ಕಾರಿಡಾರ್‌ನ ಉದ್ಘಾಟನಾ ಸಮಾರಂಭಕ್ಕೆ ಭಾರತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮದ್ ಹೇಳಿದ್ದಾರೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್‌ರವರು ಯಾವುದೇ ನಿರ್ಧಾರ ಕೈಗೊಂಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...