Homeಅಂತರಾಷ್ಟ್ರೀಯಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

ಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ, ಎರಡೂ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ನವೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಇಂತಹ ಸಂಭ್ರಮದ ವಿಷಯ ಈಗ ಟೀಕೆ, ಆರೋಪಗಳಿಗೆ ಗುರಿಯಾಗಿ ದೇಶಾದ್ಯಂತ ಸದ್ದು ಮಾಡುತ್ತಿದೆ.

ಯಾವುದು ಈ ಕರ್ತಾರ್ ಪುರ್‌ ಕಾರಿಡಾರ್

ಸಿಖ್ಖರ ಪವಿತ್ರ ಸ್ಥಳಗಳಲ್ಲೊಂದು “ಗುರುದ್ವಾರ್ ದರ್ಬಾರ್ ಸಾಹಿಬ್”. ಸಿಖ್‌ರ ಧರ್ಮಗುರು ಗುರುನಾನಕ್‌ರವರ ಸಮಾಧಿ ಇರುವ ಸ್ಥಳ. ಇದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ ಜಿಲ್ಲೆಯ ಕರ್ತಾರ್ ಪುರದಲ್ಲಿದೆ. ಸಿಖ್ಖರ ಜೀವಿತಾವಧಿಯಲ್ಲಿ ಈ ಸ್ಥಳವನ್ನು ಒಮ್ಮೆಯಾದರೂ ನೋಡಲೇಬೇಕೆಂಬುದು ಅವರ ನಂಬಿಕೆ. ಇಲ್ಲವಾದರೆ ಅದು ತಮ್ಮ ಪಾಪವೆಂದು ಅವರು ಭಾವಿಸುತ್ತಾರೆ. ಪಾಕಿಸ್ತಾನಕ್ಕೆ ಸೇರಿರುವ ಲಾಹೋರ್ ಪ್ರದೇಶದಲ್ಲಿ ಹಾಗೂ ಪಂಜಾಬ್‍ನಲ್ಲಿರುವ ಭಾರತದ ಗಡಿಯಿಂದ ಕೇವಲ 4.7 ಕಿ.ಮೀ ಸಮೀಪದಲ್ಲಿ ಈ ಸ್ಥಳವಿದೆ. ಆದರೆ ಈ ಸ್ಥಳಕ್ಕೆ ಭಾರತೀಯರು ಹೋಗಬೇಕಾದರೆ ಸುಮಾರು 125 ಕಿ.ಮೀ ಸುತ್ತಾಟದ ಪ್ರಯಾಣ ಬೆಳೆಸಬೇಕು. ಅಲ್ಲದೆ ಪಾಕಿಸ್ತಾನದಿಂದ ವೀಸಾ ಕೂಡ ಪಡೆದುಕೊಳ್ಳಬೇಕಾಗಿತ್ತು. ಇಷ್ಟೆಲ್ಲಾ ಕಸರತ್ತು ಮಾಡಲಾಗದ ಕೆಲವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಅಂತರಾಷ್ಟ್ರೀಯ ಗಡಿಯಲ್ಲಿ ನಿಂತು ಬೈನಾಕುಲರ್(ದೂರದರ್ಶಕ)ನ ಸಹಾಯದಿಂದ ನೋಡಿ ತೃಪ್ತಿ ಪಟ್ಟುಕೊಂಡು ಜೀವನದ ಸಾರ್ಥಕತೆಯೆಂದು ಭಾವಿಸುತ್ತಿದ್ದರು.

ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಸಮಾಧಿ ಇರುವ ಕರ್ತಾರ್ ಪುರವನ್ನು ಪವಿತ್ರ ಸ್ಥಳವೆಂದು ಸಿಖ್ಖರು ಪೂಜಿಸುವ ಈ ಪ್ರದೇಶಕ್ಕೆ ಭಾರತೀಯರಿಗೆ ಮುಕ್ತ ಅವಕಾಶ ಕಲ್ಪಿಸುವ ವಿಚಾರ ಹಲವಾರು ವರ್ಷಗಳಿಂದ ಚರ್ಚೆಯಲ್ಲಿದೆ. 1999ರಲ್ಲಿ ದೆಹಲಿ ಮತ್ತು ಲಾಹೋರ್ ನಡುವೆ ಬಸ್ ವ್ಯವಸ್ಥೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಈ ಚರ್ಚೆ ಪ್ರಾರಂಭವಾಗಿತ್ತು. ಅಂದಿನ ಭಾರತದ ಪ್ರಧಾನಿಯಾಗಿದ್ದ ಅ.ಬಿ.ವಾಜಪೇಯಿ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಫ್ ಕರ್ತಾರ್ ಪುರ್ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಆ ಪ್ರಸ್ಥಾಪ ಪ್ರಸ್ತಾಪವಾಗಿಯೇ ನೆನೆಗುದಿಗೆ ಬಿದ್ದಿತ್ತು.

2018ರಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದರು. ತಮ್ಮ ಪ್ರಮಾಣವಚನ ಸಂದರ್ಭದಲ್ಲಿ ಭಾರತದಿಂದ ಕರ್ತಾರ್‌ಪುರಕ್ಕೆ ರಸ್ತೆ ಸೌಲಭ್ಯ ಕಲ್ಪಿಸಿ ಮುಕ್ತ ಪ್ರವೇಶ ನೀಡುವುದಾಗಿ ಘೋಷಿಸಿದ್ದರು. ಅದಾದ ಮೂರು ತಿಂಗಳ ನಂತರ 2018ರ ನವೆಂಬರ್‌ನಲ್ಲಿ ಕರ್ತಾರ್ ಪುರ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದರು. ಕರ್ತಾರ್‌ಪುರದಿಂದ ಭಾರತದ ಗುರುದಾಸ್ ಪುರದ ದೇರೆ ಬಾಬ ನಾಸಿಕ್‍ಗೆ 4.7 ಕಿ.ಮೀ ಉದ್ದದ ಕಾರಿಡಾರ್ ಇದಾಗಿದೆ. 2019ರ ನವೆಂಬರ್‌ನಲ್ಲಿ ಗುರುನಾನಕ್ ಅವರ 550ನೇ ಜನ್ಮ ಜಯಂತಿಯಿದೆ. ಆ ವೇಳೆಗೆ ಕಾರಿಡಾರ್‌ನಲ್ಲಿ ಸಂಚಾರ ಆರಂಭಗೊಳಿಸುವುದಾಗಿ ಇಮ್ರಾನ್ ಖಾನ್ ತಿಳಿಸಿದ್ದರು. ಅಂತಯೇ ನವೆಂಬರ್ 1ರಂದು ಈ ಕಾರಿಡಾರ್ ಉದ್ಘಾಟನೆಗೊಳ್ಳುತ್ತಿದೆ. ಇನ್ನು ಮುಂದೆ ಭಾರತೀಯರ ಪ್ರವೇಶಕ್ಕೆ ಕರ್ತಾರ್‌ ಪುರ್ ತೆರೆದುಕೊಳ್ಳಲಿದೆ. ಭಾರತೀಯ ಸಿಖ್ ಯಾತ್ರಿಗಳು ತಮ್ಮ ಪುಣ್ಯ ಸ್ಥಳವನ್ನು ಮುಕ್ತ ಪ್ರವೇಶದೊಂದಿಗೆ ಕಣ್ತುಂಬಿಕೊಳ್ಳುವ ಅವಕಾಶವನ್ನು ಕಲ್ಪಸಿಕೊಡಲಾಗಿದೆ.

ಕಾರಿಡಾರ್ ಅನ್ನು ಬರ್ಲಿನ್ ಗೋಡೆಯ ಪತನಕ್ಕೆ ಹೋಲಿಸಿದ್ದ ಇಮ್ರಾನ್ ಖಾನ್

2018ರ ನವೆಂಬರ್ 28ರಂದು ಭಾರತ ಮತ್ತು ಪಾಕಿಸ್ತಾನಕ್ಕೆ ಮುಕ್ತ ಪ್ರವೇಶ ಕಲ್ಪಿಸುವ ಕರ್ತಾರ್ ಪುರ್ ಕಾರಿಡಾರ್‌ಗೆ ಚಾಲನೆ ನೀಡಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದರು. ತಮ್ಮ ಮಾತಿನಲ್ಲಿ ಈ ಯೋಜನೆಯನ್ನು ಜರ್ಮನಿಯ ಬರ್ಲಿನ್ ಗೋಡೆಗೆ ಹೋಲಿಸಿದ್ದರು. ಜರ್ಮನ್ ದೇಶವನ್ನು ಪೂರ್ವ ಜರ್ಮನ್ ಮತ್ತು ಪಶ್ಚಿಮ ಜರ್ಮನ್ ಎಂದು ಇಬ್ಬಾಗಿಸಿ ಬರ್ಲಿನ್‍ನಲ್ಲಿ ಗೋಡೆಯನ್ನು ಕಟ್ಟಲಾಗಿತ್ತು. 1990ರ ದಶಕದಲ್ಲಿ ಈ ಗೋಡೆಯನ್ನು ಕೆಡವಿ ಇಬ್ಬಾಗವಾಗಿದ್ದ ದೇಶಗಳ ಜನರನ್ನು ಒಂದುಗೂಡಿಸಿ ಒಂದೇ ದೇಶವೆಂದು ಘೋಷಿಸಲಾಗಿತ್ತು. ಅಂತೆಯೇ ಪಾಕಿಸ್ತಾನದ ಕರ್ತಾರ್‌ಪುರ್‌ಗೆ ಭಾರತೀಯರಿಗೆ ಮುಕ್ತ ಅವಕಾಶ ನೀಡಿರುವುದು ಶತ್ರುಗಳಂತೆ ಕಾದಾಡುತ್ತಿದ್ದ ದೇಶಗಳ ನಡುವೆ ಸಾಮರಸ್ಯ ಸಂಬಂಧವನ್ನು ತರಲಿದೆ ಎಂಬ ಭಾವ ಅವರ ಮಾತಿನಲ್ಲಿತ್ತು.

ಕಾರಿಡಾರ್ ನಿರ್ಮಾಣಕ್ಕೆ ಕಾರಣವಾಯ್ತಾ ಆ ಅಪ್ಪುಗೆ..

2018ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಂತ್ರಿಯೂ ಆಗಿದ್ದ ನವಜೋದ್ ಸಿಂಗ್ ಸಿಧು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಅವರನ್ನು ಸಿಧು ಅಪ್ಪಿಕೊಂಡಿದ್ದರು. ಈ ಅಪ್ಪುಗೆಯನ್ನು ಭಾರತೀಯರು ಕಟುವಾಗಿ ಟೀಕಿಸಿದ್ದರು. ಕೆಲವು ದಿನಗಳ ನಂತರ ಈ ಟೀಕೆಗೆ ಪ್ರತಿಕ್ರಿಯಿಸಿದ್ದ ಸಿಧು ಭಾರತ ಮತ್ತು ಕರ್ತಾರ್ ಪುರ್ ನಡುವೆ ಮುಕ್ತ ಸಂಪರ್ಕ ಕಲ್ಪಿಸುವ ಬಗ್ಗೆ ಪಾಕ್ ತೀರ್ಮಾನಿಸಿದೆ. ಅದಕ್ಕಾಗಿ ನಾನು ಅವರನ್ನು ಅಪ್ಪಿಕೊಂಡೆ ಎಂದು ಹೇಳಿದ್ದರು. ಈ ‍ಘಟನೆ ನಡೆದ ಮೂರು ತಿಂಗಳ ನಂತರ ಕಾರಿಡಾರ್ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ನಡೆಯಿತು. ಆ ದಿನವೂ ಸಿಧು ಭಾಗವಹಿಸಿದ್ದರು.

ಅಂತೂ ಸಿಖ್ ಯಾತ್ರಿಗಳಿಗೆ “ಗುರುದ್ವಾರ್ ದರ್ಬಾರ್ ಸಾಹಿಬ್‍ಗೆ ಮುಕ್ತ ಪ್ರವೇಶ ದೊರೆಯುಂತಾಗಿದೆ. ಈ ಕಾರಿಡಾರ್‌ನ ಉದ್ಘಾಟನಾ ಸಮಾರಂಭಕ್ಕೆ ಭಾರತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮದ್ ಹೇಳಿದ್ದಾರೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್‌ರವರು ಯಾವುದೇ ನಿರ್ಧಾರ ಕೈಗೊಂಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...