Homeಅಂತರಾಷ್ಟ್ರೀಯಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

ಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ, ಎರಡೂ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ನವೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಇಂತಹ ಸಂಭ್ರಮದ ವಿಷಯ ಈಗ ಟೀಕೆ, ಆರೋಪಗಳಿಗೆ ಗುರಿಯಾಗಿ ದೇಶಾದ್ಯಂತ ಸದ್ದು ಮಾಡುತ್ತಿದೆ.

ಯಾವುದು ಈ ಕರ್ತಾರ್ ಪುರ್‌ ಕಾರಿಡಾರ್

ಸಿಖ್ಖರ ಪವಿತ್ರ ಸ್ಥಳಗಳಲ್ಲೊಂದು “ಗುರುದ್ವಾರ್ ದರ್ಬಾರ್ ಸಾಹಿಬ್”. ಸಿಖ್‌ರ ಧರ್ಮಗುರು ಗುರುನಾನಕ್‌ರವರ ಸಮಾಧಿ ಇರುವ ಸ್ಥಳ. ಇದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ ಜಿಲ್ಲೆಯ ಕರ್ತಾರ್ ಪುರದಲ್ಲಿದೆ. ಸಿಖ್ಖರ ಜೀವಿತಾವಧಿಯಲ್ಲಿ ಈ ಸ್ಥಳವನ್ನು ಒಮ್ಮೆಯಾದರೂ ನೋಡಲೇಬೇಕೆಂಬುದು ಅವರ ನಂಬಿಕೆ. ಇಲ್ಲವಾದರೆ ಅದು ತಮ್ಮ ಪಾಪವೆಂದು ಅವರು ಭಾವಿಸುತ್ತಾರೆ. ಪಾಕಿಸ್ತಾನಕ್ಕೆ ಸೇರಿರುವ ಲಾಹೋರ್ ಪ್ರದೇಶದಲ್ಲಿ ಹಾಗೂ ಪಂಜಾಬ್‍ನಲ್ಲಿರುವ ಭಾರತದ ಗಡಿಯಿಂದ ಕೇವಲ 4.7 ಕಿ.ಮೀ ಸಮೀಪದಲ್ಲಿ ಈ ಸ್ಥಳವಿದೆ. ಆದರೆ ಈ ಸ್ಥಳಕ್ಕೆ ಭಾರತೀಯರು ಹೋಗಬೇಕಾದರೆ ಸುಮಾರು 125 ಕಿ.ಮೀ ಸುತ್ತಾಟದ ಪ್ರಯಾಣ ಬೆಳೆಸಬೇಕು. ಅಲ್ಲದೆ ಪಾಕಿಸ್ತಾನದಿಂದ ವೀಸಾ ಕೂಡ ಪಡೆದುಕೊಳ್ಳಬೇಕಾಗಿತ್ತು. ಇಷ್ಟೆಲ್ಲಾ ಕಸರತ್ತು ಮಾಡಲಾಗದ ಕೆಲವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಅಂತರಾಷ್ಟ್ರೀಯ ಗಡಿಯಲ್ಲಿ ನಿಂತು ಬೈನಾಕುಲರ್(ದೂರದರ್ಶಕ)ನ ಸಹಾಯದಿಂದ ನೋಡಿ ತೃಪ್ತಿ ಪಟ್ಟುಕೊಂಡು ಜೀವನದ ಸಾರ್ಥಕತೆಯೆಂದು ಭಾವಿಸುತ್ತಿದ್ದರು.

ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಸಮಾಧಿ ಇರುವ ಕರ್ತಾರ್ ಪುರವನ್ನು ಪವಿತ್ರ ಸ್ಥಳವೆಂದು ಸಿಖ್ಖರು ಪೂಜಿಸುವ ಈ ಪ್ರದೇಶಕ್ಕೆ ಭಾರತೀಯರಿಗೆ ಮುಕ್ತ ಅವಕಾಶ ಕಲ್ಪಿಸುವ ವಿಚಾರ ಹಲವಾರು ವರ್ಷಗಳಿಂದ ಚರ್ಚೆಯಲ್ಲಿದೆ. 1999ರಲ್ಲಿ ದೆಹಲಿ ಮತ್ತು ಲಾಹೋರ್ ನಡುವೆ ಬಸ್ ವ್ಯವಸ್ಥೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಈ ಚರ್ಚೆ ಪ್ರಾರಂಭವಾಗಿತ್ತು. ಅಂದಿನ ಭಾರತದ ಪ್ರಧಾನಿಯಾಗಿದ್ದ ಅ.ಬಿ.ವಾಜಪೇಯಿ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಫ್ ಕರ್ತಾರ್ ಪುರ್ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಆ ಪ್ರಸ್ಥಾಪ ಪ್ರಸ್ತಾಪವಾಗಿಯೇ ನೆನೆಗುದಿಗೆ ಬಿದ್ದಿತ್ತು.

2018ರಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದರು. ತಮ್ಮ ಪ್ರಮಾಣವಚನ ಸಂದರ್ಭದಲ್ಲಿ ಭಾರತದಿಂದ ಕರ್ತಾರ್‌ಪುರಕ್ಕೆ ರಸ್ತೆ ಸೌಲಭ್ಯ ಕಲ್ಪಿಸಿ ಮುಕ್ತ ಪ್ರವೇಶ ನೀಡುವುದಾಗಿ ಘೋಷಿಸಿದ್ದರು. ಅದಾದ ಮೂರು ತಿಂಗಳ ನಂತರ 2018ರ ನವೆಂಬರ್‌ನಲ್ಲಿ ಕರ್ತಾರ್ ಪುರ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದರು. ಕರ್ತಾರ್‌ಪುರದಿಂದ ಭಾರತದ ಗುರುದಾಸ್ ಪುರದ ದೇರೆ ಬಾಬ ನಾಸಿಕ್‍ಗೆ 4.7 ಕಿ.ಮೀ ಉದ್ದದ ಕಾರಿಡಾರ್ ಇದಾಗಿದೆ. 2019ರ ನವೆಂಬರ್‌ನಲ್ಲಿ ಗುರುನಾನಕ್ ಅವರ 550ನೇ ಜನ್ಮ ಜಯಂತಿಯಿದೆ. ಆ ವೇಳೆಗೆ ಕಾರಿಡಾರ್‌ನಲ್ಲಿ ಸಂಚಾರ ಆರಂಭಗೊಳಿಸುವುದಾಗಿ ಇಮ್ರಾನ್ ಖಾನ್ ತಿಳಿಸಿದ್ದರು. ಅಂತಯೇ ನವೆಂಬರ್ 1ರಂದು ಈ ಕಾರಿಡಾರ್ ಉದ್ಘಾಟನೆಗೊಳ್ಳುತ್ತಿದೆ. ಇನ್ನು ಮುಂದೆ ಭಾರತೀಯರ ಪ್ರವೇಶಕ್ಕೆ ಕರ್ತಾರ್‌ ಪುರ್ ತೆರೆದುಕೊಳ್ಳಲಿದೆ. ಭಾರತೀಯ ಸಿಖ್ ಯಾತ್ರಿಗಳು ತಮ್ಮ ಪುಣ್ಯ ಸ್ಥಳವನ್ನು ಮುಕ್ತ ಪ್ರವೇಶದೊಂದಿಗೆ ಕಣ್ತುಂಬಿಕೊಳ್ಳುವ ಅವಕಾಶವನ್ನು ಕಲ್ಪಸಿಕೊಡಲಾಗಿದೆ.

ಕಾರಿಡಾರ್ ಅನ್ನು ಬರ್ಲಿನ್ ಗೋಡೆಯ ಪತನಕ್ಕೆ ಹೋಲಿಸಿದ್ದ ಇಮ್ರಾನ್ ಖಾನ್

2018ರ ನವೆಂಬರ್ 28ರಂದು ಭಾರತ ಮತ್ತು ಪಾಕಿಸ್ತಾನಕ್ಕೆ ಮುಕ್ತ ಪ್ರವೇಶ ಕಲ್ಪಿಸುವ ಕರ್ತಾರ್ ಪುರ್ ಕಾರಿಡಾರ್‌ಗೆ ಚಾಲನೆ ನೀಡಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದರು. ತಮ್ಮ ಮಾತಿನಲ್ಲಿ ಈ ಯೋಜನೆಯನ್ನು ಜರ್ಮನಿಯ ಬರ್ಲಿನ್ ಗೋಡೆಗೆ ಹೋಲಿಸಿದ್ದರು. ಜರ್ಮನ್ ದೇಶವನ್ನು ಪೂರ್ವ ಜರ್ಮನ್ ಮತ್ತು ಪಶ್ಚಿಮ ಜರ್ಮನ್ ಎಂದು ಇಬ್ಬಾಗಿಸಿ ಬರ್ಲಿನ್‍ನಲ್ಲಿ ಗೋಡೆಯನ್ನು ಕಟ್ಟಲಾಗಿತ್ತು. 1990ರ ದಶಕದಲ್ಲಿ ಈ ಗೋಡೆಯನ್ನು ಕೆಡವಿ ಇಬ್ಬಾಗವಾಗಿದ್ದ ದೇಶಗಳ ಜನರನ್ನು ಒಂದುಗೂಡಿಸಿ ಒಂದೇ ದೇಶವೆಂದು ಘೋಷಿಸಲಾಗಿತ್ತು. ಅಂತೆಯೇ ಪಾಕಿಸ್ತಾನದ ಕರ್ತಾರ್‌ಪುರ್‌ಗೆ ಭಾರತೀಯರಿಗೆ ಮುಕ್ತ ಅವಕಾಶ ನೀಡಿರುವುದು ಶತ್ರುಗಳಂತೆ ಕಾದಾಡುತ್ತಿದ್ದ ದೇಶಗಳ ನಡುವೆ ಸಾಮರಸ್ಯ ಸಂಬಂಧವನ್ನು ತರಲಿದೆ ಎಂಬ ಭಾವ ಅವರ ಮಾತಿನಲ್ಲಿತ್ತು.

ಕಾರಿಡಾರ್ ನಿರ್ಮಾಣಕ್ಕೆ ಕಾರಣವಾಯ್ತಾ ಆ ಅಪ್ಪುಗೆ..

2018ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಂತ್ರಿಯೂ ಆಗಿದ್ದ ನವಜೋದ್ ಸಿಂಗ್ ಸಿಧು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಅವರನ್ನು ಸಿಧು ಅಪ್ಪಿಕೊಂಡಿದ್ದರು. ಈ ಅಪ್ಪುಗೆಯನ್ನು ಭಾರತೀಯರು ಕಟುವಾಗಿ ಟೀಕಿಸಿದ್ದರು. ಕೆಲವು ದಿನಗಳ ನಂತರ ಈ ಟೀಕೆಗೆ ಪ್ರತಿಕ್ರಿಯಿಸಿದ್ದ ಸಿಧು ಭಾರತ ಮತ್ತು ಕರ್ತಾರ್ ಪುರ್ ನಡುವೆ ಮುಕ್ತ ಸಂಪರ್ಕ ಕಲ್ಪಿಸುವ ಬಗ್ಗೆ ಪಾಕ್ ತೀರ್ಮಾನಿಸಿದೆ. ಅದಕ್ಕಾಗಿ ನಾನು ಅವರನ್ನು ಅಪ್ಪಿಕೊಂಡೆ ಎಂದು ಹೇಳಿದ್ದರು. ಈ ‍ಘಟನೆ ನಡೆದ ಮೂರು ತಿಂಗಳ ನಂತರ ಕಾರಿಡಾರ್ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ನಡೆಯಿತು. ಆ ದಿನವೂ ಸಿಧು ಭಾಗವಹಿಸಿದ್ದರು.

ಅಂತೂ ಸಿಖ್ ಯಾತ್ರಿಗಳಿಗೆ “ಗುರುದ್ವಾರ್ ದರ್ಬಾರ್ ಸಾಹಿಬ್‍ಗೆ ಮುಕ್ತ ಪ್ರವೇಶ ದೊರೆಯುಂತಾಗಿದೆ. ಈ ಕಾರಿಡಾರ್‌ನ ಉದ್ಘಾಟನಾ ಸಮಾರಂಭಕ್ಕೆ ಭಾರತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮದ್ ಹೇಳಿದ್ದಾರೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್‌ರವರು ಯಾವುದೇ ನಿರ್ಧಾರ ಕೈಗೊಂಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...