Homeಅಂತರಾಷ್ಟ್ರೀಯಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

ಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

"ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು" ಎಂದು ವಕ್ತಾರರು ಹೇಳಿದ್ದಾರೆ.

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್‌ ಮತ್ತು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪೊಂಪಿಯೋ, ಗುರುವಾರ ಲಡಾಖ್‌ ಘರ್ಷಣೆಯನ್ನು ನಿಲ್ಲಿಸುವುದರ ಕುರಿತು ಚರ್ಚಿಸಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಜುಲೈ 31 ರಂದು, ಭಾರತ ಮತ್ತು ಭೂತಾನ್‌ನಲ್ಲಿ ಚೀನಾ ಪ್ರಾದೇಶಿಕ ಹಕ್ಕುಗಳನ್ನು ಮಂಡಿಸುವುದರೊಂದಿಗೆ ಜಗತ್ತನ್ನು ಪರೀಕ್ಷಿಸಲಾಗುತ್ತಿದೆ ಆದರೆ, ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಚೀನಾದ ಬೆದರಿಕೆಗಳಿಂದ ಜಗತ್ತನ್ನು ಜಾಗೃತಗೊಳಿಸಿವೆ ಎಂದು ಪೊಂಪಿಯೊ ಹೇಳಿದ್ದಾರೆ.

ನಮ್ಮ ಹುರುಪಿನ ರಾಜತಾಂತ್ರಿಕತೆಯು ಸಿ.ಸಿ.ಪಿ [ಚೈನೀಸ್ ಕಮ್ಯುನಿಸ್ಟ್ ಪಾರ್ಟಿ] ಯ ಬೆದರಿಕೆಗೆ ಅಂತರರಾಷ್ಟ್ರೀಯ ಜಾಗೃತಿ ಮೂಡಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಮತ್ತು ಶಾಂತಿ ಪ್ರಕ್ರಿಯೆಯನ್ನು ನಿಯಂತ್ರಿಸುವ ಪ್ರಯತ್ನಗಳು ಸೇರಿದಂತೆ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಕಾರದ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಕೇಲ್ ಬ್ರೌನ್ ಹೇಳಿದ್ದಾರೆ.

“ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು” ಎಂದು ವಕ್ತಾರರು ಹೇಳಿದ್ದಾರೆ.

ಜೈಶಂಕರ್ ಮತ್ತು ಪೊಂಪಿಯೊ ವಿವಿಧ ವಿಷಯಗಳ ಬಗ್ಗೆ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಅಮೇರಿಕಾ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ನೊಂದಿಗಿನ ಒಪ್ಪಂದದ ಬಗ್ಗೆ ಸಮಾಲೋಚನೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಅಮೇರಿಕಾ-ಭಾರತ 2 + 2 ಮಂತ್ರಿ ಸಂವಾದವನ್ನು ಎದುರು ನೋಡುತ್ತೇವೆ ಎಂದು ಅವರು ಹೇಳಿದರು.

ನವೆಂಬರ್ 2017 ರಲ್ಲಿ, ಭಾರತ, ಪೆಸಿಫಿಕ್‌ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಚೀನಾದ ಪ್ರಭಾವದಿಂದ ದೂರವಿಡುವ ಪ್ರಯತ್ನದಲ್ಲಿ, ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಭಾರತ, ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಜಪಾನ್ ನಾಲ್ಕು ದೇಶಗಳು ಸೇರಿ ಚತುರ್ಭುಜ ಒಕ್ಕೂಟವನ್ನು ರಚಿಸಿದವು.

ನವೆಂಬರ್ 2018 ರಲ್ಲಿ, ಮೊದಲ ಭಾರತ-ಯುಎಸ್ 2 + 2 ಸಂವಾದವನ್ನು, ಒಂದು ಕಡೆ ರಕ್ಷಣಾ ಸಚಿವರು ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು, ಇನ್ನೊಂದೆಡೆ ರಕ್ಷಣಾ ಕಾರ್ಯದರ್ಶಿ ಮತ್ತು ಅಮೇರಿಕಾ ರಾಜ್ಯ ಕಾರ್ಯದರ್ಶಿ ನಡುವೆ ನಡೆಸಲಾಯಿತು.


ಇದನ್ನೂ ಓದಿ: 500 ಮಿಲಿಯನ್ ಡಾಲರ್‌ ಖರ್ಚಿನಲ್ಲಿ ಡಾಟಾ ಸೆಂಟರ್‌ ಸ್ಥಾಪಿಸುತ್ತಿರುವ ಟಿಕ್‌ಟಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...