Homeಅಂತರಾಷ್ಟ್ರೀಯಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

ಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

"ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು" ಎಂದು ವಕ್ತಾರರು ಹೇಳಿದ್ದಾರೆ.

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್‌ ಮತ್ತು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪೊಂಪಿಯೋ, ಗುರುವಾರ ಲಡಾಖ್‌ ಘರ್ಷಣೆಯನ್ನು ನಿಲ್ಲಿಸುವುದರ ಕುರಿತು ಚರ್ಚಿಸಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಜುಲೈ 31 ರಂದು, ಭಾರತ ಮತ್ತು ಭೂತಾನ್‌ನಲ್ಲಿ ಚೀನಾ ಪ್ರಾದೇಶಿಕ ಹಕ್ಕುಗಳನ್ನು ಮಂಡಿಸುವುದರೊಂದಿಗೆ ಜಗತ್ತನ್ನು ಪರೀಕ್ಷಿಸಲಾಗುತ್ತಿದೆ ಆದರೆ, ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಚೀನಾದ ಬೆದರಿಕೆಗಳಿಂದ ಜಗತ್ತನ್ನು ಜಾಗೃತಗೊಳಿಸಿವೆ ಎಂದು ಪೊಂಪಿಯೊ ಹೇಳಿದ್ದಾರೆ.

ನಮ್ಮ ಹುರುಪಿನ ರಾಜತಾಂತ್ರಿಕತೆಯು ಸಿ.ಸಿ.ಪಿ [ಚೈನೀಸ್ ಕಮ್ಯುನಿಸ್ಟ್ ಪಾರ್ಟಿ] ಯ ಬೆದರಿಕೆಗೆ ಅಂತರರಾಷ್ಟ್ರೀಯ ಜಾಗೃತಿ ಮೂಡಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಮತ್ತು ಶಾಂತಿ ಪ್ರಕ್ರಿಯೆಯನ್ನು ನಿಯಂತ್ರಿಸುವ ಪ್ರಯತ್ನಗಳು ಸೇರಿದಂತೆ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಕಾರದ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಕೇಲ್ ಬ್ರೌನ್ ಹೇಳಿದ್ದಾರೆ.

“ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು” ಎಂದು ವಕ್ತಾರರು ಹೇಳಿದ್ದಾರೆ.

ಜೈಶಂಕರ್ ಮತ್ತು ಪೊಂಪಿಯೊ ವಿವಿಧ ವಿಷಯಗಳ ಬಗ್ಗೆ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಅಮೇರಿಕಾ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ನೊಂದಿಗಿನ ಒಪ್ಪಂದದ ಬಗ್ಗೆ ಸಮಾಲೋಚನೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಅಮೇರಿಕಾ-ಭಾರತ 2 + 2 ಮಂತ್ರಿ ಸಂವಾದವನ್ನು ಎದುರು ನೋಡುತ್ತೇವೆ ಎಂದು ಅವರು ಹೇಳಿದರು.

ನವೆಂಬರ್ 2017 ರಲ್ಲಿ, ಭಾರತ, ಪೆಸಿಫಿಕ್‌ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಚೀನಾದ ಪ್ರಭಾವದಿಂದ ದೂರವಿಡುವ ಪ್ರಯತ್ನದಲ್ಲಿ, ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಭಾರತ, ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಜಪಾನ್ ನಾಲ್ಕು ದೇಶಗಳು ಸೇರಿ ಚತುರ್ಭುಜ ಒಕ್ಕೂಟವನ್ನು ರಚಿಸಿದವು.

ನವೆಂಬರ್ 2018 ರಲ್ಲಿ, ಮೊದಲ ಭಾರತ-ಯುಎಸ್ 2 + 2 ಸಂವಾದವನ್ನು, ಒಂದು ಕಡೆ ರಕ್ಷಣಾ ಸಚಿವರು ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು, ಇನ್ನೊಂದೆಡೆ ರಕ್ಷಣಾ ಕಾರ್ಯದರ್ಶಿ ಮತ್ತು ಅಮೇರಿಕಾ ರಾಜ್ಯ ಕಾರ್ಯದರ್ಶಿ ನಡುವೆ ನಡೆಸಲಾಯಿತು.


ಇದನ್ನೂ ಓದಿ: 500 ಮಿಲಿಯನ್ ಡಾಲರ್‌ ಖರ್ಚಿನಲ್ಲಿ ಡಾಟಾ ಸೆಂಟರ್‌ ಸ್ಥಾಪಿಸುತ್ತಿರುವ ಟಿಕ್‌ಟಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...