Homeಕರ್ನಾಟಕಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

ಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಇದುವರೆಗೆ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಳಿಯುತ್ತಿದ್ದ ಲಿಂಗಾಯತ ಧರ್ಮ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಬುಗಿಲೆದ್ದಿದೆ. ತೀರಾ ಇತ್ತೀಚೆಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ ಹಾಗೂ ಕೆಲವು ಜನ ಶಾಸಕರು ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯನ್ನು ಭೇಟಿಯಾಗಿ ವೀರಶೈವ/ಲಿಂಗಾಯತ ಧರ್ಮದ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸರಕಾರಕ್ಕೆ ಸಲ್ಲಿಸಿದ ಮನವಿಯವನ್ನು ಗಮನಿಸಿದ ಜಾಗತಿಕ ಲಿಂಗಾಯತ ಮಹಾಸಭೆ ದಿಡೀರನೆ ತನ್ನ ಮಹಾಮಂಡಳದ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಪತ್ರಿಕಾ ಹೇಳಿಕೆ ನೀಡಿದೆ. ವೀರಶೈವ ಮಹಾಸಭೆ ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಬಗೆಗೆ ನಮಗೆ ಯಾವುದೆ ತಕರಾರು ಇಲ್ಲ. ಆದರೆ ಆ ಬೇಡಿಕೆಯಲ್ಲಿ ವೀರಶೈವ ಪದ ಸೇರಿಸಿದ್ದನ್ನು ಜಾಗತಿಕ ಲಿಂಗಾಯತ ಮಹಾಸಭೆ ಕಟುವಾಗಿ ಟೀಕಿಸಿದೆ.

2002 ಕ್ಕೂ ಪೂರ್ವದಲ್ಲಿ ಸರಕಾರದ ಯಾವುದೆ ದಾಖಲೆಯಲ್ಲಿ ಇಲ್ಲದ ವೀರಶೈವ ಪದವನ್ನು ಸೇರಿಸಿ ಸಮಾಜದಲ್ಲಿ ಗೊಂದಲವನ್ನುಂಟು ಮಾಡಿದೆ. ನಿಜಕ್ಕೂ ಬ್ರಿಟಿಷ್ ಆಡಳಿತದ ಸಂದರ್ಭದಿಂದ ಹಿಡಿದು ಸರಕಾರದ ಯಾವ ದಾಖಲೆಯಲ್ಲಿಯೂ ಇಲ್ಲದ ವೀರಶೈವ ಪದವನ್ನು ಅಂದಿನ ವೀರಶೈವ ಮಹಾಸಭೆಯ ಅಧ್ಯಕ್ಷ ಭೀಮಣ್ಣ ಖಂಡ್ರೆಯವರ ಕುತಂತ್ರದಿಂದ ಸರಕಾರದ ನೋಟಿಫಿಕೇಶನ್ ಪಡೆಯಿತು. ಇದಕ್ಕೆ ಬಹು ಮುಖ್ಯ ಕಾರಣ ಭೀಮಣ್ಣ ಖಂಡ್ರೆ ಹಾಗೂ ವೀರಶೈವ ಮಹಾಸಭೆಯೇ ಆಗಿದೆ.

ವೀರಶೈವ ಎಂಬುದು ಲಿಂಗಾಯತ ಧರ್ಮದಲ್ಲಿ ಕೇವಲ ಒಂದು ಮತ. ಮತ ಹೇಗೆ ಧರ್ಮವಾಗುತ್ತದೆ? ಎಂಬುದು ಬಹಳಷ್ಟು ಜನ ಹೋರಾಟಗಾರರ ಪ್ರಶ್ನೆಯಾಗಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನಗಳ ಎಳೆಯನ್ನು ಇಟ್ಟುಕೊಂಡು ಜನ್ಮ ತಳೆದ ಲಿಂಗಾಯತ ಧರ್ಮ, ಕರ್ಮಠರ ಕಪಿಮುಷ್ಠಿ ಮತ್ತು ಧಾರ್ಮಿಕ ಅತ್ಯಾಚಾರಿಗಳ ಕೈಯಲ್ಲಿ ನಲುಗಿ ಹೋದದ್ದು ಸುಳ್ಳಲ್ಲ. ಬಸವಣ್ಣನವರು ಇದ್ದಾಗ ಹೇಗೆ ಪುರೋಹಿತಶಾಹಿ ಅವರ ವಿಚಾರಗಳ ಮೇಲೆ ಬರ್ಬರ ಹತ್ಯೆ ನಡೆಸಲು ಯತ್ನಿಸಿದಂತೆ, ಈಗಲೂ ಅದನ್ನು ದಮನ ಮಾಡಲು ಸನ್ನದ್ದವಾಗಿ ನಿಂತುಕೊಂಡಿದೆ.

ಲಿಂಗಾಯತ ಧರ್ಮಕ್ಕೆ ಸಂಬಂಧವೇ ಪಡದ ಕಲ್ಲಡ್ಕ ಪ್ರಭಾಕರ ಭಟ್ಟ, ಆರ್.ಎಸ್.ಎಸ್.ನ ಸಂತೋಷ್, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹಾಗೂ ಪೇಜಾವರ ಮಹಾಸ್ವಾಮಿಗಳು ಸುಖಾ ಸುಮ್ಮನೆ ಮಾತನಾಡುತ್ತಾರೆ. ಲಿಂಗಾಯತ ಧರ್ಮ ಅಥವಾ ವಚನ ಸಾಹಿತ್ಯದ ಬಗೆಗೆ ಎಳ್ಳಷ್ಟು ಗೊತ್ತಿಲ್ಲದ ಇವರುಗಳು ತಲೆ ಬುಡವಿಲ್ಲದೆ ಆಳಿಗೊಂದು ಮಾತಾಡಿ ಲಿಂಗಾಯತರ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಂತೂ ಕೈತೊಳೆದುಕೊಂಡು ಬೆನ್ನು ಹತ್ತಿದವರಂತೆ ಮತ್ತೆ ಶುರುವಾದ ಪ್ರತ್ಯೇಕ ಧರ್ಮದ ಕೂಗು ಎಂದು ಉಯಿಲೆಬ್ಬಿಸಿ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿವೆ. ಲಿಂಗಾಯತ ಧರ್ಮದ ಗಂಧಗಾಳಿ ಗೊತ್ತಿಲ್ಲದ ಇವು ಕಾಕೊಳಿಯಾಗಿಯೂ ನವಿಲಿನಂತೆ ನರ್ತಿಸುವ ಸೋಜಿಗ ಎಂಥವರಿಗೂ ಗೊತ್ತಾಗುತ್ತಿದೆ.

ಇಷ್ಟಕ್ಕೂ ಲಿಂಗಾಯತ ಧರ್ಮದ ಹೋರಾಟಕ್ಕೆ ಬಹುತೇಕ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸ್ವಹಿತಾಸಕ್ತಿ ಗುಂಪುಗಳು ಯಾಕೆ ವಿರೋಧಿಸುತ್ತಿವೆ? ಎಂಬ ಪ್ರಶ್ನೆಯನ್ನು ಎತ್ತಿಕೊಂಡರೆ ಅದಕ್ಕೊಂದು ತಾರ್ಕಿಕ ಉತ್ತರ ದೊರೆಯುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಲಿಂಗಾಯತ ಧರ್ಮ ಕಾಯಕ ಜೀವಿಗಳ ಸಂಘಟನೆ. ಇಲ್ಲಿ ಅವರವರ ಕಾಯಕದ ಅನುಭವವೆ ಪ್ರಮಾಣು. ಶಾಸ್ತ್ರ, ಪುರಾಣ, ವೇದಾಂತಗಳೆಲ್ಲ ಕಟ್ಟುಕತೆಗಳು ಎಂಬುದು ಅವರಿಗೆಲ್ಲ ಮನದಟ್ಟಾಗಿತ್ತು. ವೇದವೆಂಬುದು ಓದಿನ ಮಾತು ಎಂಬುದು ಖಚಿತ. ವೇದ ಶಾಸ್ತ್ರ ಪುರಾಣ ಪ್ರಾಮಣ್ಯ ಒಪ್ಪದ ದುಡಿಯುವ ಜನ ತಮಗಾಗಿ ಕಟ್ಟಿಕೊಂಡ ಚಳುವಳಿಯ ಹೆಸರು ಲಿಂಗಾಯತ.

ಹೀಗಾಗಿ ಹನ್ನೆರಡನೆಯ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮದ ಅಸ್ಮಿತೆಯನ್ನು ಮರೆ ಮಾಡುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಲಿಂಗಾಯತ ಧರ್ಮಿಯರಿಗೆ ವಚನ ಪ್ರಜ್ಞೆ ಮೂಡುತ್ತಿರುವಂತೆ ಮತ್ತೆ ಮತ್ತೆ ಹೋರಾಟದ ಕಿಚ್ಚು ಹುಟ್ಟಿಕೊಂಡಿದೆ. ಇದು ಯಾವುದೋ ರಾಜಕೀಯ ಒತ್ತಡಗಳಿಂದ ಪ್ರೇರಿತವಾದ ಕಿಚ್ಚಾಗಿದ್ದರೆ ಇಷ್ಟೊತ್ತಿಗೆ ಅದು ತಣ್ಣಗಾಗಿ ಹಳೆ ಕತೆಯಾಗುತ್ತಿತ್ತು. ಒಡಲಿನಿಂದ ಹೊಮ್ಮಿದ ಹೋರಾಟ ಯಾರೋ ನಾಲ್ಕು ಜನ ಪಡಪೋಶಿಗಳ ಮಾತಿಗೆ ತಲೆ ಬಾಗಿಸುವುದಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದ ಮೊಟ್ಟ ಮೊದಲ ಕನ್ನಡದ ಧರ್ಮ ಲಿಂಗಾಯತ. ಈ ಲಿಂಗಾಯತಕ್ಕೆ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ, ಹೊಲಿಯರ ನಾಗಿದೇವ, ಸೂಳೆ ಸಂಕವ್ವೆ, ಅಕ್ಕಮಹಾದೇವಿ, ಅಲ್ಲಮಪ್ರಭು,ಚೆನ್ನಬಸವಣ್ಣ, ಕದಿರೆಯ ರೆಮ್ಮವ್ವ ಮುಂತಾದವರೆಲ್ಲ ಬಸವಣ್ಣನವರ ನೇತೃತ್ವದಲ್ಲಿ ಕಟ್ಟಿದ ಅನುಭಾವಿಕ ಚಳುವಳಿ. ನಮ್ಮ ನಾಡಿದ ವಿಸ್ಮೃತಿ ಅಡಗಿರುವುದು ವಚನ ಸಾಹಿತ್ಯದ ಅನುಭಾವದ ಒಡಲಲ್ಲಿ ಎಂಬುದನ್ನು ಯಾರೂ ಮರೆಯುವಂತೆ ಇಲ್ಲ.

ಏಕಕಾಲಕ್ಕೆ ಪುರೋಹಿತಶಾಹಿ, ರಾಜಶಾಹಿ, ಮತ್ತು ಪಟ್ಟಭದ್ರರ ವಿರುದ್ಧ ಸಿಡಿದ ಸಿಡಿಗುಂಡುಗಳು ವಚನ ಸಾಹಿತ್ಯ. ವಚನ ಸಾಹಿತ್ಯದ ಪ್ರಜ್ಞೆ ಎಂದರೆ ಅದು ಸಕಲ ಜೀವಾತ್ಮರಿಗೆ ಲೇಸ ಬಯಸುವ ಪ್ರಜ್ಞೆ. ಈ ಪ್ರಜ್ಞೆ ಎಲ್ಲರಲ್ಲಿ ಮೂಡಿದರೆ ತಮ್ಮ ಕರಾಳ ಕೆಲಸಗಳಿಗೆ, ಧರ್ಮದ ಹೆಸರಿನ ನಂಗಾನಾಚ ಬಯಲಾಗಬಾರದು ಎಂಬುದು ಬಹುತೇಕರ ವಾಂಛೆ. ಆದ್ದರಿಂದಲೆ ಲಿಂಗಾಯತ ಧರ್ಮದ ಹೋರಾಟವನ್ನು ರಾಜಕೀಯ ಹೋರಾಟ ಎಂದು ದಿಕ್ಕು ತಪ್ಪಿಸಲು ಯತ್ನಿಸಿದರು. ಕೆಲವರಂತೂ ಧರ್ಮ ಒಡೆಯುವ ಷಡ್ಯಂತ್ರ ಎಂದೂ ದೂರಿದರು. ಇದರಲ್ಲಿ ಯಶಸ್ವಿಯೂ ಆದರು.

ಆದರೆ ಸತ್ಯಕ್ಕೆ ಶಕ್ತಿ ಹೆಚ್ಚು ಮತ್ತು ಅದು ಸಶಕ್ತವಾಗಿ ಪೆಡಸಿನಿಂದ ಹೊರ ಹೊಮ್ಮುತ್ತದೆ ಎಂಬುದಕ್ಕೆ ಸಾಕ್ಷಿಯಂತೆ ಬೆಂಗಳೂರಿನ ಬಸವ ಸಮಿತಿಯ ಅರಿವಿನ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಮೀಟಿಂಗ್ ಸಾಕ್ಷಿಯಾಗಿತ್ತು. ರಾಷ್ಟ್ರೀಯ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಶಿವಾನಂದ ಜಾಮದಾರ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅಪೀಲು ಹೋಗುವ ಕುರಿತು ವಿವರವಾಗಿ ಮಾಹಿತಿ ಒದಗಿಸಿದರು.

ಲಿಂಗಾಯತ ಜನ ಸಮುದಾಯದಲ್ಲಿ ಇಂದಿಗೂ ಇರಬಹುದಾದ ಕೆಲವು ಗೊಂದಲಗಳಿಗೆ ಉತ್ತರವಾಗಿ 7-8 ಪುಸ್ತಕಗಳನ್ನು ಸಾವಿರ ಸಾವಿರ ಪ್ರತಿಗಳಲ್ಲಿ ಮುದ್ರಿಸುವುದಾಗಿ ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಡಾ.ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮದ ಜಯ ಮೃತ್ಯುಂಜಯ ಜಗದ್ಗುರುಗಳು, ಚೆನ್ನಬಸವಾನಂದ ಸ್ವಾಮೀಜಿ ಕೂಡಲ ಸಂಗಮ ಮುಂತಾದ ಮಠಾಧೀಶರು ನೂರಾರು ಜನ ಪ್ರಗತಿ ಪರರು, ವಿಚಾರವಾದಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ತೊಡೆತಟ್ಟಿ ನಿಂತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...