Homeಕರ್ನಾಟಕಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

ಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಇದುವರೆಗೆ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಳಿಯುತ್ತಿದ್ದ ಲಿಂಗಾಯತ ಧರ್ಮ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಬುಗಿಲೆದ್ದಿದೆ. ತೀರಾ ಇತ್ತೀಚೆಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ ಹಾಗೂ ಕೆಲವು ಜನ ಶಾಸಕರು ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯನ್ನು ಭೇಟಿಯಾಗಿ ವೀರಶೈವ/ಲಿಂಗಾಯತ ಧರ್ಮದ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸರಕಾರಕ್ಕೆ ಸಲ್ಲಿಸಿದ ಮನವಿಯವನ್ನು ಗಮನಿಸಿದ ಜಾಗತಿಕ ಲಿಂಗಾಯತ ಮಹಾಸಭೆ ದಿಡೀರನೆ ತನ್ನ ಮಹಾಮಂಡಳದ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಪತ್ರಿಕಾ ಹೇಳಿಕೆ ನೀಡಿದೆ. ವೀರಶೈವ ಮಹಾಸಭೆ ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಬಗೆಗೆ ನಮಗೆ ಯಾವುದೆ ತಕರಾರು ಇಲ್ಲ. ಆದರೆ ಆ ಬೇಡಿಕೆಯಲ್ಲಿ ವೀರಶೈವ ಪದ ಸೇರಿಸಿದ್ದನ್ನು ಜಾಗತಿಕ ಲಿಂಗಾಯತ ಮಹಾಸಭೆ ಕಟುವಾಗಿ ಟೀಕಿಸಿದೆ.

2002 ಕ್ಕೂ ಪೂರ್ವದಲ್ಲಿ ಸರಕಾರದ ಯಾವುದೆ ದಾಖಲೆಯಲ್ಲಿ ಇಲ್ಲದ ವೀರಶೈವ ಪದವನ್ನು ಸೇರಿಸಿ ಸಮಾಜದಲ್ಲಿ ಗೊಂದಲವನ್ನುಂಟು ಮಾಡಿದೆ. ನಿಜಕ್ಕೂ ಬ್ರಿಟಿಷ್ ಆಡಳಿತದ ಸಂದರ್ಭದಿಂದ ಹಿಡಿದು ಸರಕಾರದ ಯಾವ ದಾಖಲೆಯಲ್ಲಿಯೂ ಇಲ್ಲದ ವೀರಶೈವ ಪದವನ್ನು ಅಂದಿನ ವೀರಶೈವ ಮಹಾಸಭೆಯ ಅಧ್ಯಕ್ಷ ಭೀಮಣ್ಣ ಖಂಡ್ರೆಯವರ ಕುತಂತ್ರದಿಂದ ಸರಕಾರದ ನೋಟಿಫಿಕೇಶನ್ ಪಡೆಯಿತು. ಇದಕ್ಕೆ ಬಹು ಮುಖ್ಯ ಕಾರಣ ಭೀಮಣ್ಣ ಖಂಡ್ರೆ ಹಾಗೂ ವೀರಶೈವ ಮಹಾಸಭೆಯೇ ಆಗಿದೆ.

ವೀರಶೈವ ಎಂಬುದು ಲಿಂಗಾಯತ ಧರ್ಮದಲ್ಲಿ ಕೇವಲ ಒಂದು ಮತ. ಮತ ಹೇಗೆ ಧರ್ಮವಾಗುತ್ತದೆ? ಎಂಬುದು ಬಹಳಷ್ಟು ಜನ ಹೋರಾಟಗಾರರ ಪ್ರಶ್ನೆಯಾಗಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನಗಳ ಎಳೆಯನ್ನು ಇಟ್ಟುಕೊಂಡು ಜನ್ಮ ತಳೆದ ಲಿಂಗಾಯತ ಧರ್ಮ, ಕರ್ಮಠರ ಕಪಿಮುಷ್ಠಿ ಮತ್ತು ಧಾರ್ಮಿಕ ಅತ್ಯಾಚಾರಿಗಳ ಕೈಯಲ್ಲಿ ನಲುಗಿ ಹೋದದ್ದು ಸುಳ್ಳಲ್ಲ. ಬಸವಣ್ಣನವರು ಇದ್ದಾಗ ಹೇಗೆ ಪುರೋಹಿತಶಾಹಿ ಅವರ ವಿಚಾರಗಳ ಮೇಲೆ ಬರ್ಬರ ಹತ್ಯೆ ನಡೆಸಲು ಯತ್ನಿಸಿದಂತೆ, ಈಗಲೂ ಅದನ್ನು ದಮನ ಮಾಡಲು ಸನ್ನದ್ದವಾಗಿ ನಿಂತುಕೊಂಡಿದೆ.

ಲಿಂಗಾಯತ ಧರ್ಮಕ್ಕೆ ಸಂಬಂಧವೇ ಪಡದ ಕಲ್ಲಡ್ಕ ಪ್ರಭಾಕರ ಭಟ್ಟ, ಆರ್.ಎಸ್.ಎಸ್.ನ ಸಂತೋಷ್, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹಾಗೂ ಪೇಜಾವರ ಮಹಾಸ್ವಾಮಿಗಳು ಸುಖಾ ಸುಮ್ಮನೆ ಮಾತನಾಡುತ್ತಾರೆ. ಲಿಂಗಾಯತ ಧರ್ಮ ಅಥವಾ ವಚನ ಸಾಹಿತ್ಯದ ಬಗೆಗೆ ಎಳ್ಳಷ್ಟು ಗೊತ್ತಿಲ್ಲದ ಇವರುಗಳು ತಲೆ ಬುಡವಿಲ್ಲದೆ ಆಳಿಗೊಂದು ಮಾತಾಡಿ ಲಿಂಗಾಯತರ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಂತೂ ಕೈತೊಳೆದುಕೊಂಡು ಬೆನ್ನು ಹತ್ತಿದವರಂತೆ ಮತ್ತೆ ಶುರುವಾದ ಪ್ರತ್ಯೇಕ ಧರ್ಮದ ಕೂಗು ಎಂದು ಉಯಿಲೆಬ್ಬಿಸಿ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿವೆ. ಲಿಂಗಾಯತ ಧರ್ಮದ ಗಂಧಗಾಳಿ ಗೊತ್ತಿಲ್ಲದ ಇವು ಕಾಕೊಳಿಯಾಗಿಯೂ ನವಿಲಿನಂತೆ ನರ್ತಿಸುವ ಸೋಜಿಗ ಎಂಥವರಿಗೂ ಗೊತ್ತಾಗುತ್ತಿದೆ.

ಇಷ್ಟಕ್ಕೂ ಲಿಂಗಾಯತ ಧರ್ಮದ ಹೋರಾಟಕ್ಕೆ ಬಹುತೇಕ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸ್ವಹಿತಾಸಕ್ತಿ ಗುಂಪುಗಳು ಯಾಕೆ ವಿರೋಧಿಸುತ್ತಿವೆ? ಎಂಬ ಪ್ರಶ್ನೆಯನ್ನು ಎತ್ತಿಕೊಂಡರೆ ಅದಕ್ಕೊಂದು ತಾರ್ಕಿಕ ಉತ್ತರ ದೊರೆಯುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಲಿಂಗಾಯತ ಧರ್ಮ ಕಾಯಕ ಜೀವಿಗಳ ಸಂಘಟನೆ. ಇಲ್ಲಿ ಅವರವರ ಕಾಯಕದ ಅನುಭವವೆ ಪ್ರಮಾಣು. ಶಾಸ್ತ್ರ, ಪುರಾಣ, ವೇದಾಂತಗಳೆಲ್ಲ ಕಟ್ಟುಕತೆಗಳು ಎಂಬುದು ಅವರಿಗೆಲ್ಲ ಮನದಟ್ಟಾಗಿತ್ತು. ವೇದವೆಂಬುದು ಓದಿನ ಮಾತು ಎಂಬುದು ಖಚಿತ. ವೇದ ಶಾಸ್ತ್ರ ಪುರಾಣ ಪ್ರಾಮಣ್ಯ ಒಪ್ಪದ ದುಡಿಯುವ ಜನ ತಮಗಾಗಿ ಕಟ್ಟಿಕೊಂಡ ಚಳುವಳಿಯ ಹೆಸರು ಲಿಂಗಾಯತ.

ಹೀಗಾಗಿ ಹನ್ನೆರಡನೆಯ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮದ ಅಸ್ಮಿತೆಯನ್ನು ಮರೆ ಮಾಡುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಲಿಂಗಾಯತ ಧರ್ಮಿಯರಿಗೆ ವಚನ ಪ್ರಜ್ಞೆ ಮೂಡುತ್ತಿರುವಂತೆ ಮತ್ತೆ ಮತ್ತೆ ಹೋರಾಟದ ಕಿಚ್ಚು ಹುಟ್ಟಿಕೊಂಡಿದೆ. ಇದು ಯಾವುದೋ ರಾಜಕೀಯ ಒತ್ತಡಗಳಿಂದ ಪ್ರೇರಿತವಾದ ಕಿಚ್ಚಾಗಿದ್ದರೆ ಇಷ್ಟೊತ್ತಿಗೆ ಅದು ತಣ್ಣಗಾಗಿ ಹಳೆ ಕತೆಯಾಗುತ್ತಿತ್ತು. ಒಡಲಿನಿಂದ ಹೊಮ್ಮಿದ ಹೋರಾಟ ಯಾರೋ ನಾಲ್ಕು ಜನ ಪಡಪೋಶಿಗಳ ಮಾತಿಗೆ ತಲೆ ಬಾಗಿಸುವುದಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದ ಮೊಟ್ಟ ಮೊದಲ ಕನ್ನಡದ ಧರ್ಮ ಲಿಂಗಾಯತ. ಈ ಲಿಂಗಾಯತಕ್ಕೆ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ, ಹೊಲಿಯರ ನಾಗಿದೇವ, ಸೂಳೆ ಸಂಕವ್ವೆ, ಅಕ್ಕಮಹಾದೇವಿ, ಅಲ್ಲಮಪ್ರಭು,ಚೆನ್ನಬಸವಣ್ಣ, ಕದಿರೆಯ ರೆಮ್ಮವ್ವ ಮುಂತಾದವರೆಲ್ಲ ಬಸವಣ್ಣನವರ ನೇತೃತ್ವದಲ್ಲಿ ಕಟ್ಟಿದ ಅನುಭಾವಿಕ ಚಳುವಳಿ. ನಮ್ಮ ನಾಡಿದ ವಿಸ್ಮೃತಿ ಅಡಗಿರುವುದು ವಚನ ಸಾಹಿತ್ಯದ ಅನುಭಾವದ ಒಡಲಲ್ಲಿ ಎಂಬುದನ್ನು ಯಾರೂ ಮರೆಯುವಂತೆ ಇಲ್ಲ.

ಏಕಕಾಲಕ್ಕೆ ಪುರೋಹಿತಶಾಹಿ, ರಾಜಶಾಹಿ, ಮತ್ತು ಪಟ್ಟಭದ್ರರ ವಿರುದ್ಧ ಸಿಡಿದ ಸಿಡಿಗುಂಡುಗಳು ವಚನ ಸಾಹಿತ್ಯ. ವಚನ ಸಾಹಿತ್ಯದ ಪ್ರಜ್ಞೆ ಎಂದರೆ ಅದು ಸಕಲ ಜೀವಾತ್ಮರಿಗೆ ಲೇಸ ಬಯಸುವ ಪ್ರಜ್ಞೆ. ಈ ಪ್ರಜ್ಞೆ ಎಲ್ಲರಲ್ಲಿ ಮೂಡಿದರೆ ತಮ್ಮ ಕರಾಳ ಕೆಲಸಗಳಿಗೆ, ಧರ್ಮದ ಹೆಸರಿನ ನಂಗಾನಾಚ ಬಯಲಾಗಬಾರದು ಎಂಬುದು ಬಹುತೇಕರ ವಾಂಛೆ. ಆದ್ದರಿಂದಲೆ ಲಿಂಗಾಯತ ಧರ್ಮದ ಹೋರಾಟವನ್ನು ರಾಜಕೀಯ ಹೋರಾಟ ಎಂದು ದಿಕ್ಕು ತಪ್ಪಿಸಲು ಯತ್ನಿಸಿದರು. ಕೆಲವರಂತೂ ಧರ್ಮ ಒಡೆಯುವ ಷಡ್ಯಂತ್ರ ಎಂದೂ ದೂರಿದರು. ಇದರಲ್ಲಿ ಯಶಸ್ವಿಯೂ ಆದರು.

ಆದರೆ ಸತ್ಯಕ್ಕೆ ಶಕ್ತಿ ಹೆಚ್ಚು ಮತ್ತು ಅದು ಸಶಕ್ತವಾಗಿ ಪೆಡಸಿನಿಂದ ಹೊರ ಹೊಮ್ಮುತ್ತದೆ ಎಂಬುದಕ್ಕೆ ಸಾಕ್ಷಿಯಂತೆ ಬೆಂಗಳೂರಿನ ಬಸವ ಸಮಿತಿಯ ಅರಿವಿನ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಮೀಟಿಂಗ್ ಸಾಕ್ಷಿಯಾಗಿತ್ತು. ರಾಷ್ಟ್ರೀಯ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಶಿವಾನಂದ ಜಾಮದಾರ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅಪೀಲು ಹೋಗುವ ಕುರಿತು ವಿವರವಾಗಿ ಮಾಹಿತಿ ಒದಗಿಸಿದರು.

ಲಿಂಗಾಯತ ಜನ ಸಮುದಾಯದಲ್ಲಿ ಇಂದಿಗೂ ಇರಬಹುದಾದ ಕೆಲವು ಗೊಂದಲಗಳಿಗೆ ಉತ್ತರವಾಗಿ 7-8 ಪುಸ್ತಕಗಳನ್ನು ಸಾವಿರ ಸಾವಿರ ಪ್ರತಿಗಳಲ್ಲಿ ಮುದ್ರಿಸುವುದಾಗಿ ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಡಾ.ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮದ ಜಯ ಮೃತ್ಯುಂಜಯ ಜಗದ್ಗುರುಗಳು, ಚೆನ್ನಬಸವಾನಂದ ಸ್ವಾಮೀಜಿ ಕೂಡಲ ಸಂಗಮ ಮುಂತಾದ ಮಠಾಧೀಶರು ನೂರಾರು ಜನ ಪ್ರಗತಿ ಪರರು, ವಿಚಾರವಾದಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ತೊಡೆತಟ್ಟಿ ನಿಂತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...