Homeಕರ್ನಾಟಕಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

ಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಇದುವರೆಗೆ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಳಿಯುತ್ತಿದ್ದ ಲಿಂಗಾಯತ ಧರ್ಮ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಬುಗಿಲೆದ್ದಿದೆ. ತೀರಾ ಇತ್ತೀಚೆಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ ಹಾಗೂ ಕೆಲವು ಜನ ಶಾಸಕರು ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯನ್ನು ಭೇಟಿಯಾಗಿ ವೀರಶೈವ/ಲಿಂಗಾಯತ ಧರ್ಮದ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸರಕಾರಕ್ಕೆ ಸಲ್ಲಿಸಿದ ಮನವಿಯವನ್ನು ಗಮನಿಸಿದ ಜಾಗತಿಕ ಲಿಂಗಾಯತ ಮಹಾಸಭೆ ದಿಡೀರನೆ ತನ್ನ ಮಹಾಮಂಡಳದ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಪತ್ರಿಕಾ ಹೇಳಿಕೆ ನೀಡಿದೆ. ವೀರಶೈವ ಮಹಾಸಭೆ ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಬಗೆಗೆ ನಮಗೆ ಯಾವುದೆ ತಕರಾರು ಇಲ್ಲ. ಆದರೆ ಆ ಬೇಡಿಕೆಯಲ್ಲಿ ವೀರಶೈವ ಪದ ಸೇರಿಸಿದ್ದನ್ನು ಜಾಗತಿಕ ಲಿಂಗಾಯತ ಮಹಾಸಭೆ ಕಟುವಾಗಿ ಟೀಕಿಸಿದೆ.

2002 ಕ್ಕೂ ಪೂರ್ವದಲ್ಲಿ ಸರಕಾರದ ಯಾವುದೆ ದಾಖಲೆಯಲ್ಲಿ ಇಲ್ಲದ ವೀರಶೈವ ಪದವನ್ನು ಸೇರಿಸಿ ಸಮಾಜದಲ್ಲಿ ಗೊಂದಲವನ್ನುಂಟು ಮಾಡಿದೆ. ನಿಜಕ್ಕೂ ಬ್ರಿಟಿಷ್ ಆಡಳಿತದ ಸಂದರ್ಭದಿಂದ ಹಿಡಿದು ಸರಕಾರದ ಯಾವ ದಾಖಲೆಯಲ್ಲಿಯೂ ಇಲ್ಲದ ವೀರಶೈವ ಪದವನ್ನು ಅಂದಿನ ವೀರಶೈವ ಮಹಾಸಭೆಯ ಅಧ್ಯಕ್ಷ ಭೀಮಣ್ಣ ಖಂಡ್ರೆಯವರ ಕುತಂತ್ರದಿಂದ ಸರಕಾರದ ನೋಟಿಫಿಕೇಶನ್ ಪಡೆಯಿತು. ಇದಕ್ಕೆ ಬಹು ಮುಖ್ಯ ಕಾರಣ ಭೀಮಣ್ಣ ಖಂಡ್ರೆ ಹಾಗೂ ವೀರಶೈವ ಮಹಾಸಭೆಯೇ ಆಗಿದೆ.

ವೀರಶೈವ ಎಂಬುದು ಲಿಂಗಾಯತ ಧರ್ಮದಲ್ಲಿ ಕೇವಲ ಒಂದು ಮತ. ಮತ ಹೇಗೆ ಧರ್ಮವಾಗುತ್ತದೆ? ಎಂಬುದು ಬಹಳಷ್ಟು ಜನ ಹೋರಾಟಗಾರರ ಪ್ರಶ್ನೆಯಾಗಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನಗಳ ಎಳೆಯನ್ನು ಇಟ್ಟುಕೊಂಡು ಜನ್ಮ ತಳೆದ ಲಿಂಗಾಯತ ಧರ್ಮ, ಕರ್ಮಠರ ಕಪಿಮುಷ್ಠಿ ಮತ್ತು ಧಾರ್ಮಿಕ ಅತ್ಯಾಚಾರಿಗಳ ಕೈಯಲ್ಲಿ ನಲುಗಿ ಹೋದದ್ದು ಸುಳ್ಳಲ್ಲ. ಬಸವಣ್ಣನವರು ಇದ್ದಾಗ ಹೇಗೆ ಪುರೋಹಿತಶಾಹಿ ಅವರ ವಿಚಾರಗಳ ಮೇಲೆ ಬರ್ಬರ ಹತ್ಯೆ ನಡೆಸಲು ಯತ್ನಿಸಿದಂತೆ, ಈಗಲೂ ಅದನ್ನು ದಮನ ಮಾಡಲು ಸನ್ನದ್ದವಾಗಿ ನಿಂತುಕೊಂಡಿದೆ.

ಲಿಂಗಾಯತ ಧರ್ಮಕ್ಕೆ ಸಂಬಂಧವೇ ಪಡದ ಕಲ್ಲಡ್ಕ ಪ್ರಭಾಕರ ಭಟ್ಟ, ಆರ್.ಎಸ್.ಎಸ್.ನ ಸಂತೋಷ್, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹಾಗೂ ಪೇಜಾವರ ಮಹಾಸ್ವಾಮಿಗಳು ಸುಖಾ ಸುಮ್ಮನೆ ಮಾತನಾಡುತ್ತಾರೆ. ಲಿಂಗಾಯತ ಧರ್ಮ ಅಥವಾ ವಚನ ಸಾಹಿತ್ಯದ ಬಗೆಗೆ ಎಳ್ಳಷ್ಟು ಗೊತ್ತಿಲ್ಲದ ಇವರುಗಳು ತಲೆ ಬುಡವಿಲ್ಲದೆ ಆಳಿಗೊಂದು ಮಾತಾಡಿ ಲಿಂಗಾಯತರ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಂತೂ ಕೈತೊಳೆದುಕೊಂಡು ಬೆನ್ನು ಹತ್ತಿದವರಂತೆ ಮತ್ತೆ ಶುರುವಾದ ಪ್ರತ್ಯೇಕ ಧರ್ಮದ ಕೂಗು ಎಂದು ಉಯಿಲೆಬ್ಬಿಸಿ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿವೆ. ಲಿಂಗಾಯತ ಧರ್ಮದ ಗಂಧಗಾಳಿ ಗೊತ್ತಿಲ್ಲದ ಇವು ಕಾಕೊಳಿಯಾಗಿಯೂ ನವಿಲಿನಂತೆ ನರ್ತಿಸುವ ಸೋಜಿಗ ಎಂಥವರಿಗೂ ಗೊತ್ತಾಗುತ್ತಿದೆ.

ಇಷ್ಟಕ್ಕೂ ಲಿಂಗಾಯತ ಧರ್ಮದ ಹೋರಾಟಕ್ಕೆ ಬಹುತೇಕ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸ್ವಹಿತಾಸಕ್ತಿ ಗುಂಪುಗಳು ಯಾಕೆ ವಿರೋಧಿಸುತ್ತಿವೆ? ಎಂಬ ಪ್ರಶ್ನೆಯನ್ನು ಎತ್ತಿಕೊಂಡರೆ ಅದಕ್ಕೊಂದು ತಾರ್ಕಿಕ ಉತ್ತರ ದೊರೆಯುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಲಿಂಗಾಯತ ಧರ್ಮ ಕಾಯಕ ಜೀವಿಗಳ ಸಂಘಟನೆ. ಇಲ್ಲಿ ಅವರವರ ಕಾಯಕದ ಅನುಭವವೆ ಪ್ರಮಾಣು. ಶಾಸ್ತ್ರ, ಪುರಾಣ, ವೇದಾಂತಗಳೆಲ್ಲ ಕಟ್ಟುಕತೆಗಳು ಎಂಬುದು ಅವರಿಗೆಲ್ಲ ಮನದಟ್ಟಾಗಿತ್ತು. ವೇದವೆಂಬುದು ಓದಿನ ಮಾತು ಎಂಬುದು ಖಚಿತ. ವೇದ ಶಾಸ್ತ್ರ ಪುರಾಣ ಪ್ರಾಮಣ್ಯ ಒಪ್ಪದ ದುಡಿಯುವ ಜನ ತಮಗಾಗಿ ಕಟ್ಟಿಕೊಂಡ ಚಳುವಳಿಯ ಹೆಸರು ಲಿಂಗಾಯತ.

ಹೀಗಾಗಿ ಹನ್ನೆರಡನೆಯ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮದ ಅಸ್ಮಿತೆಯನ್ನು ಮರೆ ಮಾಡುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಲಿಂಗಾಯತ ಧರ್ಮಿಯರಿಗೆ ವಚನ ಪ್ರಜ್ಞೆ ಮೂಡುತ್ತಿರುವಂತೆ ಮತ್ತೆ ಮತ್ತೆ ಹೋರಾಟದ ಕಿಚ್ಚು ಹುಟ್ಟಿಕೊಂಡಿದೆ. ಇದು ಯಾವುದೋ ರಾಜಕೀಯ ಒತ್ತಡಗಳಿಂದ ಪ್ರೇರಿತವಾದ ಕಿಚ್ಚಾಗಿದ್ದರೆ ಇಷ್ಟೊತ್ತಿಗೆ ಅದು ತಣ್ಣಗಾಗಿ ಹಳೆ ಕತೆಯಾಗುತ್ತಿತ್ತು. ಒಡಲಿನಿಂದ ಹೊಮ್ಮಿದ ಹೋರಾಟ ಯಾರೋ ನಾಲ್ಕು ಜನ ಪಡಪೋಶಿಗಳ ಮಾತಿಗೆ ತಲೆ ಬಾಗಿಸುವುದಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದ ಮೊಟ್ಟ ಮೊದಲ ಕನ್ನಡದ ಧರ್ಮ ಲಿಂಗಾಯತ. ಈ ಲಿಂಗಾಯತಕ್ಕೆ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ, ಹೊಲಿಯರ ನಾಗಿದೇವ, ಸೂಳೆ ಸಂಕವ್ವೆ, ಅಕ್ಕಮಹಾದೇವಿ, ಅಲ್ಲಮಪ್ರಭು,ಚೆನ್ನಬಸವಣ್ಣ, ಕದಿರೆಯ ರೆಮ್ಮವ್ವ ಮುಂತಾದವರೆಲ್ಲ ಬಸವಣ್ಣನವರ ನೇತೃತ್ವದಲ್ಲಿ ಕಟ್ಟಿದ ಅನುಭಾವಿಕ ಚಳುವಳಿ. ನಮ್ಮ ನಾಡಿದ ವಿಸ್ಮೃತಿ ಅಡಗಿರುವುದು ವಚನ ಸಾಹಿತ್ಯದ ಅನುಭಾವದ ಒಡಲಲ್ಲಿ ಎಂಬುದನ್ನು ಯಾರೂ ಮರೆಯುವಂತೆ ಇಲ್ಲ.

ಏಕಕಾಲಕ್ಕೆ ಪುರೋಹಿತಶಾಹಿ, ರಾಜಶಾಹಿ, ಮತ್ತು ಪಟ್ಟಭದ್ರರ ವಿರುದ್ಧ ಸಿಡಿದ ಸಿಡಿಗುಂಡುಗಳು ವಚನ ಸಾಹಿತ್ಯ. ವಚನ ಸಾಹಿತ್ಯದ ಪ್ರಜ್ಞೆ ಎಂದರೆ ಅದು ಸಕಲ ಜೀವಾತ್ಮರಿಗೆ ಲೇಸ ಬಯಸುವ ಪ್ರಜ್ಞೆ. ಈ ಪ್ರಜ್ಞೆ ಎಲ್ಲರಲ್ಲಿ ಮೂಡಿದರೆ ತಮ್ಮ ಕರಾಳ ಕೆಲಸಗಳಿಗೆ, ಧರ್ಮದ ಹೆಸರಿನ ನಂಗಾನಾಚ ಬಯಲಾಗಬಾರದು ಎಂಬುದು ಬಹುತೇಕರ ವಾಂಛೆ. ಆದ್ದರಿಂದಲೆ ಲಿಂಗಾಯತ ಧರ್ಮದ ಹೋರಾಟವನ್ನು ರಾಜಕೀಯ ಹೋರಾಟ ಎಂದು ದಿಕ್ಕು ತಪ್ಪಿಸಲು ಯತ್ನಿಸಿದರು. ಕೆಲವರಂತೂ ಧರ್ಮ ಒಡೆಯುವ ಷಡ್ಯಂತ್ರ ಎಂದೂ ದೂರಿದರು. ಇದರಲ್ಲಿ ಯಶಸ್ವಿಯೂ ಆದರು.

ಆದರೆ ಸತ್ಯಕ್ಕೆ ಶಕ್ತಿ ಹೆಚ್ಚು ಮತ್ತು ಅದು ಸಶಕ್ತವಾಗಿ ಪೆಡಸಿನಿಂದ ಹೊರ ಹೊಮ್ಮುತ್ತದೆ ಎಂಬುದಕ್ಕೆ ಸಾಕ್ಷಿಯಂತೆ ಬೆಂಗಳೂರಿನ ಬಸವ ಸಮಿತಿಯ ಅರಿವಿನ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಮೀಟಿಂಗ್ ಸಾಕ್ಷಿಯಾಗಿತ್ತು. ರಾಷ್ಟ್ರೀಯ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಶಿವಾನಂದ ಜಾಮದಾರ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅಪೀಲು ಹೋಗುವ ಕುರಿತು ವಿವರವಾಗಿ ಮಾಹಿತಿ ಒದಗಿಸಿದರು.

ಲಿಂಗಾಯತ ಜನ ಸಮುದಾಯದಲ್ಲಿ ಇಂದಿಗೂ ಇರಬಹುದಾದ ಕೆಲವು ಗೊಂದಲಗಳಿಗೆ ಉತ್ತರವಾಗಿ 7-8 ಪುಸ್ತಕಗಳನ್ನು ಸಾವಿರ ಸಾವಿರ ಪ್ರತಿಗಳಲ್ಲಿ ಮುದ್ರಿಸುವುದಾಗಿ ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಡಾ.ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮದ ಜಯ ಮೃತ್ಯುಂಜಯ ಜಗದ್ಗುರುಗಳು, ಚೆನ್ನಬಸವಾನಂದ ಸ್ವಾಮೀಜಿ ಕೂಡಲ ಸಂಗಮ ಮುಂತಾದ ಮಠಾಧೀಶರು ನೂರಾರು ಜನ ಪ್ರಗತಿ ಪರರು, ವಿಚಾರವಾದಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ತೊಡೆತಟ್ಟಿ ನಿಂತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...