Homeಕರ್ನಾಟಕಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

ಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಇದುವರೆಗೆ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಳಿಯುತ್ತಿದ್ದ ಲಿಂಗಾಯತ ಧರ್ಮ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಬುಗಿಲೆದ್ದಿದೆ. ತೀರಾ ಇತ್ತೀಚೆಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ ಹಾಗೂ ಕೆಲವು ಜನ ಶಾಸಕರು ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯನ್ನು ಭೇಟಿಯಾಗಿ ವೀರಶೈವ/ಲಿಂಗಾಯತ ಧರ್ಮದ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸರಕಾರಕ್ಕೆ ಸಲ್ಲಿಸಿದ ಮನವಿಯವನ್ನು ಗಮನಿಸಿದ ಜಾಗತಿಕ ಲಿಂಗಾಯತ ಮಹಾಸಭೆ ದಿಡೀರನೆ ತನ್ನ ಮಹಾಮಂಡಳದ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಪತ್ರಿಕಾ ಹೇಳಿಕೆ ನೀಡಿದೆ. ವೀರಶೈವ ಮಹಾಸಭೆ ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಬಗೆಗೆ ನಮಗೆ ಯಾವುದೆ ತಕರಾರು ಇಲ್ಲ. ಆದರೆ ಆ ಬೇಡಿಕೆಯಲ್ಲಿ ವೀರಶೈವ ಪದ ಸೇರಿಸಿದ್ದನ್ನು ಜಾಗತಿಕ ಲಿಂಗಾಯತ ಮಹಾಸಭೆ ಕಟುವಾಗಿ ಟೀಕಿಸಿದೆ.

2002 ಕ್ಕೂ ಪೂರ್ವದಲ್ಲಿ ಸರಕಾರದ ಯಾವುದೆ ದಾಖಲೆಯಲ್ಲಿ ಇಲ್ಲದ ವೀರಶೈವ ಪದವನ್ನು ಸೇರಿಸಿ ಸಮಾಜದಲ್ಲಿ ಗೊಂದಲವನ್ನುಂಟು ಮಾಡಿದೆ. ನಿಜಕ್ಕೂ ಬ್ರಿಟಿಷ್ ಆಡಳಿತದ ಸಂದರ್ಭದಿಂದ ಹಿಡಿದು ಸರಕಾರದ ಯಾವ ದಾಖಲೆಯಲ್ಲಿಯೂ ಇಲ್ಲದ ವೀರಶೈವ ಪದವನ್ನು ಅಂದಿನ ವೀರಶೈವ ಮಹಾಸಭೆಯ ಅಧ್ಯಕ್ಷ ಭೀಮಣ್ಣ ಖಂಡ್ರೆಯವರ ಕುತಂತ್ರದಿಂದ ಸರಕಾರದ ನೋಟಿಫಿಕೇಶನ್ ಪಡೆಯಿತು. ಇದಕ್ಕೆ ಬಹು ಮುಖ್ಯ ಕಾರಣ ಭೀಮಣ್ಣ ಖಂಡ್ರೆ ಹಾಗೂ ವೀರಶೈವ ಮಹಾಸಭೆಯೇ ಆಗಿದೆ.

ವೀರಶೈವ ಎಂಬುದು ಲಿಂಗಾಯತ ಧರ್ಮದಲ್ಲಿ ಕೇವಲ ಒಂದು ಮತ. ಮತ ಹೇಗೆ ಧರ್ಮವಾಗುತ್ತದೆ? ಎಂಬುದು ಬಹಳಷ್ಟು ಜನ ಹೋರಾಟಗಾರರ ಪ್ರಶ್ನೆಯಾಗಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನಗಳ ಎಳೆಯನ್ನು ಇಟ್ಟುಕೊಂಡು ಜನ್ಮ ತಳೆದ ಲಿಂಗಾಯತ ಧರ್ಮ, ಕರ್ಮಠರ ಕಪಿಮುಷ್ಠಿ ಮತ್ತು ಧಾರ್ಮಿಕ ಅತ್ಯಾಚಾರಿಗಳ ಕೈಯಲ್ಲಿ ನಲುಗಿ ಹೋದದ್ದು ಸುಳ್ಳಲ್ಲ. ಬಸವಣ್ಣನವರು ಇದ್ದಾಗ ಹೇಗೆ ಪುರೋಹಿತಶಾಹಿ ಅವರ ವಿಚಾರಗಳ ಮೇಲೆ ಬರ್ಬರ ಹತ್ಯೆ ನಡೆಸಲು ಯತ್ನಿಸಿದಂತೆ, ಈಗಲೂ ಅದನ್ನು ದಮನ ಮಾಡಲು ಸನ್ನದ್ದವಾಗಿ ನಿಂತುಕೊಂಡಿದೆ.

ಲಿಂಗಾಯತ ಧರ್ಮಕ್ಕೆ ಸಂಬಂಧವೇ ಪಡದ ಕಲ್ಲಡ್ಕ ಪ್ರಭಾಕರ ಭಟ್ಟ, ಆರ್.ಎಸ್.ಎಸ್.ನ ಸಂತೋಷ್, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹಾಗೂ ಪೇಜಾವರ ಮಹಾಸ್ವಾಮಿಗಳು ಸುಖಾ ಸುಮ್ಮನೆ ಮಾತನಾಡುತ್ತಾರೆ. ಲಿಂಗಾಯತ ಧರ್ಮ ಅಥವಾ ವಚನ ಸಾಹಿತ್ಯದ ಬಗೆಗೆ ಎಳ್ಳಷ್ಟು ಗೊತ್ತಿಲ್ಲದ ಇವರುಗಳು ತಲೆ ಬುಡವಿಲ್ಲದೆ ಆಳಿಗೊಂದು ಮಾತಾಡಿ ಲಿಂಗಾಯತರ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಂತೂ ಕೈತೊಳೆದುಕೊಂಡು ಬೆನ್ನು ಹತ್ತಿದವರಂತೆ ಮತ್ತೆ ಶುರುವಾದ ಪ್ರತ್ಯೇಕ ಧರ್ಮದ ಕೂಗು ಎಂದು ಉಯಿಲೆಬ್ಬಿಸಿ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿವೆ. ಲಿಂಗಾಯತ ಧರ್ಮದ ಗಂಧಗಾಳಿ ಗೊತ್ತಿಲ್ಲದ ಇವು ಕಾಕೊಳಿಯಾಗಿಯೂ ನವಿಲಿನಂತೆ ನರ್ತಿಸುವ ಸೋಜಿಗ ಎಂಥವರಿಗೂ ಗೊತ್ತಾಗುತ್ತಿದೆ.

ಇಷ್ಟಕ್ಕೂ ಲಿಂಗಾಯತ ಧರ್ಮದ ಹೋರಾಟಕ್ಕೆ ಬಹುತೇಕ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸ್ವಹಿತಾಸಕ್ತಿ ಗುಂಪುಗಳು ಯಾಕೆ ವಿರೋಧಿಸುತ್ತಿವೆ? ಎಂಬ ಪ್ರಶ್ನೆಯನ್ನು ಎತ್ತಿಕೊಂಡರೆ ಅದಕ್ಕೊಂದು ತಾರ್ಕಿಕ ಉತ್ತರ ದೊರೆಯುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಲಿಂಗಾಯತ ಧರ್ಮ ಕಾಯಕ ಜೀವಿಗಳ ಸಂಘಟನೆ. ಇಲ್ಲಿ ಅವರವರ ಕಾಯಕದ ಅನುಭವವೆ ಪ್ರಮಾಣು. ಶಾಸ್ತ್ರ, ಪುರಾಣ, ವೇದಾಂತಗಳೆಲ್ಲ ಕಟ್ಟುಕತೆಗಳು ಎಂಬುದು ಅವರಿಗೆಲ್ಲ ಮನದಟ್ಟಾಗಿತ್ತು. ವೇದವೆಂಬುದು ಓದಿನ ಮಾತು ಎಂಬುದು ಖಚಿತ. ವೇದ ಶಾಸ್ತ್ರ ಪುರಾಣ ಪ್ರಾಮಣ್ಯ ಒಪ್ಪದ ದುಡಿಯುವ ಜನ ತಮಗಾಗಿ ಕಟ್ಟಿಕೊಂಡ ಚಳುವಳಿಯ ಹೆಸರು ಲಿಂಗಾಯತ.

ಹೀಗಾಗಿ ಹನ್ನೆರಡನೆಯ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮದ ಅಸ್ಮಿತೆಯನ್ನು ಮರೆ ಮಾಡುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಲಿಂಗಾಯತ ಧರ್ಮಿಯರಿಗೆ ವಚನ ಪ್ರಜ್ಞೆ ಮೂಡುತ್ತಿರುವಂತೆ ಮತ್ತೆ ಮತ್ತೆ ಹೋರಾಟದ ಕಿಚ್ಚು ಹುಟ್ಟಿಕೊಂಡಿದೆ. ಇದು ಯಾವುದೋ ರಾಜಕೀಯ ಒತ್ತಡಗಳಿಂದ ಪ್ರೇರಿತವಾದ ಕಿಚ್ಚಾಗಿದ್ದರೆ ಇಷ್ಟೊತ್ತಿಗೆ ಅದು ತಣ್ಣಗಾಗಿ ಹಳೆ ಕತೆಯಾಗುತ್ತಿತ್ತು. ಒಡಲಿನಿಂದ ಹೊಮ್ಮಿದ ಹೋರಾಟ ಯಾರೋ ನಾಲ್ಕು ಜನ ಪಡಪೋಶಿಗಳ ಮಾತಿಗೆ ತಲೆ ಬಾಗಿಸುವುದಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದ ಮೊಟ್ಟ ಮೊದಲ ಕನ್ನಡದ ಧರ್ಮ ಲಿಂಗಾಯತ. ಈ ಲಿಂಗಾಯತಕ್ಕೆ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ, ಹೊಲಿಯರ ನಾಗಿದೇವ, ಸೂಳೆ ಸಂಕವ್ವೆ, ಅಕ್ಕಮಹಾದೇವಿ, ಅಲ್ಲಮಪ್ರಭು,ಚೆನ್ನಬಸವಣ್ಣ, ಕದಿರೆಯ ರೆಮ್ಮವ್ವ ಮುಂತಾದವರೆಲ್ಲ ಬಸವಣ್ಣನವರ ನೇತೃತ್ವದಲ್ಲಿ ಕಟ್ಟಿದ ಅನುಭಾವಿಕ ಚಳುವಳಿ. ನಮ್ಮ ನಾಡಿದ ವಿಸ್ಮೃತಿ ಅಡಗಿರುವುದು ವಚನ ಸಾಹಿತ್ಯದ ಅನುಭಾವದ ಒಡಲಲ್ಲಿ ಎಂಬುದನ್ನು ಯಾರೂ ಮರೆಯುವಂತೆ ಇಲ್ಲ.

ಏಕಕಾಲಕ್ಕೆ ಪುರೋಹಿತಶಾಹಿ, ರಾಜಶಾಹಿ, ಮತ್ತು ಪಟ್ಟಭದ್ರರ ವಿರುದ್ಧ ಸಿಡಿದ ಸಿಡಿಗುಂಡುಗಳು ವಚನ ಸಾಹಿತ್ಯ. ವಚನ ಸಾಹಿತ್ಯದ ಪ್ರಜ್ಞೆ ಎಂದರೆ ಅದು ಸಕಲ ಜೀವಾತ್ಮರಿಗೆ ಲೇಸ ಬಯಸುವ ಪ್ರಜ್ಞೆ. ಈ ಪ್ರಜ್ಞೆ ಎಲ್ಲರಲ್ಲಿ ಮೂಡಿದರೆ ತಮ್ಮ ಕರಾಳ ಕೆಲಸಗಳಿಗೆ, ಧರ್ಮದ ಹೆಸರಿನ ನಂಗಾನಾಚ ಬಯಲಾಗಬಾರದು ಎಂಬುದು ಬಹುತೇಕರ ವಾಂಛೆ. ಆದ್ದರಿಂದಲೆ ಲಿಂಗಾಯತ ಧರ್ಮದ ಹೋರಾಟವನ್ನು ರಾಜಕೀಯ ಹೋರಾಟ ಎಂದು ದಿಕ್ಕು ತಪ್ಪಿಸಲು ಯತ್ನಿಸಿದರು. ಕೆಲವರಂತೂ ಧರ್ಮ ಒಡೆಯುವ ಷಡ್ಯಂತ್ರ ಎಂದೂ ದೂರಿದರು. ಇದರಲ್ಲಿ ಯಶಸ್ವಿಯೂ ಆದರು.

ಆದರೆ ಸತ್ಯಕ್ಕೆ ಶಕ್ತಿ ಹೆಚ್ಚು ಮತ್ತು ಅದು ಸಶಕ್ತವಾಗಿ ಪೆಡಸಿನಿಂದ ಹೊರ ಹೊಮ್ಮುತ್ತದೆ ಎಂಬುದಕ್ಕೆ ಸಾಕ್ಷಿಯಂತೆ ಬೆಂಗಳೂರಿನ ಬಸವ ಸಮಿತಿಯ ಅರಿವಿನ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಮೀಟಿಂಗ್ ಸಾಕ್ಷಿಯಾಗಿತ್ತು. ರಾಷ್ಟ್ರೀಯ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಶಿವಾನಂದ ಜಾಮದಾರ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅಪೀಲು ಹೋಗುವ ಕುರಿತು ವಿವರವಾಗಿ ಮಾಹಿತಿ ಒದಗಿಸಿದರು.

ಲಿಂಗಾಯತ ಜನ ಸಮುದಾಯದಲ್ಲಿ ಇಂದಿಗೂ ಇರಬಹುದಾದ ಕೆಲವು ಗೊಂದಲಗಳಿಗೆ ಉತ್ತರವಾಗಿ 7-8 ಪುಸ್ತಕಗಳನ್ನು ಸಾವಿರ ಸಾವಿರ ಪ್ರತಿಗಳಲ್ಲಿ ಮುದ್ರಿಸುವುದಾಗಿ ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಡಾ.ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮದ ಜಯ ಮೃತ್ಯುಂಜಯ ಜಗದ್ಗುರುಗಳು, ಚೆನ್ನಬಸವಾನಂದ ಸ್ವಾಮೀಜಿ ಕೂಡಲ ಸಂಗಮ ಮುಂತಾದ ಮಠಾಧೀಶರು ನೂರಾರು ಜನ ಪ್ರಗತಿ ಪರರು, ವಿಚಾರವಾದಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ತೊಡೆತಟ್ಟಿ ನಿಂತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....