Homeಕರ್ನಾಟಕಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

ಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಇದುವರೆಗೆ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಳಿಯುತ್ತಿದ್ದ ಲಿಂಗಾಯತ ಧರ್ಮ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಬುಗಿಲೆದ್ದಿದೆ. ತೀರಾ ಇತ್ತೀಚೆಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ ಹಾಗೂ ಕೆಲವು ಜನ ಶಾಸಕರು ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯನ್ನು ಭೇಟಿಯಾಗಿ ವೀರಶೈವ/ಲಿಂಗಾಯತ ಧರ್ಮದ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸರಕಾರಕ್ಕೆ ಸಲ್ಲಿಸಿದ ಮನವಿಯವನ್ನು ಗಮನಿಸಿದ ಜಾಗತಿಕ ಲಿಂಗಾಯತ ಮಹಾಸಭೆ ದಿಡೀರನೆ ತನ್ನ ಮಹಾಮಂಡಳದ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಪತ್ರಿಕಾ ಹೇಳಿಕೆ ನೀಡಿದೆ. ವೀರಶೈವ ಮಹಾಸಭೆ ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಬಗೆಗೆ ನಮಗೆ ಯಾವುದೆ ತಕರಾರು ಇಲ್ಲ. ಆದರೆ ಆ ಬೇಡಿಕೆಯಲ್ಲಿ ವೀರಶೈವ ಪದ ಸೇರಿಸಿದ್ದನ್ನು ಜಾಗತಿಕ ಲಿಂಗಾಯತ ಮಹಾಸಭೆ ಕಟುವಾಗಿ ಟೀಕಿಸಿದೆ.

2002 ಕ್ಕೂ ಪೂರ್ವದಲ್ಲಿ ಸರಕಾರದ ಯಾವುದೆ ದಾಖಲೆಯಲ್ಲಿ ಇಲ್ಲದ ವೀರಶೈವ ಪದವನ್ನು ಸೇರಿಸಿ ಸಮಾಜದಲ್ಲಿ ಗೊಂದಲವನ್ನುಂಟು ಮಾಡಿದೆ. ನಿಜಕ್ಕೂ ಬ್ರಿಟಿಷ್ ಆಡಳಿತದ ಸಂದರ್ಭದಿಂದ ಹಿಡಿದು ಸರಕಾರದ ಯಾವ ದಾಖಲೆಯಲ್ಲಿಯೂ ಇಲ್ಲದ ವೀರಶೈವ ಪದವನ್ನು ಅಂದಿನ ವೀರಶೈವ ಮಹಾಸಭೆಯ ಅಧ್ಯಕ್ಷ ಭೀಮಣ್ಣ ಖಂಡ್ರೆಯವರ ಕುತಂತ್ರದಿಂದ ಸರಕಾರದ ನೋಟಿಫಿಕೇಶನ್ ಪಡೆಯಿತು. ಇದಕ್ಕೆ ಬಹು ಮುಖ್ಯ ಕಾರಣ ಭೀಮಣ್ಣ ಖಂಡ್ರೆ ಹಾಗೂ ವೀರಶೈವ ಮಹಾಸಭೆಯೇ ಆಗಿದೆ.

ವೀರಶೈವ ಎಂಬುದು ಲಿಂಗಾಯತ ಧರ್ಮದಲ್ಲಿ ಕೇವಲ ಒಂದು ಮತ. ಮತ ಹೇಗೆ ಧರ್ಮವಾಗುತ್ತದೆ? ಎಂಬುದು ಬಹಳಷ್ಟು ಜನ ಹೋರಾಟಗಾರರ ಪ್ರಶ್ನೆಯಾಗಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನಗಳ ಎಳೆಯನ್ನು ಇಟ್ಟುಕೊಂಡು ಜನ್ಮ ತಳೆದ ಲಿಂಗಾಯತ ಧರ್ಮ, ಕರ್ಮಠರ ಕಪಿಮುಷ್ಠಿ ಮತ್ತು ಧಾರ್ಮಿಕ ಅತ್ಯಾಚಾರಿಗಳ ಕೈಯಲ್ಲಿ ನಲುಗಿ ಹೋದದ್ದು ಸುಳ್ಳಲ್ಲ. ಬಸವಣ್ಣನವರು ಇದ್ದಾಗ ಹೇಗೆ ಪುರೋಹಿತಶಾಹಿ ಅವರ ವಿಚಾರಗಳ ಮೇಲೆ ಬರ್ಬರ ಹತ್ಯೆ ನಡೆಸಲು ಯತ್ನಿಸಿದಂತೆ, ಈಗಲೂ ಅದನ್ನು ದಮನ ಮಾಡಲು ಸನ್ನದ್ದವಾಗಿ ನಿಂತುಕೊಂಡಿದೆ.

ಲಿಂಗಾಯತ ಧರ್ಮಕ್ಕೆ ಸಂಬಂಧವೇ ಪಡದ ಕಲ್ಲಡ್ಕ ಪ್ರಭಾಕರ ಭಟ್ಟ, ಆರ್.ಎಸ್.ಎಸ್.ನ ಸಂತೋಷ್, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹಾಗೂ ಪೇಜಾವರ ಮಹಾಸ್ವಾಮಿಗಳು ಸುಖಾ ಸುಮ್ಮನೆ ಮಾತನಾಡುತ್ತಾರೆ. ಲಿಂಗಾಯತ ಧರ್ಮ ಅಥವಾ ವಚನ ಸಾಹಿತ್ಯದ ಬಗೆಗೆ ಎಳ್ಳಷ್ಟು ಗೊತ್ತಿಲ್ಲದ ಇವರುಗಳು ತಲೆ ಬುಡವಿಲ್ಲದೆ ಆಳಿಗೊಂದು ಮಾತಾಡಿ ಲಿಂಗಾಯತರ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಂತೂ ಕೈತೊಳೆದುಕೊಂಡು ಬೆನ್ನು ಹತ್ತಿದವರಂತೆ ಮತ್ತೆ ಶುರುವಾದ ಪ್ರತ್ಯೇಕ ಧರ್ಮದ ಕೂಗು ಎಂದು ಉಯಿಲೆಬ್ಬಿಸಿ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿವೆ. ಲಿಂಗಾಯತ ಧರ್ಮದ ಗಂಧಗಾಳಿ ಗೊತ್ತಿಲ್ಲದ ಇವು ಕಾಕೊಳಿಯಾಗಿಯೂ ನವಿಲಿನಂತೆ ನರ್ತಿಸುವ ಸೋಜಿಗ ಎಂಥವರಿಗೂ ಗೊತ್ತಾಗುತ್ತಿದೆ.

ಇಷ್ಟಕ್ಕೂ ಲಿಂಗಾಯತ ಧರ್ಮದ ಹೋರಾಟಕ್ಕೆ ಬಹುತೇಕ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸ್ವಹಿತಾಸಕ್ತಿ ಗುಂಪುಗಳು ಯಾಕೆ ವಿರೋಧಿಸುತ್ತಿವೆ? ಎಂಬ ಪ್ರಶ್ನೆಯನ್ನು ಎತ್ತಿಕೊಂಡರೆ ಅದಕ್ಕೊಂದು ತಾರ್ಕಿಕ ಉತ್ತರ ದೊರೆಯುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಲಿಂಗಾಯತ ಧರ್ಮ ಕಾಯಕ ಜೀವಿಗಳ ಸಂಘಟನೆ. ಇಲ್ಲಿ ಅವರವರ ಕಾಯಕದ ಅನುಭವವೆ ಪ್ರಮಾಣು. ಶಾಸ್ತ್ರ, ಪುರಾಣ, ವೇದಾಂತಗಳೆಲ್ಲ ಕಟ್ಟುಕತೆಗಳು ಎಂಬುದು ಅವರಿಗೆಲ್ಲ ಮನದಟ್ಟಾಗಿತ್ತು. ವೇದವೆಂಬುದು ಓದಿನ ಮಾತು ಎಂಬುದು ಖಚಿತ. ವೇದ ಶಾಸ್ತ್ರ ಪುರಾಣ ಪ್ರಾಮಣ್ಯ ಒಪ್ಪದ ದುಡಿಯುವ ಜನ ತಮಗಾಗಿ ಕಟ್ಟಿಕೊಂಡ ಚಳುವಳಿಯ ಹೆಸರು ಲಿಂಗಾಯತ.

ಹೀಗಾಗಿ ಹನ್ನೆರಡನೆಯ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮದ ಅಸ್ಮಿತೆಯನ್ನು ಮರೆ ಮಾಡುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಲಿಂಗಾಯತ ಧರ್ಮಿಯರಿಗೆ ವಚನ ಪ್ರಜ್ಞೆ ಮೂಡುತ್ತಿರುವಂತೆ ಮತ್ತೆ ಮತ್ತೆ ಹೋರಾಟದ ಕಿಚ್ಚು ಹುಟ್ಟಿಕೊಂಡಿದೆ. ಇದು ಯಾವುದೋ ರಾಜಕೀಯ ಒತ್ತಡಗಳಿಂದ ಪ್ರೇರಿತವಾದ ಕಿಚ್ಚಾಗಿದ್ದರೆ ಇಷ್ಟೊತ್ತಿಗೆ ಅದು ತಣ್ಣಗಾಗಿ ಹಳೆ ಕತೆಯಾಗುತ್ತಿತ್ತು. ಒಡಲಿನಿಂದ ಹೊಮ್ಮಿದ ಹೋರಾಟ ಯಾರೋ ನಾಲ್ಕು ಜನ ಪಡಪೋಶಿಗಳ ಮಾತಿಗೆ ತಲೆ ಬಾಗಿಸುವುದಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದ ಮೊಟ್ಟ ಮೊದಲ ಕನ್ನಡದ ಧರ್ಮ ಲಿಂಗಾಯತ. ಈ ಲಿಂಗಾಯತಕ್ಕೆ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ, ಹೊಲಿಯರ ನಾಗಿದೇವ, ಸೂಳೆ ಸಂಕವ್ವೆ, ಅಕ್ಕಮಹಾದೇವಿ, ಅಲ್ಲಮಪ್ರಭು,ಚೆನ್ನಬಸವಣ್ಣ, ಕದಿರೆಯ ರೆಮ್ಮವ್ವ ಮುಂತಾದವರೆಲ್ಲ ಬಸವಣ್ಣನವರ ನೇತೃತ್ವದಲ್ಲಿ ಕಟ್ಟಿದ ಅನುಭಾವಿಕ ಚಳುವಳಿ. ನಮ್ಮ ನಾಡಿದ ವಿಸ್ಮೃತಿ ಅಡಗಿರುವುದು ವಚನ ಸಾಹಿತ್ಯದ ಅನುಭಾವದ ಒಡಲಲ್ಲಿ ಎಂಬುದನ್ನು ಯಾರೂ ಮರೆಯುವಂತೆ ಇಲ್ಲ.

ಏಕಕಾಲಕ್ಕೆ ಪುರೋಹಿತಶಾಹಿ, ರಾಜಶಾಹಿ, ಮತ್ತು ಪಟ್ಟಭದ್ರರ ವಿರುದ್ಧ ಸಿಡಿದ ಸಿಡಿಗುಂಡುಗಳು ವಚನ ಸಾಹಿತ್ಯ. ವಚನ ಸಾಹಿತ್ಯದ ಪ್ರಜ್ಞೆ ಎಂದರೆ ಅದು ಸಕಲ ಜೀವಾತ್ಮರಿಗೆ ಲೇಸ ಬಯಸುವ ಪ್ರಜ್ಞೆ. ಈ ಪ್ರಜ್ಞೆ ಎಲ್ಲರಲ್ಲಿ ಮೂಡಿದರೆ ತಮ್ಮ ಕರಾಳ ಕೆಲಸಗಳಿಗೆ, ಧರ್ಮದ ಹೆಸರಿನ ನಂಗಾನಾಚ ಬಯಲಾಗಬಾರದು ಎಂಬುದು ಬಹುತೇಕರ ವಾಂಛೆ. ಆದ್ದರಿಂದಲೆ ಲಿಂಗಾಯತ ಧರ್ಮದ ಹೋರಾಟವನ್ನು ರಾಜಕೀಯ ಹೋರಾಟ ಎಂದು ದಿಕ್ಕು ತಪ್ಪಿಸಲು ಯತ್ನಿಸಿದರು. ಕೆಲವರಂತೂ ಧರ್ಮ ಒಡೆಯುವ ಷಡ್ಯಂತ್ರ ಎಂದೂ ದೂರಿದರು. ಇದರಲ್ಲಿ ಯಶಸ್ವಿಯೂ ಆದರು.

ಆದರೆ ಸತ್ಯಕ್ಕೆ ಶಕ್ತಿ ಹೆಚ್ಚು ಮತ್ತು ಅದು ಸಶಕ್ತವಾಗಿ ಪೆಡಸಿನಿಂದ ಹೊರ ಹೊಮ್ಮುತ್ತದೆ ಎಂಬುದಕ್ಕೆ ಸಾಕ್ಷಿಯಂತೆ ಬೆಂಗಳೂರಿನ ಬಸವ ಸಮಿತಿಯ ಅರಿವಿನ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಮೀಟಿಂಗ್ ಸಾಕ್ಷಿಯಾಗಿತ್ತು. ರಾಷ್ಟ್ರೀಯ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಶಿವಾನಂದ ಜಾಮದಾರ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅಪೀಲು ಹೋಗುವ ಕುರಿತು ವಿವರವಾಗಿ ಮಾಹಿತಿ ಒದಗಿಸಿದರು.

ಲಿಂಗಾಯತ ಜನ ಸಮುದಾಯದಲ್ಲಿ ಇಂದಿಗೂ ಇರಬಹುದಾದ ಕೆಲವು ಗೊಂದಲಗಳಿಗೆ ಉತ್ತರವಾಗಿ 7-8 ಪುಸ್ತಕಗಳನ್ನು ಸಾವಿರ ಸಾವಿರ ಪ್ರತಿಗಳಲ್ಲಿ ಮುದ್ರಿಸುವುದಾಗಿ ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಡಾ.ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮದ ಜಯ ಮೃತ್ಯುಂಜಯ ಜಗದ್ಗುರುಗಳು, ಚೆನ್ನಬಸವಾನಂದ ಸ್ವಾಮೀಜಿ ಕೂಡಲ ಸಂಗಮ ಮುಂತಾದ ಮಠಾಧೀಶರು ನೂರಾರು ಜನ ಪ್ರಗತಿ ಪರರು, ವಿಚಾರವಾದಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ತೊಡೆತಟ್ಟಿ ನಿಂತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...