Homeಕರ್ನಾಟಕ'ಮಹಿಷಾ ದಸರಾ,' ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ಮಹಿಷನಿಂದಾಗಿ ಮೈಸೂರು ಎನ್ನುವ ಹೆಸರು ಇದುವರೆಗೂ ನಿಂತಿದೆ ಎನ್ನುವುದನ್ನು ಇತಿಹಾಸದ ಹಲವು ಪುಟಗಳು ಸಾರುತ್ತಿವೆ. ಮಹಿಷೂರನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಬೃಹತ್ ಸಾಮ್ರಾಜ್ಯ ಕಟ್ಟಿ ಆಳಿದ ರಾಜ ಈ ಮಹಿಷ. ಕೇರಳ ರಾಜ್ಯದಲ್ಲಿ ಬಲಿಚಕ್ರವರ್ತಿಯನ್ನು ನೆನಪಿಸುವ ಓಣಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವಂತೆ ಈ ಭಾಗದ ಮೂಲನಿವಾಸಿಗಳು ಅತ್ಯಂತ ಪ್ರೀತಿ ಮತ್ತು ಧನ್ಯತೆಗಳಿಂದ ಮಹಿಷನನ್ನು ಸ್ಮರಿಸುತ್ತಾರೆ.

- Advertisement -
- Advertisement -

ಕಳೆದ ಐದಾರು ವರ್ಷಗಳಿಂದ ‘ಮಹಿಷ ದಸರಾ’ ಎನ್ನುವುದು ಹೆಚ್ಚುಹೆಚ್ಚು ಚಾಲ್ತಿಗೆ ಬರುತ್ತಿದೆ. ಈ ಮೂಲಕ ಹೂತುಹೋಗಿರುವ ಇತಿಹಾಸವನ್ನು ಮತ್ತೆ ಮುನ್ನಲೆಗೆ ತಂದು ತಿಳಿಹೇಳುವ ಉದ್ದೇಶ ಇಲ್ಲಿ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಇತಿಹಾಸ, ಪುರಾಣ ಮತ್ತು ಶಾಸ್ತ್ರಗಳ ತುಂಬಾ ವೈದಿಕರ ವಿಚಾರಗಳೇ ತುಂಬಿ ನಿಂತಿವೆ. ಹೀಗಿರುವಾಗ ಅವೈದಿಕ ಪರಂಪರೆಯಲ್ಲಿ ಬಹುಸಮುದಾಯಗಳನ್ನು ಪೊರೆದವರು ಯಾರು? ಎನ್ನುವುದನ್ನು ಮತ್ತೆ ಮತ್ತೆ ಕೇಳಿಕೊಂಡಾಗ ಈ ತರದ ಅವಲೋಕನ ಸಾಧ್ಯವಾಗುತ್ತದೆ. ಮಹಿಷ ಮಂಡಲ, ಮಹಿಷ ಪುರಿ, ಮಹಿಷೂರು, ಮಹಿಷನೂರು ಮೊದಲಾದ ಹೆಸರಿನಿಂದ ಕರೆಸಿಕೊಳ್ಳುತ್ತಿದ್ದ ಇಂದಿನ ಮೈಸೂರು ಮಹಿಷನಾಳಿದ ಬಹುದೊಡ್ಡ ಪ್ರದೇಶವಾಗಿತ್ತು. ವಿಂಧ್ಯಪರ್ವತದ ಮಹಿಸ್ಮೃತಿ ತಪ್ಪಲಿನವರೆಗೂ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಂಡಿದ್ದ ಈ ಪ್ರದೇಶ, ಮೂಲನಿವಾಸಿ ರಾಜನೊಬ್ಬನ ಕತೆಯನ್ನು ಹಿಡಿದಿಟ್ಟುಕೊಂಡಿದೆ. ಇದೆಲ್ಲದಕ್ಕೆ ಸಾಕ್ಷಿಯಾಗಿ ಇತಿಹಾಸದ ಪುಟಗಳು ನಿಂತಿವೆ.

ಈ ದೇಶದಲ್ಲಿ ಮೂಲನಿವಾಸಿಗಳ, ಬುಡಕಟ್ಟುಗಳ ಮತ್ತು ಬೌದ್ಧರ ಮೇಲಿನ ದಾಳಿಗಳು ಇತಿಹಾಸವನ್ನು ಛಿದ್ರಛಿದ್ರವಾಗಿಸಿವೆ. ಈ ಛಿದ್ರತೆಯಲ್ಲಿ ಮೇಲುಗೈ ಪಡೆದ ವೈದಿಕ ಪರಂಪರೆ ಅನೇಕ ಕಟ್ಟುಕತೆಗಳ ರೂಪದಲ್ಲಿ ಇತಿಹಾಸವನ್ನು ನೋಡುವಂತೆ ನಮ್ಮ ಕಣ್ಣುಗಳನ್ನು ರೂಪಿಸಿದೆ. ಇದರಿಂದ ಮೂಲನಿವಾಸಿ ಮತ್ತು ಅಸುರ ರಾಜರುಗಳು ಹೆಚ್ಚು ಮನದಾಳದಲ್ಲಿ ಬೇರೂರಿದಂತಾಗಿದೆ. ಇದರ ಹಿಂದೆ ವೈದಿಕತೆಯನ್ನೇ ಹೆಚ್ಚು ವಿಜೃಂಭೀಕರಿಸುವ, ಆ ಮೂಲಕ ಸಾಮ್ರಾಜ್ಯವನ್ನು ಆಳುವ ಮತ್ತು ಶತಶತಮಾನಗಳ ಕಾಲ ಮಾನಸಿಕ ಗುಲಾಮಗಿರಿಗೆ ಒಳಗಾಗಿ ಬದುಕುವಂತೆ ಮಾಡುವ ಹುನ್ನಾರವನ್ನು ಈ ವರ್ಗ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರುತ್ತಲೇ ಇದೆ. ಇದಕ್ಕಾಗಿ ಅದು ಕೋಟ್ಯಾಂತರ ದೇವರುಗಳನ್ನು ಸೃಷ್ಟಿಸಿ ತಮ್ಮ ಬೇಳೆಯನ್ನು ಇಂದಿಗೂ ಬೇಯಿಸಿಕೊಳ್ಳುತ್ತಲೇ ಇದ್ದಾರೆ. ಕುರು, ಪಾಂಚಾಲ, ಚೇರ, ವೆಂಗಿ, ಮಗಧ ಮುಂತಾದ ರಾಜಮನೆತನಗಳ ಭವ್ಯ ಪರಂಪರೆಯನ್ನು ಕಟ್ಟಿಕೊಟ್ಟ ಹಾಗೆ ನಾಗ ಮತ್ತು ಮಹಿಷ ಮಂಡಲದ ಮನೆತನಗಳ ಇತಿಹಾಸವನ್ನು ಕಟ್ಟಿಕೊಡುವ ಗೋಜಿಗೆ ಅಕ್ಷರ ಬಲ್ಲವರು ಹೋಗಿಲ್ಲ. ಇದರ ಪರಿಣಾಮ ಇವೆರಡರ ಅಪ್ರತಿಮ ಹೋರಾಟಗಾರರು ಅಂಚಿಗೆ ಸರಿದರು. ಇದರಲ್ಲಿ ಮಹಿಷನೂ ಒಬ್ಬ.

ಭಾರತದ ವೈದಿಕಶಾಹಿ ಇಲ್ಲಿನ ಮೂಲನಿವಾಸಿಗಳ ಪರಂಪರೆಯನ್ನು ಒಡೆದು ಮೇಲುಗೈ ಸಾಧಿಸಿದಂತೆಲ್ಲ ಇಲ್ಲಿನ ಅಪ್ರತಿಮ ನಾಯಕರನ್ನು ಖಳನಾಯಕರಂತೆ ಬಿಂಬಿಸಲು ಪ್ರಾರಂಭಿಸಿತು. ರಾಕ್ಷಸ, ಅಸುರ, ದಾನವ, ಕಿನ್ನರ, ಕಿಂಪುರುಷ ಮೊದಲಾದ ಪದಗಳಿಗೆ ಅಪಾರ್ಥಗಳನ್ನು ಹೊರಿಸಿ ಜನತೆಯ ಮನದಲ್ಲಿ ಇವರ ಕೀರ್ತಿಪತಾಕೆಗಳನ್ನೇ ಶಾಶ್ವತವಾಗಿ ನಕಾರಾತ್ಮಕ ಧೋರಣೆ ಬರುವಂತೆ ಮಾಡಿದರು. ಶ್ರೇಷ್ಠ ದೊರೆಗಳಾದ ಬಲಿಚಕ್ರವರ್ತಿ, ರಾವಣ, ನರಕಾಸುರ, ಮಹಿಷಾಸುರ ಮೊದಲಾದವರನ್ನು ತುಚ್ಛೀಕರಿಸಿ ಚಿತ್ರಿಸಿದರು. ಇವರ ಹಾದಿಯಲ್ಲಿ ಕಾಣುವ ಬೌದ್ಧ ಪರಂಪರೆಯನ್ನು ನಾಶಮಾಡುವ ಹುನ್ನಾರವನ್ನು ಈ ಮೂಲಕ ಮಾಡುತ್ತಾ ಬಂದರು. ಈ ವೈದಿಕಶಾಹಿ ತನಗೆ ವಿರುದ್ಧವಾದುದೆಲ್ಲವನ್ನು ರಾಕ್ಷಸ ಪರಂಪರೆಯೆಂದು ವಿಂಗಡಿಸಿ, ಅವರು ಕ್ರೂರಾತಿಕ್ರೂರರೆಂದು ಬಿಂಬಿಸಿದರು. ‘ಇವರನ್ನು ನಾಶಗೊಳಿಸಲು ದೇವನೊಬ್ಬನು ಅವತರಿಸಿ ಬರಬೇಕಾಯಿತು. ಹೀಗೆ ಬಂದದ್ದರಿಂದಲೇ ಈ ರಾಕ್ಷಸನ ಸಂಹಾರ ಸಾಧ್ಯವಾಗಿ ಲೋಕಕಲ್ಯಾಣವಾಯಿತು’ ಎನ್ನುವ ಹಸಿ ಸುಳ್ಳಿನ ಕತೆಯನ್ನು ಕಟ್ಟಿ ಜನತೆಗೆ ಆಚರಣೆ ಮೂಲಕ ನಂಬಿಸಿದರು. ಇದರ ಪರಿಣಾಮವಾಗಿ ಮೈಸೂರಿನ ದೊರೆಯಾದ ಮಹಿಷ ಹೊರನಿಲ್ಲುವಂತಾಗಿ ಕಟ್ಟಿದ ಕತೆಯ ಕುರುಹಾಗಿ ಚಾಮುಂಡಿ ಒಳ ನಿಲ್ಲುವಂತಾಗಿದೆ.

ಮಹಿಷನಿಂದಾಗಿ ಮೈಸೂರು ಎನ್ನುವ ಹೆಸರು ಇದುವರೆಗೂ ನಿಂತಿದೆ ಎನ್ನುವುದನ್ನು ಇತಿಹಾಸದ ಹಲವು ಪುಟಗಳು ಸಾರುತ್ತಿವೆ. ಮಹಿಷೂರನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಬೃಹತ್ ಸಾಮ್ರಾಜ್ಯ ಕಟ್ಟಿ ಆಳಿದ ರಾಜ ಈ ಮಹಿಷ. ಕೇರಳ ರಾಜ್ಯದಲ್ಲಿ ಬಲಿಚಕ್ರವರ್ತಿಯನ್ನು ನೆನಪಿಸುವ ಓಣಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವಂತೆ ಈ ಭಾಗದ ಮೂಲನಿವಾಸಿಗಳು ಅತ್ಯಂತ ಪ್ರೀತಿ ಮತ್ತು ಧನ್ಯತೆಗಳಿಂದ ಮಹಿಷನನ್ನು ಸ್ಮರಿಸುತ್ತಾರೆ. ಈ ಧನ್ಯತೆಯ ಭಾವದಿಂದ ಆಚರಿಸಲ್ಪಡುವ ಹಬ್ಬವೇ ದಸರಾ. ಇತಿಹಾಸವನ್ನು ತಿರುಚಿ ಅಂತೆಕಂತೆಗಳ ಪುರಾಣ ಕಟ್ಟುವಲ್ಲಿ ಪ್ರಸಿದ್ಧರಾದ ವೈದಿಕರು ‘ಬ್ರಾಹ್ಮಣನ ವೇಷದಲ್ಲಿ ಬಂದು ಮೂರು ಮೊಳ ಭೂಮಿಯನ್ನು ದಾನ ಪಡೆದು ವಿಷ್ಣು ಅವನನ್ನು ಭೂಮಿಗೆ ತುಳಿದನು’ ಎನ್ನುವ ಕತೆ ಕಟ್ಟಿದಂತೆ ಅತಿ ಕೆಟ್ಟವನಾದ ಮಹಿಷನನ್ನು ಸಂಹರಿಸಲು ಪಾರ್ವತಿ ದೇವಿಯೇ ಶಕ್ತಿ ಪಡೆದು ಬಂದು ಅವನನ್ನು ಸಂಹರಿಸಿದಳು’ ಎನ್ನುವ ಕತೆಯನ್ನು ಕಟ್ಟಿ ನಂಬಿಸಿದರು. ಈ ನಂಬಿಸಿದ ಫಲವೇ ಇಂದಿನ ಚಾಮುಂಡಿ ದಸರಾ. ಇದಕ್ಕೆ ರಾಜಮಹಾರಾಜರ ಒಪ್ಪಿತ ಮುದ್ರೆ ಬಿದ್ದಿದ್ದರಿಂದ ಇದು ನಿರಂತರ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಂದಮೇಲೂ ಇಂತವೇ ಮನಸ್ಸುಗಳು ಇಲ್ಲಿ ಉಸಿರಾಡುತ್ತಿರುವುದರಿಂದ ಈಗಲೂ ಅದ್ದೂರಿ ದಸರಾ ಹಬ್ಬ ‘ನಾಡದೇವತೆ’ ಎನ್ನುವ ಹೆಸರಿನಡಿ ನಡೆಯುತ್ತಲೇ ಇದೆ.

ಇತಿಹಾಸದ ಮಹತ್ವದ ಅಂಶಗಳು ಒಂದಲ್ಲ ಒಂದು ಕಾಲದಲ್ಲಿ ಬೆಳಕಿಗೆ ಬಂದೇ ಬರುತ್ತವೆ. ಹೀಗೆ ಬೆಳಕಿಗೆ ಬಂದ ಪ್ರತಿಫಲವೇ ವೈದಿಕರು ಕಟ್ಟಿರುವ ಎಲ್ಲ ದುಷ್ಟಶಕ್ತಿಗಳ ಹಿಂದಿನ ನೈಜತೆ ಬೆಳಕಿಗೆ ಬರುತ್ತಿದೆ. ಹೀಗೆ ಬೆಳಕಿಗೆ ಬಂದ ಕಾರಣದಿಂದಲೇ ಅಸುರ ಶಕ್ತಿಗಳಾದ ಬಲಿಚಕ್ರವರ್ತಿ, ಮಹಿಷ, ರಾವಣ, ನರಕಾಸುರ ಮುಂತಾದವರ ಬಗ್ಗೆ ಹೊಸ ಹೊಸ ದೃಷ್ಟಿಕೋನಗಳು ಬೆಳೆಯುತ್ತಿವೆ. ವಿದ್ಯೆ, ಸಂಪತ್ತು, ಅಧಿಕಾರ ಎಲ್ಲವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿದ್ದ ವೈದಿಕಶಾಹಿ ಸಹಜವಾಗಿಯೇ ತನಗೆ ವಿರುದ್ಧದಾದುದ್ದೆಲ್ಲವನ್ನು ಇನ್ನಿಲ್ಲದ ತಂತ್ರಗಳ ಮೂಲಕ ಹಣಿಯಲು ಪ್ರಾರಂಭಿಸಿತು. ಇದೆಲ್ಲವು ಶಾಶ್ವತವಾಗಿರಲು ಜನತೆಯ ನಂಬಿಕೆಯೊಂದೇ ಪ್ರಬಲ ಅಸ್ತ್ರವೆಂದು ತಿಳಿದ ಈ ಬೌದ್ಧಿಕಶಾಹಿಗಳು ಕತೆ, ಗೀತೆ, ಮಹಾಕಾವ್ಯ, ಪುರಾಣ, ಶಾಸ್ತ್ರ, ವೇದ ಮುಂತಾದವುಗಳನ್ನು ಜನತೆಯ ಮನದಾಳದಲ್ಲಿ ಬೇರೂರಿಸಿತು. ಇದರಿಂದ ಅಪ್ರತಿಮ ದೊರೆಯಾದ, ನಾಡಿನ ಹೆಮ್ಮೆಯ ಪ್ರತಿನಿಧಿಯಾದ, ಮೂಲನಿವಾಸಿ ರಾಜನಾದ ಮಹಿಷನಂತವರು ಖಳನಾಯಕರಾಗಿ ಜನಮನದಲ್ಲಿ ನಿಂತರು. ಇಂದು ಇತಿಹಾಸ ಪುನರ್ ವ್ಯಾಖ್ಯಾನಕ್ಕೆ ನಾಡಿನ ಪ್ರಗತಿಪರ ಮತ್ತು ದಮನಿತ ಸಮುದಾಯಗಳು ಮುಂದಾಗಿವೆ. ಇದಕ್ಕೆ ಪ್ರೇರಕ ಶಕ್ತಿಯಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ದೈತ್ಯ ಪ್ರತಿಭೆ ಎದುರಿಗಿದೆ. ಇದೆಲ್ಲವನ್ನು ಬಳಸಿಕೊಂಡು ಮಹಿಷದಸರಾ ಮಾಡಲು ಸೇನೆಯಂತೆ ಮುನ್ನುಗ್ಗಿದೆ ಮೂಲನಿವಾಸಿಗಳ ದಂಡು. ಇದು ಕಾರ್ಯಗತಗೊಳ್ಳಲಿ. ನಾಡಿನ ಹೆಮ್ಮೆಯ ವೀರನಾದ ಮಹಿಷ ಮತ್ತೆ ಎಲ್ಲರ ಎದೆಯಲ್ಲಿ ನಿಲ್ಲಲಿ. ಈ ಮೂಲಕ ಅಗೋಚರಕ್ಕೆ ಒಳಗಾಗಿರುವ ಎಲ್ಲ ಮೂಲನಿವಾಸಿ ದೇವರುಗಳು ಅಂಚಿನಿಂದ ಮುನ್ನಲೆಗೆ ಬಂದು ನಿಲ್ಲುವಂತಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...