Homeಕರ್ನಾಟಕ'ಮಹಿಷಾ ದಸರಾ,' ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ಮಹಿಷನಿಂದಾಗಿ ಮೈಸೂರು ಎನ್ನುವ ಹೆಸರು ಇದುವರೆಗೂ ನಿಂತಿದೆ ಎನ್ನುವುದನ್ನು ಇತಿಹಾಸದ ಹಲವು ಪುಟಗಳು ಸಾರುತ್ತಿವೆ. ಮಹಿಷೂರನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಬೃಹತ್ ಸಾಮ್ರಾಜ್ಯ ಕಟ್ಟಿ ಆಳಿದ ರಾಜ ಈ ಮಹಿಷ. ಕೇರಳ ರಾಜ್ಯದಲ್ಲಿ ಬಲಿಚಕ್ರವರ್ತಿಯನ್ನು ನೆನಪಿಸುವ ಓಣಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವಂತೆ ಈ ಭಾಗದ ಮೂಲನಿವಾಸಿಗಳು ಅತ್ಯಂತ ಪ್ರೀತಿ ಮತ್ತು ಧನ್ಯತೆಗಳಿಂದ ಮಹಿಷನನ್ನು ಸ್ಮರಿಸುತ್ತಾರೆ.

- Advertisement -
- Advertisement -

ಕಳೆದ ಐದಾರು ವರ್ಷಗಳಿಂದ ‘ಮಹಿಷ ದಸರಾ’ ಎನ್ನುವುದು ಹೆಚ್ಚುಹೆಚ್ಚು ಚಾಲ್ತಿಗೆ ಬರುತ್ತಿದೆ. ಈ ಮೂಲಕ ಹೂತುಹೋಗಿರುವ ಇತಿಹಾಸವನ್ನು ಮತ್ತೆ ಮುನ್ನಲೆಗೆ ತಂದು ತಿಳಿಹೇಳುವ ಉದ್ದೇಶ ಇಲ್ಲಿ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಇತಿಹಾಸ, ಪುರಾಣ ಮತ್ತು ಶಾಸ್ತ್ರಗಳ ತುಂಬಾ ವೈದಿಕರ ವಿಚಾರಗಳೇ ತುಂಬಿ ನಿಂತಿವೆ. ಹೀಗಿರುವಾಗ ಅವೈದಿಕ ಪರಂಪರೆಯಲ್ಲಿ ಬಹುಸಮುದಾಯಗಳನ್ನು ಪೊರೆದವರು ಯಾರು? ಎನ್ನುವುದನ್ನು ಮತ್ತೆ ಮತ್ತೆ ಕೇಳಿಕೊಂಡಾಗ ಈ ತರದ ಅವಲೋಕನ ಸಾಧ್ಯವಾಗುತ್ತದೆ. ಮಹಿಷ ಮಂಡಲ, ಮಹಿಷ ಪುರಿ, ಮಹಿಷೂರು, ಮಹಿಷನೂರು ಮೊದಲಾದ ಹೆಸರಿನಿಂದ ಕರೆಸಿಕೊಳ್ಳುತ್ತಿದ್ದ ಇಂದಿನ ಮೈಸೂರು ಮಹಿಷನಾಳಿದ ಬಹುದೊಡ್ಡ ಪ್ರದೇಶವಾಗಿತ್ತು. ವಿಂಧ್ಯಪರ್ವತದ ಮಹಿಸ್ಮೃತಿ ತಪ್ಪಲಿನವರೆಗೂ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಂಡಿದ್ದ ಈ ಪ್ರದೇಶ, ಮೂಲನಿವಾಸಿ ರಾಜನೊಬ್ಬನ ಕತೆಯನ್ನು ಹಿಡಿದಿಟ್ಟುಕೊಂಡಿದೆ. ಇದೆಲ್ಲದಕ್ಕೆ ಸಾಕ್ಷಿಯಾಗಿ ಇತಿಹಾಸದ ಪುಟಗಳು ನಿಂತಿವೆ.

ಈ ದೇಶದಲ್ಲಿ ಮೂಲನಿವಾಸಿಗಳ, ಬುಡಕಟ್ಟುಗಳ ಮತ್ತು ಬೌದ್ಧರ ಮೇಲಿನ ದಾಳಿಗಳು ಇತಿಹಾಸವನ್ನು ಛಿದ್ರಛಿದ್ರವಾಗಿಸಿವೆ. ಈ ಛಿದ್ರತೆಯಲ್ಲಿ ಮೇಲುಗೈ ಪಡೆದ ವೈದಿಕ ಪರಂಪರೆ ಅನೇಕ ಕಟ್ಟುಕತೆಗಳ ರೂಪದಲ್ಲಿ ಇತಿಹಾಸವನ್ನು ನೋಡುವಂತೆ ನಮ್ಮ ಕಣ್ಣುಗಳನ್ನು ರೂಪಿಸಿದೆ. ಇದರಿಂದ ಮೂಲನಿವಾಸಿ ಮತ್ತು ಅಸುರ ರಾಜರುಗಳು ಹೆಚ್ಚು ಮನದಾಳದಲ್ಲಿ ಬೇರೂರಿದಂತಾಗಿದೆ. ಇದರ ಹಿಂದೆ ವೈದಿಕತೆಯನ್ನೇ ಹೆಚ್ಚು ವಿಜೃಂಭೀಕರಿಸುವ, ಆ ಮೂಲಕ ಸಾಮ್ರಾಜ್ಯವನ್ನು ಆಳುವ ಮತ್ತು ಶತಶತಮಾನಗಳ ಕಾಲ ಮಾನಸಿಕ ಗುಲಾಮಗಿರಿಗೆ ಒಳಗಾಗಿ ಬದುಕುವಂತೆ ಮಾಡುವ ಹುನ್ನಾರವನ್ನು ಈ ವರ್ಗ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರುತ್ತಲೇ ಇದೆ. ಇದಕ್ಕಾಗಿ ಅದು ಕೋಟ್ಯಾಂತರ ದೇವರುಗಳನ್ನು ಸೃಷ್ಟಿಸಿ ತಮ್ಮ ಬೇಳೆಯನ್ನು ಇಂದಿಗೂ ಬೇಯಿಸಿಕೊಳ್ಳುತ್ತಲೇ ಇದ್ದಾರೆ. ಕುರು, ಪಾಂಚಾಲ, ಚೇರ, ವೆಂಗಿ, ಮಗಧ ಮುಂತಾದ ರಾಜಮನೆತನಗಳ ಭವ್ಯ ಪರಂಪರೆಯನ್ನು ಕಟ್ಟಿಕೊಟ್ಟ ಹಾಗೆ ನಾಗ ಮತ್ತು ಮಹಿಷ ಮಂಡಲದ ಮನೆತನಗಳ ಇತಿಹಾಸವನ್ನು ಕಟ್ಟಿಕೊಡುವ ಗೋಜಿಗೆ ಅಕ್ಷರ ಬಲ್ಲವರು ಹೋಗಿಲ್ಲ. ಇದರ ಪರಿಣಾಮ ಇವೆರಡರ ಅಪ್ರತಿಮ ಹೋರಾಟಗಾರರು ಅಂಚಿಗೆ ಸರಿದರು. ಇದರಲ್ಲಿ ಮಹಿಷನೂ ಒಬ್ಬ.

ಭಾರತದ ವೈದಿಕಶಾಹಿ ಇಲ್ಲಿನ ಮೂಲನಿವಾಸಿಗಳ ಪರಂಪರೆಯನ್ನು ಒಡೆದು ಮೇಲುಗೈ ಸಾಧಿಸಿದಂತೆಲ್ಲ ಇಲ್ಲಿನ ಅಪ್ರತಿಮ ನಾಯಕರನ್ನು ಖಳನಾಯಕರಂತೆ ಬಿಂಬಿಸಲು ಪ್ರಾರಂಭಿಸಿತು. ರಾಕ್ಷಸ, ಅಸುರ, ದಾನವ, ಕಿನ್ನರ, ಕಿಂಪುರುಷ ಮೊದಲಾದ ಪದಗಳಿಗೆ ಅಪಾರ್ಥಗಳನ್ನು ಹೊರಿಸಿ ಜನತೆಯ ಮನದಲ್ಲಿ ಇವರ ಕೀರ್ತಿಪತಾಕೆಗಳನ್ನೇ ಶಾಶ್ವತವಾಗಿ ನಕಾರಾತ್ಮಕ ಧೋರಣೆ ಬರುವಂತೆ ಮಾಡಿದರು. ಶ್ರೇಷ್ಠ ದೊರೆಗಳಾದ ಬಲಿಚಕ್ರವರ್ತಿ, ರಾವಣ, ನರಕಾಸುರ, ಮಹಿಷಾಸುರ ಮೊದಲಾದವರನ್ನು ತುಚ್ಛೀಕರಿಸಿ ಚಿತ್ರಿಸಿದರು. ಇವರ ಹಾದಿಯಲ್ಲಿ ಕಾಣುವ ಬೌದ್ಧ ಪರಂಪರೆಯನ್ನು ನಾಶಮಾಡುವ ಹುನ್ನಾರವನ್ನು ಈ ಮೂಲಕ ಮಾಡುತ್ತಾ ಬಂದರು. ಈ ವೈದಿಕಶಾಹಿ ತನಗೆ ವಿರುದ್ಧವಾದುದೆಲ್ಲವನ್ನು ರಾಕ್ಷಸ ಪರಂಪರೆಯೆಂದು ವಿಂಗಡಿಸಿ, ಅವರು ಕ್ರೂರಾತಿಕ್ರೂರರೆಂದು ಬಿಂಬಿಸಿದರು. ‘ಇವರನ್ನು ನಾಶಗೊಳಿಸಲು ದೇವನೊಬ್ಬನು ಅವತರಿಸಿ ಬರಬೇಕಾಯಿತು. ಹೀಗೆ ಬಂದದ್ದರಿಂದಲೇ ಈ ರಾಕ್ಷಸನ ಸಂಹಾರ ಸಾಧ್ಯವಾಗಿ ಲೋಕಕಲ್ಯಾಣವಾಯಿತು’ ಎನ್ನುವ ಹಸಿ ಸುಳ್ಳಿನ ಕತೆಯನ್ನು ಕಟ್ಟಿ ಜನತೆಗೆ ಆಚರಣೆ ಮೂಲಕ ನಂಬಿಸಿದರು. ಇದರ ಪರಿಣಾಮವಾಗಿ ಮೈಸೂರಿನ ದೊರೆಯಾದ ಮಹಿಷ ಹೊರನಿಲ್ಲುವಂತಾಗಿ ಕಟ್ಟಿದ ಕತೆಯ ಕುರುಹಾಗಿ ಚಾಮುಂಡಿ ಒಳ ನಿಲ್ಲುವಂತಾಗಿದೆ.

ಮಹಿಷನಿಂದಾಗಿ ಮೈಸೂರು ಎನ್ನುವ ಹೆಸರು ಇದುವರೆಗೂ ನಿಂತಿದೆ ಎನ್ನುವುದನ್ನು ಇತಿಹಾಸದ ಹಲವು ಪುಟಗಳು ಸಾರುತ್ತಿವೆ. ಮಹಿಷೂರನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಬೃಹತ್ ಸಾಮ್ರಾಜ್ಯ ಕಟ್ಟಿ ಆಳಿದ ರಾಜ ಈ ಮಹಿಷ. ಕೇರಳ ರಾಜ್ಯದಲ್ಲಿ ಬಲಿಚಕ್ರವರ್ತಿಯನ್ನು ನೆನಪಿಸುವ ಓಣಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸುವಂತೆ ಈ ಭಾಗದ ಮೂಲನಿವಾಸಿಗಳು ಅತ್ಯಂತ ಪ್ರೀತಿ ಮತ್ತು ಧನ್ಯತೆಗಳಿಂದ ಮಹಿಷನನ್ನು ಸ್ಮರಿಸುತ್ತಾರೆ. ಈ ಧನ್ಯತೆಯ ಭಾವದಿಂದ ಆಚರಿಸಲ್ಪಡುವ ಹಬ್ಬವೇ ದಸರಾ. ಇತಿಹಾಸವನ್ನು ತಿರುಚಿ ಅಂತೆಕಂತೆಗಳ ಪುರಾಣ ಕಟ್ಟುವಲ್ಲಿ ಪ್ರಸಿದ್ಧರಾದ ವೈದಿಕರು ‘ಬ್ರಾಹ್ಮಣನ ವೇಷದಲ್ಲಿ ಬಂದು ಮೂರು ಮೊಳ ಭೂಮಿಯನ್ನು ದಾನ ಪಡೆದು ವಿಷ್ಣು ಅವನನ್ನು ಭೂಮಿಗೆ ತುಳಿದನು’ ಎನ್ನುವ ಕತೆ ಕಟ್ಟಿದಂತೆ ಅತಿ ಕೆಟ್ಟವನಾದ ಮಹಿಷನನ್ನು ಸಂಹರಿಸಲು ಪಾರ್ವತಿ ದೇವಿಯೇ ಶಕ್ತಿ ಪಡೆದು ಬಂದು ಅವನನ್ನು ಸಂಹರಿಸಿದಳು’ ಎನ್ನುವ ಕತೆಯನ್ನು ಕಟ್ಟಿ ನಂಬಿಸಿದರು. ಈ ನಂಬಿಸಿದ ಫಲವೇ ಇಂದಿನ ಚಾಮುಂಡಿ ದಸರಾ. ಇದಕ್ಕೆ ರಾಜಮಹಾರಾಜರ ಒಪ್ಪಿತ ಮುದ್ರೆ ಬಿದ್ದಿದ್ದರಿಂದ ಇದು ನಿರಂತರ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಂದಮೇಲೂ ಇಂತವೇ ಮನಸ್ಸುಗಳು ಇಲ್ಲಿ ಉಸಿರಾಡುತ್ತಿರುವುದರಿಂದ ಈಗಲೂ ಅದ್ದೂರಿ ದಸರಾ ಹಬ್ಬ ‘ನಾಡದೇವತೆ’ ಎನ್ನುವ ಹೆಸರಿನಡಿ ನಡೆಯುತ್ತಲೇ ಇದೆ.

ಇತಿಹಾಸದ ಮಹತ್ವದ ಅಂಶಗಳು ಒಂದಲ್ಲ ಒಂದು ಕಾಲದಲ್ಲಿ ಬೆಳಕಿಗೆ ಬಂದೇ ಬರುತ್ತವೆ. ಹೀಗೆ ಬೆಳಕಿಗೆ ಬಂದ ಪ್ರತಿಫಲವೇ ವೈದಿಕರು ಕಟ್ಟಿರುವ ಎಲ್ಲ ದುಷ್ಟಶಕ್ತಿಗಳ ಹಿಂದಿನ ನೈಜತೆ ಬೆಳಕಿಗೆ ಬರುತ್ತಿದೆ. ಹೀಗೆ ಬೆಳಕಿಗೆ ಬಂದ ಕಾರಣದಿಂದಲೇ ಅಸುರ ಶಕ್ತಿಗಳಾದ ಬಲಿಚಕ್ರವರ್ತಿ, ಮಹಿಷ, ರಾವಣ, ನರಕಾಸುರ ಮುಂತಾದವರ ಬಗ್ಗೆ ಹೊಸ ಹೊಸ ದೃಷ್ಟಿಕೋನಗಳು ಬೆಳೆಯುತ್ತಿವೆ. ವಿದ್ಯೆ, ಸಂಪತ್ತು, ಅಧಿಕಾರ ಎಲ್ಲವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿದ್ದ ವೈದಿಕಶಾಹಿ ಸಹಜವಾಗಿಯೇ ತನಗೆ ವಿರುದ್ಧದಾದುದ್ದೆಲ್ಲವನ್ನು ಇನ್ನಿಲ್ಲದ ತಂತ್ರಗಳ ಮೂಲಕ ಹಣಿಯಲು ಪ್ರಾರಂಭಿಸಿತು. ಇದೆಲ್ಲವು ಶಾಶ್ವತವಾಗಿರಲು ಜನತೆಯ ನಂಬಿಕೆಯೊಂದೇ ಪ್ರಬಲ ಅಸ್ತ್ರವೆಂದು ತಿಳಿದ ಈ ಬೌದ್ಧಿಕಶಾಹಿಗಳು ಕತೆ, ಗೀತೆ, ಮಹಾಕಾವ್ಯ, ಪುರಾಣ, ಶಾಸ್ತ್ರ, ವೇದ ಮುಂತಾದವುಗಳನ್ನು ಜನತೆಯ ಮನದಾಳದಲ್ಲಿ ಬೇರೂರಿಸಿತು. ಇದರಿಂದ ಅಪ್ರತಿಮ ದೊರೆಯಾದ, ನಾಡಿನ ಹೆಮ್ಮೆಯ ಪ್ರತಿನಿಧಿಯಾದ, ಮೂಲನಿವಾಸಿ ರಾಜನಾದ ಮಹಿಷನಂತವರು ಖಳನಾಯಕರಾಗಿ ಜನಮನದಲ್ಲಿ ನಿಂತರು. ಇಂದು ಇತಿಹಾಸ ಪುನರ್ ವ್ಯಾಖ್ಯಾನಕ್ಕೆ ನಾಡಿನ ಪ್ರಗತಿಪರ ಮತ್ತು ದಮನಿತ ಸಮುದಾಯಗಳು ಮುಂದಾಗಿವೆ. ಇದಕ್ಕೆ ಪ್ರೇರಕ ಶಕ್ತಿಯಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ದೈತ್ಯ ಪ್ರತಿಭೆ ಎದುರಿಗಿದೆ. ಇದೆಲ್ಲವನ್ನು ಬಳಸಿಕೊಂಡು ಮಹಿಷದಸರಾ ಮಾಡಲು ಸೇನೆಯಂತೆ ಮುನ್ನುಗ್ಗಿದೆ ಮೂಲನಿವಾಸಿಗಳ ದಂಡು. ಇದು ಕಾರ್ಯಗತಗೊಳ್ಳಲಿ. ನಾಡಿನ ಹೆಮ್ಮೆಯ ವೀರನಾದ ಮಹಿಷ ಮತ್ತೆ ಎಲ್ಲರ ಎದೆಯಲ್ಲಿ ನಿಲ್ಲಲಿ. ಈ ಮೂಲಕ ಅಗೋಚರಕ್ಕೆ ಒಳಗಾಗಿರುವ ಎಲ್ಲ ಮೂಲನಿವಾಸಿ ದೇವರುಗಳು ಅಂಚಿನಿಂದ ಮುನ್ನಲೆಗೆ ಬಂದು ನಿಲ್ಲುವಂತಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...