Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...