Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....