Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...